Homeಕರೋನಾ ತಲ್ಲಣನಿಂಬೆರಸ, ಶಿಕ್ಷಕನ ಸಾವು: ಸಂಕೇಶ್ವರ್ ವಿರುದ್ಧ ಕೇಸು ದಾಖಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ದೂರು

ನಿಂಬೆರಸ, ಶಿಕ್ಷಕನ ಸಾವು: ಸಂಕೇಶ್ವರ್ ವಿರುದ್ಧ ಕೇಸು ದಾಖಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ದೂರು

- Advertisement -
- Advertisement -

‘ಮಾಜಿ ಸಂಸದರಾಗಿರುವ, ವಿಆರ್‌ಎಲ್ ಕಂಪನಿ ಮುಖ್ಯಸ್ಥರಾಗಿರುವ, ಸಾರ್ವಜನಿಕ ಜೀವನದಲ್ಲಿರುವ ವಿಜಯ ಸಂಕೇಶ್ವರ್ ಸುದ್ದಿಗೋಷ್ಠಿ ಕರೆದು ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ ಅವೈಜ್ಞಾನಿಕ ಸಲಹೆ ನೀಡಿದ್ದಾರೆ. ಇದು ಒಬ್ಬ ಶಿಕ್ಷಕರ ಸಾವಿಗೆ ಕಾರಣವಾಗಿದೆ. ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಕೆಯಾಗಿದೆ.

ಬೆಳಗಾವಿ ಜಿಲ್ಲೆ ಅಥಣಿಯ ಯುವ ವಕೀಲ, ಆರ್‌ಟಿಐ ಕಾರ್ಯಕರ್ತ ಮತ್ತು ಮಾನವ ಹಕ್ಕು ಹೋರಾಟಗಾರ ಭೀಮನಗೌಡ ಪರಗೊಂಡ ಅವರು ಏಪ್ರಿಲ್ 30ರಂದು ಹೀಗೊಂದು ದೂರು ಸಲ್ಲಿಸಿ, ‘ವಿಜಯ ಸಂಕೇಶ್ವರ್ ವಿರುದ್ಧ ಸು-ಮೊಟೊ ಆಧಾರದಲ್ಲಿ ಸರ್ಕಾರ ಪ್ರಕರಣ ದಾಖಲಿಸಬೇಕು. ಸಿಂಧನೂರಿನ ಶಿಕ್ಷಕ ಬಸವರಾಜ್ ಅವರ ಸಾವಿಗೆ ಸಂಕೇಶ್ವರ್ ಸಲಹೆಯೇ ಕಾರಣ. ಐಪಿಸಿ ಸೆಕ್ಷನ್ 306 ಮತ್ತು ಸಾಂಕ್ರಾಮಿಕ ತಡೆ ಆಕ್ಟ್ ಪ್ರಕಾರ ಕೇಸು ದಾಖಲಿಸಬೇಕು’ ಎಂದು ಆಗ್ರಹಿಸಿದ್ದಾರೆ,

ಸಂಕೇಶ್ವರ್ ಧಾರವಾಡ ಜಿಲ್ಲೆ ನಿವಾಸಿಯಾಗಿರುವುದರಿಂದ (ಗದಗ ಮೂಲದವರು) ಧಾರವಾಡ ಡಿಸಿ, ಶಿಕ್ಷಕನ ಸಾವು ಸಂಭವಿಸಿದ ರಾಯಚೂರು ಜಿಲ್ಲೆಯ ಡಿಸಿ ಮತ್ತು ಸಿಂಧನೂರು ತಾಲೂಕು ತಹಸೀಲ್ದಾರ್ ಅವರಿಗೂ ಈ ದೂರಿನ ಪ್ರತಿ ಕಳಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ದೂರುದಾರ ವಕೀಲ ಭೀಮನಗೌಡ ಪರಗೊಂಡ, ‘ಸಾರ್ವಜನಿಕ ಜೀವನದಲ್ಲಿರುವ, ಒಂದು ಪತ್ರಿಕೆ ಮತ್ತು ಒಂದು ಟಿವಿ ಚಾನೆಲ್ ಹೊಂದಿರುವ ವ್ಯಕ್ತಿ, ಅದೂ ಸಾಂಕ್ರಾಮಿಕದ ಸಂದರ್ಭದಲ್ಲಿ ಅವೈಜ್ಞಾನಿಕ ಸಲಹೆಯನ್ನು ಸಾರ್ವಜನಿಕವಾಗಿ ನೀಡಿದ್ದು ಘೋರ ಅಪರಾಧ. ಕೋವಿಡ್ ಕಾರಣಕ್ಕೆ ಜನ ಆತಂಕದಲ್ಲಿದ್ದಾರೆ. ಆಮ್ಲಜನಕ ಕೊರತೆಯಿಂದ ಸಾವು ಸಂಭವಿಸುತ್ತಿವೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಮೂಗಿಗೆ ನಿಂಬೆರಸ ಹಾಕಿಕೊಂಡರೆ ಆಮ್ಲಜನಕ ಮಟ್ಟ ಹೆಚ್ಚುತ್ತದೆ ಎಂಬ ಅವೈಜ್ಞಾನಿಕ ಸಲಹೆ ನೀಡಿದ್ದು ಸಮಾಜದಲ್ಲಿ ಅವಘಡಗಳಿಗೆ ಕಾರಣವಾಗುತ್ತಿದೆ. ಶಿಕ್ಷಕರ ಸಾವು ಇದಕ್ಕೆ ಒಂದು ಉದಾಹರಣೆ’ ಎಂದರು.

ಕಳೆದ ವಾರ, ವಿಜಯ್ ಸಂಕೇಶ್ವರ್ ಅವರು ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸವೇ ಪರ್ಯಾಯ ಎಂದು ಹೇಳಿದ್ದರಲ್ಲದೇ, ತಾವು ದಿನವೂ ಈ ಪ್ರಯೋಗ ಮಾಡುತ್ತಿರುವುದಾಗಿ ಮತ್ತು ಸುಮಾರು 200 ಜನ ಪರಿಚಿತರು ಕೂಡ ಈ ಪ್ರಯೋಗ ಮಾಡುತ್ತಿದ್ದಾರೆ. ಇದರಿಂದ ಆಮ್ಲಜನಕ ಮಟ್ಟ ವೃದ್ಧಿಯಾಗುತ್ತದೆ’ ಎಂದು ಹೇಳಿದ್ದರು.

ಇದಕ್ಕೆ ಜೀವ ರಸಾಯನ ವಿಜ್ಞಾನಿ ಪ್ರೊ. ನರೇಂದ್ರ ನಾಯಕ್, ಆಹಾರ ತಜ್ಞ ಕೆ.ಸಿ ರಘು ಸೇರಿ ಹಲವಾರು ತಜ್ಞರು ಮತ್ತು ವೈಜ್ಞಾನಿಕ ಮನೋಭಾವನೆಯ ಸಾವಿರಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಮೂರು ದಿನದ ಹಿಂದೆ ಸಿಂಧನೂರುನಲ್ಲಿ ಸರ್ಕಾರಿ ಶಾಲೆ ಶಿಕ್ಷಕ ಬಸವರಾಜ್, ಮೂಗಿಗೆ ನಿಂಬೆರಸ ಹಾಕಿಕೊಂಡ ನಂತರ ವಿಪರೀತ ವಾಂತಿ ಸಂಭವಿಸಿ ನಿಧನರಾದರು ಎಂದು ಕುಟುಂಬಸ್ಥರು ಮತ್ತು ಸಹೋದ್ಯೋಗಿಗಳು ಅಪಾದಿಸಿದ್ದರು. ಅವರಿಗೆ ಬೇರೆ ಯಾವುದೇ ಕಾಯಿಲೆ ಇಲ್ಲ ಎಂದು ಅವರು ಹೇಳಿದ್ದರು. ಇದು ರಾಜ್ಯಾದ್ಯಂತ ಸಂಕೇಶ್ವರ್ ವಿರುದ್ಧ ಆಕ್ರೋಶ ಮೂಡಿಸಿತ್ತು.

ಸಂಕೇಶ್ವರ ವಿರುದ್ಧ ದೂರು ನೀಡಿದ ಭೀಮನಗೌಡ ಪರಗೊಂಡ

‘ಮಾಧ್ಯಮ ಕೈಯಲ್ಲಿ ಇರುವುದರಿಂದ ಸಂಕೇಶ್ವರ್ ಅವರು, ಇದು ಹೃದಯಾಘಾತದ ಸಾವು ಎಂದು ಯಾವ ಆಧಾರವಿಲ್ಲದೇ ಬರೆಸಿದರು. ಬಹುಪಾಲು ಮಾಧ್ಯಮಗಳು ಶಿಕ್ಷಕನ ಸಾವಿನ ಸುದ್ದಿ ಮಾಡಿದವೇ ಹೊರತು, ಸಂಕೇಶ್ವರ್ ಸಲಹೆ ಅಪಾಯಕಾರಿ ಎಂಬ ಸ್ಪಷ್ಟ ಸಂದೇಶ ನೀಡಲು ಯತ್ನಿಸಲಿಲ್ಲ. ಹೀಗಾಗಿ ನಾನು ದೂರು ನೀಡಬೇಕಾಯಿತು’ ಎಂದು ಪರಗೊಂಡ ನಾನುಗೌರಿ.ಕಾಂ ಗೆ ತಿಳಿಸಿದರು.

‘ಸಂಕೇಶ್ವರ್ ಅಷ್ಟೇ ಅಲ್ಲ, ಅವರ ಅವೈಜ್ಞಾನಿಕ ಸಲಹೆಯನ್ನು ಬೆಂಬಲಿಸಿದ ಎಲ್ಲರಿಗೂ, ಮುಖ್ಯವಾಗಿ ಜನಪ್ರತಿನಿಧಿಗಳು, ಪತ್ರಕರ್ತರ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದೇನೆ’ ಎಂದು ವಕೀಲ ಪರಗೊಂಡ ತಿಳಿಸಿದರು.

‘ದೂರಿನಲ್ಲಿ ಸಂಕೇಶ್ವರ್ ಬಿಟ್ಟು ಬೇರೆ ಹೆಸರು ಉಲ್ಲೇಖಿಸಿಲ್ಲ. ಆದರೆ ಪತ್ರಕರ್ತ ವಿಶ್ವೇಶ್ವರ ಭಟ್ಟ, ಸಂಸದ ಪ್ರತಾಪ ಸಿಂಹ ಮತ್ತು ಕೋಲಾರದ ಬಿಜೆಪಿ ಜನಪ್ರತಿನಿಧಿ ಮುನಿಸ್ವಾಮಿ ಮುಂತಾದವರು ಸಂಕೇಶ್ವರ್ ಅವರ ಅಪಾಯಕಾರಿ ಸಲಹೆಯನ್ನು ಬೆಂಬಲಿಸುವ ಮೂಲಕ ಜನರಲ್ಲಿ ತಪ್ಪು ತಿಳುವಳಿಕೆ ಮೂಡಿಸಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿರುವ ಇವರ ಮೇಲೂ ಪ್ರಕರಣ ದಾಖಲಾಗಬೇಕು’ ಎಂದು ಪರಗೊಂಡ ಅಭಿಪ್ರಾಯ ಪಟ್ಟರು.

2003ರಿಂದ ಎಐಎಸ್‌ಎಫ್ ಸಂಘಟನೆಯಲ್ಲಿ ಹಲವಾರು ಹುದ್ದೆಗಳಲ್ಲಿ ಹೋರಾಟ ಮಾಡಿರುವ ಪರಗೊಂಡ ಅವರು, ಬೆಳಗಾವಿ, ಕಲಬುರ್ಗಿ ಮತ್ತು ರಾಯಚೂರುಗಳಲ್ಲಿ ನಡೆದ ಅನೇಕ ಜನಪರ ಚಳುವಳಿಗಳ ನೇತೃತ್ವ ವಹಿಸಿದ್ದಾರೆ.

ಮುಖ್ಯ ಕಾರ್ಯದರ್ಶಿ ಪರಗೊಂಡರ ದೂರಿಗೆ ಪ್ರತಿಕ್ರಿಯಿಸುವರೇ? ಈ ಬಿಜೆಪಿ ಆಡಳಿತದಲ್ಲಿ ಅದೆಲ್ಲ ಸಾಧ್ಯವೇ ಎಂಬುದನ್ನು ಕಾದು ನೋಡಬೇಕಿದೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ; ಮೂಗಿನಲ್ಲಿ ನಿಂಬೆರಸ ಶಿಕ್ಷಕನ ಬಲಿ ಪಡೆಯಿತೇ? ಸಂಕೇಶ್ವರ ಸಲಹೆ ಆಕ್ಷೇಪಿಸಿದ ಡಾ, ನರೇಂದ್ರ ನಾಯಕ್‌ರಿಗೆ ಫೇಸ್‌ಬುಕ್ ನಿರ್ಬಂಧವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...