Homeಅಂತರಾಷ್ಟ್ರೀಯಇಂಗ್ಲೆಂಡ್‌‌ನ ಲೀಸೆಸ್ಟರ್ ಹಿಂಸಾಚಾರ: ಶಾಂತಿ ಕಾಪಾಡುವಂತೆ ಹಿಂದೂ-ಮುಸ್ಲಿಂ ಮುಖಂಡರ ಐಕ್ಯತೆಯ ಮಂತ್ರ

ಇಂಗ್ಲೆಂಡ್‌‌ನ ಲೀಸೆಸ್ಟರ್ ಹಿಂಸಾಚಾರ: ಶಾಂತಿ ಕಾಪಾಡುವಂತೆ ಹಿಂದೂ-ಮುಸ್ಲಿಂ ಮುಖಂಡರ ಐಕ್ಯತೆಯ ಮಂತ್ರ

- Advertisement -
- Advertisement -

ಇಂಗ್ಲೆಂಡ್‌ನ ಲೀಸೆಸ್ಟರ್‌‌ನಲ್ಲಿ ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯದ ನಂತರ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ಈವರೆಗೆ 47 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ನಗರದಲ್ಲಿ ಸೌಹಾರ್ದತೆಗಾಗಿ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ಮುಖಂಡರು ಒಗ್ಗಟ್ಟಾಗಿದ್ದು, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

“ನಾವು ಲೀಸೆಸ್ಟರ್‌ನ ಕುಟುಂಬವಾಗಿದ್ದು ಹಿಂದೂಗಳು ಮತ್ತು ಮುಸ್ಲಿಮರಾಗಿ ಇಲ್ಲಿ ನಿಂತಿಲ್ಲ. ಸಹೋದರ ಸಹೋದರಿಯರಂತೆ ನಿಮ್ಮ ಮುಂದೆ ನಿಂತಿದ್ದೇವೆ. ವಿಭಜನೆಗೆ ಕಾರಣವಾಗುವ ಯಾವುದೇ ವಿದೇಶಿ ಉಗ್ರಗಾಮಿ ಸಿದ್ಧಾಂತಕ್ಕೆ ಲೀಸೆಸ್ಟರ್ ಸ್ಥಾನವಿಲ್ಲ” ಎಂದು ಮುಖಂಡರೊಬ್ಬರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಮ್ಮ ಎರಡು ಧರ್ಮಗಳು ಈ ಅದ್ಭುತ ನಗರದಲ್ಲಿ ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಸಾಮರಸ್ಯದಿಂದ ಬದುಕಿವೆ. ನಾವು ಒಟ್ಟಿಗೆ ಈ ನಗರಕ್ಕೆ ಬಂದಿದ್ದು, ಒಂದೇ ಸವಾಲುಗಳನ್ನು ಒಟ್ಟಿಗೆ ಎದುರಿಸಿದ್ದೇವೆ. ನಾವು ಜನಾಂಗೀಯ ದ್ವೇಷಿಗಳ ವಿರುದ್ಧ ಒಟ್ಟಾಗಿ ಹೋರಾಡಿದ್ದೇವೆ. ಒಗ್ಗಟ್ಟಿನಲ್ಲೆ ಈ ನಗರವನ್ನು ವೈವಿಧ್ಯತೆ ಮತ್ತು ಸಮುದಾಯದ ಒಗ್ಗಟ್ಟಿನ ದಾರಿದೀಪವನ್ನಾಗಿ ಮಾಡಿದೆವು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇಂಗ್ಲೆಂಡ್‌: ಮುಸ್ಲಿಂ ವಿರೋಧಿ ಘೋಷಣೆ ಕೂಗಿ ಮೆರವಣಿಗೆ ನಡೆಸಿದ ಹಿಂದುತ್ವ ಪ್ರೇರಿತ ಯುವಕರು; ಭುಗಿಲೆದ್ದ ಘರ್ಷಣೆ

“ಸಭ್ಯ ಸಮಾಜದ ಭಾಗವಾಗಿರದ ಉದ್ವೇಗ ಮತ್ತು ಹಿಂಸೆಯ ಬಗ್ಗೆ ಸಮುದಾಯಗಳಿಗೆ ದುಃಖ ಉಂಟಾಗಿದ್ದು, ಅಘಾತಗೊಂಡಿದೆ. ನಾವು ಎಲ್ಲಾ ಧಾರ್ಮಿಕ ಸ್ಥಳಗಳು, ಮಸೀದಿಗಳು ಮತ್ತು ದೇವಾಲಯಗಳ ಪಾವಿತ್ರ್ಯತೆಯನ್ನು ಗೌರವಿಸುವಂತೆ ಕೇಳಿಕೊಳ್ಳುತ್ತೇವೆ. ಜೋರಾದ ಸಂಗೀತ, ಧ್ವಜಧಾರಣೆ, ಅವಹೇಳನಕಾರಿ ಘೋಷಣೆಗಳು ಅಥವಾ ಪವಿತ್ರ ಬಟ್ಟೆಯ ವಿರುದ್ಧದ ದಾಳಿಗಳೊಂದಿಗೆ ಪ್ರಚೋದನೆಗೆ ಒಳಗಾಗಬೇಡಿ” ಎಂದು ಅವರು ಜನರನ್ನು ಒತ್ತಾಯಿಸಿದ್ದಾರೆ.

ಪೂರ್ವ ಇಂಗ್ಲೆಂಡ್ ನಗರದಲ್ಲಿ ಮತ್ತಷ್ಟು ಕಾನೂನು ಸುವ್ಯವಸ್ಥೆ ಹದಗೆಡುವುದನ್ನು ತಡೆಯಲು ನಡೆಯುತ್ತಿರುವ ಪೊಲೀಸ್‌ ಕಾರ್ಯಾಚರಣೆಯ ಭಾಗವಾಗಿ 47 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಇಂದು ಹೇಳಿದ್ದಾರೆ.

ಭಾರತವು ಪಾಕಿಸ್ತಾನವನ್ನು ಸೋಲಿಸಿದ ಆಗಸ್ಟ್ 28 ರ ಕ್ರಿಕೆಟ್ ಪಂದ್ಯದ ನಂತರ ನಗರದಲ್ಲಿ ಉದ್ವಿಗ್ನತೆ ಪ್ರಾರಂಭವಾಗಿತ್ತು. ಕಳೆದ ಶನಿವಾರ ಹಿಂದುತ್ವ ಬೆಂಬಲಿಗರು ಮಾಸ್ಕ್‌ ಧರಿಸಿ, ಕೈಯಲ್ಲಿ ಮಾರಕಾಸ್ತ್ರ ಹಿಡಿದು ಮುಸ್ಲಿಂ ವಿರೋಧಿ ಘೋಷಣೆಗಳೊಂದಿಗೆ ಮುಸ್ಲಿಂ ಬಾಹುಳ್ಯ ಪ್ರದೇಶಗಳಲ್ಲಿ ಮೆರವಣಿಗೆ ನಡೆಸಿದ್ದರು. ಈ ವೇಳೆ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸುವ ವಿಡಿಯೊ ಮತ್ತು ಬಾಟಲಿಗಳಲ್ಲಿ ಎಸೆಯುವ ವಿಡಿಯೊ ಕೂಡಾ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ನಂತರ ಭಾನುವಾರ ಮುಸ್ಲಿಂ ಯುವಕರು ಕೂಡಾ ಸಭೆ ನಡೆಸಿ ದಾಂದಲೆ ಎಬ್ಬಿಸಿದ್ದರು.

ಇದನ್ನೂ ಓದಿ: 19 ವರ್ಷದೊಳಗಿನ ವಿಶ್ವಕಪ್ ಕ್ರಿಕೆಟ್ ಫೈನಲ್: ಇಂಗ್ಲೆಂಡ್ ಮಣಿಸಿ 5ನೇ ಬಾರಿ ಕಪ್ ಗೆದ್ದ ಭಾರತ

ಘರ್ಷಣೆಯ ಸಮಯದಲ್ಲಿ ಆಕ್ರಮಣಕಾರಿ ಶಸ್ತ್ರಾಸ್ತ್ರವನ್ನು ಹೊಂದಿದ್ದಕ್ಕಾಗಿ 20 ವರ್ಷದ ಯುವಕನಿಗೆ 10 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ. ಲೀಸೆಸ್ಟರ್‌ಶೈರ್ ಪೊಲೀಸ್‌ನ ತಾತ್ಕಾಲಿಕ ಮುಖ್ಯ ಕಾನ್ಸ್‌ಟೇಬಲ್ ರಾಬ್ ನಿಕ್ಸನ್, “ಬಂಧಿತರಲ್ಲಿ ಕೆಲವರು ನಗರದ ಹೊರಭಾಗದವರಾಗಿದ್ದು, ಕೆಲವರು ಬರ್ಮಿಂಗ್‌ಹ್ಯಾಮ್‌ನವರೂ ಇದ್ದರು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....