Homeಕರೋನಾ ತಲ್ಲಣನಿಂಬೆರಸ, ಶಿಕ್ಷಕನ ಸಾವು: ಸಂಕೇಶ್ವರ್ ವಿರುದ್ಧ ಕೇಸು ದಾಖಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ದೂರು

ನಿಂಬೆರಸ, ಶಿಕ್ಷಕನ ಸಾವು: ಸಂಕೇಶ್ವರ್ ವಿರುದ್ಧ ಕೇಸು ದಾಖಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ದೂರು

- Advertisement -
- Advertisement -

‘ಮಾಜಿ ಸಂಸದರಾಗಿರುವ, ವಿಆರ್‌ಎಲ್ ಕಂಪನಿ ಮುಖ್ಯಸ್ಥರಾಗಿರುವ, ಸಾರ್ವಜನಿಕ ಜೀವನದಲ್ಲಿರುವ ವಿಜಯ ಸಂಕೇಶ್ವರ್ ಸುದ್ದಿಗೋಷ್ಠಿ ಕರೆದು ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ ಅವೈಜ್ಞಾನಿಕ ಸಲಹೆ ನೀಡಿದ್ದಾರೆ. ಇದು ಒಬ್ಬ ಶಿಕ್ಷಕರ ಸಾವಿಗೆ ಕಾರಣವಾಗಿದೆ. ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಕೆಯಾಗಿದೆ.

ಬೆಳಗಾವಿ ಜಿಲ್ಲೆ ಅಥಣಿಯ ಯುವ ವಕೀಲ, ಆರ್‌ಟಿಐ ಕಾರ್ಯಕರ್ತ ಮತ್ತು ಮಾನವ ಹಕ್ಕು ಹೋರಾಟಗಾರ ಭೀಮನಗೌಡ ಪರಗೊಂಡ ಅವರು ಏಪ್ರಿಲ್ 30ರಂದು ಹೀಗೊಂದು ದೂರು ಸಲ್ಲಿಸಿ, ‘ವಿಜಯ ಸಂಕೇಶ್ವರ್ ವಿರುದ್ಧ ಸು-ಮೊಟೊ ಆಧಾರದಲ್ಲಿ ಸರ್ಕಾರ ಪ್ರಕರಣ ದಾಖಲಿಸಬೇಕು. ಸಿಂಧನೂರಿನ ಶಿಕ್ಷಕ ಬಸವರಾಜ್ ಅವರ ಸಾವಿಗೆ ಸಂಕೇಶ್ವರ್ ಸಲಹೆಯೇ ಕಾರಣ. ಐಪಿಸಿ ಸೆಕ್ಷನ್ 306 ಮತ್ತು ಸಾಂಕ್ರಾಮಿಕ ತಡೆ ಆಕ್ಟ್ ಪ್ರಕಾರ ಕೇಸು ದಾಖಲಿಸಬೇಕು’ ಎಂದು ಆಗ್ರಹಿಸಿದ್ದಾರೆ,

ಸಂಕೇಶ್ವರ್ ಧಾರವಾಡ ಜಿಲ್ಲೆ ನಿವಾಸಿಯಾಗಿರುವುದರಿಂದ (ಗದಗ ಮೂಲದವರು) ಧಾರವಾಡ ಡಿಸಿ, ಶಿಕ್ಷಕನ ಸಾವು ಸಂಭವಿಸಿದ ರಾಯಚೂರು ಜಿಲ್ಲೆಯ ಡಿಸಿ ಮತ್ತು ಸಿಂಧನೂರು ತಾಲೂಕು ತಹಸೀಲ್ದಾರ್ ಅವರಿಗೂ ಈ ದೂರಿನ ಪ್ರತಿ ಕಳಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ದೂರುದಾರ ವಕೀಲ ಭೀಮನಗೌಡ ಪರಗೊಂಡ, ‘ಸಾರ್ವಜನಿಕ ಜೀವನದಲ್ಲಿರುವ, ಒಂದು ಪತ್ರಿಕೆ ಮತ್ತು ಒಂದು ಟಿವಿ ಚಾನೆಲ್ ಹೊಂದಿರುವ ವ್ಯಕ್ತಿ, ಅದೂ ಸಾಂಕ್ರಾಮಿಕದ ಸಂದರ್ಭದಲ್ಲಿ ಅವೈಜ್ಞಾನಿಕ ಸಲಹೆಯನ್ನು ಸಾರ್ವಜನಿಕವಾಗಿ ನೀಡಿದ್ದು ಘೋರ ಅಪರಾಧ. ಕೋವಿಡ್ ಕಾರಣಕ್ಕೆ ಜನ ಆತಂಕದಲ್ಲಿದ್ದಾರೆ. ಆಮ್ಲಜನಕ ಕೊರತೆಯಿಂದ ಸಾವು ಸಂಭವಿಸುತ್ತಿವೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಮೂಗಿಗೆ ನಿಂಬೆರಸ ಹಾಕಿಕೊಂಡರೆ ಆಮ್ಲಜನಕ ಮಟ್ಟ ಹೆಚ್ಚುತ್ತದೆ ಎಂಬ ಅವೈಜ್ಞಾನಿಕ ಸಲಹೆ ನೀಡಿದ್ದು ಸಮಾಜದಲ್ಲಿ ಅವಘಡಗಳಿಗೆ ಕಾರಣವಾಗುತ್ತಿದೆ. ಶಿಕ್ಷಕರ ಸಾವು ಇದಕ್ಕೆ ಒಂದು ಉದಾಹರಣೆ’ ಎಂದರು.

ಕಳೆದ ವಾರ, ವಿಜಯ್ ಸಂಕೇಶ್ವರ್ ಅವರು ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸವೇ ಪರ್ಯಾಯ ಎಂದು ಹೇಳಿದ್ದರಲ್ಲದೇ, ತಾವು ದಿನವೂ ಈ ಪ್ರಯೋಗ ಮಾಡುತ್ತಿರುವುದಾಗಿ ಮತ್ತು ಸುಮಾರು 200 ಜನ ಪರಿಚಿತರು ಕೂಡ ಈ ಪ್ರಯೋಗ ಮಾಡುತ್ತಿದ್ದಾರೆ. ಇದರಿಂದ ಆಮ್ಲಜನಕ ಮಟ್ಟ ವೃದ್ಧಿಯಾಗುತ್ತದೆ’ ಎಂದು ಹೇಳಿದ್ದರು.

ಇದಕ್ಕೆ ಜೀವ ರಸಾಯನ ವಿಜ್ಞಾನಿ ಪ್ರೊ. ನರೇಂದ್ರ ನಾಯಕ್, ಆಹಾರ ತಜ್ಞ ಕೆ.ಸಿ ರಘು ಸೇರಿ ಹಲವಾರು ತಜ್ಞರು ಮತ್ತು ವೈಜ್ಞಾನಿಕ ಮನೋಭಾವನೆಯ ಸಾವಿರಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಮೂರು ದಿನದ ಹಿಂದೆ ಸಿಂಧನೂರುನಲ್ಲಿ ಸರ್ಕಾರಿ ಶಾಲೆ ಶಿಕ್ಷಕ ಬಸವರಾಜ್, ಮೂಗಿಗೆ ನಿಂಬೆರಸ ಹಾಕಿಕೊಂಡ ನಂತರ ವಿಪರೀತ ವಾಂತಿ ಸಂಭವಿಸಿ ನಿಧನರಾದರು ಎಂದು ಕುಟುಂಬಸ್ಥರು ಮತ್ತು ಸಹೋದ್ಯೋಗಿಗಳು ಅಪಾದಿಸಿದ್ದರು. ಅವರಿಗೆ ಬೇರೆ ಯಾವುದೇ ಕಾಯಿಲೆ ಇಲ್ಲ ಎಂದು ಅವರು ಹೇಳಿದ್ದರು. ಇದು ರಾಜ್ಯಾದ್ಯಂತ ಸಂಕೇಶ್ವರ್ ವಿರುದ್ಧ ಆಕ್ರೋಶ ಮೂಡಿಸಿತ್ತು.

ಸಂಕೇಶ್ವರ ವಿರುದ್ಧ ದೂರು ನೀಡಿದ ಭೀಮನಗೌಡ ಪರಗೊಂಡ

‘ಮಾಧ್ಯಮ ಕೈಯಲ್ಲಿ ಇರುವುದರಿಂದ ಸಂಕೇಶ್ವರ್ ಅವರು, ಇದು ಹೃದಯಾಘಾತದ ಸಾವು ಎಂದು ಯಾವ ಆಧಾರವಿಲ್ಲದೇ ಬರೆಸಿದರು. ಬಹುಪಾಲು ಮಾಧ್ಯಮಗಳು ಶಿಕ್ಷಕನ ಸಾವಿನ ಸುದ್ದಿ ಮಾಡಿದವೇ ಹೊರತು, ಸಂಕೇಶ್ವರ್ ಸಲಹೆ ಅಪಾಯಕಾರಿ ಎಂಬ ಸ್ಪಷ್ಟ ಸಂದೇಶ ನೀಡಲು ಯತ್ನಿಸಲಿಲ್ಲ. ಹೀಗಾಗಿ ನಾನು ದೂರು ನೀಡಬೇಕಾಯಿತು’ ಎಂದು ಪರಗೊಂಡ ನಾನುಗೌರಿ.ಕಾಂ ಗೆ ತಿಳಿಸಿದರು.

‘ಸಂಕೇಶ್ವರ್ ಅಷ್ಟೇ ಅಲ್ಲ, ಅವರ ಅವೈಜ್ಞಾನಿಕ ಸಲಹೆಯನ್ನು ಬೆಂಬಲಿಸಿದ ಎಲ್ಲರಿಗೂ, ಮುಖ್ಯವಾಗಿ ಜನಪ್ರತಿನಿಧಿಗಳು, ಪತ್ರಕರ್ತರ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದೇನೆ’ ಎಂದು ವಕೀಲ ಪರಗೊಂಡ ತಿಳಿಸಿದರು.

‘ದೂರಿನಲ್ಲಿ ಸಂಕೇಶ್ವರ್ ಬಿಟ್ಟು ಬೇರೆ ಹೆಸರು ಉಲ್ಲೇಖಿಸಿಲ್ಲ. ಆದರೆ ಪತ್ರಕರ್ತ ವಿಶ್ವೇಶ್ವರ ಭಟ್ಟ, ಸಂಸದ ಪ್ರತಾಪ ಸಿಂಹ ಮತ್ತು ಕೋಲಾರದ ಬಿಜೆಪಿ ಜನಪ್ರತಿನಿಧಿ ಮುನಿಸ್ವಾಮಿ ಮುಂತಾದವರು ಸಂಕೇಶ್ವರ್ ಅವರ ಅಪಾಯಕಾರಿ ಸಲಹೆಯನ್ನು ಬೆಂಬಲಿಸುವ ಮೂಲಕ ಜನರಲ್ಲಿ ತಪ್ಪು ತಿಳುವಳಿಕೆ ಮೂಡಿಸಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿರುವ ಇವರ ಮೇಲೂ ಪ್ರಕರಣ ದಾಖಲಾಗಬೇಕು’ ಎಂದು ಪರಗೊಂಡ ಅಭಿಪ್ರಾಯ ಪಟ್ಟರು.

2003ರಿಂದ ಎಐಎಸ್‌ಎಫ್ ಸಂಘಟನೆಯಲ್ಲಿ ಹಲವಾರು ಹುದ್ದೆಗಳಲ್ಲಿ ಹೋರಾಟ ಮಾಡಿರುವ ಪರಗೊಂಡ ಅವರು, ಬೆಳಗಾವಿ, ಕಲಬುರ್ಗಿ ಮತ್ತು ರಾಯಚೂರುಗಳಲ್ಲಿ ನಡೆದ ಅನೇಕ ಜನಪರ ಚಳುವಳಿಗಳ ನೇತೃತ್ವ ವಹಿಸಿದ್ದಾರೆ.

ಮುಖ್ಯ ಕಾರ್ಯದರ್ಶಿ ಪರಗೊಂಡರ ದೂರಿಗೆ ಪ್ರತಿಕ್ರಿಯಿಸುವರೇ? ಈ ಬಿಜೆಪಿ ಆಡಳಿತದಲ್ಲಿ ಅದೆಲ್ಲ ಸಾಧ್ಯವೇ ಎಂಬುದನ್ನು ಕಾದು ನೋಡಬೇಕಿದೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ; ಮೂಗಿನಲ್ಲಿ ನಿಂಬೆರಸ ಶಿಕ್ಷಕನ ಬಲಿ ಪಡೆಯಿತೇ? ಸಂಕೇಶ್ವರ ಸಲಹೆ ಆಕ್ಷೇಪಿಸಿದ ಡಾ, ನರೇಂದ್ರ ನಾಯಕ್‌ರಿಗೆ ಫೇಸ್‌ಬುಕ್ ನಿರ್ಬಂಧವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...