Homeಕರ್ನಾಟಕತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ವ್ಯಾಪಕ ಬಲಿ: ಕ್ರಮಕ್ಕೆ ಮುಂದಾಗದ ಸರ್ಕಾರ...

ತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ವ್ಯಾಪಕ ಬಲಿ: ಕ್ರಮಕ್ಕೆ ಮುಂದಾಗದ ಸರ್ಕಾರ…

ಅರಣ್ಯ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತದೆ. ಆದರೆ ಕಾಡನ್ನು ವೈಜ್ಞಾನಿಕವಾಗಿ ಬೆಳೆಸುತ್ತಿಲ್ಲ. ನೀಲಗಿರಿ, ಅಕೇಶಿಯಾ ಗಿಡಗಳನ್ನು ಬೆಳೆಸಿದರೆ ಪ್ರಾಣಿಗಳಿಗೆ ಆಗುವ ಪ್ರಯೋಜವೇನು?

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದೆ. ಯಾವ ಭಾಗದಲ್ಲಿ ನೋಡಿದರೂ ಚಿರತೆ ದಾಳಿಯ ಮಾತುಗಳೇ ಕೇಳಿಬರುತ್ತಿವೆ. ಕಳೆದ ನಾಲ್ಕೈದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಚಿರತೆಗಳ ಸಂತಾನ ಹೆಚ್ಚಾಗಿದೆ. ಅವುಗಳಿಗೆ ಆಹಾರದ ಸಮಸ್ಯೆಯು ಉಂಟಾಗಿದೆ. ಆದರೆ ಅರಣ್ಯ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆ ಸೇರಿದಂತೆ ಕಾಮಗಾರಿಗಳು ಹೆಚ್ಚಿದಂತೆ ಚಿರತೆಗಳು ನಾಡಿನತ್ತ ಆಹಾರ ಹುಡುಕುತ್ತಾ ಬಂದು ದಾಳಿ ಮಾಡುತ್ತಿವೆ.

ತುಮಕೂರು ಜಿಲ್ಲೆಯ ಹತ್ತು ತಾಲೂಕು ಕೇಂದ್ರಗಳಲ್ಲೂ ಚಿರತೆಗಳು ದಾಳಿ ಇಡುತ್ತಲೇ ಇವೆ. ಕುರಿ, ಮೇಕೆ, ದನ ಮೇಯಿಸುವವರನ್ನು ಕಾಡುತ್ತಲೇ ಇವೆ. ಬಹಳಷ್ಟು ಸಲ ಅವರ ಕಣ್ಣಿಗೂ ಬಿದ್ದಿವೆ. ಕುರಿ, ಮೇಕೆಗಳನ್ನು ಹೊತ್ತೊಯ್ದಿವೆ. ನಾಯಿಗಳನ್ನು ತಿಂದು ಹಾಕಿವೆ. ಮನುಷ್ಯರ ಮೇಲೆ ದಾಳಿಯನ್ನೂ ನಡೆಸಿ ಹಲವರನ್ನು ಗಾಯಗೊಳಿಸಿವೆ. ಆದರೂ ಅರಣ್ಯ ಇಲಾಖೆ ಕೈಕಟ್ಟಿ ಕುಳಿತಿದೆ.

ನವೆಂಬರ್ 29ರಂದು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ದೊಡ್ಡ ಮಳಲವಾಡಿಯಲ್ಲಿ ಅರಣ್ಯ ಅಂಚಿನಲ್ಲಿ ಹೊಲದಲ್ಲಿ ಕುರಿ ಮೇಯಿಸುತ್ತಿದ್ದ  ಆನಂದಯ್ಯ ಎಂಬುವರ ಮೇಲೆ ಚಿರತೆ ಎರಗಿದೆ. ಕುತ್ತಿಗೆಗೆ ಬಾಯಿ ಹಾಕಿ ರಕ್ತವನ್ನು ಕುಡಿದಿದೆ. ಆನಂದಯ್ಯ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ. ಆನಂದಯ್ಯ ಅವರ ಕುತ್ತಿಗೆಯ ಭಾಗದಲ್ಲಿ ಚಿರತೆಯ ಹಲ್ಲುಗಳ ಆಳವಾಗಿ ಒಳಹೊಕ್ಕಿರುವುದು ಕಂಡು ಬಂದಿದೆ. ಅರಣ್ಯ ಅಧಿಕಾರಿಗಳು ಆ ಚಿರತೆಗಾಗಿ ಶೋಧ ಮುಂದುವರಿಸಿದ್ದಾರೆ.

ಚಿರತೆ ದಾಳಿಗೆ ಮೃತಪಟ್ಟ ಆನಂದಯ್ಯ

ಮನುಷ್ಯರ ರಕ್ತದ ರುಚಿಯನ್ನು ಕಂಡಿರುವ ಚಿರತೆ, ಇದುವರೆಗೆ ಇಬ್ಬರನ್ನು ಬಲಿತೆಗೆದುಕೊಂಡಿದೆ. ಚಿರತೆ ದಾಳಿ ನಡೆಯುತ್ತಿರುವ ಬಗ್ಗೆ ಗ್ರಾಮಸ್ಥರು ನಿರಂತರವಾಗಿ ಅರಣ್ಯ ಇಲಾಖೆಗೆ ಮನವಿಗಳ ಮೇಲೆ ಮನವಿ ಸಲ್ಲಿಸುತ್ತಿದ್ದರೂ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ. ಗ್ರಾಮಸ್ಥರ ಪ್ರತಿಭಟನೆ ಮತ್ತು ಒತ್ತಡ ಹೆಚ್ಚಾದಾಗ ಬೋನಿಟ್ಟು ಹಿಡಿದು ಅರಣ್ಯಕ್ಕೆ ಬಿಡುವ ಒಂದೆರಡು ಪ್ರಕರಣಗಳನ್ನು ಬಿಟ್ಟರೆ ಉಳಿದಂತೆ ಏನೂ ಆಗಿಲ್ಲ.

ಬೆಟ್ಟಗುಡ್ಡಗಳಲ್ಲಿ ಮತ್ತು ಅರಣ್ಯದಲ್ಲಿ ಅಕ್ರಮ-ಸಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿದ್ದು, ವ್ಯನ್ಯಜೀವಿಗಳ ಆವಾಸ ಸ್ಥಾನದಲ್ಲಿ ಪ್ರಾಣಿಗಳು ವಾಸಿಸಲು ಅಡ್ಡಿಯಾಗುತ್ತಿದೆ. ಅರಣ್ಯದಲ್ಲಿ ಆಹಾರದ ಕೊರತೆಯಾಗಿರುವುದು ಕೂಡ ಚಿರತೆಗಳು ಕುರಿ, ಮೇಕೆ ಮತ್ತು ನಾಯಿಗಳ ಮೇಲೆ ದಾಳಿ ನಡೆಸಲು ಕಾರಣವಾಗಿದೆ. ಚಿರತೆಗಳು ಆಗೊಮ್ಮೆ ಈಗೊಮ್ಮೆ ಮನುಷ್ಯನ ಮೇಲೆಯೂ ಎರಗಿ ಗಾಯಗೊಳಿಸಿರುವುದೂ ಉಂಟು.

ಚಿರತೆ ದಾಳಿಯಂತಹ ಘಟನೆಗಳು ಪದೇ ಪದೇ ನಡೆಯುತ್ತಿದ್ದರೂ, ಕುರಿಗಾಹಿಗಳು, ಮೇಕೆ ಕಾಯುವವರು ಮತ್ತು ಇತರರು ದಾಳಿಗೆ ಒಳಗಾಗಿ ಗಾಯಗೊಂಡು ಆಸ್ಪತ್ರೆ ಸೇರುತ್ತಲೇ ಇದ್ದಾರೆ. ಹೀಗೆ ಚಿರತೆ ದಾಳಿಯಿಂದ ಸಾಕು ಪ್ರಾಣಿಗಳನ್ನು ಕಳೆದುಕೊಂಡವರಿಗೆ ಇದುವರೆಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಗಾಯಗೊಂಡವರಿಗೂ ಪರಿಹಾರ ಲಭಿಸಿಲ್ಲ. ಇದರಿಂದ ಜನರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕರಡಿ, ಚಿರತೆ, ದಾಳಿಯಿಂದ ಬೇಸತ್ತಿರುವ ಜನರು ಗ್ರಾಮದ ಹೊರಗೆ ಒಬ್ಬೊಬ್ಬರೇ ಹೋಗಲು ಭಯಪಡುತ್ತಿದ್ದಾರೆ. ರಾತ್ರಿ ವೇಳೆ ಹೊಲಗಳಿಗೆ ಹೋಗಿ ಬೋರ್ ಮೂಲಕ ನೀರು ಹಾಯಿಸಲು ಹೋಗುವವರು ತಮ್ಮ ಜೀವಗಳನ್ನು ಕೈಯಲ್ಲಿ ಹಿಡಿದುಕೊಂಡು ಭಯದಲ್ಲೇ ಹೋಗುವಂತಹ ಪರಿಸ್ಥಿತಿ ಬಂದಿದೆ. ಕುರಿ, ಮೇಕೆ ಮೇಯಿಸುವವರು ಅರಣ್ಯದ ಅಂಚಿಗೆ ಹೋಗಲು ಹೆದರಿಕೊಳ್ಳುತ್ತಿದ್ದಾರೆ. ಅದು ಒಬ್ಬಂಟಿಯಾಗಿ ಹೋಗುವುದು ಹೇಗೆ ಎಂದು ಚಿಂತಾಕ್ರಾಂತರಾಗಿದ್ದಾರೆ. ವನ್ಯಜೀವಿಗಳಿಂದ ಗಾಯಗೊಂಡವರಿಗೆ ಮತ್ತು ಸಾಕುಪ್ರಾಣಿಗಳನ್ನು ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕೆಂಬ ಒತ್ತಾಯ ವ್ಯಾಪಕವಾಗಿ ಕೇಳಿಬಂದಿದೆ.

ಅದಕ್ಕೂ ಮೊದಲು ಚಿರತೆ ದಾಳಿ ತಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಅರಣ್ಯದಲ್ಲಿ ಅವುಗಳಿಗೆ ಸಾಕಷ್ಟು ಆಹಾರ ಸಿಗುವಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲಿ ನಡೆಯುವ ಅಕ್ರಮ ಗಣಿಗಾರಿಕೆಗೆ ಅಂಕುಶ ಬೀಳಬೇಕು. ಆಗ ಮಾತ್ರ ಅವು ಮನುಷ್ಯರ ಮೇಲೆ ಎರಗುವುದನ್ನು ನಿಲ್ಲಿಸುತ್ತವೆ. ಇದರ ಜೊತೆಗೆ ಮಾನವ ಮತ್ತು ವನ್ಯಜೀವಿಗಳ ಸಂಘರ್ಷ ತಡೆಯಲು ಸಾಧ್ಯವಾಗುತ್ತದೆ.

ಅರಣ್ಯ ಇಲಾಖೆ ಕೈಕಟ್ಟಿ ಕುಳಿತರೆ ಯಾವುದೇ ಪರಿಹಾರ ಸಿಗುವುದಿಲ್ಲ. ಸರ್ಕಾರಕ್ಕೆ ಅಗತ್ಯ ಮಾಹಿತಿ ನೀಡಿ ಅರಣ್ಯದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಹೋರಾಟಗಾರರು ಮತ್ತು ಸಂತ್ರಸ್ತರನ್ನು ಮಾತನಾಡಿಸಲಾಯಿತು. ಅವರು ಹೇಳಿಕೆಗಳು ಕೆಳಗಿನಂತಿವೆ.

ಮೂಲ ಸಮಸ್ಯೆಯನ್ನು ಪರಿಹರಿಸುವುದು ಯಾರಿಗೂ ಬೇಕಾಗಿಲ್ಲ. ಚಿರತೆ ದಾಳಿಯ ಮೂಲ ಸಮಸ್ಯೆ ಯಾರಿಗೂ ಗೊತ್ತಿಲ್ಲ. ಅರಣ್ಯ ಅಧಿಕಾರಿಗಳು, ಶಾಸಕರು, ಸಂಸದರು ಮತ್ತು ಮಂತ್ರಿಗಳು ಇದರ ಬಗ್ಗೆ ಯೋಚಿಸುತ್ತಿಲ್ಲ. ಅರಣ್ಯ ಕಡಿಯುವುದರಿಂದ ಸಮಸ್ಯೆ ಉಂಟಾಗಿದೆ ಎಂದು ಬಿಂಬಿಸಲಾಗುತ್ತಿದೆ. ಇದು ಪ್ರಶ್ನೆಯೇ ಅಲ್ಲ. ಕಾಡಿನಲ್ಲಿ ಸಸ್ಯಹಾರಿ ಪ್ರಾಣಿಗಳಿಗೆ ಬೇಕಾಗುವ ನೇರಳೆ, ಹಲಸು ಮರಗಳನ್ನು ಮತ್ತು ಗಿಡಮೂಲಿಕೆ ಗಿಡಗಳನ್ನು ಬೆಳೆಸುವ ಗೋಜಿಗೆ ಅರಣ್ಯ ಇಲಾಖೆ ಹೊಗುತ್ತಿಲ್ಲ. ಹೀಗಾಗಿ ಅಲ್ಲಿ ಸಸ್ಯಹಾರಿ ಪ್ರಾಣಿಗಳು ವಾಸಿಸುತ್ತಿಲ್ಲ.

ಸಸ್ಯಹಾರಿ ಪ್ರಾಣಿಗಳನ್ನು ತಿಂದು ಜೀವಿಸುವ ಚಿರತೆಗಳಿಗೆ ಆಹಾರದ ಸಮಸ್ಯೆ ಎದುರಾಗಿದೆ. ಅರಣ್ಯ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತದೆ. ಆದರೆ ಕಾಡನ್ನು ವೈಜ್ಞಾನಿಕವಾಗಿ ಬೆಳೆಸುತ್ತಿಲ್ಲ. ನೀಲಗಿರಿ, ಅಕೇಶಿಯಾ ಗಿಡಗಳನ್ನು ಬೆಳೆಸಿದರೆ ಪ್ರಾಣಿಗಳಿಗೆ ಆಗುವ ಪ್ರಯೋಜವೇನು? ಇದರಿಂದ ಸಸ್ಯಹಾರಿ ಮತ್ತು ಮಾಂಸಹಾರಿ ಪ್ರಾಣಿಗಳಿಗೆ ಆಹಾರದ ಸಮಸ್ಯೆ ಅನಿವಾರ್ಯವಾಗಿ ಎದುರಾಗುತ್ತದೆ. ಹೆಚ್ಚು ಹೆಚ್ಚಾಗಿ ಮೊಲ, ಜಿಂಕೆ, ಕೋತಿ ಮೊದಲಾದ ಪ್ರಾಣಿಗಳು ಕಾಡಿನಲ್ಲಿ ಇದ್ದರೆ ಚಿರತೆಗಳು ನಾಡಿಗೆ ಬರುವುದಿಲ್ಲ. ಮೇಕೆ, ಕುರಿ ಮತ್ತು ಮನುಷ್ಯನ ಮೇಲೆ ದಾಳಿ ಮಾಡುವುದಿಲ್ಲ.

ಆನಂದ್‌ ಪಟೇಲ್‌

ಕೇವಲ ದಾಳಿಯಾದಾಗ ಮಾತ್ರ ಒಂದು ಚಿರತೆಯನ್ನೋ, ಕರಡಿಯನ್ನೋ ಹಿಡಿದರೆ ಸಮಸ್ಯೆ ಬಗೆಹರಿಯುತ್ತದೆಯೇ? ಮತ್ತೆ ಇನ್ನೊಂದು ಚಿರತೆ ದಾಳಿ ಮಾಡುತ್ತದೆ. ಆನೆಗಳು ದಾಳಿ ಮಾಡುತ್ತವೆ. ಹೀಗಾಗಿ ಅರಣ್ಯೀಕರಣವೆಂದರೆ ಅದು ವೈಜ್ಞಾನಿಕವಾಗಿ ಇರಬೇಕು. ಕಾಡಿನಲ್ಲಿ ಹಣ್ಣಿನ ಮರಗಳನ್ನು ಯಥೇಚ್ಚವಾಗಿ ಬೆಳೆಸಬೇಕು. ಸಸ್ಯಹಾರ ಪ್ರಾಣಿಗಳು ಹೆಚ್ಚಳವಾಗುವಂತೆ ನೋಡಿಕೊಳ್ಳಬೇಕು. ಆಗ ಮಾಂಸಾಹಾರಿಗಳಿಗೂ ಕಾಡಿನಲ್ಲಿಯೇ ಆಹಾರ ದೊರೆಯುತ್ತದೆ. ಇದು ಸಾಮಾನ್ಯ ತಿಳುವಳಿಕೆ. ಇಷ್ಟು ಮಾಡಲಿ ಅರಣ್ಯ ಇಲಾಖೆ.
ಆನಂದ್ ಪಟೇಲ್, ಕರ್ನಾಟಕ ರಾಜ್ಯ ರೈತ ಸಂಘದ ಕುಣಿಗಲ್ ತಾಲೂಕು ಅಧ್ಯಕ್ಷರು.

ಇದುವರೆಗೆ ಚಿರತೆ ಮೂವರನ್ನು ಬಲಿತೆಗೆದುಕೊಂಡಿದೆ. ಕೇವಲ ಪರಿಹಾರ ನೀಡುವುದರಿಂದ ಹೋದ ಪ್ರಾಣ ಬರುತ್ತದೆಯೇ? ಕೊತ್ತಗೆರೆ ಹೋಬಳಿಯ ದೊಡ್ಡಮಳಲವಾಡಿ, ಗಿಡದಪಾಳ್ಯದಲ್ಲಿ ಮೂವರನ್ನು ಕೊಂದು ಹಾಕಿದೆ. ಕಳೆದ 15 ದಿನಗಳ ಹಿಂದೆ ಮಹಿಳೆಯೊಬ್ಬರನ್ನು ಚಿರತೆ ಕೊಂದಿತ್ತು. ಹೀಗೆ ಜೀವ ಹೋಗುತ್ತಲೇ ಇವೆ. ಅರಣ್ಯ ಇಲಾಖೆ ಪುಡಿಗಾಸು ಪರಿಹಾರ ನೀಡುತ್ತಿದೆ. ಇದರಿಂದೇನು ಪ್ರಯೋಜನವಾಗುವುದಿಲ್ಲ. ಚಿರತೆಗಳು ವಾಸಿಸುವಂತಹ ಯೋಗ್ಯ ಆವಾಸ ಸ್ಥಾನಗಳು ಕುಣಿಗಲ್ ತಾಲೂಕಿನಲ್ಲಿ ಇಲ್ಲ.

ಜಿ.ಕೆ.ನಾಗಣ್ಣ

ಜಿ.ಕೆ.ನಾಗಣ್ಣ, ಸಂತೇಮಾವತ್ತೂರು ಗೊಲ್ಲರಹಟ್ಟಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...