Homeಕರೋನಾ ತಲ್ಲಣನಿಂಬೆರಸ, ಶಿಕ್ಷಕನ ಸಾವು: ಸಂಕೇಶ್ವರ್ ವಿರುದ್ಧ ಕೇಸು ದಾಖಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ದೂರು

ನಿಂಬೆರಸ, ಶಿಕ್ಷಕನ ಸಾವು: ಸಂಕೇಶ್ವರ್ ವಿರುದ್ಧ ಕೇಸು ದಾಖಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ದೂರು

- Advertisement -
- Advertisement -

‘ಮಾಜಿ ಸಂಸದರಾಗಿರುವ, ವಿಆರ್‌ಎಲ್ ಕಂಪನಿ ಮುಖ್ಯಸ್ಥರಾಗಿರುವ, ಸಾರ್ವಜನಿಕ ಜೀವನದಲ್ಲಿರುವ ವಿಜಯ ಸಂಕೇಶ್ವರ್ ಸುದ್ದಿಗೋಷ್ಠಿ ಕರೆದು ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ ಅವೈಜ್ಞಾನಿಕ ಸಲಹೆ ನೀಡಿದ್ದಾರೆ. ಇದು ಒಬ್ಬ ಶಿಕ್ಷಕರ ಸಾವಿಗೆ ಕಾರಣವಾಗಿದೆ. ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಕೆಯಾಗಿದೆ.

ಬೆಳಗಾವಿ ಜಿಲ್ಲೆ ಅಥಣಿಯ ಯುವ ವಕೀಲ, ಆರ್‌ಟಿಐ ಕಾರ್ಯಕರ್ತ ಮತ್ತು ಮಾನವ ಹಕ್ಕು ಹೋರಾಟಗಾರ ಭೀಮನಗೌಡ ಪರಗೊಂಡ ಅವರು ಏಪ್ರಿಲ್ 30ರಂದು ಹೀಗೊಂದು ದೂರು ಸಲ್ಲಿಸಿ, ‘ವಿಜಯ ಸಂಕೇಶ್ವರ್ ವಿರುದ್ಧ ಸು-ಮೊಟೊ ಆಧಾರದಲ್ಲಿ ಸರ್ಕಾರ ಪ್ರಕರಣ ದಾಖಲಿಸಬೇಕು. ಸಿಂಧನೂರಿನ ಶಿಕ್ಷಕ ಬಸವರಾಜ್ ಅವರ ಸಾವಿಗೆ ಸಂಕೇಶ್ವರ್ ಸಲಹೆಯೇ ಕಾರಣ. ಐಪಿಸಿ ಸೆಕ್ಷನ್ 306 ಮತ್ತು ಸಾಂಕ್ರಾಮಿಕ ತಡೆ ಆಕ್ಟ್ ಪ್ರಕಾರ ಕೇಸು ದಾಖಲಿಸಬೇಕು’ ಎಂದು ಆಗ್ರಹಿಸಿದ್ದಾರೆ,

ಸಂಕೇಶ್ವರ್ ಧಾರವಾಡ ಜಿಲ್ಲೆ ನಿವಾಸಿಯಾಗಿರುವುದರಿಂದ (ಗದಗ ಮೂಲದವರು) ಧಾರವಾಡ ಡಿಸಿ, ಶಿಕ್ಷಕನ ಸಾವು ಸಂಭವಿಸಿದ ರಾಯಚೂರು ಜಿಲ್ಲೆಯ ಡಿಸಿ ಮತ್ತು ಸಿಂಧನೂರು ತಾಲೂಕು ತಹಸೀಲ್ದಾರ್ ಅವರಿಗೂ ಈ ದೂರಿನ ಪ್ರತಿ ಕಳಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ದೂರುದಾರ ವಕೀಲ ಭೀಮನಗೌಡ ಪರಗೊಂಡ, ‘ಸಾರ್ವಜನಿಕ ಜೀವನದಲ್ಲಿರುವ, ಒಂದು ಪತ್ರಿಕೆ ಮತ್ತು ಒಂದು ಟಿವಿ ಚಾನೆಲ್ ಹೊಂದಿರುವ ವ್ಯಕ್ತಿ, ಅದೂ ಸಾಂಕ್ರಾಮಿಕದ ಸಂದರ್ಭದಲ್ಲಿ ಅವೈಜ್ಞಾನಿಕ ಸಲಹೆಯನ್ನು ಸಾರ್ವಜನಿಕವಾಗಿ ನೀಡಿದ್ದು ಘೋರ ಅಪರಾಧ. ಕೋವಿಡ್ ಕಾರಣಕ್ಕೆ ಜನ ಆತಂಕದಲ್ಲಿದ್ದಾರೆ. ಆಮ್ಲಜನಕ ಕೊರತೆಯಿಂದ ಸಾವು ಸಂಭವಿಸುತ್ತಿವೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಮೂಗಿಗೆ ನಿಂಬೆರಸ ಹಾಕಿಕೊಂಡರೆ ಆಮ್ಲಜನಕ ಮಟ್ಟ ಹೆಚ್ಚುತ್ತದೆ ಎಂಬ ಅವೈಜ್ಞಾನಿಕ ಸಲಹೆ ನೀಡಿದ್ದು ಸಮಾಜದಲ್ಲಿ ಅವಘಡಗಳಿಗೆ ಕಾರಣವಾಗುತ್ತಿದೆ. ಶಿಕ್ಷಕರ ಸಾವು ಇದಕ್ಕೆ ಒಂದು ಉದಾಹರಣೆ’ ಎಂದರು.

ಕಳೆದ ವಾರ, ವಿಜಯ್ ಸಂಕೇಶ್ವರ್ ಅವರು ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸವೇ ಪರ್ಯಾಯ ಎಂದು ಹೇಳಿದ್ದರಲ್ಲದೇ, ತಾವು ದಿನವೂ ಈ ಪ್ರಯೋಗ ಮಾಡುತ್ತಿರುವುದಾಗಿ ಮತ್ತು ಸುಮಾರು 200 ಜನ ಪರಿಚಿತರು ಕೂಡ ಈ ಪ್ರಯೋಗ ಮಾಡುತ್ತಿದ್ದಾರೆ. ಇದರಿಂದ ಆಮ್ಲಜನಕ ಮಟ್ಟ ವೃದ್ಧಿಯಾಗುತ್ತದೆ’ ಎಂದು ಹೇಳಿದ್ದರು.

ಇದಕ್ಕೆ ಜೀವ ರಸಾಯನ ವಿಜ್ಞಾನಿ ಪ್ರೊ. ನರೇಂದ್ರ ನಾಯಕ್, ಆಹಾರ ತಜ್ಞ ಕೆ.ಸಿ ರಘು ಸೇರಿ ಹಲವಾರು ತಜ್ಞರು ಮತ್ತು ವೈಜ್ಞಾನಿಕ ಮನೋಭಾವನೆಯ ಸಾವಿರಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಮೂರು ದಿನದ ಹಿಂದೆ ಸಿಂಧನೂರುನಲ್ಲಿ ಸರ್ಕಾರಿ ಶಾಲೆ ಶಿಕ್ಷಕ ಬಸವರಾಜ್, ಮೂಗಿಗೆ ನಿಂಬೆರಸ ಹಾಕಿಕೊಂಡ ನಂತರ ವಿಪರೀತ ವಾಂತಿ ಸಂಭವಿಸಿ ನಿಧನರಾದರು ಎಂದು ಕುಟುಂಬಸ್ಥರು ಮತ್ತು ಸಹೋದ್ಯೋಗಿಗಳು ಅಪಾದಿಸಿದ್ದರು. ಅವರಿಗೆ ಬೇರೆ ಯಾವುದೇ ಕಾಯಿಲೆ ಇಲ್ಲ ಎಂದು ಅವರು ಹೇಳಿದ್ದರು. ಇದು ರಾಜ್ಯಾದ್ಯಂತ ಸಂಕೇಶ್ವರ್ ವಿರುದ್ಧ ಆಕ್ರೋಶ ಮೂಡಿಸಿತ್ತು.

ಸಂಕೇಶ್ವರ ವಿರುದ್ಧ ದೂರು ನೀಡಿದ ಭೀಮನಗೌಡ ಪರಗೊಂಡ

‘ಮಾಧ್ಯಮ ಕೈಯಲ್ಲಿ ಇರುವುದರಿಂದ ಸಂಕೇಶ್ವರ್ ಅವರು, ಇದು ಹೃದಯಾಘಾತದ ಸಾವು ಎಂದು ಯಾವ ಆಧಾರವಿಲ್ಲದೇ ಬರೆಸಿದರು. ಬಹುಪಾಲು ಮಾಧ್ಯಮಗಳು ಶಿಕ್ಷಕನ ಸಾವಿನ ಸುದ್ದಿ ಮಾಡಿದವೇ ಹೊರತು, ಸಂಕೇಶ್ವರ್ ಸಲಹೆ ಅಪಾಯಕಾರಿ ಎಂಬ ಸ್ಪಷ್ಟ ಸಂದೇಶ ನೀಡಲು ಯತ್ನಿಸಲಿಲ್ಲ. ಹೀಗಾಗಿ ನಾನು ದೂರು ನೀಡಬೇಕಾಯಿತು’ ಎಂದು ಪರಗೊಂಡ ನಾನುಗೌರಿ.ಕಾಂ ಗೆ ತಿಳಿಸಿದರು.

‘ಸಂಕೇಶ್ವರ್ ಅಷ್ಟೇ ಅಲ್ಲ, ಅವರ ಅವೈಜ್ಞಾನಿಕ ಸಲಹೆಯನ್ನು ಬೆಂಬಲಿಸಿದ ಎಲ್ಲರಿಗೂ, ಮುಖ್ಯವಾಗಿ ಜನಪ್ರತಿನಿಧಿಗಳು, ಪತ್ರಕರ್ತರ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದೇನೆ’ ಎಂದು ವಕೀಲ ಪರಗೊಂಡ ತಿಳಿಸಿದರು.

‘ದೂರಿನಲ್ಲಿ ಸಂಕೇಶ್ವರ್ ಬಿಟ್ಟು ಬೇರೆ ಹೆಸರು ಉಲ್ಲೇಖಿಸಿಲ್ಲ. ಆದರೆ ಪತ್ರಕರ್ತ ವಿಶ್ವೇಶ್ವರ ಭಟ್ಟ, ಸಂಸದ ಪ್ರತಾಪ ಸಿಂಹ ಮತ್ತು ಕೋಲಾರದ ಬಿಜೆಪಿ ಜನಪ್ರತಿನಿಧಿ ಮುನಿಸ್ವಾಮಿ ಮುಂತಾದವರು ಸಂಕೇಶ್ವರ್ ಅವರ ಅಪಾಯಕಾರಿ ಸಲಹೆಯನ್ನು ಬೆಂಬಲಿಸುವ ಮೂಲಕ ಜನರಲ್ಲಿ ತಪ್ಪು ತಿಳುವಳಿಕೆ ಮೂಡಿಸಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿರುವ ಇವರ ಮೇಲೂ ಪ್ರಕರಣ ದಾಖಲಾಗಬೇಕು’ ಎಂದು ಪರಗೊಂಡ ಅಭಿಪ್ರಾಯ ಪಟ್ಟರು.

2003ರಿಂದ ಎಐಎಸ್‌ಎಫ್ ಸಂಘಟನೆಯಲ್ಲಿ ಹಲವಾರು ಹುದ್ದೆಗಳಲ್ಲಿ ಹೋರಾಟ ಮಾಡಿರುವ ಪರಗೊಂಡ ಅವರು, ಬೆಳಗಾವಿ, ಕಲಬುರ್ಗಿ ಮತ್ತು ರಾಯಚೂರುಗಳಲ್ಲಿ ನಡೆದ ಅನೇಕ ಜನಪರ ಚಳುವಳಿಗಳ ನೇತೃತ್ವ ವಹಿಸಿದ್ದಾರೆ.

ಮುಖ್ಯ ಕಾರ್ಯದರ್ಶಿ ಪರಗೊಂಡರ ದೂರಿಗೆ ಪ್ರತಿಕ್ರಿಯಿಸುವರೇ? ಈ ಬಿಜೆಪಿ ಆಡಳಿತದಲ್ಲಿ ಅದೆಲ್ಲ ಸಾಧ್ಯವೇ ಎಂಬುದನ್ನು ಕಾದು ನೋಡಬೇಕಿದೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ; ಮೂಗಿನಲ್ಲಿ ನಿಂಬೆರಸ ಶಿಕ್ಷಕನ ಬಲಿ ಪಡೆಯಿತೇ? ಸಂಕೇಶ್ವರ ಸಲಹೆ ಆಕ್ಷೇಪಿಸಿದ ಡಾ, ನರೇಂದ್ರ ನಾಯಕ್‌ರಿಗೆ ಫೇಸ್‌ಬುಕ್ ನಿರ್ಬಂಧವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...