Homeಕರ್ನಾಟಕತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ವ್ಯಾಪಕ ಬಲಿ: ಕ್ರಮಕ್ಕೆ ಮುಂದಾಗದ ಸರ್ಕಾರ...

ತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ವ್ಯಾಪಕ ಬಲಿ: ಕ್ರಮಕ್ಕೆ ಮುಂದಾಗದ ಸರ್ಕಾರ…

ಅರಣ್ಯ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತದೆ. ಆದರೆ ಕಾಡನ್ನು ವೈಜ್ಞಾನಿಕವಾಗಿ ಬೆಳೆಸುತ್ತಿಲ್ಲ. ನೀಲಗಿರಿ, ಅಕೇಶಿಯಾ ಗಿಡಗಳನ್ನು ಬೆಳೆಸಿದರೆ ಪ್ರಾಣಿಗಳಿಗೆ ಆಗುವ ಪ್ರಯೋಜವೇನು?

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದೆ. ಯಾವ ಭಾಗದಲ್ಲಿ ನೋಡಿದರೂ ಚಿರತೆ ದಾಳಿಯ ಮಾತುಗಳೇ ಕೇಳಿಬರುತ್ತಿವೆ. ಕಳೆದ ನಾಲ್ಕೈದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಚಿರತೆಗಳ ಸಂತಾನ ಹೆಚ್ಚಾಗಿದೆ. ಅವುಗಳಿಗೆ ಆಹಾರದ ಸಮಸ್ಯೆಯು ಉಂಟಾಗಿದೆ. ಆದರೆ ಅರಣ್ಯ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆ ಸೇರಿದಂತೆ ಕಾಮಗಾರಿಗಳು ಹೆಚ್ಚಿದಂತೆ ಚಿರತೆಗಳು ನಾಡಿನತ್ತ ಆಹಾರ ಹುಡುಕುತ್ತಾ ಬಂದು ದಾಳಿ ಮಾಡುತ್ತಿವೆ.

ತುಮಕೂರು ಜಿಲ್ಲೆಯ ಹತ್ತು ತಾಲೂಕು ಕೇಂದ್ರಗಳಲ್ಲೂ ಚಿರತೆಗಳು ದಾಳಿ ಇಡುತ್ತಲೇ ಇವೆ. ಕುರಿ, ಮೇಕೆ, ದನ ಮೇಯಿಸುವವರನ್ನು ಕಾಡುತ್ತಲೇ ಇವೆ. ಬಹಳಷ್ಟು ಸಲ ಅವರ ಕಣ್ಣಿಗೂ ಬಿದ್ದಿವೆ. ಕುರಿ, ಮೇಕೆಗಳನ್ನು ಹೊತ್ತೊಯ್ದಿವೆ. ನಾಯಿಗಳನ್ನು ತಿಂದು ಹಾಕಿವೆ. ಮನುಷ್ಯರ ಮೇಲೆ ದಾಳಿಯನ್ನೂ ನಡೆಸಿ ಹಲವರನ್ನು ಗಾಯಗೊಳಿಸಿವೆ. ಆದರೂ ಅರಣ್ಯ ಇಲಾಖೆ ಕೈಕಟ್ಟಿ ಕುಳಿತಿದೆ.

ನವೆಂಬರ್ 29ರಂದು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ದೊಡ್ಡ ಮಳಲವಾಡಿಯಲ್ಲಿ ಅರಣ್ಯ ಅಂಚಿನಲ್ಲಿ ಹೊಲದಲ್ಲಿ ಕುರಿ ಮೇಯಿಸುತ್ತಿದ್ದ  ಆನಂದಯ್ಯ ಎಂಬುವರ ಮೇಲೆ ಚಿರತೆ ಎರಗಿದೆ. ಕುತ್ತಿಗೆಗೆ ಬಾಯಿ ಹಾಕಿ ರಕ್ತವನ್ನು ಕುಡಿದಿದೆ. ಆನಂದಯ್ಯ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ. ಆನಂದಯ್ಯ ಅವರ ಕುತ್ತಿಗೆಯ ಭಾಗದಲ್ಲಿ ಚಿರತೆಯ ಹಲ್ಲುಗಳ ಆಳವಾಗಿ ಒಳಹೊಕ್ಕಿರುವುದು ಕಂಡು ಬಂದಿದೆ. ಅರಣ್ಯ ಅಧಿಕಾರಿಗಳು ಆ ಚಿರತೆಗಾಗಿ ಶೋಧ ಮುಂದುವರಿಸಿದ್ದಾರೆ.

ಚಿರತೆ ದಾಳಿಗೆ ಮೃತಪಟ್ಟ ಆನಂದಯ್ಯ

ಮನುಷ್ಯರ ರಕ್ತದ ರುಚಿಯನ್ನು ಕಂಡಿರುವ ಚಿರತೆ, ಇದುವರೆಗೆ ಇಬ್ಬರನ್ನು ಬಲಿತೆಗೆದುಕೊಂಡಿದೆ. ಚಿರತೆ ದಾಳಿ ನಡೆಯುತ್ತಿರುವ ಬಗ್ಗೆ ಗ್ರಾಮಸ್ಥರು ನಿರಂತರವಾಗಿ ಅರಣ್ಯ ಇಲಾಖೆಗೆ ಮನವಿಗಳ ಮೇಲೆ ಮನವಿ ಸಲ್ಲಿಸುತ್ತಿದ್ದರೂ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ. ಗ್ರಾಮಸ್ಥರ ಪ್ರತಿಭಟನೆ ಮತ್ತು ಒತ್ತಡ ಹೆಚ್ಚಾದಾಗ ಬೋನಿಟ್ಟು ಹಿಡಿದು ಅರಣ್ಯಕ್ಕೆ ಬಿಡುವ ಒಂದೆರಡು ಪ್ರಕರಣಗಳನ್ನು ಬಿಟ್ಟರೆ ಉಳಿದಂತೆ ಏನೂ ಆಗಿಲ್ಲ.

ಬೆಟ್ಟಗುಡ್ಡಗಳಲ್ಲಿ ಮತ್ತು ಅರಣ್ಯದಲ್ಲಿ ಅಕ್ರಮ-ಸಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿದ್ದು, ವ್ಯನ್ಯಜೀವಿಗಳ ಆವಾಸ ಸ್ಥಾನದಲ್ಲಿ ಪ್ರಾಣಿಗಳು ವಾಸಿಸಲು ಅಡ್ಡಿಯಾಗುತ್ತಿದೆ. ಅರಣ್ಯದಲ್ಲಿ ಆಹಾರದ ಕೊರತೆಯಾಗಿರುವುದು ಕೂಡ ಚಿರತೆಗಳು ಕುರಿ, ಮೇಕೆ ಮತ್ತು ನಾಯಿಗಳ ಮೇಲೆ ದಾಳಿ ನಡೆಸಲು ಕಾರಣವಾಗಿದೆ. ಚಿರತೆಗಳು ಆಗೊಮ್ಮೆ ಈಗೊಮ್ಮೆ ಮನುಷ್ಯನ ಮೇಲೆಯೂ ಎರಗಿ ಗಾಯಗೊಳಿಸಿರುವುದೂ ಉಂಟು.

ಚಿರತೆ ದಾಳಿಯಂತಹ ಘಟನೆಗಳು ಪದೇ ಪದೇ ನಡೆಯುತ್ತಿದ್ದರೂ, ಕುರಿಗಾಹಿಗಳು, ಮೇಕೆ ಕಾಯುವವರು ಮತ್ತು ಇತರರು ದಾಳಿಗೆ ಒಳಗಾಗಿ ಗಾಯಗೊಂಡು ಆಸ್ಪತ್ರೆ ಸೇರುತ್ತಲೇ ಇದ್ದಾರೆ. ಹೀಗೆ ಚಿರತೆ ದಾಳಿಯಿಂದ ಸಾಕು ಪ್ರಾಣಿಗಳನ್ನು ಕಳೆದುಕೊಂಡವರಿಗೆ ಇದುವರೆಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಗಾಯಗೊಂಡವರಿಗೂ ಪರಿಹಾರ ಲಭಿಸಿಲ್ಲ. ಇದರಿಂದ ಜನರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕರಡಿ, ಚಿರತೆ, ದಾಳಿಯಿಂದ ಬೇಸತ್ತಿರುವ ಜನರು ಗ್ರಾಮದ ಹೊರಗೆ ಒಬ್ಬೊಬ್ಬರೇ ಹೋಗಲು ಭಯಪಡುತ್ತಿದ್ದಾರೆ. ರಾತ್ರಿ ವೇಳೆ ಹೊಲಗಳಿಗೆ ಹೋಗಿ ಬೋರ್ ಮೂಲಕ ನೀರು ಹಾಯಿಸಲು ಹೋಗುವವರು ತಮ್ಮ ಜೀವಗಳನ್ನು ಕೈಯಲ್ಲಿ ಹಿಡಿದುಕೊಂಡು ಭಯದಲ್ಲೇ ಹೋಗುವಂತಹ ಪರಿಸ್ಥಿತಿ ಬಂದಿದೆ. ಕುರಿ, ಮೇಕೆ ಮೇಯಿಸುವವರು ಅರಣ್ಯದ ಅಂಚಿಗೆ ಹೋಗಲು ಹೆದರಿಕೊಳ್ಳುತ್ತಿದ್ದಾರೆ. ಅದು ಒಬ್ಬಂಟಿಯಾಗಿ ಹೋಗುವುದು ಹೇಗೆ ಎಂದು ಚಿಂತಾಕ್ರಾಂತರಾಗಿದ್ದಾರೆ. ವನ್ಯಜೀವಿಗಳಿಂದ ಗಾಯಗೊಂಡವರಿಗೆ ಮತ್ತು ಸಾಕುಪ್ರಾಣಿಗಳನ್ನು ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕೆಂಬ ಒತ್ತಾಯ ವ್ಯಾಪಕವಾಗಿ ಕೇಳಿಬಂದಿದೆ.

ಅದಕ್ಕೂ ಮೊದಲು ಚಿರತೆ ದಾಳಿ ತಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಅರಣ್ಯದಲ್ಲಿ ಅವುಗಳಿಗೆ ಸಾಕಷ್ಟು ಆಹಾರ ಸಿಗುವಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲಿ ನಡೆಯುವ ಅಕ್ರಮ ಗಣಿಗಾರಿಕೆಗೆ ಅಂಕುಶ ಬೀಳಬೇಕು. ಆಗ ಮಾತ್ರ ಅವು ಮನುಷ್ಯರ ಮೇಲೆ ಎರಗುವುದನ್ನು ನಿಲ್ಲಿಸುತ್ತವೆ. ಇದರ ಜೊತೆಗೆ ಮಾನವ ಮತ್ತು ವನ್ಯಜೀವಿಗಳ ಸಂಘರ್ಷ ತಡೆಯಲು ಸಾಧ್ಯವಾಗುತ್ತದೆ.

ಅರಣ್ಯ ಇಲಾಖೆ ಕೈಕಟ್ಟಿ ಕುಳಿತರೆ ಯಾವುದೇ ಪರಿಹಾರ ಸಿಗುವುದಿಲ್ಲ. ಸರ್ಕಾರಕ್ಕೆ ಅಗತ್ಯ ಮಾಹಿತಿ ನೀಡಿ ಅರಣ್ಯದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಹೋರಾಟಗಾರರು ಮತ್ತು ಸಂತ್ರಸ್ತರನ್ನು ಮಾತನಾಡಿಸಲಾಯಿತು. ಅವರು ಹೇಳಿಕೆಗಳು ಕೆಳಗಿನಂತಿವೆ.

ಮೂಲ ಸಮಸ್ಯೆಯನ್ನು ಪರಿಹರಿಸುವುದು ಯಾರಿಗೂ ಬೇಕಾಗಿಲ್ಲ. ಚಿರತೆ ದಾಳಿಯ ಮೂಲ ಸಮಸ್ಯೆ ಯಾರಿಗೂ ಗೊತ್ತಿಲ್ಲ. ಅರಣ್ಯ ಅಧಿಕಾರಿಗಳು, ಶಾಸಕರು, ಸಂಸದರು ಮತ್ತು ಮಂತ್ರಿಗಳು ಇದರ ಬಗ್ಗೆ ಯೋಚಿಸುತ್ತಿಲ್ಲ. ಅರಣ್ಯ ಕಡಿಯುವುದರಿಂದ ಸಮಸ್ಯೆ ಉಂಟಾಗಿದೆ ಎಂದು ಬಿಂಬಿಸಲಾಗುತ್ತಿದೆ. ಇದು ಪ್ರಶ್ನೆಯೇ ಅಲ್ಲ. ಕಾಡಿನಲ್ಲಿ ಸಸ್ಯಹಾರಿ ಪ್ರಾಣಿಗಳಿಗೆ ಬೇಕಾಗುವ ನೇರಳೆ, ಹಲಸು ಮರಗಳನ್ನು ಮತ್ತು ಗಿಡಮೂಲಿಕೆ ಗಿಡಗಳನ್ನು ಬೆಳೆಸುವ ಗೋಜಿಗೆ ಅರಣ್ಯ ಇಲಾಖೆ ಹೊಗುತ್ತಿಲ್ಲ. ಹೀಗಾಗಿ ಅಲ್ಲಿ ಸಸ್ಯಹಾರಿ ಪ್ರಾಣಿಗಳು ವಾಸಿಸುತ್ತಿಲ್ಲ.

ಸಸ್ಯಹಾರಿ ಪ್ರಾಣಿಗಳನ್ನು ತಿಂದು ಜೀವಿಸುವ ಚಿರತೆಗಳಿಗೆ ಆಹಾರದ ಸಮಸ್ಯೆ ಎದುರಾಗಿದೆ. ಅರಣ್ಯ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತದೆ. ಆದರೆ ಕಾಡನ್ನು ವೈಜ್ಞಾನಿಕವಾಗಿ ಬೆಳೆಸುತ್ತಿಲ್ಲ. ನೀಲಗಿರಿ, ಅಕೇಶಿಯಾ ಗಿಡಗಳನ್ನು ಬೆಳೆಸಿದರೆ ಪ್ರಾಣಿಗಳಿಗೆ ಆಗುವ ಪ್ರಯೋಜವೇನು? ಇದರಿಂದ ಸಸ್ಯಹಾರಿ ಮತ್ತು ಮಾಂಸಹಾರಿ ಪ್ರಾಣಿಗಳಿಗೆ ಆಹಾರದ ಸಮಸ್ಯೆ ಅನಿವಾರ್ಯವಾಗಿ ಎದುರಾಗುತ್ತದೆ. ಹೆಚ್ಚು ಹೆಚ್ಚಾಗಿ ಮೊಲ, ಜಿಂಕೆ, ಕೋತಿ ಮೊದಲಾದ ಪ್ರಾಣಿಗಳು ಕಾಡಿನಲ್ಲಿ ಇದ್ದರೆ ಚಿರತೆಗಳು ನಾಡಿಗೆ ಬರುವುದಿಲ್ಲ. ಮೇಕೆ, ಕುರಿ ಮತ್ತು ಮನುಷ್ಯನ ಮೇಲೆ ದಾಳಿ ಮಾಡುವುದಿಲ್ಲ.

ಆನಂದ್‌ ಪಟೇಲ್‌

ಕೇವಲ ದಾಳಿಯಾದಾಗ ಮಾತ್ರ ಒಂದು ಚಿರತೆಯನ್ನೋ, ಕರಡಿಯನ್ನೋ ಹಿಡಿದರೆ ಸಮಸ್ಯೆ ಬಗೆಹರಿಯುತ್ತದೆಯೇ? ಮತ್ತೆ ಇನ್ನೊಂದು ಚಿರತೆ ದಾಳಿ ಮಾಡುತ್ತದೆ. ಆನೆಗಳು ದಾಳಿ ಮಾಡುತ್ತವೆ. ಹೀಗಾಗಿ ಅರಣ್ಯೀಕರಣವೆಂದರೆ ಅದು ವೈಜ್ಞಾನಿಕವಾಗಿ ಇರಬೇಕು. ಕಾಡಿನಲ್ಲಿ ಹಣ್ಣಿನ ಮರಗಳನ್ನು ಯಥೇಚ್ಚವಾಗಿ ಬೆಳೆಸಬೇಕು. ಸಸ್ಯಹಾರ ಪ್ರಾಣಿಗಳು ಹೆಚ್ಚಳವಾಗುವಂತೆ ನೋಡಿಕೊಳ್ಳಬೇಕು. ಆಗ ಮಾಂಸಾಹಾರಿಗಳಿಗೂ ಕಾಡಿನಲ್ಲಿಯೇ ಆಹಾರ ದೊರೆಯುತ್ತದೆ. ಇದು ಸಾಮಾನ್ಯ ತಿಳುವಳಿಕೆ. ಇಷ್ಟು ಮಾಡಲಿ ಅರಣ್ಯ ಇಲಾಖೆ.
ಆನಂದ್ ಪಟೇಲ್, ಕರ್ನಾಟಕ ರಾಜ್ಯ ರೈತ ಸಂಘದ ಕುಣಿಗಲ್ ತಾಲೂಕು ಅಧ್ಯಕ್ಷರು.

ಇದುವರೆಗೆ ಚಿರತೆ ಮೂವರನ್ನು ಬಲಿತೆಗೆದುಕೊಂಡಿದೆ. ಕೇವಲ ಪರಿಹಾರ ನೀಡುವುದರಿಂದ ಹೋದ ಪ್ರಾಣ ಬರುತ್ತದೆಯೇ? ಕೊತ್ತಗೆರೆ ಹೋಬಳಿಯ ದೊಡ್ಡಮಳಲವಾಡಿ, ಗಿಡದಪಾಳ್ಯದಲ್ಲಿ ಮೂವರನ್ನು ಕೊಂದು ಹಾಕಿದೆ. ಕಳೆದ 15 ದಿನಗಳ ಹಿಂದೆ ಮಹಿಳೆಯೊಬ್ಬರನ್ನು ಚಿರತೆ ಕೊಂದಿತ್ತು. ಹೀಗೆ ಜೀವ ಹೋಗುತ್ತಲೇ ಇವೆ. ಅರಣ್ಯ ಇಲಾಖೆ ಪುಡಿಗಾಸು ಪರಿಹಾರ ನೀಡುತ್ತಿದೆ. ಇದರಿಂದೇನು ಪ್ರಯೋಜನವಾಗುವುದಿಲ್ಲ. ಚಿರತೆಗಳು ವಾಸಿಸುವಂತಹ ಯೋಗ್ಯ ಆವಾಸ ಸ್ಥಾನಗಳು ಕುಣಿಗಲ್ ತಾಲೂಕಿನಲ್ಲಿ ಇಲ್ಲ.

ಜಿ.ಕೆ.ನಾಗಣ್ಣ

ಜಿ.ಕೆ.ನಾಗಣ್ಣ, ಸಂತೇಮಾವತ್ತೂರು ಗೊಲ್ಲರಹಟ್ಟಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...