Homeಕರೋನಾ ತಲ್ಲಣನಿಂಬೆರಸ, ಶಿಕ್ಷಕನ ಸಾವು: ಸಂಕೇಶ್ವರ್ ವಿರುದ್ಧ ಕೇಸು ದಾಖಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ದೂರು

ನಿಂಬೆರಸ, ಶಿಕ್ಷಕನ ಸಾವು: ಸಂಕೇಶ್ವರ್ ವಿರುದ್ಧ ಕೇಸು ದಾಖಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ದೂರು

- Advertisement -
- Advertisement -

‘ಮಾಜಿ ಸಂಸದರಾಗಿರುವ, ವಿಆರ್‌ಎಲ್ ಕಂಪನಿ ಮುಖ್ಯಸ್ಥರಾಗಿರುವ, ಸಾರ್ವಜನಿಕ ಜೀವನದಲ್ಲಿರುವ ವಿಜಯ ಸಂಕೇಶ್ವರ್ ಸುದ್ದಿಗೋಷ್ಠಿ ಕರೆದು ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ ಅವೈಜ್ಞಾನಿಕ ಸಲಹೆ ನೀಡಿದ್ದಾರೆ. ಇದು ಒಬ್ಬ ಶಿಕ್ಷಕರ ಸಾವಿಗೆ ಕಾರಣವಾಗಿದೆ. ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಕೆಯಾಗಿದೆ.

ಬೆಳಗಾವಿ ಜಿಲ್ಲೆ ಅಥಣಿಯ ಯುವ ವಕೀಲ, ಆರ್‌ಟಿಐ ಕಾರ್ಯಕರ್ತ ಮತ್ತು ಮಾನವ ಹಕ್ಕು ಹೋರಾಟಗಾರ ಭೀಮನಗೌಡ ಪರಗೊಂಡ ಅವರು ಏಪ್ರಿಲ್ 30ರಂದು ಹೀಗೊಂದು ದೂರು ಸಲ್ಲಿಸಿ, ‘ವಿಜಯ ಸಂಕೇಶ್ವರ್ ವಿರುದ್ಧ ಸು-ಮೊಟೊ ಆಧಾರದಲ್ಲಿ ಸರ್ಕಾರ ಪ್ರಕರಣ ದಾಖಲಿಸಬೇಕು. ಸಿಂಧನೂರಿನ ಶಿಕ್ಷಕ ಬಸವರಾಜ್ ಅವರ ಸಾವಿಗೆ ಸಂಕೇಶ್ವರ್ ಸಲಹೆಯೇ ಕಾರಣ. ಐಪಿಸಿ ಸೆಕ್ಷನ್ 306 ಮತ್ತು ಸಾಂಕ್ರಾಮಿಕ ತಡೆ ಆಕ್ಟ್ ಪ್ರಕಾರ ಕೇಸು ದಾಖಲಿಸಬೇಕು’ ಎಂದು ಆಗ್ರಹಿಸಿದ್ದಾರೆ,

ಸಂಕೇಶ್ವರ್ ಧಾರವಾಡ ಜಿಲ್ಲೆ ನಿವಾಸಿಯಾಗಿರುವುದರಿಂದ (ಗದಗ ಮೂಲದವರು) ಧಾರವಾಡ ಡಿಸಿ, ಶಿಕ್ಷಕನ ಸಾವು ಸಂಭವಿಸಿದ ರಾಯಚೂರು ಜಿಲ್ಲೆಯ ಡಿಸಿ ಮತ್ತು ಸಿಂಧನೂರು ತಾಲೂಕು ತಹಸೀಲ್ದಾರ್ ಅವರಿಗೂ ಈ ದೂರಿನ ಪ್ರತಿ ಕಳಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ದೂರುದಾರ ವಕೀಲ ಭೀಮನಗೌಡ ಪರಗೊಂಡ, ‘ಸಾರ್ವಜನಿಕ ಜೀವನದಲ್ಲಿರುವ, ಒಂದು ಪತ್ರಿಕೆ ಮತ್ತು ಒಂದು ಟಿವಿ ಚಾನೆಲ್ ಹೊಂದಿರುವ ವ್ಯಕ್ತಿ, ಅದೂ ಸಾಂಕ್ರಾಮಿಕದ ಸಂದರ್ಭದಲ್ಲಿ ಅವೈಜ್ಞಾನಿಕ ಸಲಹೆಯನ್ನು ಸಾರ್ವಜನಿಕವಾಗಿ ನೀಡಿದ್ದು ಘೋರ ಅಪರಾಧ. ಕೋವಿಡ್ ಕಾರಣಕ್ಕೆ ಜನ ಆತಂಕದಲ್ಲಿದ್ದಾರೆ. ಆಮ್ಲಜನಕ ಕೊರತೆಯಿಂದ ಸಾವು ಸಂಭವಿಸುತ್ತಿವೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಮೂಗಿಗೆ ನಿಂಬೆರಸ ಹಾಕಿಕೊಂಡರೆ ಆಮ್ಲಜನಕ ಮಟ್ಟ ಹೆಚ್ಚುತ್ತದೆ ಎಂಬ ಅವೈಜ್ಞಾನಿಕ ಸಲಹೆ ನೀಡಿದ್ದು ಸಮಾಜದಲ್ಲಿ ಅವಘಡಗಳಿಗೆ ಕಾರಣವಾಗುತ್ತಿದೆ. ಶಿಕ್ಷಕರ ಸಾವು ಇದಕ್ಕೆ ಒಂದು ಉದಾಹರಣೆ’ ಎಂದರು.

ಕಳೆದ ವಾರ, ವಿಜಯ್ ಸಂಕೇಶ್ವರ್ ಅವರು ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸವೇ ಪರ್ಯಾಯ ಎಂದು ಹೇಳಿದ್ದರಲ್ಲದೇ, ತಾವು ದಿನವೂ ಈ ಪ್ರಯೋಗ ಮಾಡುತ್ತಿರುವುದಾಗಿ ಮತ್ತು ಸುಮಾರು 200 ಜನ ಪರಿಚಿತರು ಕೂಡ ಈ ಪ್ರಯೋಗ ಮಾಡುತ್ತಿದ್ದಾರೆ. ಇದರಿಂದ ಆಮ್ಲಜನಕ ಮಟ್ಟ ವೃದ್ಧಿಯಾಗುತ್ತದೆ’ ಎಂದು ಹೇಳಿದ್ದರು.

ಇದಕ್ಕೆ ಜೀವ ರಸಾಯನ ವಿಜ್ಞಾನಿ ಪ್ರೊ. ನರೇಂದ್ರ ನಾಯಕ್, ಆಹಾರ ತಜ್ಞ ಕೆ.ಸಿ ರಘು ಸೇರಿ ಹಲವಾರು ತಜ್ಞರು ಮತ್ತು ವೈಜ್ಞಾನಿಕ ಮನೋಭಾವನೆಯ ಸಾವಿರಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಮೂರು ದಿನದ ಹಿಂದೆ ಸಿಂಧನೂರುನಲ್ಲಿ ಸರ್ಕಾರಿ ಶಾಲೆ ಶಿಕ್ಷಕ ಬಸವರಾಜ್, ಮೂಗಿಗೆ ನಿಂಬೆರಸ ಹಾಕಿಕೊಂಡ ನಂತರ ವಿಪರೀತ ವಾಂತಿ ಸಂಭವಿಸಿ ನಿಧನರಾದರು ಎಂದು ಕುಟುಂಬಸ್ಥರು ಮತ್ತು ಸಹೋದ್ಯೋಗಿಗಳು ಅಪಾದಿಸಿದ್ದರು. ಅವರಿಗೆ ಬೇರೆ ಯಾವುದೇ ಕಾಯಿಲೆ ಇಲ್ಲ ಎಂದು ಅವರು ಹೇಳಿದ್ದರು. ಇದು ರಾಜ್ಯಾದ್ಯಂತ ಸಂಕೇಶ್ವರ್ ವಿರುದ್ಧ ಆಕ್ರೋಶ ಮೂಡಿಸಿತ್ತು.

ಸಂಕೇಶ್ವರ ವಿರುದ್ಧ ದೂರು ನೀಡಿದ ಭೀಮನಗೌಡ ಪರಗೊಂಡ

‘ಮಾಧ್ಯಮ ಕೈಯಲ್ಲಿ ಇರುವುದರಿಂದ ಸಂಕೇಶ್ವರ್ ಅವರು, ಇದು ಹೃದಯಾಘಾತದ ಸಾವು ಎಂದು ಯಾವ ಆಧಾರವಿಲ್ಲದೇ ಬರೆಸಿದರು. ಬಹುಪಾಲು ಮಾಧ್ಯಮಗಳು ಶಿಕ್ಷಕನ ಸಾವಿನ ಸುದ್ದಿ ಮಾಡಿದವೇ ಹೊರತು, ಸಂಕೇಶ್ವರ್ ಸಲಹೆ ಅಪಾಯಕಾರಿ ಎಂಬ ಸ್ಪಷ್ಟ ಸಂದೇಶ ನೀಡಲು ಯತ್ನಿಸಲಿಲ್ಲ. ಹೀಗಾಗಿ ನಾನು ದೂರು ನೀಡಬೇಕಾಯಿತು’ ಎಂದು ಪರಗೊಂಡ ನಾನುಗೌರಿ.ಕಾಂ ಗೆ ತಿಳಿಸಿದರು.

‘ಸಂಕೇಶ್ವರ್ ಅಷ್ಟೇ ಅಲ್ಲ, ಅವರ ಅವೈಜ್ಞಾನಿಕ ಸಲಹೆಯನ್ನು ಬೆಂಬಲಿಸಿದ ಎಲ್ಲರಿಗೂ, ಮುಖ್ಯವಾಗಿ ಜನಪ್ರತಿನಿಧಿಗಳು, ಪತ್ರಕರ್ತರ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದೇನೆ’ ಎಂದು ವಕೀಲ ಪರಗೊಂಡ ತಿಳಿಸಿದರು.

‘ದೂರಿನಲ್ಲಿ ಸಂಕೇಶ್ವರ್ ಬಿಟ್ಟು ಬೇರೆ ಹೆಸರು ಉಲ್ಲೇಖಿಸಿಲ್ಲ. ಆದರೆ ಪತ್ರಕರ್ತ ವಿಶ್ವೇಶ್ವರ ಭಟ್ಟ, ಸಂಸದ ಪ್ರತಾಪ ಸಿಂಹ ಮತ್ತು ಕೋಲಾರದ ಬಿಜೆಪಿ ಜನಪ್ರತಿನಿಧಿ ಮುನಿಸ್ವಾಮಿ ಮುಂತಾದವರು ಸಂಕೇಶ್ವರ್ ಅವರ ಅಪಾಯಕಾರಿ ಸಲಹೆಯನ್ನು ಬೆಂಬಲಿಸುವ ಮೂಲಕ ಜನರಲ್ಲಿ ತಪ್ಪು ತಿಳುವಳಿಕೆ ಮೂಡಿಸಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿರುವ ಇವರ ಮೇಲೂ ಪ್ರಕರಣ ದಾಖಲಾಗಬೇಕು’ ಎಂದು ಪರಗೊಂಡ ಅಭಿಪ್ರಾಯ ಪಟ್ಟರು.

2003ರಿಂದ ಎಐಎಸ್‌ಎಫ್ ಸಂಘಟನೆಯಲ್ಲಿ ಹಲವಾರು ಹುದ್ದೆಗಳಲ್ಲಿ ಹೋರಾಟ ಮಾಡಿರುವ ಪರಗೊಂಡ ಅವರು, ಬೆಳಗಾವಿ, ಕಲಬುರ್ಗಿ ಮತ್ತು ರಾಯಚೂರುಗಳಲ್ಲಿ ನಡೆದ ಅನೇಕ ಜನಪರ ಚಳುವಳಿಗಳ ನೇತೃತ್ವ ವಹಿಸಿದ್ದಾರೆ.

ಮುಖ್ಯ ಕಾರ್ಯದರ್ಶಿ ಪರಗೊಂಡರ ದೂರಿಗೆ ಪ್ರತಿಕ್ರಿಯಿಸುವರೇ? ಈ ಬಿಜೆಪಿ ಆಡಳಿತದಲ್ಲಿ ಅದೆಲ್ಲ ಸಾಧ್ಯವೇ ಎಂಬುದನ್ನು ಕಾದು ನೋಡಬೇಕಿದೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ; ಮೂಗಿನಲ್ಲಿ ನಿಂಬೆರಸ ಶಿಕ್ಷಕನ ಬಲಿ ಪಡೆಯಿತೇ? ಸಂಕೇಶ್ವರ ಸಲಹೆ ಆಕ್ಷೇಪಿಸಿದ ಡಾ, ನರೇಂದ್ರ ನಾಯಕ್‌ರಿಗೆ ಫೇಸ್‌ಬುಕ್ ನಿರ್ಬಂಧವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ ಎಸ್‌ಐಆರ್ : ಬಿಎಲ್‌ಒ ಸೇರಿದಂತೆ ಒಂದೇ ಬೂತ್‌ನ 340 ಮುಸ್ಲಿಂ ಮತದಾರರ ಹೆಸರು ಡಿಲೀಟ್!

ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಬಳಿಕ ಪ್ರಕಟಗೊಂಡ ಮತದಾರರ ಪೂರಕ ಪಟ್ಟಿಯಲ್ಲಿ, ಒಂದೇ ಬೂತ್‌ನ 340 ಜನರ ಹೆಸರುಗಳನ್ನು ತೆಗೆದು ಹಾಕಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬಸಿರ್ಹತ್ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಈ ಬೆಳವಣಿಗೆ...

ಹಾರ್ಮುಜ್ ಮಾರ್ಗದ ಅನುಮತಿ: ಭಾರತ ನಮ್ಮ ‘ಸ್ನೇಹಪರ ರಾಷ್ಟ್ರ’ಗಳ ಸಾಲಿನಲ್ಲಿ ಸೇರಿದೆ: ಇರಾನ್ ವಿದೇಶಾಂಗ ಸಚಿವ 

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಇತರರಿಗೆ ನಿರ್ಬಂಧಗಳು ಮುಂದುವರಿದಿದ್ದರೂ, ಭಾರತ ಸೇರಿದಂತೆ ಆಯ್ದ "ಸ್ನೇಹಪರ ರಾಷ್ಟ್ರಗಳ" ಹಡಗುಗಳಿಗೆ ಆಯಕಟ್ಟಿನ ನಿರ್ಣಾಯಕ ಹಾರ್ಮುಜ್ ಜಲಸಂಧಿಯ ಮೂಲಕ ಸಾಗಲು ಅನುಮತಿ ನೀಡುತ್ತಿರುವುದಾಗಿ ಇರಾನ್ ಹೇಳಿದೆ. ಚೀನಾ, ರಷ್ಯಾ,...

ʼಜಾತಿ ಗೋಡೆʼ ವಿರುದ್ಧ ಕ್ರಮ ಕೈಗೊಳ್ಳದ ಆಡಳಿತ : ಚುನಾವಣೆ ಬಹಿಷ್ಕರಿಸಿದ ತಮಿಳುನಾಡಿನ ಶಂಕರಲಿಂಗಪುರಂನ ದಲಿತರು

ಗೋಡೆ ನಿರ್ಮಿಸಿ ಚರ್ಚ್‌ಗೆ ಹೋಗುವ ದಾರಿಯನ್ನು ತಡೆದಿರುವ ಭೂ ವಿವಾದದ ಬಗ್ಗೆ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ತಮಿಳುನಾಡಿನ ಶಂಕರಲಿಂಗಪುರಂ ಗ್ರಾಮದ ಪರಿಶಿಷ್ಟ ಜಾತಿಯ ನಿವಾಸಿಗಳು, ಮುಂಬರುವ ವಿಧಾನಸಭಾ ಚುನಾವಣೆಯನ್ನು...

ಬಂಗಾಳ ಚುನಾವಣೆ : ಆರ್‌ಜಿ ಕರ್ ಸಂತ್ರಸ್ತೆಯ ತಾಯಿಯನ್ನು ಕಣಕ್ಕಿಳಿಸಿದ ಬಿಜೆಪಿ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೋಲ್ಕತ್ತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ, ಕೊಲೆ ಪ್ರಕರಣದ ಸಂತ್ರಸ್ತೆಯ ತಾಯಿಯನ್ನು ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ. ಬುಧವಾರ (ಮಾ.25) ಬಿಜೆಪಿ...

ಆಂಧ್ರ ಪ್ರದೇಶ | ಟಿಪ್ಪರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್ : 14 ಮಂದಿ ಸಜೀವ ದಹನ

ಖಾಸಗಿ ಬಸ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೆಂಕಿ ಹೊತ್ತಿಕೊಂಡ ಪರಿಣಾಮ 14 ಜನರು ಸಜೀವ ದಹನವಾದ ಘಟನೆ ಆಂಧ್ರ ಪ್ರದೇಶದ ಮಾರ್ಕಪುರಂ ಜಿಲ್ಲೆಯಲ್ಲಿ ಗುರುವಾರ (ಮಾ.26) ಸಂಭವಿಸಿದೆ ಎಂದು...

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...