Homeಕರೋನಾ ತಲ್ಲಣನಿಂಬೆರಸ, ಶಿಕ್ಷಕನ ಸಾವು: ಸಂಕೇಶ್ವರ್ ವಿರುದ್ಧ ಕೇಸು ದಾಖಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ದೂರು

ನಿಂಬೆರಸ, ಶಿಕ್ಷಕನ ಸಾವು: ಸಂಕೇಶ್ವರ್ ವಿರುದ್ಧ ಕೇಸು ದಾಖಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ದೂರು

- Advertisement -
- Advertisement -

‘ಮಾಜಿ ಸಂಸದರಾಗಿರುವ, ವಿಆರ್‌ಎಲ್ ಕಂಪನಿ ಮುಖ್ಯಸ್ಥರಾಗಿರುವ, ಸಾರ್ವಜನಿಕ ಜೀವನದಲ್ಲಿರುವ ವಿಜಯ ಸಂಕೇಶ್ವರ್ ಸುದ್ದಿಗೋಷ್ಠಿ ಕರೆದು ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ ಅವೈಜ್ಞಾನಿಕ ಸಲಹೆ ನೀಡಿದ್ದಾರೆ. ಇದು ಒಬ್ಬ ಶಿಕ್ಷಕರ ಸಾವಿಗೆ ಕಾರಣವಾಗಿದೆ. ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಕೆಯಾಗಿದೆ.

ಬೆಳಗಾವಿ ಜಿಲ್ಲೆ ಅಥಣಿಯ ಯುವ ವಕೀಲ, ಆರ್‌ಟಿಐ ಕಾರ್ಯಕರ್ತ ಮತ್ತು ಮಾನವ ಹಕ್ಕು ಹೋರಾಟಗಾರ ಭೀಮನಗೌಡ ಪರಗೊಂಡ ಅವರು ಏಪ್ರಿಲ್ 30ರಂದು ಹೀಗೊಂದು ದೂರು ಸಲ್ಲಿಸಿ, ‘ವಿಜಯ ಸಂಕೇಶ್ವರ್ ವಿರುದ್ಧ ಸು-ಮೊಟೊ ಆಧಾರದಲ್ಲಿ ಸರ್ಕಾರ ಪ್ರಕರಣ ದಾಖಲಿಸಬೇಕು. ಸಿಂಧನೂರಿನ ಶಿಕ್ಷಕ ಬಸವರಾಜ್ ಅವರ ಸಾವಿಗೆ ಸಂಕೇಶ್ವರ್ ಸಲಹೆಯೇ ಕಾರಣ. ಐಪಿಸಿ ಸೆಕ್ಷನ್ 306 ಮತ್ತು ಸಾಂಕ್ರಾಮಿಕ ತಡೆ ಆಕ್ಟ್ ಪ್ರಕಾರ ಕೇಸು ದಾಖಲಿಸಬೇಕು’ ಎಂದು ಆಗ್ರಹಿಸಿದ್ದಾರೆ,

ಸಂಕೇಶ್ವರ್ ಧಾರವಾಡ ಜಿಲ್ಲೆ ನಿವಾಸಿಯಾಗಿರುವುದರಿಂದ (ಗದಗ ಮೂಲದವರು) ಧಾರವಾಡ ಡಿಸಿ, ಶಿಕ್ಷಕನ ಸಾವು ಸಂಭವಿಸಿದ ರಾಯಚೂರು ಜಿಲ್ಲೆಯ ಡಿಸಿ ಮತ್ತು ಸಿಂಧನೂರು ತಾಲೂಕು ತಹಸೀಲ್ದಾರ್ ಅವರಿಗೂ ಈ ದೂರಿನ ಪ್ರತಿ ಕಳಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ದೂರುದಾರ ವಕೀಲ ಭೀಮನಗೌಡ ಪರಗೊಂಡ, ‘ಸಾರ್ವಜನಿಕ ಜೀವನದಲ್ಲಿರುವ, ಒಂದು ಪತ್ರಿಕೆ ಮತ್ತು ಒಂದು ಟಿವಿ ಚಾನೆಲ್ ಹೊಂದಿರುವ ವ್ಯಕ್ತಿ, ಅದೂ ಸಾಂಕ್ರಾಮಿಕದ ಸಂದರ್ಭದಲ್ಲಿ ಅವೈಜ್ಞಾನಿಕ ಸಲಹೆಯನ್ನು ಸಾರ್ವಜನಿಕವಾಗಿ ನೀಡಿದ್ದು ಘೋರ ಅಪರಾಧ. ಕೋವಿಡ್ ಕಾರಣಕ್ಕೆ ಜನ ಆತಂಕದಲ್ಲಿದ್ದಾರೆ. ಆಮ್ಲಜನಕ ಕೊರತೆಯಿಂದ ಸಾವು ಸಂಭವಿಸುತ್ತಿವೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಮೂಗಿಗೆ ನಿಂಬೆರಸ ಹಾಕಿಕೊಂಡರೆ ಆಮ್ಲಜನಕ ಮಟ್ಟ ಹೆಚ್ಚುತ್ತದೆ ಎಂಬ ಅವೈಜ್ಞಾನಿಕ ಸಲಹೆ ನೀಡಿದ್ದು ಸಮಾಜದಲ್ಲಿ ಅವಘಡಗಳಿಗೆ ಕಾರಣವಾಗುತ್ತಿದೆ. ಶಿಕ್ಷಕರ ಸಾವು ಇದಕ್ಕೆ ಒಂದು ಉದಾಹರಣೆ’ ಎಂದರು.

ಕಳೆದ ವಾರ, ವಿಜಯ್ ಸಂಕೇಶ್ವರ್ ಅವರು ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸವೇ ಪರ್ಯಾಯ ಎಂದು ಹೇಳಿದ್ದರಲ್ಲದೇ, ತಾವು ದಿನವೂ ಈ ಪ್ರಯೋಗ ಮಾಡುತ್ತಿರುವುದಾಗಿ ಮತ್ತು ಸುಮಾರು 200 ಜನ ಪರಿಚಿತರು ಕೂಡ ಈ ಪ್ರಯೋಗ ಮಾಡುತ್ತಿದ್ದಾರೆ. ಇದರಿಂದ ಆಮ್ಲಜನಕ ಮಟ್ಟ ವೃದ್ಧಿಯಾಗುತ್ತದೆ’ ಎಂದು ಹೇಳಿದ್ದರು.

ಇದಕ್ಕೆ ಜೀವ ರಸಾಯನ ವಿಜ್ಞಾನಿ ಪ್ರೊ. ನರೇಂದ್ರ ನಾಯಕ್, ಆಹಾರ ತಜ್ಞ ಕೆ.ಸಿ ರಘು ಸೇರಿ ಹಲವಾರು ತಜ್ಞರು ಮತ್ತು ವೈಜ್ಞಾನಿಕ ಮನೋಭಾವನೆಯ ಸಾವಿರಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಮೂರು ದಿನದ ಹಿಂದೆ ಸಿಂಧನೂರುನಲ್ಲಿ ಸರ್ಕಾರಿ ಶಾಲೆ ಶಿಕ್ಷಕ ಬಸವರಾಜ್, ಮೂಗಿಗೆ ನಿಂಬೆರಸ ಹಾಕಿಕೊಂಡ ನಂತರ ವಿಪರೀತ ವಾಂತಿ ಸಂಭವಿಸಿ ನಿಧನರಾದರು ಎಂದು ಕುಟುಂಬಸ್ಥರು ಮತ್ತು ಸಹೋದ್ಯೋಗಿಗಳು ಅಪಾದಿಸಿದ್ದರು. ಅವರಿಗೆ ಬೇರೆ ಯಾವುದೇ ಕಾಯಿಲೆ ಇಲ್ಲ ಎಂದು ಅವರು ಹೇಳಿದ್ದರು. ಇದು ರಾಜ್ಯಾದ್ಯಂತ ಸಂಕೇಶ್ವರ್ ವಿರುದ್ಧ ಆಕ್ರೋಶ ಮೂಡಿಸಿತ್ತು.

ಸಂಕೇಶ್ವರ ವಿರುದ್ಧ ದೂರು ನೀಡಿದ ಭೀಮನಗೌಡ ಪರಗೊಂಡ

‘ಮಾಧ್ಯಮ ಕೈಯಲ್ಲಿ ಇರುವುದರಿಂದ ಸಂಕೇಶ್ವರ್ ಅವರು, ಇದು ಹೃದಯಾಘಾತದ ಸಾವು ಎಂದು ಯಾವ ಆಧಾರವಿಲ್ಲದೇ ಬರೆಸಿದರು. ಬಹುಪಾಲು ಮಾಧ್ಯಮಗಳು ಶಿಕ್ಷಕನ ಸಾವಿನ ಸುದ್ದಿ ಮಾಡಿದವೇ ಹೊರತು, ಸಂಕೇಶ್ವರ್ ಸಲಹೆ ಅಪಾಯಕಾರಿ ಎಂಬ ಸ್ಪಷ್ಟ ಸಂದೇಶ ನೀಡಲು ಯತ್ನಿಸಲಿಲ್ಲ. ಹೀಗಾಗಿ ನಾನು ದೂರು ನೀಡಬೇಕಾಯಿತು’ ಎಂದು ಪರಗೊಂಡ ನಾನುಗೌರಿ.ಕಾಂ ಗೆ ತಿಳಿಸಿದರು.

‘ಸಂಕೇಶ್ವರ್ ಅಷ್ಟೇ ಅಲ್ಲ, ಅವರ ಅವೈಜ್ಞಾನಿಕ ಸಲಹೆಯನ್ನು ಬೆಂಬಲಿಸಿದ ಎಲ್ಲರಿಗೂ, ಮುಖ್ಯವಾಗಿ ಜನಪ್ರತಿನಿಧಿಗಳು, ಪತ್ರಕರ್ತರ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದೇನೆ’ ಎಂದು ವಕೀಲ ಪರಗೊಂಡ ತಿಳಿಸಿದರು.

‘ದೂರಿನಲ್ಲಿ ಸಂಕೇಶ್ವರ್ ಬಿಟ್ಟು ಬೇರೆ ಹೆಸರು ಉಲ್ಲೇಖಿಸಿಲ್ಲ. ಆದರೆ ಪತ್ರಕರ್ತ ವಿಶ್ವೇಶ್ವರ ಭಟ್ಟ, ಸಂಸದ ಪ್ರತಾಪ ಸಿಂಹ ಮತ್ತು ಕೋಲಾರದ ಬಿಜೆಪಿ ಜನಪ್ರತಿನಿಧಿ ಮುನಿಸ್ವಾಮಿ ಮುಂತಾದವರು ಸಂಕೇಶ್ವರ್ ಅವರ ಅಪಾಯಕಾರಿ ಸಲಹೆಯನ್ನು ಬೆಂಬಲಿಸುವ ಮೂಲಕ ಜನರಲ್ಲಿ ತಪ್ಪು ತಿಳುವಳಿಕೆ ಮೂಡಿಸಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿರುವ ಇವರ ಮೇಲೂ ಪ್ರಕರಣ ದಾಖಲಾಗಬೇಕು’ ಎಂದು ಪರಗೊಂಡ ಅಭಿಪ್ರಾಯ ಪಟ್ಟರು.

2003ರಿಂದ ಎಐಎಸ್‌ಎಫ್ ಸಂಘಟನೆಯಲ್ಲಿ ಹಲವಾರು ಹುದ್ದೆಗಳಲ್ಲಿ ಹೋರಾಟ ಮಾಡಿರುವ ಪರಗೊಂಡ ಅವರು, ಬೆಳಗಾವಿ, ಕಲಬುರ್ಗಿ ಮತ್ತು ರಾಯಚೂರುಗಳಲ್ಲಿ ನಡೆದ ಅನೇಕ ಜನಪರ ಚಳುವಳಿಗಳ ನೇತೃತ್ವ ವಹಿಸಿದ್ದಾರೆ.

ಮುಖ್ಯ ಕಾರ್ಯದರ್ಶಿ ಪರಗೊಂಡರ ದೂರಿಗೆ ಪ್ರತಿಕ್ರಿಯಿಸುವರೇ? ಈ ಬಿಜೆಪಿ ಆಡಳಿತದಲ್ಲಿ ಅದೆಲ್ಲ ಸಾಧ್ಯವೇ ಎಂಬುದನ್ನು ಕಾದು ನೋಡಬೇಕಿದೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ; ಮೂಗಿನಲ್ಲಿ ನಿಂಬೆರಸ ಶಿಕ್ಷಕನ ಬಲಿ ಪಡೆಯಿತೇ? ಸಂಕೇಶ್ವರ ಸಲಹೆ ಆಕ್ಷೇಪಿಸಿದ ಡಾ, ನರೇಂದ್ರ ನಾಯಕ್‌ರಿಗೆ ಫೇಸ್‌ಬುಕ್ ನಿರ್ಬಂಧವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...