Homeಅಂತರಾಷ್ಟ್ರೀಯಇಂಗ್ಲೆಂಡ್‌‌ನ ಲೀಸೆಸ್ಟರ್ ಹಿಂಸಾಚಾರ: ಶಾಂತಿ ಕಾಪಾಡುವಂತೆ ಹಿಂದೂ-ಮುಸ್ಲಿಂ ಮುಖಂಡರ ಐಕ್ಯತೆಯ ಮಂತ್ರ

ಇಂಗ್ಲೆಂಡ್‌‌ನ ಲೀಸೆಸ್ಟರ್ ಹಿಂಸಾಚಾರ: ಶಾಂತಿ ಕಾಪಾಡುವಂತೆ ಹಿಂದೂ-ಮುಸ್ಲಿಂ ಮುಖಂಡರ ಐಕ್ಯತೆಯ ಮಂತ್ರ

- Advertisement -
- Advertisement -

ಇಂಗ್ಲೆಂಡ್‌ನ ಲೀಸೆಸ್ಟರ್‌‌ನಲ್ಲಿ ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯದ ನಂತರ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ಈವರೆಗೆ 47 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ನಗರದಲ್ಲಿ ಸೌಹಾರ್ದತೆಗಾಗಿ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ಮುಖಂಡರು ಒಗ್ಗಟ್ಟಾಗಿದ್ದು, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

“ನಾವು ಲೀಸೆಸ್ಟರ್‌ನ ಕುಟುಂಬವಾಗಿದ್ದು ಹಿಂದೂಗಳು ಮತ್ತು ಮುಸ್ಲಿಮರಾಗಿ ಇಲ್ಲಿ ನಿಂತಿಲ್ಲ. ಸಹೋದರ ಸಹೋದರಿಯರಂತೆ ನಿಮ್ಮ ಮುಂದೆ ನಿಂತಿದ್ದೇವೆ. ವಿಭಜನೆಗೆ ಕಾರಣವಾಗುವ ಯಾವುದೇ ವಿದೇಶಿ ಉಗ್ರಗಾಮಿ ಸಿದ್ಧಾಂತಕ್ಕೆ ಲೀಸೆಸ್ಟರ್ ಸ್ಥಾನವಿಲ್ಲ” ಎಂದು ಮುಖಂಡರೊಬ್ಬರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಮ್ಮ ಎರಡು ಧರ್ಮಗಳು ಈ ಅದ್ಭುತ ನಗರದಲ್ಲಿ ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಸಾಮರಸ್ಯದಿಂದ ಬದುಕಿವೆ. ನಾವು ಒಟ್ಟಿಗೆ ಈ ನಗರಕ್ಕೆ ಬಂದಿದ್ದು, ಒಂದೇ ಸವಾಲುಗಳನ್ನು ಒಟ್ಟಿಗೆ ಎದುರಿಸಿದ್ದೇವೆ. ನಾವು ಜನಾಂಗೀಯ ದ್ವೇಷಿಗಳ ವಿರುದ್ಧ ಒಟ್ಟಾಗಿ ಹೋರಾಡಿದ್ದೇವೆ. ಒಗ್ಗಟ್ಟಿನಲ್ಲೆ ಈ ನಗರವನ್ನು ವೈವಿಧ್ಯತೆ ಮತ್ತು ಸಮುದಾಯದ ಒಗ್ಗಟ್ಟಿನ ದಾರಿದೀಪವನ್ನಾಗಿ ಮಾಡಿದೆವು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇಂಗ್ಲೆಂಡ್‌: ಮುಸ್ಲಿಂ ವಿರೋಧಿ ಘೋಷಣೆ ಕೂಗಿ ಮೆರವಣಿಗೆ ನಡೆಸಿದ ಹಿಂದುತ್ವ ಪ್ರೇರಿತ ಯುವಕರು; ಭುಗಿಲೆದ್ದ ಘರ್ಷಣೆ

“ಸಭ್ಯ ಸಮಾಜದ ಭಾಗವಾಗಿರದ ಉದ್ವೇಗ ಮತ್ತು ಹಿಂಸೆಯ ಬಗ್ಗೆ ಸಮುದಾಯಗಳಿಗೆ ದುಃಖ ಉಂಟಾಗಿದ್ದು, ಅಘಾತಗೊಂಡಿದೆ. ನಾವು ಎಲ್ಲಾ ಧಾರ್ಮಿಕ ಸ್ಥಳಗಳು, ಮಸೀದಿಗಳು ಮತ್ತು ದೇವಾಲಯಗಳ ಪಾವಿತ್ರ್ಯತೆಯನ್ನು ಗೌರವಿಸುವಂತೆ ಕೇಳಿಕೊಳ್ಳುತ್ತೇವೆ. ಜೋರಾದ ಸಂಗೀತ, ಧ್ವಜಧಾರಣೆ, ಅವಹೇಳನಕಾರಿ ಘೋಷಣೆಗಳು ಅಥವಾ ಪವಿತ್ರ ಬಟ್ಟೆಯ ವಿರುದ್ಧದ ದಾಳಿಗಳೊಂದಿಗೆ ಪ್ರಚೋದನೆಗೆ ಒಳಗಾಗಬೇಡಿ” ಎಂದು ಅವರು ಜನರನ್ನು ಒತ್ತಾಯಿಸಿದ್ದಾರೆ.

ಪೂರ್ವ ಇಂಗ್ಲೆಂಡ್ ನಗರದಲ್ಲಿ ಮತ್ತಷ್ಟು ಕಾನೂನು ಸುವ್ಯವಸ್ಥೆ ಹದಗೆಡುವುದನ್ನು ತಡೆಯಲು ನಡೆಯುತ್ತಿರುವ ಪೊಲೀಸ್‌ ಕಾರ್ಯಾಚರಣೆಯ ಭಾಗವಾಗಿ 47 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಇಂದು ಹೇಳಿದ್ದಾರೆ.

ಭಾರತವು ಪಾಕಿಸ್ತಾನವನ್ನು ಸೋಲಿಸಿದ ಆಗಸ್ಟ್ 28 ರ ಕ್ರಿಕೆಟ್ ಪಂದ್ಯದ ನಂತರ ನಗರದಲ್ಲಿ ಉದ್ವಿಗ್ನತೆ ಪ್ರಾರಂಭವಾಗಿತ್ತು. ಕಳೆದ ಶನಿವಾರ ಹಿಂದುತ್ವ ಬೆಂಬಲಿಗರು ಮಾಸ್ಕ್‌ ಧರಿಸಿ, ಕೈಯಲ್ಲಿ ಮಾರಕಾಸ್ತ್ರ ಹಿಡಿದು ಮುಸ್ಲಿಂ ವಿರೋಧಿ ಘೋಷಣೆಗಳೊಂದಿಗೆ ಮುಸ್ಲಿಂ ಬಾಹುಳ್ಯ ಪ್ರದೇಶಗಳಲ್ಲಿ ಮೆರವಣಿಗೆ ನಡೆಸಿದ್ದರು. ಈ ವೇಳೆ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸುವ ವಿಡಿಯೊ ಮತ್ತು ಬಾಟಲಿಗಳಲ್ಲಿ ಎಸೆಯುವ ವಿಡಿಯೊ ಕೂಡಾ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ನಂತರ ಭಾನುವಾರ ಮುಸ್ಲಿಂ ಯುವಕರು ಕೂಡಾ ಸಭೆ ನಡೆಸಿ ದಾಂದಲೆ ಎಬ್ಬಿಸಿದ್ದರು.

ಇದನ್ನೂ ಓದಿ: 19 ವರ್ಷದೊಳಗಿನ ವಿಶ್ವಕಪ್ ಕ್ರಿಕೆಟ್ ಫೈನಲ್: ಇಂಗ್ಲೆಂಡ್ ಮಣಿಸಿ 5ನೇ ಬಾರಿ ಕಪ್ ಗೆದ್ದ ಭಾರತ

ಘರ್ಷಣೆಯ ಸಮಯದಲ್ಲಿ ಆಕ್ರಮಣಕಾರಿ ಶಸ್ತ್ರಾಸ್ತ್ರವನ್ನು ಹೊಂದಿದ್ದಕ್ಕಾಗಿ 20 ವರ್ಷದ ಯುವಕನಿಗೆ 10 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ. ಲೀಸೆಸ್ಟರ್‌ಶೈರ್ ಪೊಲೀಸ್‌ನ ತಾತ್ಕಾಲಿಕ ಮುಖ್ಯ ಕಾನ್ಸ್‌ಟೇಬಲ್ ರಾಬ್ ನಿಕ್ಸನ್, “ಬಂಧಿತರಲ್ಲಿ ಕೆಲವರು ನಗರದ ಹೊರಭಾಗದವರಾಗಿದ್ದು, ಕೆಲವರು ಬರ್ಮಿಂಗ್‌ಹ್ಯಾಮ್‌ನವರೂ ಇದ್ದರು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....