Homeಅಂತರಾಷ್ಟ್ರೀಯಇಂಗ್ಲೆಂಡ್‌‌ನ ಲೀಸೆಸ್ಟರ್ ಹಿಂಸಾಚಾರ: ಶಾಂತಿ ಕಾಪಾಡುವಂತೆ ಹಿಂದೂ-ಮುಸ್ಲಿಂ ಮುಖಂಡರ ಐಕ್ಯತೆಯ ಮಂತ್ರ

ಇಂಗ್ಲೆಂಡ್‌‌ನ ಲೀಸೆಸ್ಟರ್ ಹಿಂಸಾಚಾರ: ಶಾಂತಿ ಕಾಪಾಡುವಂತೆ ಹಿಂದೂ-ಮುಸ್ಲಿಂ ಮುಖಂಡರ ಐಕ್ಯತೆಯ ಮಂತ್ರ

- Advertisement -
- Advertisement -

ಇಂಗ್ಲೆಂಡ್‌ನ ಲೀಸೆಸ್ಟರ್‌‌ನಲ್ಲಿ ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯದ ನಂತರ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ಈವರೆಗೆ 47 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ನಗರದಲ್ಲಿ ಸೌಹಾರ್ದತೆಗಾಗಿ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ಮುಖಂಡರು ಒಗ್ಗಟ್ಟಾಗಿದ್ದು, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

“ನಾವು ಲೀಸೆಸ್ಟರ್‌ನ ಕುಟುಂಬವಾಗಿದ್ದು ಹಿಂದೂಗಳು ಮತ್ತು ಮುಸ್ಲಿಮರಾಗಿ ಇಲ್ಲಿ ನಿಂತಿಲ್ಲ. ಸಹೋದರ ಸಹೋದರಿಯರಂತೆ ನಿಮ್ಮ ಮುಂದೆ ನಿಂತಿದ್ದೇವೆ. ವಿಭಜನೆಗೆ ಕಾರಣವಾಗುವ ಯಾವುದೇ ವಿದೇಶಿ ಉಗ್ರಗಾಮಿ ಸಿದ್ಧಾಂತಕ್ಕೆ ಲೀಸೆಸ್ಟರ್ ಸ್ಥಾನವಿಲ್ಲ” ಎಂದು ಮುಖಂಡರೊಬ್ಬರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಮ್ಮ ಎರಡು ಧರ್ಮಗಳು ಈ ಅದ್ಭುತ ನಗರದಲ್ಲಿ ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಸಾಮರಸ್ಯದಿಂದ ಬದುಕಿವೆ. ನಾವು ಒಟ್ಟಿಗೆ ಈ ನಗರಕ್ಕೆ ಬಂದಿದ್ದು, ಒಂದೇ ಸವಾಲುಗಳನ್ನು ಒಟ್ಟಿಗೆ ಎದುರಿಸಿದ್ದೇವೆ. ನಾವು ಜನಾಂಗೀಯ ದ್ವೇಷಿಗಳ ವಿರುದ್ಧ ಒಟ್ಟಾಗಿ ಹೋರಾಡಿದ್ದೇವೆ. ಒಗ್ಗಟ್ಟಿನಲ್ಲೆ ಈ ನಗರವನ್ನು ವೈವಿಧ್ಯತೆ ಮತ್ತು ಸಮುದಾಯದ ಒಗ್ಗಟ್ಟಿನ ದಾರಿದೀಪವನ್ನಾಗಿ ಮಾಡಿದೆವು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇಂಗ್ಲೆಂಡ್‌: ಮುಸ್ಲಿಂ ವಿರೋಧಿ ಘೋಷಣೆ ಕೂಗಿ ಮೆರವಣಿಗೆ ನಡೆಸಿದ ಹಿಂದುತ್ವ ಪ್ರೇರಿತ ಯುವಕರು; ಭುಗಿಲೆದ್ದ ಘರ್ಷಣೆ

“ಸಭ್ಯ ಸಮಾಜದ ಭಾಗವಾಗಿರದ ಉದ್ವೇಗ ಮತ್ತು ಹಿಂಸೆಯ ಬಗ್ಗೆ ಸಮುದಾಯಗಳಿಗೆ ದುಃಖ ಉಂಟಾಗಿದ್ದು, ಅಘಾತಗೊಂಡಿದೆ. ನಾವು ಎಲ್ಲಾ ಧಾರ್ಮಿಕ ಸ್ಥಳಗಳು, ಮಸೀದಿಗಳು ಮತ್ತು ದೇವಾಲಯಗಳ ಪಾವಿತ್ರ್ಯತೆಯನ್ನು ಗೌರವಿಸುವಂತೆ ಕೇಳಿಕೊಳ್ಳುತ್ತೇವೆ. ಜೋರಾದ ಸಂಗೀತ, ಧ್ವಜಧಾರಣೆ, ಅವಹೇಳನಕಾರಿ ಘೋಷಣೆಗಳು ಅಥವಾ ಪವಿತ್ರ ಬಟ್ಟೆಯ ವಿರುದ್ಧದ ದಾಳಿಗಳೊಂದಿಗೆ ಪ್ರಚೋದನೆಗೆ ಒಳಗಾಗಬೇಡಿ” ಎಂದು ಅವರು ಜನರನ್ನು ಒತ್ತಾಯಿಸಿದ್ದಾರೆ.

ಪೂರ್ವ ಇಂಗ್ಲೆಂಡ್ ನಗರದಲ್ಲಿ ಮತ್ತಷ್ಟು ಕಾನೂನು ಸುವ್ಯವಸ್ಥೆ ಹದಗೆಡುವುದನ್ನು ತಡೆಯಲು ನಡೆಯುತ್ತಿರುವ ಪೊಲೀಸ್‌ ಕಾರ್ಯಾಚರಣೆಯ ಭಾಗವಾಗಿ 47 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಇಂದು ಹೇಳಿದ್ದಾರೆ.

ಭಾರತವು ಪಾಕಿಸ್ತಾನವನ್ನು ಸೋಲಿಸಿದ ಆಗಸ್ಟ್ 28 ರ ಕ್ರಿಕೆಟ್ ಪಂದ್ಯದ ನಂತರ ನಗರದಲ್ಲಿ ಉದ್ವಿಗ್ನತೆ ಪ್ರಾರಂಭವಾಗಿತ್ತು. ಕಳೆದ ಶನಿವಾರ ಹಿಂದುತ್ವ ಬೆಂಬಲಿಗರು ಮಾಸ್ಕ್‌ ಧರಿಸಿ, ಕೈಯಲ್ಲಿ ಮಾರಕಾಸ್ತ್ರ ಹಿಡಿದು ಮುಸ್ಲಿಂ ವಿರೋಧಿ ಘೋಷಣೆಗಳೊಂದಿಗೆ ಮುಸ್ಲಿಂ ಬಾಹುಳ್ಯ ಪ್ರದೇಶಗಳಲ್ಲಿ ಮೆರವಣಿಗೆ ನಡೆಸಿದ್ದರು. ಈ ವೇಳೆ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸುವ ವಿಡಿಯೊ ಮತ್ತು ಬಾಟಲಿಗಳಲ್ಲಿ ಎಸೆಯುವ ವಿಡಿಯೊ ಕೂಡಾ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ನಂತರ ಭಾನುವಾರ ಮುಸ್ಲಿಂ ಯುವಕರು ಕೂಡಾ ಸಭೆ ನಡೆಸಿ ದಾಂದಲೆ ಎಬ್ಬಿಸಿದ್ದರು.

ಇದನ್ನೂ ಓದಿ: 19 ವರ್ಷದೊಳಗಿನ ವಿಶ್ವಕಪ್ ಕ್ರಿಕೆಟ್ ಫೈನಲ್: ಇಂಗ್ಲೆಂಡ್ ಮಣಿಸಿ 5ನೇ ಬಾರಿ ಕಪ್ ಗೆದ್ದ ಭಾರತ

ಘರ್ಷಣೆಯ ಸಮಯದಲ್ಲಿ ಆಕ್ರಮಣಕಾರಿ ಶಸ್ತ್ರಾಸ್ತ್ರವನ್ನು ಹೊಂದಿದ್ದಕ್ಕಾಗಿ 20 ವರ್ಷದ ಯುವಕನಿಗೆ 10 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ. ಲೀಸೆಸ್ಟರ್‌ಶೈರ್ ಪೊಲೀಸ್‌ನ ತಾತ್ಕಾಲಿಕ ಮುಖ್ಯ ಕಾನ್ಸ್‌ಟೇಬಲ್ ರಾಬ್ ನಿಕ್ಸನ್, “ಬಂಧಿತರಲ್ಲಿ ಕೆಲವರು ನಗರದ ಹೊರಭಾಗದವರಾಗಿದ್ದು, ಕೆಲವರು ಬರ್ಮಿಂಗ್‌ಹ್ಯಾಮ್‌ನವರೂ ಇದ್ದರು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...