Homeಮುಖಪುಟಲೇಹ್ 'ಬಾರ್ಡರ್ ಮಾರ್ಚ್': ಸೆಕ್ಷನ್ 144 ಜಾರಿ, ಇಂಟರ್ನೆಟ್ ವೇಗ 2ಜಿಗೆ ಇಳಿಕೆ

ಲೇಹ್ ‘ಬಾರ್ಡರ್ ಮಾರ್ಚ್’: ಸೆಕ್ಷನ್ 144 ಜಾರಿ, ಇಂಟರ್ನೆಟ್ ವೇಗ 2ಜಿಗೆ ಇಳಿಕೆ

- Advertisement -
- Advertisement -

ಲಡಾಖ್‌ ಕೇಂದ್ರಾಡಳಿತ ಪ್ರದೇಶದ ಲೇಹ್‌ನಲ್ಲಿ ಏಪ್ರಿಲ್ 7ರಂದು (ನಾಳೆ) ‘ಬಾರ್ಡರ್ ಮಾರ್ಚ್‌’ಗೆ ಲೇಹ್ ಅಪೆಕ್ಸ್ ಬಾಡಿ (ಎಲ್‌ಎಬಿ) ಮತ್ತು ಹವಾಮಾನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಕರೆ ನೀಡಿದ್ದು, ಈ ಹಿನ್ನೆಲೆ ಜಿಲ್ಲೆಯಲ್ಲಿ ಸೆಕ್ಷನ್ 144 ಅನ್ನು ವಿಧಿಸಲಾಗಿದೆ. ಹಾಗೆಯೇ ಮೊಬೈಲ್ ಇಂಟರ್‌ನೆಟ್‌ ವೇಗವನ್ನು 2ಜಿಗೆ ಇಳಿಸಲು ಆದೇಶಿಸಲಾಗಿದೆ.

ಲೇಹ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂತೋಷ್ ಸುಖದೇವ ಅವರು ಜಿಲ್ಲೆಯಲ್ಲಿ ಸಿಆರ್‌ಪಿಸಿ 1973 ರ ಸೆಕ್ಷನ್ 144 ಅನ್ನು ವಿಧಿಸಿ ಶುಕ್ರವಾರ ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಮುಂಜಾಗೃತ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ನಿಷೇಧಾಜ್ಞೆ ಹಿನ್ನೆಲೆ ಪೂರ್ವಾನುಮತಿ ಇಲ್ಲದೆ ಯಾವುದೇ ಮೆರವಣಿಗೆ, ರ್ಯಾಲಿ ನಡೆಸುವಂತಿಲ್ಲ. ವಾಹನ, ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಸಾರ್ವಜನಿಕ ಸಭೆಗೆ ಅವಕಾಶ ನೀಡಲಾಗುವುದಿಲ್ಲ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಆದೇಶದಲ್ಲಿ ಹೇಳಿದ್ದಾರೆ. ಆದೇಶದ ಉಲ್ಲಂಘನೆಯು ಐಪಿಸಿಯ ಸೆಕ್ಷನ್ 188 ರ ಅಡಿಯಲ್ಲಿ ಶಿಕ್ಷಾರ್ಹ ಕ್ರಮಕ್ಕೆ ಅರ್ಹವಾಗಿದೆ ಎಂದು ಹೇಳಿದ್ದಾರೆ.

ಲೇಹ್ ಆಡಳಿತವು ಮೊಬೈಲ್ ಇಂಟರ್ನೆಟ್‌ ವೇಗವನ್ನು 2ಜಿ ಮಟ್ಟಕ್ಕೆ ತಾತ್ಕಾಲಿಕವಾಗಿ ಕಡಿಮೆ ಮಾಡಲು ನಿರ್ಧರಿಸಿದೆ. “ತಕ್ಷಣದಿಂದ ಜಾರಿಗೆ ಬರುವಂತೆ, 3ಜಿ, 4ಜಿ, 5ಜಿ ಮತ್ತು ಸಾರ್ವಜನಿಕ ವೈ-ಫೈ ಸೌಲಭ್ಯಗಳನ್ನು ಒಳಗೊಂಡಂತೆ ಮೊಬೈಲ್ ಡೇಟಾ ಸೇವೆಗಳನ್ನು ಲೇಹ್‌ನಲ್ಲಿ 2ಜಿಗೆ ಇಳಿಸಲಾಗುವುದು. ಇಂಟರ್ನೆಟ್ ವೇಗದಲ್ಲಿನ ಕಡಿತವು ಏಪ್ರಿಲ್ 6ರಂದು ಸಂಜೆ 6 ಗಂಟೆಯಿಂದ ಏಪ್ರಿಲ್ 7ರಂದು ಸಂಜೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ” ಎಂದು ಲಡಾಖ್‌ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಶಿವ ದರ್ಶನ್ ಸಿಂಗ್ ಹೊರಡಿಸಿದ ಆದೇಶದಲ್ಲಿ ಹೇಳಿದ್ದಾರೆ.

ಲಡಾಖ್‌ಗೆ ರಾಜ್ಯತ್ವ ನೀಡಲು, ಸಂವಿಧಾನದ ಆರನೇ ಪರಿಚ್ಛೇದದಡಿ ಸೇರಿಸಲು ಆಗ್ರಹಿಸಿ ಪ್ರತಿಭಟನೆಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಕೇಂದ್ರದೊಂದಿಗಿನ ಹಲವಾರು ಸುತ್ತಿನ ಮಾತುಕತೆ ವಿಫಲವಾಗಿದ್ದು, ಈಗ ಪ್ರತಿಭಟನೆಯ ಕಾವು ಅಧಿಕವಾಗುತ್ತಿದೆ. 2019ರ ಲೋಕಸಭೆ ಚುನಾವಣೆ ಮತ್ತು 2020ರ ಸ್ಥಳೀಯ ಹಿಲ್ ಕೌನ್ಸಿಲ್ ಚುನಾವಣೆಯ ಸಂದರ್ಭ ಕೇಂದ್ರಾಡಳಿತ ಪ್ರದೇಶಕ್ಕೆ 6ನೇ ಶೆಡ್ಯೂಲ್ ಅಡಿಯಲ್ಲಿ ರಕ್ಷಣೆಯ ಬಗ್ಗೆ ಬಿಜೆಪಿ ಭರವಸೆ ನೀಡಿತ್ತು. 2019ರಲ್ಲಿ ಲಡಾಖ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಗೆಲುವು ಸಾಧಿಸಿತ್ತು. ಆದರೆ ಈವರೆಗೂ ಭರವಸೆಯನ್ನು ಈಡೇರಿಸಿಲ್ಲ. ಈ ಹಿನ್ನೆಲೆ ಅಲ್ಲಿನ ಜನರು ಹೋರಾಟಕ್ಕೆ ಧುಮುಕಿದ್ದಾರೆ.

ಇದನ್ನೂ ಓದಿ: ಮದ್ಯ ನೀತಿ ಹಗರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಏ.18ರವರೆಗೆ ವಿಸ್ತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...