Homeಕರೋನಾ ತಲ್ಲಣಮೂಗಿನಲ್ಲಿ ನಿಂಬೆರಸ ಶಿಕ್ಷಕನ ಬಲಿ ಪಡೆಯಿತೇ? ಸಂಕೇಶ್ವರ ಸಲಹೆ ಆಕ್ಷೇಪಿಸಿದ ಡಾ, ನರೇಂದ್ರ ನಾಯಕ್‌ರಿಗೆ ಫೇಸ್‌ಬುಕ್...

ಮೂಗಿನಲ್ಲಿ ನಿಂಬೆರಸ ಶಿಕ್ಷಕನ ಬಲಿ ಪಡೆಯಿತೇ? ಸಂಕೇಶ್ವರ ಸಲಹೆ ಆಕ್ಷೇಪಿಸಿದ ಡಾ, ನರೇಂದ್ರ ನಾಯಕ್‌ರಿಗೆ ಫೇಸ್‌ಬುಕ್ ನಿರ್ಬಂಧವೇಕೆ?

- Advertisement -
- Advertisement -

ಸಿಂಧನೂರಿನ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಇಂದು ಮುಂಜಾನೆ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮೂಗಿನಲ್ಲಿ ನಿಂಬೆರಸ ಸುರಿದುಕೊಂಡಿದ್ದೇ ಕಾರಣ ಎಂದು ಅವರ ಕುಟುಂಬಸ್ಥರು, ಸಹೋದ್ಯೋಗಿಗಳು ಅಪಾದಿಸಿದ್ದಾರೆ. ನಿಂಬೆರಸ ಮೂಗಿಗೆ ಸುರಿದುಕೊಂಡ ಶಿಕ್ಷಕ ಒದ್ದಾಡಿ ಸತ್ತರು ಎಂದು ಕನ್ನಡದ ಹಲವು ಪತ್ರಿಕೆಗಳು ವರದಿ ಮಾಡಿದೆ.

ಇನ್ನೊಂದು ಕಡೆ, ಸಂಕೇಶ್ವರರ ನಿಂಬೆರಸ ಸಲಹೆಯನ್ನು ಆಕ್ಷೇಪಿಸಿ, ವೈಜ್ಞಾನಿಕ ಮತ್ತು ವೈದ್ಯಕೀಯ ಅಂಶಗಳನ್ನು ಉಲ್ಲೇಖಿಸಿದ್ದ ಜೀವ ರಸಾಯನ ತಜ್ಞ, ಮೂಢನಂಬಿಕೆ ವಿರುದ್ಧ ಆಂದೋಲನ ನಡೆಸುತ್ತ ಬಂದಿರುವ ಡಾ, ನರೇಂದ್ರ ನಾಯಕ್, ನಿಂಬೆರಸದಿಂದ ಆಮ್ಲಜನಕ ಮಟ್ಟ ಹೆಚ್ಚುತ್ತದೆ ಎನ್ನುವುದಕ್ಕೆ ಯಾವುದೇ ಆಧಾರಗಳಿಲ್ಲ ಎಂದು ಮೊನ್ನೆ ಪ್ರಕಟಿಸಿದ್ದ ಫೇಸ್‌ಬುಕ್ ವಿಡಿಯೋ ಕಾರಣಕ್ಕಾಗಿ, ಫೇಸ್‌ಬುಕ್ ಇಂದು ಅವರ ಖಾತೆಯನ್ನು 24 ಗಂಟೆ ಕಾಲ ನಿರ್ಬಂಧಿಸಿದೆ!

ಈ ಎರಡೂ ಘಟನೆಗಳು ಮತ್ತೆ ನಮ್ಮನ್ನು ವಿಜಯ ಸಂಕೇಶ್ವರ್ ಅವರ ನಿಂಬೆರಸ-ಆಮ್ಲಜನಕ ಕತೆಗೆ ತಂದ ನಿಲ್ಲಿಸುತ್ತವೆ.

ಶಿಕ್ಷಕರ ಸಾವಿಗೆ ನಿಂಬೆರಸವೇ ಕಾರಣವಾಗಿತ್ತೆ?

ಸಿಂಧನೂರಿನ ಶರಣಬಸವೇಶ್ವರ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ 43 ವಯಸ್ಸಿನ ಬಸವರಾಜ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಪತ್ನಿ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು ಅವರು ಅಗಲಿದ್ದಾರೆ. ಅವರು ನಿನ್ನೆ ರಾತ್ರಿ ಮತ್ತು ಇವತ್ತು ಮುಂಜಾನೆ ಆಮ್ಲಜನಕ ಮಟ್ಟ ಹೆಚ್ಚಿಸಿಕೊಳ್ಳಲು ಮೂಗಿಗೆ ನಿಂಬೆರಸ ಹಾಕಿಕೊಂಡಿದ್ದೇ ಅವರ ಸಾವಿಗೆ ಕಾರಣ ಎಂದು ಕುಟುಂಬಸ್ಥರು, ಅವರ ಸಹೋದ್ಯೋಗಿಗಳು ಆರೋಪಿಸಿದ್ದಾರೆ.

ಮೃತ ಬಸವರಾಜ್ ಅವರ ಸಹೋದ್ಯೋಗಿ ವೀರೇಶ್, ‘ನಮಗಂತೂ ಹಾಗೆ ಅನ್ನಿಸಿದೆ ಸರ್. ನಿನ್ನೆ ತಾನೇ ಬಿಇಒ ಕಚೇರಿಯಲ್ಲಿ ಅವರನ್ನು ಭೇಟಿಯಾಗಿದ್ದೆ. ಅವರು ಸದಾ ಸದೃಢರಾಗಿದ್ದರು. ನಿಂಬೆರಸ ಪ್ರಮಾಣವನ್ನು ಜಾಸ್ತಿ ಹಾಕಿಕೊಂಡರು ಎನಿಸುತ್ತದೆ’ ಎಂದು ನಾನುಗೌರಿ.ಕಾಂಗೆ ತಿಳಿಸಿದರು.

‘ಸಾವಿನ ನಿಖರ ಕಾರಣ ನಂತರ ಗೊತ್ತಾಗಬಹುದು. ಆದರೆ ಸಂಕೇಶ್ವರ್ ಅವರು ಈ ನಿಂಬೆರಸ-ಆಮ್ಲಜನಕ ಕತೆ ಹೇಳಿದ ನಂತರ, ಸ್ವಲ್ಪ ಮೈ ಬಿಸಿಯಾದರೂ ಈ ನಿಂಬೆರಸಕ್ಕೆ ಬಹಳಷ್ಟು ಜನ ಒಡ್ಡಿಕೊಳ್ಳುತ್ತಿದ್ದಾರೆ. ನಾನೇ ಬಲ್ಲ ನಮ್ಮ ಕೆಲವು ಶಿಕ್ಷಕರು 20-25 ನಿಂಬೆ ಹಣ್ಣುಗಳನ್ನು ಮನೆಯಲ್ಲಿ ಇಟ್ಟುಕೊಂಡಿದ್ದಾರೆ. ತಿಳಿದವರೇ ಇಂತಹ ಅವೈಜ್ಞಾನಿಕ ಸಂಗತಿಗೆ ಶರಣಾದರೇ ಹೇಗೆ?’ ಎಂದು ವೀರೇಶ್ ಅಸಮಾಧಾನ ವ್ಯಕ್ತಪಡಿಸಿದರು.

ಬಸವರಾಜ್ ಮೃತರಾಗಿದ್ದಾರೆ ಎಂದು ಘೋಷಿಸಿದ ಸಿಂಧನೂರಿನ ಶಾಂತಿ ಆಸ್ಪತ್ರೆಯ ವೈದ್ಯರು ನಮ್ಮ ಸಂಪರ್ಕಕ್ಕೆ ಸಿಗಲಿಲ್ಲ. ಆಸ್ಪತ್ರೆಯ ಮಾಲೀಕ ನರೇಶ್ ನಮ್ಮೊಂದಿಗೆ ಮಾತನಾಡುತ್ತ, ‘ಇಲ್ಲಿಗೆ ಬರುವ ಮೊದಲೇ ಬಸವರಾಜ್ ಅವರು ಮೃತರಾಗಿದ್ದರು. ನಾವು ಸಹಜ ಕ್ರಮದಂತೆ ಇಸಿಜಿ ಮಾಡಿ, ಅವರು ಮೃತ ಎಂದು ಘೋಷಿಸಿದ್ದೇವೆ. ನಿಂಬೆರಸದಿಂದಾಗಿಯೇ ಸತ್ತರು ಎಂದು ದೃಢವಾಗಿಲ್ಲ. ಅವರಿಗೆ ಬೇರೇನೋ ಸಮಸ್ಯೆ ಇರಬಹುದು ಅಥವಾ ಮೊದಲೇ ಅವರಿಗೆ ಕೋವಿಡ್ ಇದ್ದು ಆ ಭಯಕ್ಕೆ ನಿಂಬೆರಸದ ಪ್ರಯೋಗ ಮಾಡಿರಬಹುದು. ಸಾವಿನ ನಿಖರ ಕಾರಣ ಗೊತ್ತಾಗಲು ಪೊಲೀಸರು ಪೋಸ್ಟ್ ಮಾರ್ಟಂ ಮಾಡಿಸಬೇಕು..’ ಎಂದರು.

ಸಿಂಧನೂರಿನ ಅನ್ನದಾನೀಶ್ವರ ಆಸ್ಪತ್ರೆಯ ಸರ್ಜರಿಯನ್ ಡಾ.ಬಿ.ಎನ್ ಪಾಟೀಲ್, ‘ಕೇಸ್ ಹಿಸ್ಟರಿ ಇಲ್ಲದೇ ಒಮ್ಮೆಲೇ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ಮೃತರಿಗೆ ಬೇರೆ ಆರೋಗ್ಯ ಸಮಸ್ಯೆ ಇದ್ದು, ಅವರು ಈ ಪ್ರಯೋಗ ಮಾಡಿದಾಗ ಏನೋ ಎಡವಟ್ಟಾಗಿರಬಹುದು. ಆದರೆ ಈಗಲೇ ನಿಖರವಾಗಿ ಹೇಳಲಾಗದು. ಒಂದಂತೂ ಸ್ಪಷ್ಟ, ನಿಂಬೆರಸ ಮೂಗಿನಲ್ಲಿ ಹಾಕಿಕೊಂಡರೆ ಯಾವ ಘನಂದಾರಿ ಅನುಕೂಲವೂ ಇಲ್ಲ, ಹಾಗೆಯೇ ಅದರಿಂದ ಸಾವು ಸಂಭವಿಸುವಂತಹ ಅಪಾಯವಿಲ್ಲ. ತಿಳಿಯಾಗಿರುವ ರಸ ಶ್ವಾಸಕೋಶ ಸೇರಿದರೆ ಸಾವೇನೂ ಸಂಭವಿಸದು. ಆದರೆ, ಈ ನಿಂಬೆರಸ ಪ್ರಯೋಗ ಅವೈಜ್ಞಾನಿಕ. ಜನರು ಎಚ್ಚರವಾಗಿರಬೇಕು’ ಎಂದು ನಾನುಗೌರಿ.ಕಾಂ ಗೆ ತಿಳಿಸಿದರು.

ಕೋವಿಡ್ ಅಥವಾ ಉಸಿರಾಟದ ಸಮಸ್ಯೆ ಇದ್ದು, ಮೃತರು ನಿಂಬೆರಸ ಪ್ರಯೋಗಕ್ಕೆ ಒಡ್ಡಿಕೊಂಡಾಗ ಆರೋಗ್ಯದಲ್ಲಿ ಏರುಪೇರಾಗಿತೆ? ಇದು ನಿಜವಾದರೆ, ಸಂಕೇಶ್ವರ್ ಕ್ರಿಮಿನಲ್ ಅಪರಾಧ ಎಸಗಿದಂತೆ ಅಲ್ಲವೇ?

ಸತ್ಯ ಹೇಳಿದ ವಿಜ್ಞಾನಿಗೆ ಫೇಸ್‌ಬುಕ್ ನಿರ್ಬಂಧ!

ವಿಜಯ ಸಂಕೇಶ್ವರ್ ಅವರು ಸುದ್ದಿಗೋಷ್ಠಿ ಕರೆದು, ಆಮ್ಲಜನಕ ಮಟ್ಟ ವೃದ್ದಿಗೆ ನಿಂಬೆರಸವನ್ನು ಮೂಗಿನ ಮೂಲಕ ಹಾಕೊಕೊಳ್ಳುವುದು ಪರಿಣಾಮಕಾರಿ ಎಂದ ವಿಷಯ ಎಲ್ಲ ಮಾಧ್ಯಮಗಳಲ್ಲೂ ಪ್ರಕಟವಾಯಿತು. ಮರುದಿನ ಅಲ್ಲೇ ಧಾರವಾಡದಲ್ಲಿ ನಡೆದ ಮದುವೆಯೊಂದರಲ್ಲಿ ವಧು-ವರ ಸೇರಿ ಹಲವಾರು ಜನರ ಮೂಗಿನಲ್ಲಿ ಕೆಲವರು ನಿಂಬೆರಸ ಸುರಿಯುತ್ತ, ‘ಪೇಪರ್‌ನ್ಯಾಗ ಬಂದೈತೋ ಮಾರಾಯ. ಕೋವಿಡ್ ಬರಂಗಿಲ್ಲ’ ಎಂದು ಹೇಳುವ ವಿಡಿಯೋ ವೈರಲ್ ಆಗಿತ್ತು.

ಆದರೆ ಇದೊಂದು ಅವೈಜ್ಞಾನಿಕ ಕ್ರಮ, ಇದಕ್ಕೆ ಯಾವುದೇ ವೈದ್ಯಕೀಯ ಆಧಾರಗಳಿಲ್ಲ ಎಂದು ಸತ್ಯ ಪ್ರತಿಪಾದನೆ ಮಾಡಿದ ಮೌಢ್ಯ ವಿರೋಧಿ ಹೋರಾಟ ನಡೆಸಿಕೊಂಡು ಬಂದಿರುವ ಹಿರಿಯ ಜೀವ ರಸಾಯನ ಶಾಸ್ತ್ರಜ್ಞ ನರೇಂದ್ರ ನಾಯಕ್ ಅವರು, ಆ ವಿವರಗಳ ವಿಡಿಯೋವನ್ನು ಫೇಸ್‌ಬುಕ್ ಖಾತೆಗೆ ಹಾಕಿಕೊಂಡಿದ್ದರು.

ಈ ವಿಡಿಯೋ ಭರ್ಜರಿ ವೈರಲ್ ಆಗಿ ಜನರಲ್ಲಿ ಪ್ರಜ್ಞೆ ಮೂಡಿಸಲು ನೆರವಾಗಿತ್ತು. ಆದರೆ ಹಲವು ಜನರ ದೂರುಗಳ ಆಧಾರದ ಮೇಲೆ, ‘ಈ ವಿಡಿಯೋ ಫೇಸ್‌ಬುಕ್ ಕಮ್ಯುನಿಟಿ ಸ್ಟ್ಯಾಂಡರ್ಡ್‌ಗಳಿಗೆ ಅನುಗುಣವಾಗಿಲ್ಲ ಎಂಬ ಕಾರಣ ನೀಡಿ ಫೇಸ್‌ಬುಕ್ ಕಂಪನಿ ಅವರ ಖಾತೆಯನ್ನು 24 ಗಂಟೆ ಸ್ಥಗಿತಗೊಳಿಸಿದೆ.

ವೈಜ್ಞಾನಿಕ ಮನೋಭಾವ ಎತ್ತಿ ಹಿಡಿಯಬೇಕಾದ ಫೇಸ್‌ಬುಕ್ ಮೇಲೆ ಯಾವ ಶಕ್ತಿಗಳ ಒತ್ತಡವಿದೆ ಎಂಬುದು ನಗ್ನಸತ್ಯ ಅಲ್ಲವೇ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...