Homeಕರೋನಾ ತಲ್ಲಣಮೂಗಿನಲ್ಲಿ ನಿಂಬೆರಸ ಶಿಕ್ಷಕನ ಬಲಿ ಪಡೆಯಿತೇ? ಸಂಕೇಶ್ವರ ಸಲಹೆ ಆಕ್ಷೇಪಿಸಿದ ಡಾ, ನರೇಂದ್ರ ನಾಯಕ್‌ರಿಗೆ ಫೇಸ್‌ಬುಕ್...

ಮೂಗಿನಲ್ಲಿ ನಿಂಬೆರಸ ಶಿಕ್ಷಕನ ಬಲಿ ಪಡೆಯಿತೇ? ಸಂಕೇಶ್ವರ ಸಲಹೆ ಆಕ್ಷೇಪಿಸಿದ ಡಾ, ನರೇಂದ್ರ ನಾಯಕ್‌ರಿಗೆ ಫೇಸ್‌ಬುಕ್ ನಿರ್ಬಂಧವೇಕೆ?

- Advertisement -
- Advertisement -

ಸಿಂಧನೂರಿನ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಇಂದು ಮುಂಜಾನೆ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮೂಗಿನಲ್ಲಿ ನಿಂಬೆರಸ ಸುರಿದುಕೊಂಡಿದ್ದೇ ಕಾರಣ ಎಂದು ಅವರ ಕುಟುಂಬಸ್ಥರು, ಸಹೋದ್ಯೋಗಿಗಳು ಅಪಾದಿಸಿದ್ದಾರೆ. ನಿಂಬೆರಸ ಮೂಗಿಗೆ ಸುರಿದುಕೊಂಡ ಶಿಕ್ಷಕ ಒದ್ದಾಡಿ ಸತ್ತರು ಎಂದು ಕನ್ನಡದ ಹಲವು ಪತ್ರಿಕೆಗಳು ವರದಿ ಮಾಡಿದೆ.

ಇನ್ನೊಂದು ಕಡೆ, ಸಂಕೇಶ್ವರರ ನಿಂಬೆರಸ ಸಲಹೆಯನ್ನು ಆಕ್ಷೇಪಿಸಿ, ವೈಜ್ಞಾನಿಕ ಮತ್ತು ವೈದ್ಯಕೀಯ ಅಂಶಗಳನ್ನು ಉಲ್ಲೇಖಿಸಿದ್ದ ಜೀವ ರಸಾಯನ ತಜ್ಞ, ಮೂಢನಂಬಿಕೆ ವಿರುದ್ಧ ಆಂದೋಲನ ನಡೆಸುತ್ತ ಬಂದಿರುವ ಡಾ, ನರೇಂದ್ರ ನಾಯಕ್, ನಿಂಬೆರಸದಿಂದ ಆಮ್ಲಜನಕ ಮಟ್ಟ ಹೆಚ್ಚುತ್ತದೆ ಎನ್ನುವುದಕ್ಕೆ ಯಾವುದೇ ಆಧಾರಗಳಿಲ್ಲ ಎಂದು ಮೊನ್ನೆ ಪ್ರಕಟಿಸಿದ್ದ ಫೇಸ್‌ಬುಕ್ ವಿಡಿಯೋ ಕಾರಣಕ್ಕಾಗಿ, ಫೇಸ್‌ಬುಕ್ ಇಂದು ಅವರ ಖಾತೆಯನ್ನು 24 ಗಂಟೆ ಕಾಲ ನಿರ್ಬಂಧಿಸಿದೆ!

ಈ ಎರಡೂ ಘಟನೆಗಳು ಮತ್ತೆ ನಮ್ಮನ್ನು ವಿಜಯ ಸಂಕೇಶ್ವರ್ ಅವರ ನಿಂಬೆರಸ-ಆಮ್ಲಜನಕ ಕತೆಗೆ ತಂದ ನಿಲ್ಲಿಸುತ್ತವೆ.

ಶಿಕ್ಷಕರ ಸಾವಿಗೆ ನಿಂಬೆರಸವೇ ಕಾರಣವಾಗಿತ್ತೆ?

ಸಿಂಧನೂರಿನ ಶರಣಬಸವೇಶ್ವರ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ 43 ವಯಸ್ಸಿನ ಬಸವರಾಜ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಪತ್ನಿ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು ಅವರು ಅಗಲಿದ್ದಾರೆ. ಅವರು ನಿನ್ನೆ ರಾತ್ರಿ ಮತ್ತು ಇವತ್ತು ಮುಂಜಾನೆ ಆಮ್ಲಜನಕ ಮಟ್ಟ ಹೆಚ್ಚಿಸಿಕೊಳ್ಳಲು ಮೂಗಿಗೆ ನಿಂಬೆರಸ ಹಾಕಿಕೊಂಡಿದ್ದೇ ಅವರ ಸಾವಿಗೆ ಕಾರಣ ಎಂದು ಕುಟುಂಬಸ್ಥರು, ಅವರ ಸಹೋದ್ಯೋಗಿಗಳು ಆರೋಪಿಸಿದ್ದಾರೆ.

ಮೃತ ಬಸವರಾಜ್ ಅವರ ಸಹೋದ್ಯೋಗಿ ವೀರೇಶ್, ‘ನಮಗಂತೂ ಹಾಗೆ ಅನ್ನಿಸಿದೆ ಸರ್. ನಿನ್ನೆ ತಾನೇ ಬಿಇಒ ಕಚೇರಿಯಲ್ಲಿ ಅವರನ್ನು ಭೇಟಿಯಾಗಿದ್ದೆ. ಅವರು ಸದಾ ಸದೃಢರಾಗಿದ್ದರು. ನಿಂಬೆರಸ ಪ್ರಮಾಣವನ್ನು ಜಾಸ್ತಿ ಹಾಕಿಕೊಂಡರು ಎನಿಸುತ್ತದೆ’ ಎಂದು ನಾನುಗೌರಿ.ಕಾಂಗೆ ತಿಳಿಸಿದರು.

‘ಸಾವಿನ ನಿಖರ ಕಾರಣ ನಂತರ ಗೊತ್ತಾಗಬಹುದು. ಆದರೆ ಸಂಕೇಶ್ವರ್ ಅವರು ಈ ನಿಂಬೆರಸ-ಆಮ್ಲಜನಕ ಕತೆ ಹೇಳಿದ ನಂತರ, ಸ್ವಲ್ಪ ಮೈ ಬಿಸಿಯಾದರೂ ಈ ನಿಂಬೆರಸಕ್ಕೆ ಬಹಳಷ್ಟು ಜನ ಒಡ್ಡಿಕೊಳ್ಳುತ್ತಿದ್ದಾರೆ. ನಾನೇ ಬಲ್ಲ ನಮ್ಮ ಕೆಲವು ಶಿಕ್ಷಕರು 20-25 ನಿಂಬೆ ಹಣ್ಣುಗಳನ್ನು ಮನೆಯಲ್ಲಿ ಇಟ್ಟುಕೊಂಡಿದ್ದಾರೆ. ತಿಳಿದವರೇ ಇಂತಹ ಅವೈಜ್ಞಾನಿಕ ಸಂಗತಿಗೆ ಶರಣಾದರೇ ಹೇಗೆ?’ ಎಂದು ವೀರೇಶ್ ಅಸಮಾಧಾನ ವ್ಯಕ್ತಪಡಿಸಿದರು.

ಬಸವರಾಜ್ ಮೃತರಾಗಿದ್ದಾರೆ ಎಂದು ಘೋಷಿಸಿದ ಸಿಂಧನೂರಿನ ಶಾಂತಿ ಆಸ್ಪತ್ರೆಯ ವೈದ್ಯರು ನಮ್ಮ ಸಂಪರ್ಕಕ್ಕೆ ಸಿಗಲಿಲ್ಲ. ಆಸ್ಪತ್ರೆಯ ಮಾಲೀಕ ನರೇಶ್ ನಮ್ಮೊಂದಿಗೆ ಮಾತನಾಡುತ್ತ, ‘ಇಲ್ಲಿಗೆ ಬರುವ ಮೊದಲೇ ಬಸವರಾಜ್ ಅವರು ಮೃತರಾಗಿದ್ದರು. ನಾವು ಸಹಜ ಕ್ರಮದಂತೆ ಇಸಿಜಿ ಮಾಡಿ, ಅವರು ಮೃತ ಎಂದು ಘೋಷಿಸಿದ್ದೇವೆ. ನಿಂಬೆರಸದಿಂದಾಗಿಯೇ ಸತ್ತರು ಎಂದು ದೃಢವಾಗಿಲ್ಲ. ಅವರಿಗೆ ಬೇರೇನೋ ಸಮಸ್ಯೆ ಇರಬಹುದು ಅಥವಾ ಮೊದಲೇ ಅವರಿಗೆ ಕೋವಿಡ್ ಇದ್ದು ಆ ಭಯಕ್ಕೆ ನಿಂಬೆರಸದ ಪ್ರಯೋಗ ಮಾಡಿರಬಹುದು. ಸಾವಿನ ನಿಖರ ಕಾರಣ ಗೊತ್ತಾಗಲು ಪೊಲೀಸರು ಪೋಸ್ಟ್ ಮಾರ್ಟಂ ಮಾಡಿಸಬೇಕು..’ ಎಂದರು.

ಸಿಂಧನೂರಿನ ಅನ್ನದಾನೀಶ್ವರ ಆಸ್ಪತ್ರೆಯ ಸರ್ಜರಿಯನ್ ಡಾ.ಬಿ.ಎನ್ ಪಾಟೀಲ್, ‘ಕೇಸ್ ಹಿಸ್ಟರಿ ಇಲ್ಲದೇ ಒಮ್ಮೆಲೇ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ಮೃತರಿಗೆ ಬೇರೆ ಆರೋಗ್ಯ ಸಮಸ್ಯೆ ಇದ್ದು, ಅವರು ಈ ಪ್ರಯೋಗ ಮಾಡಿದಾಗ ಏನೋ ಎಡವಟ್ಟಾಗಿರಬಹುದು. ಆದರೆ ಈಗಲೇ ನಿಖರವಾಗಿ ಹೇಳಲಾಗದು. ಒಂದಂತೂ ಸ್ಪಷ್ಟ, ನಿಂಬೆರಸ ಮೂಗಿನಲ್ಲಿ ಹಾಕಿಕೊಂಡರೆ ಯಾವ ಘನಂದಾರಿ ಅನುಕೂಲವೂ ಇಲ್ಲ, ಹಾಗೆಯೇ ಅದರಿಂದ ಸಾವು ಸಂಭವಿಸುವಂತಹ ಅಪಾಯವಿಲ್ಲ. ತಿಳಿಯಾಗಿರುವ ರಸ ಶ್ವಾಸಕೋಶ ಸೇರಿದರೆ ಸಾವೇನೂ ಸಂಭವಿಸದು. ಆದರೆ, ಈ ನಿಂಬೆರಸ ಪ್ರಯೋಗ ಅವೈಜ್ಞಾನಿಕ. ಜನರು ಎಚ್ಚರವಾಗಿರಬೇಕು’ ಎಂದು ನಾನುಗೌರಿ.ಕಾಂ ಗೆ ತಿಳಿಸಿದರು.

ಕೋವಿಡ್ ಅಥವಾ ಉಸಿರಾಟದ ಸಮಸ್ಯೆ ಇದ್ದು, ಮೃತರು ನಿಂಬೆರಸ ಪ್ರಯೋಗಕ್ಕೆ ಒಡ್ಡಿಕೊಂಡಾಗ ಆರೋಗ್ಯದಲ್ಲಿ ಏರುಪೇರಾಗಿತೆ? ಇದು ನಿಜವಾದರೆ, ಸಂಕೇಶ್ವರ್ ಕ್ರಿಮಿನಲ್ ಅಪರಾಧ ಎಸಗಿದಂತೆ ಅಲ್ಲವೇ?

ಸತ್ಯ ಹೇಳಿದ ವಿಜ್ಞಾನಿಗೆ ಫೇಸ್‌ಬುಕ್ ನಿರ್ಬಂಧ!

ವಿಜಯ ಸಂಕೇಶ್ವರ್ ಅವರು ಸುದ್ದಿಗೋಷ್ಠಿ ಕರೆದು, ಆಮ್ಲಜನಕ ಮಟ್ಟ ವೃದ್ದಿಗೆ ನಿಂಬೆರಸವನ್ನು ಮೂಗಿನ ಮೂಲಕ ಹಾಕೊಕೊಳ್ಳುವುದು ಪರಿಣಾಮಕಾರಿ ಎಂದ ವಿಷಯ ಎಲ್ಲ ಮಾಧ್ಯಮಗಳಲ್ಲೂ ಪ್ರಕಟವಾಯಿತು. ಮರುದಿನ ಅಲ್ಲೇ ಧಾರವಾಡದಲ್ಲಿ ನಡೆದ ಮದುವೆಯೊಂದರಲ್ಲಿ ವಧು-ವರ ಸೇರಿ ಹಲವಾರು ಜನರ ಮೂಗಿನಲ್ಲಿ ಕೆಲವರು ನಿಂಬೆರಸ ಸುರಿಯುತ್ತ, ‘ಪೇಪರ್‌ನ್ಯಾಗ ಬಂದೈತೋ ಮಾರಾಯ. ಕೋವಿಡ್ ಬರಂಗಿಲ್ಲ’ ಎಂದು ಹೇಳುವ ವಿಡಿಯೋ ವೈರಲ್ ಆಗಿತ್ತು.

ಆದರೆ ಇದೊಂದು ಅವೈಜ್ಞಾನಿಕ ಕ್ರಮ, ಇದಕ್ಕೆ ಯಾವುದೇ ವೈದ್ಯಕೀಯ ಆಧಾರಗಳಿಲ್ಲ ಎಂದು ಸತ್ಯ ಪ್ರತಿಪಾದನೆ ಮಾಡಿದ ಮೌಢ್ಯ ವಿರೋಧಿ ಹೋರಾಟ ನಡೆಸಿಕೊಂಡು ಬಂದಿರುವ ಹಿರಿಯ ಜೀವ ರಸಾಯನ ಶಾಸ್ತ್ರಜ್ಞ ನರೇಂದ್ರ ನಾಯಕ್ ಅವರು, ಆ ವಿವರಗಳ ವಿಡಿಯೋವನ್ನು ಫೇಸ್‌ಬುಕ್ ಖಾತೆಗೆ ಹಾಕಿಕೊಂಡಿದ್ದರು.

ಈ ವಿಡಿಯೋ ಭರ್ಜರಿ ವೈರಲ್ ಆಗಿ ಜನರಲ್ಲಿ ಪ್ರಜ್ಞೆ ಮೂಡಿಸಲು ನೆರವಾಗಿತ್ತು. ಆದರೆ ಹಲವು ಜನರ ದೂರುಗಳ ಆಧಾರದ ಮೇಲೆ, ‘ಈ ವಿಡಿಯೋ ಫೇಸ್‌ಬುಕ್ ಕಮ್ಯುನಿಟಿ ಸ್ಟ್ಯಾಂಡರ್ಡ್‌ಗಳಿಗೆ ಅನುಗುಣವಾಗಿಲ್ಲ ಎಂಬ ಕಾರಣ ನೀಡಿ ಫೇಸ್‌ಬುಕ್ ಕಂಪನಿ ಅವರ ಖಾತೆಯನ್ನು 24 ಗಂಟೆ ಸ್ಥಗಿತಗೊಳಿಸಿದೆ.

ವೈಜ್ಞಾನಿಕ ಮನೋಭಾವ ಎತ್ತಿ ಹಿಡಿಯಬೇಕಾದ ಫೇಸ್‌ಬುಕ್ ಮೇಲೆ ಯಾವ ಶಕ್ತಿಗಳ ಒತ್ತಡವಿದೆ ಎಂಬುದು ನಗ್ನಸತ್ಯ ಅಲ್ಲವೇ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...