Homeಮುಖಪುಟಲೇಹ್ 'ಬಾರ್ಡರ್ ಮಾರ್ಚ್': ಸೆಕ್ಷನ್ 144 ಜಾರಿ, ಇಂಟರ್ನೆಟ್ ವೇಗ 2ಜಿಗೆ ಇಳಿಕೆ

ಲೇಹ್ ‘ಬಾರ್ಡರ್ ಮಾರ್ಚ್’: ಸೆಕ್ಷನ್ 144 ಜಾರಿ, ಇಂಟರ್ನೆಟ್ ವೇಗ 2ಜಿಗೆ ಇಳಿಕೆ

- Advertisement -
- Advertisement -

ಲಡಾಖ್‌ ಕೇಂದ್ರಾಡಳಿತ ಪ್ರದೇಶದ ಲೇಹ್‌ನಲ್ಲಿ ಏಪ್ರಿಲ್ 7ರಂದು (ನಾಳೆ) ‘ಬಾರ್ಡರ್ ಮಾರ್ಚ್‌’ಗೆ ಲೇಹ್ ಅಪೆಕ್ಸ್ ಬಾಡಿ (ಎಲ್‌ಎಬಿ) ಮತ್ತು ಹವಾಮಾನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಕರೆ ನೀಡಿದ್ದು, ಈ ಹಿನ್ನೆಲೆ ಜಿಲ್ಲೆಯಲ್ಲಿ ಸೆಕ್ಷನ್ 144 ಅನ್ನು ವಿಧಿಸಲಾಗಿದೆ. ಹಾಗೆಯೇ ಮೊಬೈಲ್ ಇಂಟರ್‌ನೆಟ್‌ ವೇಗವನ್ನು 2ಜಿಗೆ ಇಳಿಸಲು ಆದೇಶಿಸಲಾಗಿದೆ.

ಲೇಹ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂತೋಷ್ ಸುಖದೇವ ಅವರು ಜಿಲ್ಲೆಯಲ್ಲಿ ಸಿಆರ್‌ಪಿಸಿ 1973 ರ ಸೆಕ್ಷನ್ 144 ಅನ್ನು ವಿಧಿಸಿ ಶುಕ್ರವಾರ ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಮುಂಜಾಗೃತ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ನಿಷೇಧಾಜ್ಞೆ ಹಿನ್ನೆಲೆ ಪೂರ್ವಾನುಮತಿ ಇಲ್ಲದೆ ಯಾವುದೇ ಮೆರವಣಿಗೆ, ರ್ಯಾಲಿ ನಡೆಸುವಂತಿಲ್ಲ. ವಾಹನ, ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಸಾರ್ವಜನಿಕ ಸಭೆಗೆ ಅವಕಾಶ ನೀಡಲಾಗುವುದಿಲ್ಲ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಆದೇಶದಲ್ಲಿ ಹೇಳಿದ್ದಾರೆ. ಆದೇಶದ ಉಲ್ಲಂಘನೆಯು ಐಪಿಸಿಯ ಸೆಕ್ಷನ್ 188 ರ ಅಡಿಯಲ್ಲಿ ಶಿಕ್ಷಾರ್ಹ ಕ್ರಮಕ್ಕೆ ಅರ್ಹವಾಗಿದೆ ಎಂದು ಹೇಳಿದ್ದಾರೆ.

ಲೇಹ್ ಆಡಳಿತವು ಮೊಬೈಲ್ ಇಂಟರ್ನೆಟ್‌ ವೇಗವನ್ನು 2ಜಿ ಮಟ್ಟಕ್ಕೆ ತಾತ್ಕಾಲಿಕವಾಗಿ ಕಡಿಮೆ ಮಾಡಲು ನಿರ್ಧರಿಸಿದೆ. “ತಕ್ಷಣದಿಂದ ಜಾರಿಗೆ ಬರುವಂತೆ, 3ಜಿ, 4ಜಿ, 5ಜಿ ಮತ್ತು ಸಾರ್ವಜನಿಕ ವೈ-ಫೈ ಸೌಲಭ್ಯಗಳನ್ನು ಒಳಗೊಂಡಂತೆ ಮೊಬೈಲ್ ಡೇಟಾ ಸೇವೆಗಳನ್ನು ಲೇಹ್‌ನಲ್ಲಿ 2ಜಿಗೆ ಇಳಿಸಲಾಗುವುದು. ಇಂಟರ್ನೆಟ್ ವೇಗದಲ್ಲಿನ ಕಡಿತವು ಏಪ್ರಿಲ್ 6ರಂದು ಸಂಜೆ 6 ಗಂಟೆಯಿಂದ ಏಪ್ರಿಲ್ 7ರಂದು ಸಂಜೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ” ಎಂದು ಲಡಾಖ್‌ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಶಿವ ದರ್ಶನ್ ಸಿಂಗ್ ಹೊರಡಿಸಿದ ಆದೇಶದಲ್ಲಿ ಹೇಳಿದ್ದಾರೆ.

ಲಡಾಖ್‌ಗೆ ರಾಜ್ಯತ್ವ ನೀಡಲು, ಸಂವಿಧಾನದ ಆರನೇ ಪರಿಚ್ಛೇದದಡಿ ಸೇರಿಸಲು ಆಗ್ರಹಿಸಿ ಪ್ರತಿಭಟನೆಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಕೇಂದ್ರದೊಂದಿಗಿನ ಹಲವಾರು ಸುತ್ತಿನ ಮಾತುಕತೆ ವಿಫಲವಾಗಿದ್ದು, ಈಗ ಪ್ರತಿಭಟನೆಯ ಕಾವು ಅಧಿಕವಾಗುತ್ತಿದೆ. 2019ರ ಲೋಕಸಭೆ ಚುನಾವಣೆ ಮತ್ತು 2020ರ ಸ್ಥಳೀಯ ಹಿಲ್ ಕೌನ್ಸಿಲ್ ಚುನಾವಣೆಯ ಸಂದರ್ಭ ಕೇಂದ್ರಾಡಳಿತ ಪ್ರದೇಶಕ್ಕೆ 6ನೇ ಶೆಡ್ಯೂಲ್ ಅಡಿಯಲ್ಲಿ ರಕ್ಷಣೆಯ ಬಗ್ಗೆ ಬಿಜೆಪಿ ಭರವಸೆ ನೀಡಿತ್ತು. 2019ರಲ್ಲಿ ಲಡಾಖ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಗೆಲುವು ಸಾಧಿಸಿತ್ತು. ಆದರೆ ಈವರೆಗೂ ಭರವಸೆಯನ್ನು ಈಡೇರಿಸಿಲ್ಲ. ಈ ಹಿನ್ನೆಲೆ ಅಲ್ಲಿನ ಜನರು ಹೋರಾಟಕ್ಕೆ ಧುಮುಕಿದ್ದಾರೆ.

ಇದನ್ನೂ ಓದಿ: ಮದ್ಯ ನೀತಿ ಹಗರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಏ.18ರವರೆಗೆ ವಿಸ್ತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...