Homeಕರೋನಾ ತಲ್ಲಣಮೂಗಿನಲ್ಲಿ ನಿಂಬೆರಸ ಶಿಕ್ಷಕನ ಬಲಿ ಪಡೆಯಿತೇ? ಸಂಕೇಶ್ವರ ಸಲಹೆ ಆಕ್ಷೇಪಿಸಿದ ಡಾ, ನರೇಂದ್ರ ನಾಯಕ್‌ರಿಗೆ ಫೇಸ್‌ಬುಕ್...

ಮೂಗಿನಲ್ಲಿ ನಿಂಬೆರಸ ಶಿಕ್ಷಕನ ಬಲಿ ಪಡೆಯಿತೇ? ಸಂಕೇಶ್ವರ ಸಲಹೆ ಆಕ್ಷೇಪಿಸಿದ ಡಾ, ನರೇಂದ್ರ ನಾಯಕ್‌ರಿಗೆ ಫೇಸ್‌ಬುಕ್ ನಿರ್ಬಂಧವೇಕೆ?

- Advertisement -
- Advertisement -

ಸಿಂಧನೂರಿನ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಇಂದು ಮುಂಜಾನೆ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮೂಗಿನಲ್ಲಿ ನಿಂಬೆರಸ ಸುರಿದುಕೊಂಡಿದ್ದೇ ಕಾರಣ ಎಂದು ಅವರ ಕುಟುಂಬಸ್ಥರು, ಸಹೋದ್ಯೋಗಿಗಳು ಅಪಾದಿಸಿದ್ದಾರೆ. ನಿಂಬೆರಸ ಮೂಗಿಗೆ ಸುರಿದುಕೊಂಡ ಶಿಕ್ಷಕ ಒದ್ದಾಡಿ ಸತ್ತರು ಎಂದು ಕನ್ನಡದ ಹಲವು ಪತ್ರಿಕೆಗಳು ವರದಿ ಮಾಡಿದೆ.

ಇನ್ನೊಂದು ಕಡೆ, ಸಂಕೇಶ್ವರರ ನಿಂಬೆರಸ ಸಲಹೆಯನ್ನು ಆಕ್ಷೇಪಿಸಿ, ವೈಜ್ಞಾನಿಕ ಮತ್ತು ವೈದ್ಯಕೀಯ ಅಂಶಗಳನ್ನು ಉಲ್ಲೇಖಿಸಿದ್ದ ಜೀವ ರಸಾಯನ ತಜ್ಞ, ಮೂಢನಂಬಿಕೆ ವಿರುದ್ಧ ಆಂದೋಲನ ನಡೆಸುತ್ತ ಬಂದಿರುವ ಡಾ, ನರೇಂದ್ರ ನಾಯಕ್, ನಿಂಬೆರಸದಿಂದ ಆಮ್ಲಜನಕ ಮಟ್ಟ ಹೆಚ್ಚುತ್ತದೆ ಎನ್ನುವುದಕ್ಕೆ ಯಾವುದೇ ಆಧಾರಗಳಿಲ್ಲ ಎಂದು ಮೊನ್ನೆ ಪ್ರಕಟಿಸಿದ್ದ ಫೇಸ್‌ಬುಕ್ ವಿಡಿಯೋ ಕಾರಣಕ್ಕಾಗಿ, ಫೇಸ್‌ಬುಕ್ ಇಂದು ಅವರ ಖಾತೆಯನ್ನು 24 ಗಂಟೆ ಕಾಲ ನಿರ್ಬಂಧಿಸಿದೆ!

ಈ ಎರಡೂ ಘಟನೆಗಳು ಮತ್ತೆ ನಮ್ಮನ್ನು ವಿಜಯ ಸಂಕೇಶ್ವರ್ ಅವರ ನಿಂಬೆರಸ-ಆಮ್ಲಜನಕ ಕತೆಗೆ ತಂದ ನಿಲ್ಲಿಸುತ್ತವೆ.

ಶಿಕ್ಷಕರ ಸಾವಿಗೆ ನಿಂಬೆರಸವೇ ಕಾರಣವಾಗಿತ್ತೆ?

ಸಿಂಧನೂರಿನ ಶರಣಬಸವೇಶ್ವರ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ 43 ವಯಸ್ಸಿನ ಬಸವರಾಜ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಪತ್ನಿ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು ಅವರು ಅಗಲಿದ್ದಾರೆ. ಅವರು ನಿನ್ನೆ ರಾತ್ರಿ ಮತ್ತು ಇವತ್ತು ಮುಂಜಾನೆ ಆಮ್ಲಜನಕ ಮಟ್ಟ ಹೆಚ್ಚಿಸಿಕೊಳ್ಳಲು ಮೂಗಿಗೆ ನಿಂಬೆರಸ ಹಾಕಿಕೊಂಡಿದ್ದೇ ಅವರ ಸಾವಿಗೆ ಕಾರಣ ಎಂದು ಕುಟುಂಬಸ್ಥರು, ಅವರ ಸಹೋದ್ಯೋಗಿಗಳು ಆರೋಪಿಸಿದ್ದಾರೆ.

ಮೃತ ಬಸವರಾಜ್ ಅವರ ಸಹೋದ್ಯೋಗಿ ವೀರೇಶ್, ‘ನಮಗಂತೂ ಹಾಗೆ ಅನ್ನಿಸಿದೆ ಸರ್. ನಿನ್ನೆ ತಾನೇ ಬಿಇಒ ಕಚೇರಿಯಲ್ಲಿ ಅವರನ್ನು ಭೇಟಿಯಾಗಿದ್ದೆ. ಅವರು ಸದಾ ಸದೃಢರಾಗಿದ್ದರು. ನಿಂಬೆರಸ ಪ್ರಮಾಣವನ್ನು ಜಾಸ್ತಿ ಹಾಕಿಕೊಂಡರು ಎನಿಸುತ್ತದೆ’ ಎಂದು ನಾನುಗೌರಿ.ಕಾಂಗೆ ತಿಳಿಸಿದರು.

‘ಸಾವಿನ ನಿಖರ ಕಾರಣ ನಂತರ ಗೊತ್ತಾಗಬಹುದು. ಆದರೆ ಸಂಕೇಶ್ವರ್ ಅವರು ಈ ನಿಂಬೆರಸ-ಆಮ್ಲಜನಕ ಕತೆ ಹೇಳಿದ ನಂತರ, ಸ್ವಲ್ಪ ಮೈ ಬಿಸಿಯಾದರೂ ಈ ನಿಂಬೆರಸಕ್ಕೆ ಬಹಳಷ್ಟು ಜನ ಒಡ್ಡಿಕೊಳ್ಳುತ್ತಿದ್ದಾರೆ. ನಾನೇ ಬಲ್ಲ ನಮ್ಮ ಕೆಲವು ಶಿಕ್ಷಕರು 20-25 ನಿಂಬೆ ಹಣ್ಣುಗಳನ್ನು ಮನೆಯಲ್ಲಿ ಇಟ್ಟುಕೊಂಡಿದ್ದಾರೆ. ತಿಳಿದವರೇ ಇಂತಹ ಅವೈಜ್ಞಾನಿಕ ಸಂಗತಿಗೆ ಶರಣಾದರೇ ಹೇಗೆ?’ ಎಂದು ವೀರೇಶ್ ಅಸಮಾಧಾನ ವ್ಯಕ್ತಪಡಿಸಿದರು.

ಬಸವರಾಜ್ ಮೃತರಾಗಿದ್ದಾರೆ ಎಂದು ಘೋಷಿಸಿದ ಸಿಂಧನೂರಿನ ಶಾಂತಿ ಆಸ್ಪತ್ರೆಯ ವೈದ್ಯರು ನಮ್ಮ ಸಂಪರ್ಕಕ್ಕೆ ಸಿಗಲಿಲ್ಲ. ಆಸ್ಪತ್ರೆಯ ಮಾಲೀಕ ನರೇಶ್ ನಮ್ಮೊಂದಿಗೆ ಮಾತನಾಡುತ್ತ, ‘ಇಲ್ಲಿಗೆ ಬರುವ ಮೊದಲೇ ಬಸವರಾಜ್ ಅವರು ಮೃತರಾಗಿದ್ದರು. ನಾವು ಸಹಜ ಕ್ರಮದಂತೆ ಇಸಿಜಿ ಮಾಡಿ, ಅವರು ಮೃತ ಎಂದು ಘೋಷಿಸಿದ್ದೇವೆ. ನಿಂಬೆರಸದಿಂದಾಗಿಯೇ ಸತ್ತರು ಎಂದು ದೃಢವಾಗಿಲ್ಲ. ಅವರಿಗೆ ಬೇರೇನೋ ಸಮಸ್ಯೆ ಇರಬಹುದು ಅಥವಾ ಮೊದಲೇ ಅವರಿಗೆ ಕೋವಿಡ್ ಇದ್ದು ಆ ಭಯಕ್ಕೆ ನಿಂಬೆರಸದ ಪ್ರಯೋಗ ಮಾಡಿರಬಹುದು. ಸಾವಿನ ನಿಖರ ಕಾರಣ ಗೊತ್ತಾಗಲು ಪೊಲೀಸರು ಪೋಸ್ಟ್ ಮಾರ್ಟಂ ಮಾಡಿಸಬೇಕು..’ ಎಂದರು.

ಸಿಂಧನೂರಿನ ಅನ್ನದಾನೀಶ್ವರ ಆಸ್ಪತ್ರೆಯ ಸರ್ಜರಿಯನ್ ಡಾ.ಬಿ.ಎನ್ ಪಾಟೀಲ್, ‘ಕೇಸ್ ಹಿಸ್ಟರಿ ಇಲ್ಲದೇ ಒಮ್ಮೆಲೇ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ಮೃತರಿಗೆ ಬೇರೆ ಆರೋಗ್ಯ ಸಮಸ್ಯೆ ಇದ್ದು, ಅವರು ಈ ಪ್ರಯೋಗ ಮಾಡಿದಾಗ ಏನೋ ಎಡವಟ್ಟಾಗಿರಬಹುದು. ಆದರೆ ಈಗಲೇ ನಿಖರವಾಗಿ ಹೇಳಲಾಗದು. ಒಂದಂತೂ ಸ್ಪಷ್ಟ, ನಿಂಬೆರಸ ಮೂಗಿನಲ್ಲಿ ಹಾಕಿಕೊಂಡರೆ ಯಾವ ಘನಂದಾರಿ ಅನುಕೂಲವೂ ಇಲ್ಲ, ಹಾಗೆಯೇ ಅದರಿಂದ ಸಾವು ಸಂಭವಿಸುವಂತಹ ಅಪಾಯವಿಲ್ಲ. ತಿಳಿಯಾಗಿರುವ ರಸ ಶ್ವಾಸಕೋಶ ಸೇರಿದರೆ ಸಾವೇನೂ ಸಂಭವಿಸದು. ಆದರೆ, ಈ ನಿಂಬೆರಸ ಪ್ರಯೋಗ ಅವೈಜ್ಞಾನಿಕ. ಜನರು ಎಚ್ಚರವಾಗಿರಬೇಕು’ ಎಂದು ನಾನುಗೌರಿ.ಕಾಂ ಗೆ ತಿಳಿಸಿದರು.

ಕೋವಿಡ್ ಅಥವಾ ಉಸಿರಾಟದ ಸಮಸ್ಯೆ ಇದ್ದು, ಮೃತರು ನಿಂಬೆರಸ ಪ್ರಯೋಗಕ್ಕೆ ಒಡ್ಡಿಕೊಂಡಾಗ ಆರೋಗ್ಯದಲ್ಲಿ ಏರುಪೇರಾಗಿತೆ? ಇದು ನಿಜವಾದರೆ, ಸಂಕೇಶ್ವರ್ ಕ್ರಿಮಿನಲ್ ಅಪರಾಧ ಎಸಗಿದಂತೆ ಅಲ್ಲವೇ?

ಸತ್ಯ ಹೇಳಿದ ವಿಜ್ಞಾನಿಗೆ ಫೇಸ್‌ಬುಕ್ ನಿರ್ಬಂಧ!

ವಿಜಯ ಸಂಕೇಶ್ವರ್ ಅವರು ಸುದ್ದಿಗೋಷ್ಠಿ ಕರೆದು, ಆಮ್ಲಜನಕ ಮಟ್ಟ ವೃದ್ದಿಗೆ ನಿಂಬೆರಸವನ್ನು ಮೂಗಿನ ಮೂಲಕ ಹಾಕೊಕೊಳ್ಳುವುದು ಪರಿಣಾಮಕಾರಿ ಎಂದ ವಿಷಯ ಎಲ್ಲ ಮಾಧ್ಯಮಗಳಲ್ಲೂ ಪ್ರಕಟವಾಯಿತು. ಮರುದಿನ ಅಲ್ಲೇ ಧಾರವಾಡದಲ್ಲಿ ನಡೆದ ಮದುವೆಯೊಂದರಲ್ಲಿ ವಧು-ವರ ಸೇರಿ ಹಲವಾರು ಜನರ ಮೂಗಿನಲ್ಲಿ ಕೆಲವರು ನಿಂಬೆರಸ ಸುರಿಯುತ್ತ, ‘ಪೇಪರ್‌ನ್ಯಾಗ ಬಂದೈತೋ ಮಾರಾಯ. ಕೋವಿಡ್ ಬರಂಗಿಲ್ಲ’ ಎಂದು ಹೇಳುವ ವಿಡಿಯೋ ವೈರಲ್ ಆಗಿತ್ತು.

ಆದರೆ ಇದೊಂದು ಅವೈಜ್ಞಾನಿಕ ಕ್ರಮ, ಇದಕ್ಕೆ ಯಾವುದೇ ವೈದ್ಯಕೀಯ ಆಧಾರಗಳಿಲ್ಲ ಎಂದು ಸತ್ಯ ಪ್ರತಿಪಾದನೆ ಮಾಡಿದ ಮೌಢ್ಯ ವಿರೋಧಿ ಹೋರಾಟ ನಡೆಸಿಕೊಂಡು ಬಂದಿರುವ ಹಿರಿಯ ಜೀವ ರಸಾಯನ ಶಾಸ್ತ್ರಜ್ಞ ನರೇಂದ್ರ ನಾಯಕ್ ಅವರು, ಆ ವಿವರಗಳ ವಿಡಿಯೋವನ್ನು ಫೇಸ್‌ಬುಕ್ ಖಾತೆಗೆ ಹಾಕಿಕೊಂಡಿದ್ದರು.

ಈ ವಿಡಿಯೋ ಭರ್ಜರಿ ವೈರಲ್ ಆಗಿ ಜನರಲ್ಲಿ ಪ್ರಜ್ಞೆ ಮೂಡಿಸಲು ನೆರವಾಗಿತ್ತು. ಆದರೆ ಹಲವು ಜನರ ದೂರುಗಳ ಆಧಾರದ ಮೇಲೆ, ‘ಈ ವಿಡಿಯೋ ಫೇಸ್‌ಬುಕ್ ಕಮ್ಯುನಿಟಿ ಸ್ಟ್ಯಾಂಡರ್ಡ್‌ಗಳಿಗೆ ಅನುಗುಣವಾಗಿಲ್ಲ ಎಂಬ ಕಾರಣ ನೀಡಿ ಫೇಸ್‌ಬುಕ್ ಕಂಪನಿ ಅವರ ಖಾತೆಯನ್ನು 24 ಗಂಟೆ ಸ್ಥಗಿತಗೊಳಿಸಿದೆ.

ವೈಜ್ಞಾನಿಕ ಮನೋಭಾವ ಎತ್ತಿ ಹಿಡಿಯಬೇಕಾದ ಫೇಸ್‌ಬುಕ್ ಮೇಲೆ ಯಾವ ಶಕ್ತಿಗಳ ಒತ್ತಡವಿದೆ ಎಂಬುದು ನಗ್ನಸತ್ಯ ಅಲ್ಲವೇ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...