Homeಕರೋನಾ ತಲ್ಲಣನಿಂಬೆರಸ, ಶಿಕ್ಷಕನ ಸಾವು: ಸಂಕೇಶ್ವರ್ ವಿರುದ್ಧ ಕೇಸು ದಾಖಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ದೂರು

ನಿಂಬೆರಸ, ಶಿಕ್ಷಕನ ಸಾವು: ಸಂಕೇಶ್ವರ್ ವಿರುದ್ಧ ಕೇಸು ದಾಖಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ದೂರು

- Advertisement -
- Advertisement -

‘ಮಾಜಿ ಸಂಸದರಾಗಿರುವ, ವಿಆರ್‌ಎಲ್ ಕಂಪನಿ ಮುಖ್ಯಸ್ಥರಾಗಿರುವ, ಸಾರ್ವಜನಿಕ ಜೀವನದಲ್ಲಿರುವ ವಿಜಯ ಸಂಕೇಶ್ವರ್ ಸುದ್ದಿಗೋಷ್ಠಿ ಕರೆದು ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ ಅವೈಜ್ಞಾನಿಕ ಸಲಹೆ ನೀಡಿದ್ದಾರೆ. ಇದು ಒಬ್ಬ ಶಿಕ್ಷಕರ ಸಾವಿಗೆ ಕಾರಣವಾಗಿದೆ. ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಕೆಯಾಗಿದೆ.

ಬೆಳಗಾವಿ ಜಿಲ್ಲೆ ಅಥಣಿಯ ಯುವ ವಕೀಲ, ಆರ್‌ಟಿಐ ಕಾರ್ಯಕರ್ತ ಮತ್ತು ಮಾನವ ಹಕ್ಕು ಹೋರಾಟಗಾರ ಭೀಮನಗೌಡ ಪರಗೊಂಡ ಅವರು ಏಪ್ರಿಲ್ 30ರಂದು ಹೀಗೊಂದು ದೂರು ಸಲ್ಲಿಸಿ, ‘ವಿಜಯ ಸಂಕೇಶ್ವರ್ ವಿರುದ್ಧ ಸು-ಮೊಟೊ ಆಧಾರದಲ್ಲಿ ಸರ್ಕಾರ ಪ್ರಕರಣ ದಾಖಲಿಸಬೇಕು. ಸಿಂಧನೂರಿನ ಶಿಕ್ಷಕ ಬಸವರಾಜ್ ಅವರ ಸಾವಿಗೆ ಸಂಕೇಶ್ವರ್ ಸಲಹೆಯೇ ಕಾರಣ. ಐಪಿಸಿ ಸೆಕ್ಷನ್ 306 ಮತ್ತು ಸಾಂಕ್ರಾಮಿಕ ತಡೆ ಆಕ್ಟ್ ಪ್ರಕಾರ ಕೇಸು ದಾಖಲಿಸಬೇಕು’ ಎಂದು ಆಗ್ರಹಿಸಿದ್ದಾರೆ,

ಸಂಕೇಶ್ವರ್ ಧಾರವಾಡ ಜಿಲ್ಲೆ ನಿವಾಸಿಯಾಗಿರುವುದರಿಂದ (ಗದಗ ಮೂಲದವರು) ಧಾರವಾಡ ಡಿಸಿ, ಶಿಕ್ಷಕನ ಸಾವು ಸಂಭವಿಸಿದ ರಾಯಚೂರು ಜಿಲ್ಲೆಯ ಡಿಸಿ ಮತ್ತು ಸಿಂಧನೂರು ತಾಲೂಕು ತಹಸೀಲ್ದಾರ್ ಅವರಿಗೂ ಈ ದೂರಿನ ಪ್ರತಿ ಕಳಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ದೂರುದಾರ ವಕೀಲ ಭೀಮನಗೌಡ ಪರಗೊಂಡ, ‘ಸಾರ್ವಜನಿಕ ಜೀವನದಲ್ಲಿರುವ, ಒಂದು ಪತ್ರಿಕೆ ಮತ್ತು ಒಂದು ಟಿವಿ ಚಾನೆಲ್ ಹೊಂದಿರುವ ವ್ಯಕ್ತಿ, ಅದೂ ಸಾಂಕ್ರಾಮಿಕದ ಸಂದರ್ಭದಲ್ಲಿ ಅವೈಜ್ಞಾನಿಕ ಸಲಹೆಯನ್ನು ಸಾರ್ವಜನಿಕವಾಗಿ ನೀಡಿದ್ದು ಘೋರ ಅಪರಾಧ. ಕೋವಿಡ್ ಕಾರಣಕ್ಕೆ ಜನ ಆತಂಕದಲ್ಲಿದ್ದಾರೆ. ಆಮ್ಲಜನಕ ಕೊರತೆಯಿಂದ ಸಾವು ಸಂಭವಿಸುತ್ತಿವೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಮೂಗಿಗೆ ನಿಂಬೆರಸ ಹಾಕಿಕೊಂಡರೆ ಆಮ್ಲಜನಕ ಮಟ್ಟ ಹೆಚ್ಚುತ್ತದೆ ಎಂಬ ಅವೈಜ್ಞಾನಿಕ ಸಲಹೆ ನೀಡಿದ್ದು ಸಮಾಜದಲ್ಲಿ ಅವಘಡಗಳಿಗೆ ಕಾರಣವಾಗುತ್ತಿದೆ. ಶಿಕ್ಷಕರ ಸಾವು ಇದಕ್ಕೆ ಒಂದು ಉದಾಹರಣೆ’ ಎಂದರು.

ಕಳೆದ ವಾರ, ವಿಜಯ್ ಸಂಕೇಶ್ವರ್ ಅವರು ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸವೇ ಪರ್ಯಾಯ ಎಂದು ಹೇಳಿದ್ದರಲ್ಲದೇ, ತಾವು ದಿನವೂ ಈ ಪ್ರಯೋಗ ಮಾಡುತ್ತಿರುವುದಾಗಿ ಮತ್ತು ಸುಮಾರು 200 ಜನ ಪರಿಚಿತರು ಕೂಡ ಈ ಪ್ರಯೋಗ ಮಾಡುತ್ತಿದ್ದಾರೆ. ಇದರಿಂದ ಆಮ್ಲಜನಕ ಮಟ್ಟ ವೃದ್ಧಿಯಾಗುತ್ತದೆ’ ಎಂದು ಹೇಳಿದ್ದರು.

ಇದಕ್ಕೆ ಜೀವ ರಸಾಯನ ವಿಜ್ಞಾನಿ ಪ್ರೊ. ನರೇಂದ್ರ ನಾಯಕ್, ಆಹಾರ ತಜ್ಞ ಕೆ.ಸಿ ರಘು ಸೇರಿ ಹಲವಾರು ತಜ್ಞರು ಮತ್ತು ವೈಜ್ಞಾನಿಕ ಮನೋಭಾವನೆಯ ಸಾವಿರಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಮೂರು ದಿನದ ಹಿಂದೆ ಸಿಂಧನೂರುನಲ್ಲಿ ಸರ್ಕಾರಿ ಶಾಲೆ ಶಿಕ್ಷಕ ಬಸವರಾಜ್, ಮೂಗಿಗೆ ನಿಂಬೆರಸ ಹಾಕಿಕೊಂಡ ನಂತರ ವಿಪರೀತ ವಾಂತಿ ಸಂಭವಿಸಿ ನಿಧನರಾದರು ಎಂದು ಕುಟುಂಬಸ್ಥರು ಮತ್ತು ಸಹೋದ್ಯೋಗಿಗಳು ಅಪಾದಿಸಿದ್ದರು. ಅವರಿಗೆ ಬೇರೆ ಯಾವುದೇ ಕಾಯಿಲೆ ಇಲ್ಲ ಎಂದು ಅವರು ಹೇಳಿದ್ದರು. ಇದು ರಾಜ್ಯಾದ್ಯಂತ ಸಂಕೇಶ್ವರ್ ವಿರುದ್ಧ ಆಕ್ರೋಶ ಮೂಡಿಸಿತ್ತು.

ಸಂಕೇಶ್ವರ ವಿರುದ್ಧ ದೂರು ನೀಡಿದ ಭೀಮನಗೌಡ ಪರಗೊಂಡ

‘ಮಾಧ್ಯಮ ಕೈಯಲ್ಲಿ ಇರುವುದರಿಂದ ಸಂಕೇಶ್ವರ್ ಅವರು, ಇದು ಹೃದಯಾಘಾತದ ಸಾವು ಎಂದು ಯಾವ ಆಧಾರವಿಲ್ಲದೇ ಬರೆಸಿದರು. ಬಹುಪಾಲು ಮಾಧ್ಯಮಗಳು ಶಿಕ್ಷಕನ ಸಾವಿನ ಸುದ್ದಿ ಮಾಡಿದವೇ ಹೊರತು, ಸಂಕೇಶ್ವರ್ ಸಲಹೆ ಅಪಾಯಕಾರಿ ಎಂಬ ಸ್ಪಷ್ಟ ಸಂದೇಶ ನೀಡಲು ಯತ್ನಿಸಲಿಲ್ಲ. ಹೀಗಾಗಿ ನಾನು ದೂರು ನೀಡಬೇಕಾಯಿತು’ ಎಂದು ಪರಗೊಂಡ ನಾನುಗೌರಿ.ಕಾಂ ಗೆ ತಿಳಿಸಿದರು.

‘ಸಂಕೇಶ್ವರ್ ಅಷ್ಟೇ ಅಲ್ಲ, ಅವರ ಅವೈಜ್ಞಾನಿಕ ಸಲಹೆಯನ್ನು ಬೆಂಬಲಿಸಿದ ಎಲ್ಲರಿಗೂ, ಮುಖ್ಯವಾಗಿ ಜನಪ್ರತಿನಿಧಿಗಳು, ಪತ್ರಕರ್ತರ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದೇನೆ’ ಎಂದು ವಕೀಲ ಪರಗೊಂಡ ತಿಳಿಸಿದರು.

‘ದೂರಿನಲ್ಲಿ ಸಂಕೇಶ್ವರ್ ಬಿಟ್ಟು ಬೇರೆ ಹೆಸರು ಉಲ್ಲೇಖಿಸಿಲ್ಲ. ಆದರೆ ಪತ್ರಕರ್ತ ವಿಶ್ವೇಶ್ವರ ಭಟ್ಟ, ಸಂಸದ ಪ್ರತಾಪ ಸಿಂಹ ಮತ್ತು ಕೋಲಾರದ ಬಿಜೆಪಿ ಜನಪ್ರತಿನಿಧಿ ಮುನಿಸ್ವಾಮಿ ಮುಂತಾದವರು ಸಂಕೇಶ್ವರ್ ಅವರ ಅಪಾಯಕಾರಿ ಸಲಹೆಯನ್ನು ಬೆಂಬಲಿಸುವ ಮೂಲಕ ಜನರಲ್ಲಿ ತಪ್ಪು ತಿಳುವಳಿಕೆ ಮೂಡಿಸಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿರುವ ಇವರ ಮೇಲೂ ಪ್ರಕರಣ ದಾಖಲಾಗಬೇಕು’ ಎಂದು ಪರಗೊಂಡ ಅಭಿಪ್ರಾಯ ಪಟ್ಟರು.

2003ರಿಂದ ಎಐಎಸ್‌ಎಫ್ ಸಂಘಟನೆಯಲ್ಲಿ ಹಲವಾರು ಹುದ್ದೆಗಳಲ್ಲಿ ಹೋರಾಟ ಮಾಡಿರುವ ಪರಗೊಂಡ ಅವರು, ಬೆಳಗಾವಿ, ಕಲಬುರ್ಗಿ ಮತ್ತು ರಾಯಚೂರುಗಳಲ್ಲಿ ನಡೆದ ಅನೇಕ ಜನಪರ ಚಳುವಳಿಗಳ ನೇತೃತ್ವ ವಹಿಸಿದ್ದಾರೆ.

ಮುಖ್ಯ ಕಾರ್ಯದರ್ಶಿ ಪರಗೊಂಡರ ದೂರಿಗೆ ಪ್ರತಿಕ್ರಿಯಿಸುವರೇ? ಈ ಬಿಜೆಪಿ ಆಡಳಿತದಲ್ಲಿ ಅದೆಲ್ಲ ಸಾಧ್ಯವೇ ಎಂಬುದನ್ನು ಕಾದು ನೋಡಬೇಕಿದೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ; ಮೂಗಿನಲ್ಲಿ ನಿಂಬೆರಸ ಶಿಕ್ಷಕನ ಬಲಿ ಪಡೆಯಿತೇ? ಸಂಕೇಶ್ವರ ಸಲಹೆ ಆಕ್ಷೇಪಿಸಿದ ಡಾ, ನರೇಂದ್ರ ನಾಯಕ್‌ರಿಗೆ ಫೇಸ್‌ಬುಕ್ ನಿರ್ಬಂಧವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...