Homeಕರ್ನಾಟಕಶಾಸಕರು ಅಂದರೆ ಖರೀದಿ ವಸ್ತುಗಳು ಎಂದರ್ಥ : ದೇವನೂರು ಮಹಾದೇವ

ಶಾಸಕರು ಅಂದರೆ ಖರೀದಿ ವಸ್ತುಗಳು ಎಂದರ್ಥ : ದೇವನೂರು ಮಹಾದೇವ

ಈ ಕುಬ್ಜ ರಾಜಕಾರಣಿಗಳು ಮತ್ತೆ ಚುನಾವಣೆಗೆ ಸ್ಪರ್ಧಿಸಿ ಮತದಾರರ ಮುಂದೆ ಮತ ಯಾಚಿಸುತ್ತಿದ್ದಾರೆ. ಇದನ್ನು ಧೈರ್ಯ ಅನ್ನಬೇಕೋ, ಭಂಡತನ ಅನ್ನಬೇಕೋ ಅಥವ ನಿರ್ಲಜ್ಜ ಅನ್ನಬೇಕೋ ತಿಳಿಯದಾಗಿದೆ.

- Advertisement -
- Advertisement -

ಇಂದಿನ ಪತ್ರಿಕೆಗಳಲ್ಲಿ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಪಡ್ನವೀಸ್ ಹೇಳಿಕೆಯೊಂದು ಪ್ರಕಟವಾಗಿದೆ- “ಶಾಸಕರನ್ನು ಖರೀದಿ ಮಾಡದೇ ಇರಲು ಮೊದಲೇ ನಿರ್ಧರಿಸಿದ್ದೆವು. ಎನ್‌ಸಿಪಿ ಬೆಂಬಲ ಪಡೆದು ಸರ್ಕಾರ ರಚಿಸಿದೆವು. ಆಮೇಲೆ ಅಜಿತ್ ಪವಾರ್ ಬೆಂಬಲ ನೀಡಲಿಲ್ಲ. ಪಡ್ನವೀಸ್ ಸರ್ಕಾರ ರಚಿಸಲು ಆಗಲಿಲ್ಲ” ಎಂದಿದೆ. ಇದರ ಅರ್ಥ ಏನೆಂದರೆ ಶಾಸಕರು ಅಂದರೆ ಖರೀದಿ ವಸ್ತುಗಳು ಅಂತ ಎಂದು ದೇವನೂರು ಮಹಾದೇವ ಅಭಿಪ್ರಾಯಪಟ್ಟಿದ್ದಾರೆ.

ಸ್ವರಾಜ್ ಇಂಡಿಯಾ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇಂಥಹ ಕೃತ್ಯ ಎಸಗುವುದನ್ನು ಅನೈತಿಕ ಎನ್ನುತ್ತಾರೆ, ಮನೆಮುರುಕ ಅಂತಾರೆ. ಇನ್ನೂ ಏನೇನೋ ಅನ್ನುತ್ತಾರೆ. ದೇಶವನ್ನು ಆಳ್ವಿಕೆ ನಡೆಸುತ್ತಿರುವ ಪಕ್ಷವೇ ಇಂದು ಇಂಥಹ ಕೃತ್ಯಗಳನ್ನು ಎಸಗುತ್ತಿದೆ. ಇಂಥವರ ಕೈಗೆ ದೇಶ ಕೊಟ್ಟರೆ ಆ ದೇಶವನ್ನು ದೇವರೂ ಕಾಪಾಡಲಾರನೇನೊ. ಅಂಥ ಪರಿಸ್ಥಿತಿ ಇಂದು ಭಾರತದ ಪ್ರಜೆಗಳಿಗೆ ವಕ್ಕರಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪೋಲಿ ಕಥೆಗೆ ಬಹುಮಾನ ಬಂದ ಕತೆ: ದೇವನೂರು ಮಹಾದೇವರ ಮಾತಲ್ಲಿ ಕೇಳಿ…

ಈಗ, ಪಡ್ನವೀಸ್ ಮಾತುಗಳನ್ನು ಕರ್ನಾಟಕದ ಹಿನ್ನೆಲೆಯಲ್ಲಿ ನೋಡುವುದಾದರೆ, ಏನರ್ಥ ಬರುತ್ತದೆ? ಕರ್ನಾಟಕದಲ್ಲಿ ಶಾಸಕರನ್ನು ಖರೀದಿ ಮಾಡಿದರು, ಬಿಜೆಪಿ ಸರ್ಕಾರ ಬಂತು ಅಂತ ಅರ್ಥ ತಾನೆ? ಇದು ಪಡ್ನವೀಸ್ ಮಹಾಶಯರಿಗೆ ಚೆನ್ನಾಗಿ ಗೊತ್ತು. ಕರ್ನಾಟಕದ ಶಾಸಕರನ್ನು ಕಾಯ್ದುಕೊಂಡಿದ್ದು ಈತನೇ ತಾನೇ?
ಈಗ ಈ ಬಿಕರಿ ಶಾಸಕರಿಂದಾಗಿ ಕರ್ನಾಟಕದಲ್ಲಿ ಉಪಚುನಾವಣೆ ನಮ್ಮ ಮುಂದಿದೆ. ಈ ಬಿಕರಿ ಶಾಸಕರಿಗೆ, ದ್ರೋಹಿ ಅನ್ನುತ್ತಾರೆ. ನಮಾಕ್ ಹರಾಮ್ ಅನ್ನುತ್ತಾರೆ ನಮ್ಮ ಹಳ್ಳಿ ಕಡೆ ಒಂದು ಬೈಗುಳ ಇದೆ. ಅದು ನನಗೆ ಗೊತ್ತಿಲ್ಲ ಅಂತಲ್ಲ, ಗೊತ್ತಿದೆ. ಆದರೆ ಅದನ್ನು ಹೇಳಲು ಮನಸ್ಸಾಗುತ್ತಿಲ್ಲ ಎಂದರು.

’ಅನರ್ಹರ ಠೇವಣಿ ಹೋಗಲಿ; ಮತದಾರರ ಮಾನ ಉಳಿಯಲಿ’
ಆಯ್ತು, ನಾವೀಗ ಗಂಭೀರವಾಗಿ ಚಿಂತಿಸಬೇಕಾಗಿದೆ. ಯಾಕೆಂದರೆ ಈಗ ಅನರ್ಹ ಶಾಸಕರು ತಮ್ಮನ್ನು ಮಾರಾಟ ಮಾಡಿಕೊಂಡಿದ್ದು ತಮ್ಮೊಬ್ಬರನ್ನೇ ಅಲ್ಲ. ಯಾಕೆಂದರೆ ಇವರು ಶಾಸಕರಾಗಲು ಕಾರಣ ಮತದಾರರ ಮತಗಳು ಕಾರಣ. ಅಂದರೆ ಈ ಹೊಣೆಗೇಡಿಗಳು ನಿಜವಾದ ಅರ್ಥದಲ್ಲಿ ಮಾಡಿದ್ದಾದರೂ ಏನನ್ನು? ಮತದಾರರನ್ನೇ ಮಾರಿಬಿಟ್ಟರು! ರಾಜಕಾರಣ, ಜನತಂತ್ರ ವ್ಯವಸ್ಥೆಯನ್ನೆ ಗಲೀಜು ಮಾಡಿಬಿಟ್ಟರು. ಇದನ್ನು ಗಂಭೀರವಾಗಿ ಚಿಂತಿಸಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈಗ ಈ ಕುಬ್ಜ ರಾಜಕಾರಣಿಗಳು ಮತ್ತೆ ಚುನಾವಣೆಗೆ ಸ್ಪರ್ಧಿಸಿ ಮತದಾರರ ಮುಂದೆ ಮತ ಯಾಚಿಸುತ್ತಿದ್ದಾರೆ. ಇದನ್ನು ಧೈರ್ಯ ಅನ್ನಬೇಕೋ, ಭಂಡತನ ಅನ್ನಬೇಕೋ ಅಥವ ನಿರ್ಲಜ್ಜ ಅನ್ನಬೇಕೋ ತಿಳಿಯದಾಗಿದೆ. ಒಟ್ಟಿನಲ್ಲಿ, ರಾಜಕಾರಣಿಗಳಿಗೆ ಚೆಲ್ಲಾಟ, ಪ್ರಜೆಗಳಿಗೆ ಪ್ರಾಣ ಸಂಕಟ ಎಂಬಂತಾಗಿದೆ ಎಂದಿದ್ದಾರೆ.

ಈಗ ಮತದಾರರ ಮುಂದೆ ಉಳಿದಿರುವುದು ಒಂದೇ ದಾರಿ- ಈ ಅನರ್ಹ ಶಾಸಕರಿಗೆ ಠೇವಣಿಯೂ ಸಿಗದಂತೆ ಮಾಡಿ ಮತದಾರರು ತಮ್ಮ ಮಾನ-ಮರ‍್ಯಾದೆ ಕಾಪಾಡಿಕೊಳ್ಳಬೇಕಿದೆ. ಈ ಉಪಚುನಾವಣೆಗೆ ಒಂದೇ ಘೋಷಣೆ- `ಅನರ್ಹರ ಠೇವಣಿ ಹೋಗಲಿ, ಮತದಾರರ ಮಾನ ಉಳಿಯಲಿ’ ಎಂದು ಘೋಷಿಸಿದರು.

ಇದನ್ನೂ ಓದಿ: ಮಾತ್ಮ ಗಾಂಧಿ ಅಂದ್ರ ಏನ್ ಅಂದ್ಕಂಡಿದ್ದೀರಿ? : ‘ಗಾಂಧಿ-150’ ನೆನಪಿನಲ್ಲಿ ದೇವನೂರು ಮಹಾದೇವರವರ ಸಂದರ್ಶನ

ರಾಜ್ಯ ಮುಳುಗಡೆಯಾದರೂ ತಮಗೇನೂ ಸಂಬಂಧವಿಲ್ಲದವರಂತೆ ಜನಪ್ರತಿನಿಧಿಗಳು ಇರುವಾಗ ಹಾಗೂ ಜನತಂತ್ರ ವ್ಯವಸ್ಥೆಯೇ ಬಿಕ್ಕಟ್ಟಿನಲ್ಲಿರುವ ಈ ಸಂದರ್ಭದಲ್ಲಿ ಸ್ವರಾಜ್ ಇಂಡಿಯಾ ಪಕ್ಷವು ಹೊಸ ದಾರಿಗಳಿಗಾಗಿ ಹುಡುಕುತ್ತಿದೆ. ರಾಜ್ಯದಲ್ಲಿ ಮುಂಬರುವ ತಾಲ್ಲೂಕು ಜಿಲ್ಲಾ ಪಂಚಾಯ್ತ್ ಚುನಾವಣೆಯಲ್ಲಿ ನಾಡು ಕಟ್ಟುವ ರಾಜಕಾರಣಕ್ಕೆ ವೇದಿಕೆ ಸಿದ್ಧಪಡಿಸುತ್ತಿದೆ. ‘ಹೊಸ ರಾಜಕಾರಣಕ್ಕೆ ಹೊಸ ಮುಖಗಳು’ ಎಂಬ ಆಲೋಚನೆಯಲ್ಲಿ ಹುಡುಕಾಟ ನಡೆಸಲಿದೆ. ಯುವಕರು, ಮಹಿಳೆಯರಿಗೆ ಆದ್ಯತೆ, ಅಷ್ಟೇ ಅಲ್ಲ, ನಾಡಿನ ಎಲ್ಲಾ ಸಮಾಜಮುಖಿ ಸಂಘಟನೆಗಳನ್ನೂ ಒಳಗೊಂಡು ಹಂಚಿಕೊಂಡು ಹೆಜ್ಜೆ ಹಾಕುವ ಪ್ರಯತ್ನವೂ ನಡೆದಿದೆ. ಈ ನಾಡು ಕಟ್ಟುವ ರಾಜಕಾರಣಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ವಿನಂತಿಸುವೆ ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...