Homeಅಂತರಾಷ್ಟ್ರೀಯಇಂಗ್ಲೆಂಡ್‌‌ನ ಲೀಸೆಸ್ಟರ್ ಹಿಂಸಾಚಾರ: ಶಾಂತಿ ಕಾಪಾಡುವಂತೆ ಹಿಂದೂ-ಮುಸ್ಲಿಂ ಮುಖಂಡರ ಐಕ್ಯತೆಯ ಮಂತ್ರ

ಇಂಗ್ಲೆಂಡ್‌‌ನ ಲೀಸೆಸ್ಟರ್ ಹಿಂಸಾಚಾರ: ಶಾಂತಿ ಕಾಪಾಡುವಂತೆ ಹಿಂದೂ-ಮುಸ್ಲಿಂ ಮುಖಂಡರ ಐಕ್ಯತೆಯ ಮಂತ್ರ

- Advertisement -
- Advertisement -

ಇಂಗ್ಲೆಂಡ್‌ನ ಲೀಸೆಸ್ಟರ್‌‌ನಲ್ಲಿ ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯದ ನಂತರ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ಈವರೆಗೆ 47 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ನಗರದಲ್ಲಿ ಸೌಹಾರ್ದತೆಗಾಗಿ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ಮುಖಂಡರು ಒಗ್ಗಟ್ಟಾಗಿದ್ದು, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

“ನಾವು ಲೀಸೆಸ್ಟರ್‌ನ ಕುಟುಂಬವಾಗಿದ್ದು ಹಿಂದೂಗಳು ಮತ್ತು ಮುಸ್ಲಿಮರಾಗಿ ಇಲ್ಲಿ ನಿಂತಿಲ್ಲ. ಸಹೋದರ ಸಹೋದರಿಯರಂತೆ ನಿಮ್ಮ ಮುಂದೆ ನಿಂತಿದ್ದೇವೆ. ವಿಭಜನೆಗೆ ಕಾರಣವಾಗುವ ಯಾವುದೇ ವಿದೇಶಿ ಉಗ್ರಗಾಮಿ ಸಿದ್ಧಾಂತಕ್ಕೆ ಲೀಸೆಸ್ಟರ್ ಸ್ಥಾನವಿಲ್ಲ” ಎಂದು ಮುಖಂಡರೊಬ್ಬರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಮ್ಮ ಎರಡು ಧರ್ಮಗಳು ಈ ಅದ್ಭುತ ನಗರದಲ್ಲಿ ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಸಾಮರಸ್ಯದಿಂದ ಬದುಕಿವೆ. ನಾವು ಒಟ್ಟಿಗೆ ಈ ನಗರಕ್ಕೆ ಬಂದಿದ್ದು, ಒಂದೇ ಸವಾಲುಗಳನ್ನು ಒಟ್ಟಿಗೆ ಎದುರಿಸಿದ್ದೇವೆ. ನಾವು ಜನಾಂಗೀಯ ದ್ವೇಷಿಗಳ ವಿರುದ್ಧ ಒಟ್ಟಾಗಿ ಹೋರಾಡಿದ್ದೇವೆ. ಒಗ್ಗಟ್ಟಿನಲ್ಲೆ ಈ ನಗರವನ್ನು ವೈವಿಧ್ಯತೆ ಮತ್ತು ಸಮುದಾಯದ ಒಗ್ಗಟ್ಟಿನ ದಾರಿದೀಪವನ್ನಾಗಿ ಮಾಡಿದೆವು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇಂಗ್ಲೆಂಡ್‌: ಮುಸ್ಲಿಂ ವಿರೋಧಿ ಘೋಷಣೆ ಕೂಗಿ ಮೆರವಣಿಗೆ ನಡೆಸಿದ ಹಿಂದುತ್ವ ಪ್ರೇರಿತ ಯುವಕರು; ಭುಗಿಲೆದ್ದ ಘರ್ಷಣೆ

“ಸಭ್ಯ ಸಮಾಜದ ಭಾಗವಾಗಿರದ ಉದ್ವೇಗ ಮತ್ತು ಹಿಂಸೆಯ ಬಗ್ಗೆ ಸಮುದಾಯಗಳಿಗೆ ದುಃಖ ಉಂಟಾಗಿದ್ದು, ಅಘಾತಗೊಂಡಿದೆ. ನಾವು ಎಲ್ಲಾ ಧಾರ್ಮಿಕ ಸ್ಥಳಗಳು, ಮಸೀದಿಗಳು ಮತ್ತು ದೇವಾಲಯಗಳ ಪಾವಿತ್ರ್ಯತೆಯನ್ನು ಗೌರವಿಸುವಂತೆ ಕೇಳಿಕೊಳ್ಳುತ್ತೇವೆ. ಜೋರಾದ ಸಂಗೀತ, ಧ್ವಜಧಾರಣೆ, ಅವಹೇಳನಕಾರಿ ಘೋಷಣೆಗಳು ಅಥವಾ ಪವಿತ್ರ ಬಟ್ಟೆಯ ವಿರುದ್ಧದ ದಾಳಿಗಳೊಂದಿಗೆ ಪ್ರಚೋದನೆಗೆ ಒಳಗಾಗಬೇಡಿ” ಎಂದು ಅವರು ಜನರನ್ನು ಒತ್ತಾಯಿಸಿದ್ದಾರೆ.

ಪೂರ್ವ ಇಂಗ್ಲೆಂಡ್ ನಗರದಲ್ಲಿ ಮತ್ತಷ್ಟು ಕಾನೂನು ಸುವ್ಯವಸ್ಥೆ ಹದಗೆಡುವುದನ್ನು ತಡೆಯಲು ನಡೆಯುತ್ತಿರುವ ಪೊಲೀಸ್‌ ಕಾರ್ಯಾಚರಣೆಯ ಭಾಗವಾಗಿ 47 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಇಂದು ಹೇಳಿದ್ದಾರೆ.

ಭಾರತವು ಪಾಕಿಸ್ತಾನವನ್ನು ಸೋಲಿಸಿದ ಆಗಸ್ಟ್ 28 ರ ಕ್ರಿಕೆಟ್ ಪಂದ್ಯದ ನಂತರ ನಗರದಲ್ಲಿ ಉದ್ವಿಗ್ನತೆ ಪ್ರಾರಂಭವಾಗಿತ್ತು. ಕಳೆದ ಶನಿವಾರ ಹಿಂದುತ್ವ ಬೆಂಬಲಿಗರು ಮಾಸ್ಕ್‌ ಧರಿಸಿ, ಕೈಯಲ್ಲಿ ಮಾರಕಾಸ್ತ್ರ ಹಿಡಿದು ಮುಸ್ಲಿಂ ವಿರೋಧಿ ಘೋಷಣೆಗಳೊಂದಿಗೆ ಮುಸ್ಲಿಂ ಬಾಹುಳ್ಯ ಪ್ರದೇಶಗಳಲ್ಲಿ ಮೆರವಣಿಗೆ ನಡೆಸಿದ್ದರು. ಈ ವೇಳೆ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸುವ ವಿಡಿಯೊ ಮತ್ತು ಬಾಟಲಿಗಳಲ್ಲಿ ಎಸೆಯುವ ವಿಡಿಯೊ ಕೂಡಾ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ನಂತರ ಭಾನುವಾರ ಮುಸ್ಲಿಂ ಯುವಕರು ಕೂಡಾ ಸಭೆ ನಡೆಸಿ ದಾಂದಲೆ ಎಬ್ಬಿಸಿದ್ದರು.

ಇದನ್ನೂ ಓದಿ: 19 ವರ್ಷದೊಳಗಿನ ವಿಶ್ವಕಪ್ ಕ್ರಿಕೆಟ್ ಫೈನಲ್: ಇಂಗ್ಲೆಂಡ್ ಮಣಿಸಿ 5ನೇ ಬಾರಿ ಕಪ್ ಗೆದ್ದ ಭಾರತ

ಘರ್ಷಣೆಯ ಸಮಯದಲ್ಲಿ ಆಕ್ರಮಣಕಾರಿ ಶಸ್ತ್ರಾಸ್ತ್ರವನ್ನು ಹೊಂದಿದ್ದಕ್ಕಾಗಿ 20 ವರ್ಷದ ಯುವಕನಿಗೆ 10 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ. ಲೀಸೆಸ್ಟರ್‌ಶೈರ್ ಪೊಲೀಸ್‌ನ ತಾತ್ಕಾಲಿಕ ಮುಖ್ಯ ಕಾನ್ಸ್‌ಟೇಬಲ್ ರಾಬ್ ನಿಕ್ಸನ್, “ಬಂಧಿತರಲ್ಲಿ ಕೆಲವರು ನಗರದ ಹೊರಭಾಗದವರಾಗಿದ್ದು, ಕೆಲವರು ಬರ್ಮಿಂಗ್‌ಹ್ಯಾಮ್‌ನವರೂ ಇದ್ದರು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...