Homeಕರೋನಾ ತಲ್ಲಣನಿಂಬೆರಸ, ಶಿಕ್ಷಕನ ಸಾವು: ಸಂಕೇಶ್ವರ್ ವಿರುದ್ಧ ಕೇಸು ದಾಖಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ದೂರು

ನಿಂಬೆರಸ, ಶಿಕ್ಷಕನ ಸಾವು: ಸಂಕೇಶ್ವರ್ ವಿರುದ್ಧ ಕೇಸು ದಾಖಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ದೂರು

- Advertisement -
- Advertisement -

‘ಮಾಜಿ ಸಂಸದರಾಗಿರುವ, ವಿಆರ್‌ಎಲ್ ಕಂಪನಿ ಮುಖ್ಯಸ್ಥರಾಗಿರುವ, ಸಾರ್ವಜನಿಕ ಜೀವನದಲ್ಲಿರುವ ವಿಜಯ ಸಂಕೇಶ್ವರ್ ಸುದ್ದಿಗೋಷ್ಠಿ ಕರೆದು ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ ಅವೈಜ್ಞಾನಿಕ ಸಲಹೆ ನೀಡಿದ್ದಾರೆ. ಇದು ಒಬ್ಬ ಶಿಕ್ಷಕರ ಸಾವಿಗೆ ಕಾರಣವಾಗಿದೆ. ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಕೆಯಾಗಿದೆ.

ಬೆಳಗಾವಿ ಜಿಲ್ಲೆ ಅಥಣಿಯ ಯುವ ವಕೀಲ, ಆರ್‌ಟಿಐ ಕಾರ್ಯಕರ್ತ ಮತ್ತು ಮಾನವ ಹಕ್ಕು ಹೋರಾಟಗಾರ ಭೀಮನಗೌಡ ಪರಗೊಂಡ ಅವರು ಏಪ್ರಿಲ್ 30ರಂದು ಹೀಗೊಂದು ದೂರು ಸಲ್ಲಿಸಿ, ‘ವಿಜಯ ಸಂಕೇಶ್ವರ್ ವಿರುದ್ಧ ಸು-ಮೊಟೊ ಆಧಾರದಲ್ಲಿ ಸರ್ಕಾರ ಪ್ರಕರಣ ದಾಖಲಿಸಬೇಕು. ಸಿಂಧನೂರಿನ ಶಿಕ್ಷಕ ಬಸವರಾಜ್ ಅವರ ಸಾವಿಗೆ ಸಂಕೇಶ್ವರ್ ಸಲಹೆಯೇ ಕಾರಣ. ಐಪಿಸಿ ಸೆಕ್ಷನ್ 306 ಮತ್ತು ಸಾಂಕ್ರಾಮಿಕ ತಡೆ ಆಕ್ಟ್ ಪ್ರಕಾರ ಕೇಸು ದಾಖಲಿಸಬೇಕು’ ಎಂದು ಆಗ್ರಹಿಸಿದ್ದಾರೆ,

ಸಂಕೇಶ್ವರ್ ಧಾರವಾಡ ಜಿಲ್ಲೆ ನಿವಾಸಿಯಾಗಿರುವುದರಿಂದ (ಗದಗ ಮೂಲದವರು) ಧಾರವಾಡ ಡಿಸಿ, ಶಿಕ್ಷಕನ ಸಾವು ಸಂಭವಿಸಿದ ರಾಯಚೂರು ಜಿಲ್ಲೆಯ ಡಿಸಿ ಮತ್ತು ಸಿಂಧನೂರು ತಾಲೂಕು ತಹಸೀಲ್ದಾರ್ ಅವರಿಗೂ ಈ ದೂರಿನ ಪ್ರತಿ ಕಳಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ದೂರುದಾರ ವಕೀಲ ಭೀಮನಗೌಡ ಪರಗೊಂಡ, ‘ಸಾರ್ವಜನಿಕ ಜೀವನದಲ್ಲಿರುವ, ಒಂದು ಪತ್ರಿಕೆ ಮತ್ತು ಒಂದು ಟಿವಿ ಚಾನೆಲ್ ಹೊಂದಿರುವ ವ್ಯಕ್ತಿ, ಅದೂ ಸಾಂಕ್ರಾಮಿಕದ ಸಂದರ್ಭದಲ್ಲಿ ಅವೈಜ್ಞಾನಿಕ ಸಲಹೆಯನ್ನು ಸಾರ್ವಜನಿಕವಾಗಿ ನೀಡಿದ್ದು ಘೋರ ಅಪರಾಧ. ಕೋವಿಡ್ ಕಾರಣಕ್ಕೆ ಜನ ಆತಂಕದಲ್ಲಿದ್ದಾರೆ. ಆಮ್ಲಜನಕ ಕೊರತೆಯಿಂದ ಸಾವು ಸಂಭವಿಸುತ್ತಿವೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಮೂಗಿಗೆ ನಿಂಬೆರಸ ಹಾಕಿಕೊಂಡರೆ ಆಮ್ಲಜನಕ ಮಟ್ಟ ಹೆಚ್ಚುತ್ತದೆ ಎಂಬ ಅವೈಜ್ಞಾನಿಕ ಸಲಹೆ ನೀಡಿದ್ದು ಸಮಾಜದಲ್ಲಿ ಅವಘಡಗಳಿಗೆ ಕಾರಣವಾಗುತ್ತಿದೆ. ಶಿಕ್ಷಕರ ಸಾವು ಇದಕ್ಕೆ ಒಂದು ಉದಾಹರಣೆ’ ಎಂದರು.

ಕಳೆದ ವಾರ, ವಿಜಯ್ ಸಂಕೇಶ್ವರ್ ಅವರು ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸವೇ ಪರ್ಯಾಯ ಎಂದು ಹೇಳಿದ್ದರಲ್ಲದೇ, ತಾವು ದಿನವೂ ಈ ಪ್ರಯೋಗ ಮಾಡುತ್ತಿರುವುದಾಗಿ ಮತ್ತು ಸುಮಾರು 200 ಜನ ಪರಿಚಿತರು ಕೂಡ ಈ ಪ್ರಯೋಗ ಮಾಡುತ್ತಿದ್ದಾರೆ. ಇದರಿಂದ ಆಮ್ಲಜನಕ ಮಟ್ಟ ವೃದ್ಧಿಯಾಗುತ್ತದೆ’ ಎಂದು ಹೇಳಿದ್ದರು.

ಇದಕ್ಕೆ ಜೀವ ರಸಾಯನ ವಿಜ್ಞಾನಿ ಪ್ರೊ. ನರೇಂದ್ರ ನಾಯಕ್, ಆಹಾರ ತಜ್ಞ ಕೆ.ಸಿ ರಘು ಸೇರಿ ಹಲವಾರು ತಜ್ಞರು ಮತ್ತು ವೈಜ್ಞಾನಿಕ ಮನೋಭಾವನೆಯ ಸಾವಿರಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಮೂರು ದಿನದ ಹಿಂದೆ ಸಿಂಧನೂರುನಲ್ಲಿ ಸರ್ಕಾರಿ ಶಾಲೆ ಶಿಕ್ಷಕ ಬಸವರಾಜ್, ಮೂಗಿಗೆ ನಿಂಬೆರಸ ಹಾಕಿಕೊಂಡ ನಂತರ ವಿಪರೀತ ವಾಂತಿ ಸಂಭವಿಸಿ ನಿಧನರಾದರು ಎಂದು ಕುಟುಂಬಸ್ಥರು ಮತ್ತು ಸಹೋದ್ಯೋಗಿಗಳು ಅಪಾದಿಸಿದ್ದರು. ಅವರಿಗೆ ಬೇರೆ ಯಾವುದೇ ಕಾಯಿಲೆ ಇಲ್ಲ ಎಂದು ಅವರು ಹೇಳಿದ್ದರು. ಇದು ರಾಜ್ಯಾದ್ಯಂತ ಸಂಕೇಶ್ವರ್ ವಿರುದ್ಧ ಆಕ್ರೋಶ ಮೂಡಿಸಿತ್ತು.

ಸಂಕೇಶ್ವರ ವಿರುದ್ಧ ದೂರು ನೀಡಿದ ಭೀಮನಗೌಡ ಪರಗೊಂಡ

‘ಮಾಧ್ಯಮ ಕೈಯಲ್ಲಿ ಇರುವುದರಿಂದ ಸಂಕೇಶ್ವರ್ ಅವರು, ಇದು ಹೃದಯಾಘಾತದ ಸಾವು ಎಂದು ಯಾವ ಆಧಾರವಿಲ್ಲದೇ ಬರೆಸಿದರು. ಬಹುಪಾಲು ಮಾಧ್ಯಮಗಳು ಶಿಕ್ಷಕನ ಸಾವಿನ ಸುದ್ದಿ ಮಾಡಿದವೇ ಹೊರತು, ಸಂಕೇಶ್ವರ್ ಸಲಹೆ ಅಪಾಯಕಾರಿ ಎಂಬ ಸ್ಪಷ್ಟ ಸಂದೇಶ ನೀಡಲು ಯತ್ನಿಸಲಿಲ್ಲ. ಹೀಗಾಗಿ ನಾನು ದೂರು ನೀಡಬೇಕಾಯಿತು’ ಎಂದು ಪರಗೊಂಡ ನಾನುಗೌರಿ.ಕಾಂ ಗೆ ತಿಳಿಸಿದರು.

‘ಸಂಕೇಶ್ವರ್ ಅಷ್ಟೇ ಅಲ್ಲ, ಅವರ ಅವೈಜ್ಞಾನಿಕ ಸಲಹೆಯನ್ನು ಬೆಂಬಲಿಸಿದ ಎಲ್ಲರಿಗೂ, ಮುಖ್ಯವಾಗಿ ಜನಪ್ರತಿನಿಧಿಗಳು, ಪತ್ರಕರ್ತರ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದೇನೆ’ ಎಂದು ವಕೀಲ ಪರಗೊಂಡ ತಿಳಿಸಿದರು.

‘ದೂರಿನಲ್ಲಿ ಸಂಕೇಶ್ವರ್ ಬಿಟ್ಟು ಬೇರೆ ಹೆಸರು ಉಲ್ಲೇಖಿಸಿಲ್ಲ. ಆದರೆ ಪತ್ರಕರ್ತ ವಿಶ್ವೇಶ್ವರ ಭಟ್ಟ, ಸಂಸದ ಪ್ರತಾಪ ಸಿಂಹ ಮತ್ತು ಕೋಲಾರದ ಬಿಜೆಪಿ ಜನಪ್ರತಿನಿಧಿ ಮುನಿಸ್ವಾಮಿ ಮುಂತಾದವರು ಸಂಕೇಶ್ವರ್ ಅವರ ಅಪಾಯಕಾರಿ ಸಲಹೆಯನ್ನು ಬೆಂಬಲಿಸುವ ಮೂಲಕ ಜನರಲ್ಲಿ ತಪ್ಪು ತಿಳುವಳಿಕೆ ಮೂಡಿಸಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿರುವ ಇವರ ಮೇಲೂ ಪ್ರಕರಣ ದಾಖಲಾಗಬೇಕು’ ಎಂದು ಪರಗೊಂಡ ಅಭಿಪ್ರಾಯ ಪಟ್ಟರು.

2003ರಿಂದ ಎಐಎಸ್‌ಎಫ್ ಸಂಘಟನೆಯಲ್ಲಿ ಹಲವಾರು ಹುದ್ದೆಗಳಲ್ಲಿ ಹೋರಾಟ ಮಾಡಿರುವ ಪರಗೊಂಡ ಅವರು, ಬೆಳಗಾವಿ, ಕಲಬುರ್ಗಿ ಮತ್ತು ರಾಯಚೂರುಗಳಲ್ಲಿ ನಡೆದ ಅನೇಕ ಜನಪರ ಚಳುವಳಿಗಳ ನೇತೃತ್ವ ವಹಿಸಿದ್ದಾರೆ.

ಮುಖ್ಯ ಕಾರ್ಯದರ್ಶಿ ಪರಗೊಂಡರ ದೂರಿಗೆ ಪ್ರತಿಕ್ರಿಯಿಸುವರೇ? ಈ ಬಿಜೆಪಿ ಆಡಳಿತದಲ್ಲಿ ಅದೆಲ್ಲ ಸಾಧ್ಯವೇ ಎಂಬುದನ್ನು ಕಾದು ನೋಡಬೇಕಿದೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ; ಮೂಗಿನಲ್ಲಿ ನಿಂಬೆರಸ ಶಿಕ್ಷಕನ ಬಲಿ ಪಡೆಯಿತೇ? ಸಂಕೇಶ್ವರ ಸಲಹೆ ಆಕ್ಷೇಪಿಸಿದ ಡಾ, ನರೇಂದ್ರ ನಾಯಕ್‌ರಿಗೆ ಫೇಸ್‌ಬುಕ್ ನಿರ್ಬಂಧವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...