Homeಕರೋನಾ ತಲ್ಲಣಮೂಗಿನಲ್ಲಿ ನಿಂಬೆರಸ ಶಿಕ್ಷಕನ ಬಲಿ ಪಡೆಯಿತೇ? ಸಂಕೇಶ್ವರ ಸಲಹೆ ಆಕ್ಷೇಪಿಸಿದ ಡಾ, ನರೇಂದ್ರ ನಾಯಕ್‌ರಿಗೆ ಫೇಸ್‌ಬುಕ್...

ಮೂಗಿನಲ್ಲಿ ನಿಂಬೆರಸ ಶಿಕ್ಷಕನ ಬಲಿ ಪಡೆಯಿತೇ? ಸಂಕೇಶ್ವರ ಸಲಹೆ ಆಕ್ಷೇಪಿಸಿದ ಡಾ, ನರೇಂದ್ರ ನಾಯಕ್‌ರಿಗೆ ಫೇಸ್‌ಬುಕ್ ನಿರ್ಬಂಧವೇಕೆ?

- Advertisement -
- Advertisement -

ಸಿಂಧನೂರಿನ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಇಂದು ಮುಂಜಾನೆ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮೂಗಿನಲ್ಲಿ ನಿಂಬೆರಸ ಸುರಿದುಕೊಂಡಿದ್ದೇ ಕಾರಣ ಎಂದು ಅವರ ಕುಟುಂಬಸ್ಥರು, ಸಹೋದ್ಯೋಗಿಗಳು ಅಪಾದಿಸಿದ್ದಾರೆ. ನಿಂಬೆರಸ ಮೂಗಿಗೆ ಸುರಿದುಕೊಂಡ ಶಿಕ್ಷಕ ಒದ್ದಾಡಿ ಸತ್ತರು ಎಂದು ಕನ್ನಡದ ಹಲವು ಪತ್ರಿಕೆಗಳು ವರದಿ ಮಾಡಿದೆ.

ಇನ್ನೊಂದು ಕಡೆ, ಸಂಕೇಶ್ವರರ ನಿಂಬೆರಸ ಸಲಹೆಯನ್ನು ಆಕ್ಷೇಪಿಸಿ, ವೈಜ್ಞಾನಿಕ ಮತ್ತು ವೈದ್ಯಕೀಯ ಅಂಶಗಳನ್ನು ಉಲ್ಲೇಖಿಸಿದ್ದ ಜೀವ ರಸಾಯನ ತಜ್ಞ, ಮೂಢನಂಬಿಕೆ ವಿರುದ್ಧ ಆಂದೋಲನ ನಡೆಸುತ್ತ ಬಂದಿರುವ ಡಾ, ನರೇಂದ್ರ ನಾಯಕ್, ನಿಂಬೆರಸದಿಂದ ಆಮ್ಲಜನಕ ಮಟ್ಟ ಹೆಚ್ಚುತ್ತದೆ ಎನ್ನುವುದಕ್ಕೆ ಯಾವುದೇ ಆಧಾರಗಳಿಲ್ಲ ಎಂದು ಮೊನ್ನೆ ಪ್ರಕಟಿಸಿದ್ದ ಫೇಸ್‌ಬುಕ್ ವಿಡಿಯೋ ಕಾರಣಕ್ಕಾಗಿ, ಫೇಸ್‌ಬುಕ್ ಇಂದು ಅವರ ಖಾತೆಯನ್ನು 24 ಗಂಟೆ ಕಾಲ ನಿರ್ಬಂಧಿಸಿದೆ!

ಈ ಎರಡೂ ಘಟನೆಗಳು ಮತ್ತೆ ನಮ್ಮನ್ನು ವಿಜಯ ಸಂಕೇಶ್ವರ್ ಅವರ ನಿಂಬೆರಸ-ಆಮ್ಲಜನಕ ಕತೆಗೆ ತಂದ ನಿಲ್ಲಿಸುತ್ತವೆ.

ಶಿಕ್ಷಕರ ಸಾವಿಗೆ ನಿಂಬೆರಸವೇ ಕಾರಣವಾಗಿತ್ತೆ?

ಸಿಂಧನೂರಿನ ಶರಣಬಸವೇಶ್ವರ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ 43 ವಯಸ್ಸಿನ ಬಸವರಾಜ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಪತ್ನಿ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು ಅವರು ಅಗಲಿದ್ದಾರೆ. ಅವರು ನಿನ್ನೆ ರಾತ್ರಿ ಮತ್ತು ಇವತ್ತು ಮುಂಜಾನೆ ಆಮ್ಲಜನಕ ಮಟ್ಟ ಹೆಚ್ಚಿಸಿಕೊಳ್ಳಲು ಮೂಗಿಗೆ ನಿಂಬೆರಸ ಹಾಕಿಕೊಂಡಿದ್ದೇ ಅವರ ಸಾವಿಗೆ ಕಾರಣ ಎಂದು ಕುಟುಂಬಸ್ಥರು, ಅವರ ಸಹೋದ್ಯೋಗಿಗಳು ಆರೋಪಿಸಿದ್ದಾರೆ.

ಮೃತ ಬಸವರಾಜ್ ಅವರ ಸಹೋದ್ಯೋಗಿ ವೀರೇಶ್, ‘ನಮಗಂತೂ ಹಾಗೆ ಅನ್ನಿಸಿದೆ ಸರ್. ನಿನ್ನೆ ತಾನೇ ಬಿಇಒ ಕಚೇರಿಯಲ್ಲಿ ಅವರನ್ನು ಭೇಟಿಯಾಗಿದ್ದೆ. ಅವರು ಸದಾ ಸದೃಢರಾಗಿದ್ದರು. ನಿಂಬೆರಸ ಪ್ರಮಾಣವನ್ನು ಜಾಸ್ತಿ ಹಾಕಿಕೊಂಡರು ಎನಿಸುತ್ತದೆ’ ಎಂದು ನಾನುಗೌರಿ.ಕಾಂಗೆ ತಿಳಿಸಿದರು.

‘ಸಾವಿನ ನಿಖರ ಕಾರಣ ನಂತರ ಗೊತ್ತಾಗಬಹುದು. ಆದರೆ ಸಂಕೇಶ್ವರ್ ಅವರು ಈ ನಿಂಬೆರಸ-ಆಮ್ಲಜನಕ ಕತೆ ಹೇಳಿದ ನಂತರ, ಸ್ವಲ್ಪ ಮೈ ಬಿಸಿಯಾದರೂ ಈ ನಿಂಬೆರಸಕ್ಕೆ ಬಹಳಷ್ಟು ಜನ ಒಡ್ಡಿಕೊಳ್ಳುತ್ತಿದ್ದಾರೆ. ನಾನೇ ಬಲ್ಲ ನಮ್ಮ ಕೆಲವು ಶಿಕ್ಷಕರು 20-25 ನಿಂಬೆ ಹಣ್ಣುಗಳನ್ನು ಮನೆಯಲ್ಲಿ ಇಟ್ಟುಕೊಂಡಿದ್ದಾರೆ. ತಿಳಿದವರೇ ಇಂತಹ ಅವೈಜ್ಞಾನಿಕ ಸಂಗತಿಗೆ ಶರಣಾದರೇ ಹೇಗೆ?’ ಎಂದು ವೀರೇಶ್ ಅಸಮಾಧಾನ ವ್ಯಕ್ತಪಡಿಸಿದರು.

ಬಸವರಾಜ್ ಮೃತರಾಗಿದ್ದಾರೆ ಎಂದು ಘೋಷಿಸಿದ ಸಿಂಧನೂರಿನ ಶಾಂತಿ ಆಸ್ಪತ್ರೆಯ ವೈದ್ಯರು ನಮ್ಮ ಸಂಪರ್ಕಕ್ಕೆ ಸಿಗಲಿಲ್ಲ. ಆಸ್ಪತ್ರೆಯ ಮಾಲೀಕ ನರೇಶ್ ನಮ್ಮೊಂದಿಗೆ ಮಾತನಾಡುತ್ತ, ‘ಇಲ್ಲಿಗೆ ಬರುವ ಮೊದಲೇ ಬಸವರಾಜ್ ಅವರು ಮೃತರಾಗಿದ್ದರು. ನಾವು ಸಹಜ ಕ್ರಮದಂತೆ ಇಸಿಜಿ ಮಾಡಿ, ಅವರು ಮೃತ ಎಂದು ಘೋಷಿಸಿದ್ದೇವೆ. ನಿಂಬೆರಸದಿಂದಾಗಿಯೇ ಸತ್ತರು ಎಂದು ದೃಢವಾಗಿಲ್ಲ. ಅವರಿಗೆ ಬೇರೇನೋ ಸಮಸ್ಯೆ ಇರಬಹುದು ಅಥವಾ ಮೊದಲೇ ಅವರಿಗೆ ಕೋವಿಡ್ ಇದ್ದು ಆ ಭಯಕ್ಕೆ ನಿಂಬೆರಸದ ಪ್ರಯೋಗ ಮಾಡಿರಬಹುದು. ಸಾವಿನ ನಿಖರ ಕಾರಣ ಗೊತ್ತಾಗಲು ಪೊಲೀಸರು ಪೋಸ್ಟ್ ಮಾರ್ಟಂ ಮಾಡಿಸಬೇಕು..’ ಎಂದರು.

ಸಿಂಧನೂರಿನ ಅನ್ನದಾನೀಶ್ವರ ಆಸ್ಪತ್ರೆಯ ಸರ್ಜರಿಯನ್ ಡಾ.ಬಿ.ಎನ್ ಪಾಟೀಲ್, ‘ಕೇಸ್ ಹಿಸ್ಟರಿ ಇಲ್ಲದೇ ಒಮ್ಮೆಲೇ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ಮೃತರಿಗೆ ಬೇರೆ ಆರೋಗ್ಯ ಸಮಸ್ಯೆ ಇದ್ದು, ಅವರು ಈ ಪ್ರಯೋಗ ಮಾಡಿದಾಗ ಏನೋ ಎಡವಟ್ಟಾಗಿರಬಹುದು. ಆದರೆ ಈಗಲೇ ನಿಖರವಾಗಿ ಹೇಳಲಾಗದು. ಒಂದಂತೂ ಸ್ಪಷ್ಟ, ನಿಂಬೆರಸ ಮೂಗಿನಲ್ಲಿ ಹಾಕಿಕೊಂಡರೆ ಯಾವ ಘನಂದಾರಿ ಅನುಕೂಲವೂ ಇಲ್ಲ, ಹಾಗೆಯೇ ಅದರಿಂದ ಸಾವು ಸಂಭವಿಸುವಂತಹ ಅಪಾಯವಿಲ್ಲ. ತಿಳಿಯಾಗಿರುವ ರಸ ಶ್ವಾಸಕೋಶ ಸೇರಿದರೆ ಸಾವೇನೂ ಸಂಭವಿಸದು. ಆದರೆ, ಈ ನಿಂಬೆರಸ ಪ್ರಯೋಗ ಅವೈಜ್ಞಾನಿಕ. ಜನರು ಎಚ್ಚರವಾಗಿರಬೇಕು’ ಎಂದು ನಾನುಗೌರಿ.ಕಾಂ ಗೆ ತಿಳಿಸಿದರು.

ಕೋವಿಡ್ ಅಥವಾ ಉಸಿರಾಟದ ಸಮಸ್ಯೆ ಇದ್ದು, ಮೃತರು ನಿಂಬೆರಸ ಪ್ರಯೋಗಕ್ಕೆ ಒಡ್ಡಿಕೊಂಡಾಗ ಆರೋಗ್ಯದಲ್ಲಿ ಏರುಪೇರಾಗಿತೆ? ಇದು ನಿಜವಾದರೆ, ಸಂಕೇಶ್ವರ್ ಕ್ರಿಮಿನಲ್ ಅಪರಾಧ ಎಸಗಿದಂತೆ ಅಲ್ಲವೇ?

ಸತ್ಯ ಹೇಳಿದ ವಿಜ್ಞಾನಿಗೆ ಫೇಸ್‌ಬುಕ್ ನಿರ್ಬಂಧ!

ವಿಜಯ ಸಂಕೇಶ್ವರ್ ಅವರು ಸುದ್ದಿಗೋಷ್ಠಿ ಕರೆದು, ಆಮ್ಲಜನಕ ಮಟ್ಟ ವೃದ್ದಿಗೆ ನಿಂಬೆರಸವನ್ನು ಮೂಗಿನ ಮೂಲಕ ಹಾಕೊಕೊಳ್ಳುವುದು ಪರಿಣಾಮಕಾರಿ ಎಂದ ವಿಷಯ ಎಲ್ಲ ಮಾಧ್ಯಮಗಳಲ್ಲೂ ಪ್ರಕಟವಾಯಿತು. ಮರುದಿನ ಅಲ್ಲೇ ಧಾರವಾಡದಲ್ಲಿ ನಡೆದ ಮದುವೆಯೊಂದರಲ್ಲಿ ವಧು-ವರ ಸೇರಿ ಹಲವಾರು ಜನರ ಮೂಗಿನಲ್ಲಿ ಕೆಲವರು ನಿಂಬೆರಸ ಸುರಿಯುತ್ತ, ‘ಪೇಪರ್‌ನ್ಯಾಗ ಬಂದೈತೋ ಮಾರಾಯ. ಕೋವಿಡ್ ಬರಂಗಿಲ್ಲ’ ಎಂದು ಹೇಳುವ ವಿಡಿಯೋ ವೈರಲ್ ಆಗಿತ್ತು.

ಆದರೆ ಇದೊಂದು ಅವೈಜ್ಞಾನಿಕ ಕ್ರಮ, ಇದಕ್ಕೆ ಯಾವುದೇ ವೈದ್ಯಕೀಯ ಆಧಾರಗಳಿಲ್ಲ ಎಂದು ಸತ್ಯ ಪ್ರತಿಪಾದನೆ ಮಾಡಿದ ಮೌಢ್ಯ ವಿರೋಧಿ ಹೋರಾಟ ನಡೆಸಿಕೊಂಡು ಬಂದಿರುವ ಹಿರಿಯ ಜೀವ ರಸಾಯನ ಶಾಸ್ತ್ರಜ್ಞ ನರೇಂದ್ರ ನಾಯಕ್ ಅವರು, ಆ ವಿವರಗಳ ವಿಡಿಯೋವನ್ನು ಫೇಸ್‌ಬುಕ್ ಖಾತೆಗೆ ಹಾಕಿಕೊಂಡಿದ್ದರು.

ಈ ವಿಡಿಯೋ ಭರ್ಜರಿ ವೈರಲ್ ಆಗಿ ಜನರಲ್ಲಿ ಪ್ರಜ್ಞೆ ಮೂಡಿಸಲು ನೆರವಾಗಿತ್ತು. ಆದರೆ ಹಲವು ಜನರ ದೂರುಗಳ ಆಧಾರದ ಮೇಲೆ, ‘ಈ ವಿಡಿಯೋ ಫೇಸ್‌ಬುಕ್ ಕಮ್ಯುನಿಟಿ ಸ್ಟ್ಯಾಂಡರ್ಡ್‌ಗಳಿಗೆ ಅನುಗುಣವಾಗಿಲ್ಲ ಎಂಬ ಕಾರಣ ನೀಡಿ ಫೇಸ್‌ಬುಕ್ ಕಂಪನಿ ಅವರ ಖಾತೆಯನ್ನು 24 ಗಂಟೆ ಸ್ಥಗಿತಗೊಳಿಸಿದೆ.

ವೈಜ್ಞಾನಿಕ ಮನೋಭಾವ ಎತ್ತಿ ಹಿಡಿಯಬೇಕಾದ ಫೇಸ್‌ಬುಕ್ ಮೇಲೆ ಯಾವ ಶಕ್ತಿಗಳ ಒತ್ತಡವಿದೆ ಎಂಬುದು ನಗ್ನಸತ್ಯ ಅಲ್ಲವೇ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...