Homeಕರ್ನಾಟಕತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ವ್ಯಾಪಕ ಬಲಿ: ಕ್ರಮಕ್ಕೆ ಮುಂದಾಗದ ಸರ್ಕಾರ...

ತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ವ್ಯಾಪಕ ಬಲಿ: ಕ್ರಮಕ್ಕೆ ಮುಂದಾಗದ ಸರ್ಕಾರ…

ಅರಣ್ಯ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತದೆ. ಆದರೆ ಕಾಡನ್ನು ವೈಜ್ಞಾನಿಕವಾಗಿ ಬೆಳೆಸುತ್ತಿಲ್ಲ. ನೀಲಗಿರಿ, ಅಕೇಶಿಯಾ ಗಿಡಗಳನ್ನು ಬೆಳೆಸಿದರೆ ಪ್ರಾಣಿಗಳಿಗೆ ಆಗುವ ಪ್ರಯೋಜವೇನು?

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದೆ. ಯಾವ ಭಾಗದಲ್ಲಿ ನೋಡಿದರೂ ಚಿರತೆ ದಾಳಿಯ ಮಾತುಗಳೇ ಕೇಳಿಬರುತ್ತಿವೆ. ಕಳೆದ ನಾಲ್ಕೈದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಚಿರತೆಗಳ ಸಂತಾನ ಹೆಚ್ಚಾಗಿದೆ. ಅವುಗಳಿಗೆ ಆಹಾರದ ಸಮಸ್ಯೆಯು ಉಂಟಾಗಿದೆ. ಆದರೆ ಅರಣ್ಯ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆ ಸೇರಿದಂತೆ ಕಾಮಗಾರಿಗಳು ಹೆಚ್ಚಿದಂತೆ ಚಿರತೆಗಳು ನಾಡಿನತ್ತ ಆಹಾರ ಹುಡುಕುತ್ತಾ ಬಂದು ದಾಳಿ ಮಾಡುತ್ತಿವೆ.

ತುಮಕೂರು ಜಿಲ್ಲೆಯ ಹತ್ತು ತಾಲೂಕು ಕೇಂದ್ರಗಳಲ್ಲೂ ಚಿರತೆಗಳು ದಾಳಿ ಇಡುತ್ತಲೇ ಇವೆ. ಕುರಿ, ಮೇಕೆ, ದನ ಮೇಯಿಸುವವರನ್ನು ಕಾಡುತ್ತಲೇ ಇವೆ. ಬಹಳಷ್ಟು ಸಲ ಅವರ ಕಣ್ಣಿಗೂ ಬಿದ್ದಿವೆ. ಕುರಿ, ಮೇಕೆಗಳನ್ನು ಹೊತ್ತೊಯ್ದಿವೆ. ನಾಯಿಗಳನ್ನು ತಿಂದು ಹಾಕಿವೆ. ಮನುಷ್ಯರ ಮೇಲೆ ದಾಳಿಯನ್ನೂ ನಡೆಸಿ ಹಲವರನ್ನು ಗಾಯಗೊಳಿಸಿವೆ. ಆದರೂ ಅರಣ್ಯ ಇಲಾಖೆ ಕೈಕಟ್ಟಿ ಕುಳಿತಿದೆ.

ನವೆಂಬರ್ 29ರಂದು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ದೊಡ್ಡ ಮಳಲವಾಡಿಯಲ್ಲಿ ಅರಣ್ಯ ಅಂಚಿನಲ್ಲಿ ಹೊಲದಲ್ಲಿ ಕುರಿ ಮೇಯಿಸುತ್ತಿದ್ದ  ಆನಂದಯ್ಯ ಎಂಬುವರ ಮೇಲೆ ಚಿರತೆ ಎರಗಿದೆ. ಕುತ್ತಿಗೆಗೆ ಬಾಯಿ ಹಾಕಿ ರಕ್ತವನ್ನು ಕುಡಿದಿದೆ. ಆನಂದಯ್ಯ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ. ಆನಂದಯ್ಯ ಅವರ ಕುತ್ತಿಗೆಯ ಭಾಗದಲ್ಲಿ ಚಿರತೆಯ ಹಲ್ಲುಗಳ ಆಳವಾಗಿ ಒಳಹೊಕ್ಕಿರುವುದು ಕಂಡು ಬಂದಿದೆ. ಅರಣ್ಯ ಅಧಿಕಾರಿಗಳು ಆ ಚಿರತೆಗಾಗಿ ಶೋಧ ಮುಂದುವರಿಸಿದ್ದಾರೆ.

ಚಿರತೆ ದಾಳಿಗೆ ಮೃತಪಟ್ಟ ಆನಂದಯ್ಯ

ಮನುಷ್ಯರ ರಕ್ತದ ರುಚಿಯನ್ನು ಕಂಡಿರುವ ಚಿರತೆ, ಇದುವರೆಗೆ ಇಬ್ಬರನ್ನು ಬಲಿತೆಗೆದುಕೊಂಡಿದೆ. ಚಿರತೆ ದಾಳಿ ನಡೆಯುತ್ತಿರುವ ಬಗ್ಗೆ ಗ್ರಾಮಸ್ಥರು ನಿರಂತರವಾಗಿ ಅರಣ್ಯ ಇಲಾಖೆಗೆ ಮನವಿಗಳ ಮೇಲೆ ಮನವಿ ಸಲ್ಲಿಸುತ್ತಿದ್ದರೂ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ. ಗ್ರಾಮಸ್ಥರ ಪ್ರತಿಭಟನೆ ಮತ್ತು ಒತ್ತಡ ಹೆಚ್ಚಾದಾಗ ಬೋನಿಟ್ಟು ಹಿಡಿದು ಅರಣ್ಯಕ್ಕೆ ಬಿಡುವ ಒಂದೆರಡು ಪ್ರಕರಣಗಳನ್ನು ಬಿಟ್ಟರೆ ಉಳಿದಂತೆ ಏನೂ ಆಗಿಲ್ಲ.

ಬೆಟ್ಟಗುಡ್ಡಗಳಲ್ಲಿ ಮತ್ತು ಅರಣ್ಯದಲ್ಲಿ ಅಕ್ರಮ-ಸಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿದ್ದು, ವ್ಯನ್ಯಜೀವಿಗಳ ಆವಾಸ ಸ್ಥಾನದಲ್ಲಿ ಪ್ರಾಣಿಗಳು ವಾಸಿಸಲು ಅಡ್ಡಿಯಾಗುತ್ತಿದೆ. ಅರಣ್ಯದಲ್ಲಿ ಆಹಾರದ ಕೊರತೆಯಾಗಿರುವುದು ಕೂಡ ಚಿರತೆಗಳು ಕುರಿ, ಮೇಕೆ ಮತ್ತು ನಾಯಿಗಳ ಮೇಲೆ ದಾಳಿ ನಡೆಸಲು ಕಾರಣವಾಗಿದೆ. ಚಿರತೆಗಳು ಆಗೊಮ್ಮೆ ಈಗೊಮ್ಮೆ ಮನುಷ್ಯನ ಮೇಲೆಯೂ ಎರಗಿ ಗಾಯಗೊಳಿಸಿರುವುದೂ ಉಂಟು.

ಚಿರತೆ ದಾಳಿಯಂತಹ ಘಟನೆಗಳು ಪದೇ ಪದೇ ನಡೆಯುತ್ತಿದ್ದರೂ, ಕುರಿಗಾಹಿಗಳು, ಮೇಕೆ ಕಾಯುವವರು ಮತ್ತು ಇತರರು ದಾಳಿಗೆ ಒಳಗಾಗಿ ಗಾಯಗೊಂಡು ಆಸ್ಪತ್ರೆ ಸೇರುತ್ತಲೇ ಇದ್ದಾರೆ. ಹೀಗೆ ಚಿರತೆ ದಾಳಿಯಿಂದ ಸಾಕು ಪ್ರಾಣಿಗಳನ್ನು ಕಳೆದುಕೊಂಡವರಿಗೆ ಇದುವರೆಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಗಾಯಗೊಂಡವರಿಗೂ ಪರಿಹಾರ ಲಭಿಸಿಲ್ಲ. ಇದರಿಂದ ಜನರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕರಡಿ, ಚಿರತೆ, ದಾಳಿಯಿಂದ ಬೇಸತ್ತಿರುವ ಜನರು ಗ್ರಾಮದ ಹೊರಗೆ ಒಬ್ಬೊಬ್ಬರೇ ಹೋಗಲು ಭಯಪಡುತ್ತಿದ್ದಾರೆ. ರಾತ್ರಿ ವೇಳೆ ಹೊಲಗಳಿಗೆ ಹೋಗಿ ಬೋರ್ ಮೂಲಕ ನೀರು ಹಾಯಿಸಲು ಹೋಗುವವರು ತಮ್ಮ ಜೀವಗಳನ್ನು ಕೈಯಲ್ಲಿ ಹಿಡಿದುಕೊಂಡು ಭಯದಲ್ಲೇ ಹೋಗುವಂತಹ ಪರಿಸ್ಥಿತಿ ಬಂದಿದೆ. ಕುರಿ, ಮೇಕೆ ಮೇಯಿಸುವವರು ಅರಣ್ಯದ ಅಂಚಿಗೆ ಹೋಗಲು ಹೆದರಿಕೊಳ್ಳುತ್ತಿದ್ದಾರೆ. ಅದು ಒಬ್ಬಂಟಿಯಾಗಿ ಹೋಗುವುದು ಹೇಗೆ ಎಂದು ಚಿಂತಾಕ್ರಾಂತರಾಗಿದ್ದಾರೆ. ವನ್ಯಜೀವಿಗಳಿಂದ ಗಾಯಗೊಂಡವರಿಗೆ ಮತ್ತು ಸಾಕುಪ್ರಾಣಿಗಳನ್ನು ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕೆಂಬ ಒತ್ತಾಯ ವ್ಯಾಪಕವಾಗಿ ಕೇಳಿಬಂದಿದೆ.

ಅದಕ್ಕೂ ಮೊದಲು ಚಿರತೆ ದಾಳಿ ತಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಅರಣ್ಯದಲ್ಲಿ ಅವುಗಳಿಗೆ ಸಾಕಷ್ಟು ಆಹಾರ ಸಿಗುವಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲಿ ನಡೆಯುವ ಅಕ್ರಮ ಗಣಿಗಾರಿಕೆಗೆ ಅಂಕುಶ ಬೀಳಬೇಕು. ಆಗ ಮಾತ್ರ ಅವು ಮನುಷ್ಯರ ಮೇಲೆ ಎರಗುವುದನ್ನು ನಿಲ್ಲಿಸುತ್ತವೆ. ಇದರ ಜೊತೆಗೆ ಮಾನವ ಮತ್ತು ವನ್ಯಜೀವಿಗಳ ಸಂಘರ್ಷ ತಡೆಯಲು ಸಾಧ್ಯವಾಗುತ್ತದೆ.

ಅರಣ್ಯ ಇಲಾಖೆ ಕೈಕಟ್ಟಿ ಕುಳಿತರೆ ಯಾವುದೇ ಪರಿಹಾರ ಸಿಗುವುದಿಲ್ಲ. ಸರ್ಕಾರಕ್ಕೆ ಅಗತ್ಯ ಮಾಹಿತಿ ನೀಡಿ ಅರಣ್ಯದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಹೋರಾಟಗಾರರು ಮತ್ತು ಸಂತ್ರಸ್ತರನ್ನು ಮಾತನಾಡಿಸಲಾಯಿತು. ಅವರು ಹೇಳಿಕೆಗಳು ಕೆಳಗಿನಂತಿವೆ.

ಮೂಲ ಸಮಸ್ಯೆಯನ್ನು ಪರಿಹರಿಸುವುದು ಯಾರಿಗೂ ಬೇಕಾಗಿಲ್ಲ. ಚಿರತೆ ದಾಳಿಯ ಮೂಲ ಸಮಸ್ಯೆ ಯಾರಿಗೂ ಗೊತ್ತಿಲ್ಲ. ಅರಣ್ಯ ಅಧಿಕಾರಿಗಳು, ಶಾಸಕರು, ಸಂಸದರು ಮತ್ತು ಮಂತ್ರಿಗಳು ಇದರ ಬಗ್ಗೆ ಯೋಚಿಸುತ್ತಿಲ್ಲ. ಅರಣ್ಯ ಕಡಿಯುವುದರಿಂದ ಸಮಸ್ಯೆ ಉಂಟಾಗಿದೆ ಎಂದು ಬಿಂಬಿಸಲಾಗುತ್ತಿದೆ. ಇದು ಪ್ರಶ್ನೆಯೇ ಅಲ್ಲ. ಕಾಡಿನಲ್ಲಿ ಸಸ್ಯಹಾರಿ ಪ್ರಾಣಿಗಳಿಗೆ ಬೇಕಾಗುವ ನೇರಳೆ, ಹಲಸು ಮರಗಳನ್ನು ಮತ್ತು ಗಿಡಮೂಲಿಕೆ ಗಿಡಗಳನ್ನು ಬೆಳೆಸುವ ಗೋಜಿಗೆ ಅರಣ್ಯ ಇಲಾಖೆ ಹೊಗುತ್ತಿಲ್ಲ. ಹೀಗಾಗಿ ಅಲ್ಲಿ ಸಸ್ಯಹಾರಿ ಪ್ರಾಣಿಗಳು ವಾಸಿಸುತ್ತಿಲ್ಲ.

ಸಸ್ಯಹಾರಿ ಪ್ರಾಣಿಗಳನ್ನು ತಿಂದು ಜೀವಿಸುವ ಚಿರತೆಗಳಿಗೆ ಆಹಾರದ ಸಮಸ್ಯೆ ಎದುರಾಗಿದೆ. ಅರಣ್ಯ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತದೆ. ಆದರೆ ಕಾಡನ್ನು ವೈಜ್ಞಾನಿಕವಾಗಿ ಬೆಳೆಸುತ್ತಿಲ್ಲ. ನೀಲಗಿರಿ, ಅಕೇಶಿಯಾ ಗಿಡಗಳನ್ನು ಬೆಳೆಸಿದರೆ ಪ್ರಾಣಿಗಳಿಗೆ ಆಗುವ ಪ್ರಯೋಜವೇನು? ಇದರಿಂದ ಸಸ್ಯಹಾರಿ ಮತ್ತು ಮಾಂಸಹಾರಿ ಪ್ರಾಣಿಗಳಿಗೆ ಆಹಾರದ ಸಮಸ್ಯೆ ಅನಿವಾರ್ಯವಾಗಿ ಎದುರಾಗುತ್ತದೆ. ಹೆಚ್ಚು ಹೆಚ್ಚಾಗಿ ಮೊಲ, ಜಿಂಕೆ, ಕೋತಿ ಮೊದಲಾದ ಪ್ರಾಣಿಗಳು ಕಾಡಿನಲ್ಲಿ ಇದ್ದರೆ ಚಿರತೆಗಳು ನಾಡಿಗೆ ಬರುವುದಿಲ್ಲ. ಮೇಕೆ, ಕುರಿ ಮತ್ತು ಮನುಷ್ಯನ ಮೇಲೆ ದಾಳಿ ಮಾಡುವುದಿಲ್ಲ.

ಆನಂದ್‌ ಪಟೇಲ್‌

ಕೇವಲ ದಾಳಿಯಾದಾಗ ಮಾತ್ರ ಒಂದು ಚಿರತೆಯನ್ನೋ, ಕರಡಿಯನ್ನೋ ಹಿಡಿದರೆ ಸಮಸ್ಯೆ ಬಗೆಹರಿಯುತ್ತದೆಯೇ? ಮತ್ತೆ ಇನ್ನೊಂದು ಚಿರತೆ ದಾಳಿ ಮಾಡುತ್ತದೆ. ಆನೆಗಳು ದಾಳಿ ಮಾಡುತ್ತವೆ. ಹೀಗಾಗಿ ಅರಣ್ಯೀಕರಣವೆಂದರೆ ಅದು ವೈಜ್ಞಾನಿಕವಾಗಿ ಇರಬೇಕು. ಕಾಡಿನಲ್ಲಿ ಹಣ್ಣಿನ ಮರಗಳನ್ನು ಯಥೇಚ್ಚವಾಗಿ ಬೆಳೆಸಬೇಕು. ಸಸ್ಯಹಾರ ಪ್ರಾಣಿಗಳು ಹೆಚ್ಚಳವಾಗುವಂತೆ ನೋಡಿಕೊಳ್ಳಬೇಕು. ಆಗ ಮಾಂಸಾಹಾರಿಗಳಿಗೂ ಕಾಡಿನಲ್ಲಿಯೇ ಆಹಾರ ದೊರೆಯುತ್ತದೆ. ಇದು ಸಾಮಾನ್ಯ ತಿಳುವಳಿಕೆ. ಇಷ್ಟು ಮಾಡಲಿ ಅರಣ್ಯ ಇಲಾಖೆ.
ಆನಂದ್ ಪಟೇಲ್, ಕರ್ನಾಟಕ ರಾಜ್ಯ ರೈತ ಸಂಘದ ಕುಣಿಗಲ್ ತಾಲೂಕು ಅಧ್ಯಕ್ಷರು.

ಇದುವರೆಗೆ ಚಿರತೆ ಮೂವರನ್ನು ಬಲಿತೆಗೆದುಕೊಂಡಿದೆ. ಕೇವಲ ಪರಿಹಾರ ನೀಡುವುದರಿಂದ ಹೋದ ಪ್ರಾಣ ಬರುತ್ತದೆಯೇ? ಕೊತ್ತಗೆರೆ ಹೋಬಳಿಯ ದೊಡ್ಡಮಳಲವಾಡಿ, ಗಿಡದಪಾಳ್ಯದಲ್ಲಿ ಮೂವರನ್ನು ಕೊಂದು ಹಾಕಿದೆ. ಕಳೆದ 15 ದಿನಗಳ ಹಿಂದೆ ಮಹಿಳೆಯೊಬ್ಬರನ್ನು ಚಿರತೆ ಕೊಂದಿತ್ತು. ಹೀಗೆ ಜೀವ ಹೋಗುತ್ತಲೇ ಇವೆ. ಅರಣ್ಯ ಇಲಾಖೆ ಪುಡಿಗಾಸು ಪರಿಹಾರ ನೀಡುತ್ತಿದೆ. ಇದರಿಂದೇನು ಪ್ರಯೋಜನವಾಗುವುದಿಲ್ಲ. ಚಿರತೆಗಳು ವಾಸಿಸುವಂತಹ ಯೋಗ್ಯ ಆವಾಸ ಸ್ಥಾನಗಳು ಕುಣಿಗಲ್ ತಾಲೂಕಿನಲ್ಲಿ ಇಲ್ಲ.

ಜಿ.ಕೆ.ನಾಗಣ್ಣ

ಜಿ.ಕೆ.ನಾಗಣ್ಣ, ಸಂತೇಮಾವತ್ತೂರು ಗೊಲ್ಲರಹಟ್ಟಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...