Homeಕರೋನಾ ತಲ್ಲಣಮೂಗಿನಲ್ಲಿ ನಿಂಬೆರಸ ಶಿಕ್ಷಕನ ಬಲಿ ಪಡೆಯಿತೇ? ಸಂಕೇಶ್ವರ ಸಲಹೆ ಆಕ್ಷೇಪಿಸಿದ ಡಾ, ನರೇಂದ್ರ ನಾಯಕ್‌ರಿಗೆ ಫೇಸ್‌ಬುಕ್...

ಮೂಗಿನಲ್ಲಿ ನಿಂಬೆರಸ ಶಿಕ್ಷಕನ ಬಲಿ ಪಡೆಯಿತೇ? ಸಂಕೇಶ್ವರ ಸಲಹೆ ಆಕ್ಷೇಪಿಸಿದ ಡಾ, ನರೇಂದ್ರ ನಾಯಕ್‌ರಿಗೆ ಫೇಸ್‌ಬುಕ್ ನಿರ್ಬಂಧವೇಕೆ?

- Advertisement -
- Advertisement -

ಸಿಂಧನೂರಿನ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಇಂದು ಮುಂಜಾನೆ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮೂಗಿನಲ್ಲಿ ನಿಂಬೆರಸ ಸುರಿದುಕೊಂಡಿದ್ದೇ ಕಾರಣ ಎಂದು ಅವರ ಕುಟುಂಬಸ್ಥರು, ಸಹೋದ್ಯೋಗಿಗಳು ಅಪಾದಿಸಿದ್ದಾರೆ. ನಿಂಬೆರಸ ಮೂಗಿಗೆ ಸುರಿದುಕೊಂಡ ಶಿಕ್ಷಕ ಒದ್ದಾಡಿ ಸತ್ತರು ಎಂದು ಕನ್ನಡದ ಹಲವು ಪತ್ರಿಕೆಗಳು ವರದಿ ಮಾಡಿದೆ.

ಇನ್ನೊಂದು ಕಡೆ, ಸಂಕೇಶ್ವರರ ನಿಂಬೆರಸ ಸಲಹೆಯನ್ನು ಆಕ್ಷೇಪಿಸಿ, ವೈಜ್ಞಾನಿಕ ಮತ್ತು ವೈದ್ಯಕೀಯ ಅಂಶಗಳನ್ನು ಉಲ್ಲೇಖಿಸಿದ್ದ ಜೀವ ರಸಾಯನ ತಜ್ಞ, ಮೂಢನಂಬಿಕೆ ವಿರುದ್ಧ ಆಂದೋಲನ ನಡೆಸುತ್ತ ಬಂದಿರುವ ಡಾ, ನರೇಂದ್ರ ನಾಯಕ್, ನಿಂಬೆರಸದಿಂದ ಆಮ್ಲಜನಕ ಮಟ್ಟ ಹೆಚ್ಚುತ್ತದೆ ಎನ್ನುವುದಕ್ಕೆ ಯಾವುದೇ ಆಧಾರಗಳಿಲ್ಲ ಎಂದು ಮೊನ್ನೆ ಪ್ರಕಟಿಸಿದ್ದ ಫೇಸ್‌ಬುಕ್ ವಿಡಿಯೋ ಕಾರಣಕ್ಕಾಗಿ, ಫೇಸ್‌ಬುಕ್ ಇಂದು ಅವರ ಖಾತೆಯನ್ನು 24 ಗಂಟೆ ಕಾಲ ನಿರ್ಬಂಧಿಸಿದೆ!

ಈ ಎರಡೂ ಘಟನೆಗಳು ಮತ್ತೆ ನಮ್ಮನ್ನು ವಿಜಯ ಸಂಕೇಶ್ವರ್ ಅವರ ನಿಂಬೆರಸ-ಆಮ್ಲಜನಕ ಕತೆಗೆ ತಂದ ನಿಲ್ಲಿಸುತ್ತವೆ.

ಶಿಕ್ಷಕರ ಸಾವಿಗೆ ನಿಂಬೆರಸವೇ ಕಾರಣವಾಗಿತ್ತೆ?

ಸಿಂಧನೂರಿನ ಶರಣಬಸವೇಶ್ವರ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ 43 ವಯಸ್ಸಿನ ಬಸವರಾಜ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಪತ್ನಿ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು ಅವರು ಅಗಲಿದ್ದಾರೆ. ಅವರು ನಿನ್ನೆ ರಾತ್ರಿ ಮತ್ತು ಇವತ್ತು ಮುಂಜಾನೆ ಆಮ್ಲಜನಕ ಮಟ್ಟ ಹೆಚ್ಚಿಸಿಕೊಳ್ಳಲು ಮೂಗಿಗೆ ನಿಂಬೆರಸ ಹಾಕಿಕೊಂಡಿದ್ದೇ ಅವರ ಸಾವಿಗೆ ಕಾರಣ ಎಂದು ಕುಟುಂಬಸ್ಥರು, ಅವರ ಸಹೋದ್ಯೋಗಿಗಳು ಆರೋಪಿಸಿದ್ದಾರೆ.

ಮೃತ ಬಸವರಾಜ್ ಅವರ ಸಹೋದ್ಯೋಗಿ ವೀರೇಶ್, ‘ನಮಗಂತೂ ಹಾಗೆ ಅನ್ನಿಸಿದೆ ಸರ್. ನಿನ್ನೆ ತಾನೇ ಬಿಇಒ ಕಚೇರಿಯಲ್ಲಿ ಅವರನ್ನು ಭೇಟಿಯಾಗಿದ್ದೆ. ಅವರು ಸದಾ ಸದೃಢರಾಗಿದ್ದರು. ನಿಂಬೆರಸ ಪ್ರಮಾಣವನ್ನು ಜಾಸ್ತಿ ಹಾಕಿಕೊಂಡರು ಎನಿಸುತ್ತದೆ’ ಎಂದು ನಾನುಗೌರಿ.ಕಾಂಗೆ ತಿಳಿಸಿದರು.

‘ಸಾವಿನ ನಿಖರ ಕಾರಣ ನಂತರ ಗೊತ್ತಾಗಬಹುದು. ಆದರೆ ಸಂಕೇಶ್ವರ್ ಅವರು ಈ ನಿಂಬೆರಸ-ಆಮ್ಲಜನಕ ಕತೆ ಹೇಳಿದ ನಂತರ, ಸ್ವಲ್ಪ ಮೈ ಬಿಸಿಯಾದರೂ ಈ ನಿಂಬೆರಸಕ್ಕೆ ಬಹಳಷ್ಟು ಜನ ಒಡ್ಡಿಕೊಳ್ಳುತ್ತಿದ್ದಾರೆ. ನಾನೇ ಬಲ್ಲ ನಮ್ಮ ಕೆಲವು ಶಿಕ್ಷಕರು 20-25 ನಿಂಬೆ ಹಣ್ಣುಗಳನ್ನು ಮನೆಯಲ್ಲಿ ಇಟ್ಟುಕೊಂಡಿದ್ದಾರೆ. ತಿಳಿದವರೇ ಇಂತಹ ಅವೈಜ್ಞಾನಿಕ ಸಂಗತಿಗೆ ಶರಣಾದರೇ ಹೇಗೆ?’ ಎಂದು ವೀರೇಶ್ ಅಸಮಾಧಾನ ವ್ಯಕ್ತಪಡಿಸಿದರು.

ಬಸವರಾಜ್ ಮೃತರಾಗಿದ್ದಾರೆ ಎಂದು ಘೋಷಿಸಿದ ಸಿಂಧನೂರಿನ ಶಾಂತಿ ಆಸ್ಪತ್ರೆಯ ವೈದ್ಯರು ನಮ್ಮ ಸಂಪರ್ಕಕ್ಕೆ ಸಿಗಲಿಲ್ಲ. ಆಸ್ಪತ್ರೆಯ ಮಾಲೀಕ ನರೇಶ್ ನಮ್ಮೊಂದಿಗೆ ಮಾತನಾಡುತ್ತ, ‘ಇಲ್ಲಿಗೆ ಬರುವ ಮೊದಲೇ ಬಸವರಾಜ್ ಅವರು ಮೃತರಾಗಿದ್ದರು. ನಾವು ಸಹಜ ಕ್ರಮದಂತೆ ಇಸಿಜಿ ಮಾಡಿ, ಅವರು ಮೃತ ಎಂದು ಘೋಷಿಸಿದ್ದೇವೆ. ನಿಂಬೆರಸದಿಂದಾಗಿಯೇ ಸತ್ತರು ಎಂದು ದೃಢವಾಗಿಲ್ಲ. ಅವರಿಗೆ ಬೇರೇನೋ ಸಮಸ್ಯೆ ಇರಬಹುದು ಅಥವಾ ಮೊದಲೇ ಅವರಿಗೆ ಕೋವಿಡ್ ಇದ್ದು ಆ ಭಯಕ್ಕೆ ನಿಂಬೆರಸದ ಪ್ರಯೋಗ ಮಾಡಿರಬಹುದು. ಸಾವಿನ ನಿಖರ ಕಾರಣ ಗೊತ್ತಾಗಲು ಪೊಲೀಸರು ಪೋಸ್ಟ್ ಮಾರ್ಟಂ ಮಾಡಿಸಬೇಕು..’ ಎಂದರು.

ಸಿಂಧನೂರಿನ ಅನ್ನದಾನೀಶ್ವರ ಆಸ್ಪತ್ರೆಯ ಸರ್ಜರಿಯನ್ ಡಾ.ಬಿ.ಎನ್ ಪಾಟೀಲ್, ‘ಕೇಸ್ ಹಿಸ್ಟರಿ ಇಲ್ಲದೇ ಒಮ್ಮೆಲೇ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ಮೃತರಿಗೆ ಬೇರೆ ಆರೋಗ್ಯ ಸಮಸ್ಯೆ ಇದ್ದು, ಅವರು ಈ ಪ್ರಯೋಗ ಮಾಡಿದಾಗ ಏನೋ ಎಡವಟ್ಟಾಗಿರಬಹುದು. ಆದರೆ ಈಗಲೇ ನಿಖರವಾಗಿ ಹೇಳಲಾಗದು. ಒಂದಂತೂ ಸ್ಪಷ್ಟ, ನಿಂಬೆರಸ ಮೂಗಿನಲ್ಲಿ ಹಾಕಿಕೊಂಡರೆ ಯಾವ ಘನಂದಾರಿ ಅನುಕೂಲವೂ ಇಲ್ಲ, ಹಾಗೆಯೇ ಅದರಿಂದ ಸಾವು ಸಂಭವಿಸುವಂತಹ ಅಪಾಯವಿಲ್ಲ. ತಿಳಿಯಾಗಿರುವ ರಸ ಶ್ವಾಸಕೋಶ ಸೇರಿದರೆ ಸಾವೇನೂ ಸಂಭವಿಸದು. ಆದರೆ, ಈ ನಿಂಬೆರಸ ಪ್ರಯೋಗ ಅವೈಜ್ಞಾನಿಕ. ಜನರು ಎಚ್ಚರವಾಗಿರಬೇಕು’ ಎಂದು ನಾನುಗೌರಿ.ಕಾಂ ಗೆ ತಿಳಿಸಿದರು.

ಕೋವಿಡ್ ಅಥವಾ ಉಸಿರಾಟದ ಸಮಸ್ಯೆ ಇದ್ದು, ಮೃತರು ನಿಂಬೆರಸ ಪ್ರಯೋಗಕ್ಕೆ ಒಡ್ಡಿಕೊಂಡಾಗ ಆರೋಗ್ಯದಲ್ಲಿ ಏರುಪೇರಾಗಿತೆ? ಇದು ನಿಜವಾದರೆ, ಸಂಕೇಶ್ವರ್ ಕ್ರಿಮಿನಲ್ ಅಪರಾಧ ಎಸಗಿದಂತೆ ಅಲ್ಲವೇ?

ಸತ್ಯ ಹೇಳಿದ ವಿಜ್ಞಾನಿಗೆ ಫೇಸ್‌ಬುಕ್ ನಿರ್ಬಂಧ!

ವಿಜಯ ಸಂಕೇಶ್ವರ್ ಅವರು ಸುದ್ದಿಗೋಷ್ಠಿ ಕರೆದು, ಆಮ್ಲಜನಕ ಮಟ್ಟ ವೃದ್ದಿಗೆ ನಿಂಬೆರಸವನ್ನು ಮೂಗಿನ ಮೂಲಕ ಹಾಕೊಕೊಳ್ಳುವುದು ಪರಿಣಾಮಕಾರಿ ಎಂದ ವಿಷಯ ಎಲ್ಲ ಮಾಧ್ಯಮಗಳಲ್ಲೂ ಪ್ರಕಟವಾಯಿತು. ಮರುದಿನ ಅಲ್ಲೇ ಧಾರವಾಡದಲ್ಲಿ ನಡೆದ ಮದುವೆಯೊಂದರಲ್ಲಿ ವಧು-ವರ ಸೇರಿ ಹಲವಾರು ಜನರ ಮೂಗಿನಲ್ಲಿ ಕೆಲವರು ನಿಂಬೆರಸ ಸುರಿಯುತ್ತ, ‘ಪೇಪರ್‌ನ್ಯಾಗ ಬಂದೈತೋ ಮಾರಾಯ. ಕೋವಿಡ್ ಬರಂಗಿಲ್ಲ’ ಎಂದು ಹೇಳುವ ವಿಡಿಯೋ ವೈರಲ್ ಆಗಿತ್ತು.

ಆದರೆ ಇದೊಂದು ಅವೈಜ್ಞಾನಿಕ ಕ್ರಮ, ಇದಕ್ಕೆ ಯಾವುದೇ ವೈದ್ಯಕೀಯ ಆಧಾರಗಳಿಲ್ಲ ಎಂದು ಸತ್ಯ ಪ್ರತಿಪಾದನೆ ಮಾಡಿದ ಮೌಢ್ಯ ವಿರೋಧಿ ಹೋರಾಟ ನಡೆಸಿಕೊಂಡು ಬಂದಿರುವ ಹಿರಿಯ ಜೀವ ರಸಾಯನ ಶಾಸ್ತ್ರಜ್ಞ ನರೇಂದ್ರ ನಾಯಕ್ ಅವರು, ಆ ವಿವರಗಳ ವಿಡಿಯೋವನ್ನು ಫೇಸ್‌ಬುಕ್ ಖಾತೆಗೆ ಹಾಕಿಕೊಂಡಿದ್ದರು.

ಈ ವಿಡಿಯೋ ಭರ್ಜರಿ ವೈರಲ್ ಆಗಿ ಜನರಲ್ಲಿ ಪ್ರಜ್ಞೆ ಮೂಡಿಸಲು ನೆರವಾಗಿತ್ತು. ಆದರೆ ಹಲವು ಜನರ ದೂರುಗಳ ಆಧಾರದ ಮೇಲೆ, ‘ಈ ವಿಡಿಯೋ ಫೇಸ್‌ಬುಕ್ ಕಮ್ಯುನಿಟಿ ಸ್ಟ್ಯಾಂಡರ್ಡ್‌ಗಳಿಗೆ ಅನುಗುಣವಾಗಿಲ್ಲ ಎಂಬ ಕಾರಣ ನೀಡಿ ಫೇಸ್‌ಬುಕ್ ಕಂಪನಿ ಅವರ ಖಾತೆಯನ್ನು 24 ಗಂಟೆ ಸ್ಥಗಿತಗೊಳಿಸಿದೆ.

ವೈಜ್ಞಾನಿಕ ಮನೋಭಾವ ಎತ್ತಿ ಹಿಡಿಯಬೇಕಾದ ಫೇಸ್‌ಬುಕ್ ಮೇಲೆ ಯಾವ ಶಕ್ತಿಗಳ ಒತ್ತಡವಿದೆ ಎಂಬುದು ನಗ್ನಸತ್ಯ ಅಲ್ಲವೇ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...