Homeಕರ್ನಾಟಕತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ವ್ಯಾಪಕ ಬಲಿ: ಕ್ರಮಕ್ಕೆ ಮುಂದಾಗದ ಸರ್ಕಾರ...

ತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ವ್ಯಾಪಕ ಬಲಿ: ಕ್ರಮಕ್ಕೆ ಮುಂದಾಗದ ಸರ್ಕಾರ…

ಅರಣ್ಯ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತದೆ. ಆದರೆ ಕಾಡನ್ನು ವೈಜ್ಞಾನಿಕವಾಗಿ ಬೆಳೆಸುತ್ತಿಲ್ಲ. ನೀಲಗಿರಿ, ಅಕೇಶಿಯಾ ಗಿಡಗಳನ್ನು ಬೆಳೆಸಿದರೆ ಪ್ರಾಣಿಗಳಿಗೆ ಆಗುವ ಪ್ರಯೋಜವೇನು?

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದೆ. ಯಾವ ಭಾಗದಲ್ಲಿ ನೋಡಿದರೂ ಚಿರತೆ ದಾಳಿಯ ಮಾತುಗಳೇ ಕೇಳಿಬರುತ್ತಿವೆ. ಕಳೆದ ನಾಲ್ಕೈದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಚಿರತೆಗಳ ಸಂತಾನ ಹೆಚ್ಚಾಗಿದೆ. ಅವುಗಳಿಗೆ ಆಹಾರದ ಸಮಸ್ಯೆಯು ಉಂಟಾಗಿದೆ. ಆದರೆ ಅರಣ್ಯ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆ ಸೇರಿದಂತೆ ಕಾಮಗಾರಿಗಳು ಹೆಚ್ಚಿದಂತೆ ಚಿರತೆಗಳು ನಾಡಿನತ್ತ ಆಹಾರ ಹುಡುಕುತ್ತಾ ಬಂದು ದಾಳಿ ಮಾಡುತ್ತಿವೆ.

ತುಮಕೂರು ಜಿಲ್ಲೆಯ ಹತ್ತು ತಾಲೂಕು ಕೇಂದ್ರಗಳಲ್ಲೂ ಚಿರತೆಗಳು ದಾಳಿ ಇಡುತ್ತಲೇ ಇವೆ. ಕುರಿ, ಮೇಕೆ, ದನ ಮೇಯಿಸುವವರನ್ನು ಕಾಡುತ್ತಲೇ ಇವೆ. ಬಹಳಷ್ಟು ಸಲ ಅವರ ಕಣ್ಣಿಗೂ ಬಿದ್ದಿವೆ. ಕುರಿ, ಮೇಕೆಗಳನ್ನು ಹೊತ್ತೊಯ್ದಿವೆ. ನಾಯಿಗಳನ್ನು ತಿಂದು ಹಾಕಿವೆ. ಮನುಷ್ಯರ ಮೇಲೆ ದಾಳಿಯನ್ನೂ ನಡೆಸಿ ಹಲವರನ್ನು ಗಾಯಗೊಳಿಸಿವೆ. ಆದರೂ ಅರಣ್ಯ ಇಲಾಖೆ ಕೈಕಟ್ಟಿ ಕುಳಿತಿದೆ.

ನವೆಂಬರ್ 29ರಂದು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ದೊಡ್ಡ ಮಳಲವಾಡಿಯಲ್ಲಿ ಅರಣ್ಯ ಅಂಚಿನಲ್ಲಿ ಹೊಲದಲ್ಲಿ ಕುರಿ ಮೇಯಿಸುತ್ತಿದ್ದ  ಆನಂದಯ್ಯ ಎಂಬುವರ ಮೇಲೆ ಚಿರತೆ ಎರಗಿದೆ. ಕುತ್ತಿಗೆಗೆ ಬಾಯಿ ಹಾಕಿ ರಕ್ತವನ್ನು ಕುಡಿದಿದೆ. ಆನಂದಯ್ಯ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ. ಆನಂದಯ್ಯ ಅವರ ಕುತ್ತಿಗೆಯ ಭಾಗದಲ್ಲಿ ಚಿರತೆಯ ಹಲ್ಲುಗಳ ಆಳವಾಗಿ ಒಳಹೊಕ್ಕಿರುವುದು ಕಂಡು ಬಂದಿದೆ. ಅರಣ್ಯ ಅಧಿಕಾರಿಗಳು ಆ ಚಿರತೆಗಾಗಿ ಶೋಧ ಮುಂದುವರಿಸಿದ್ದಾರೆ.

ಚಿರತೆ ದಾಳಿಗೆ ಮೃತಪಟ್ಟ ಆನಂದಯ್ಯ

ಮನುಷ್ಯರ ರಕ್ತದ ರುಚಿಯನ್ನು ಕಂಡಿರುವ ಚಿರತೆ, ಇದುವರೆಗೆ ಇಬ್ಬರನ್ನು ಬಲಿತೆಗೆದುಕೊಂಡಿದೆ. ಚಿರತೆ ದಾಳಿ ನಡೆಯುತ್ತಿರುವ ಬಗ್ಗೆ ಗ್ರಾಮಸ್ಥರು ನಿರಂತರವಾಗಿ ಅರಣ್ಯ ಇಲಾಖೆಗೆ ಮನವಿಗಳ ಮೇಲೆ ಮನವಿ ಸಲ್ಲಿಸುತ್ತಿದ್ದರೂ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ. ಗ್ರಾಮಸ್ಥರ ಪ್ರತಿಭಟನೆ ಮತ್ತು ಒತ್ತಡ ಹೆಚ್ಚಾದಾಗ ಬೋನಿಟ್ಟು ಹಿಡಿದು ಅರಣ್ಯಕ್ಕೆ ಬಿಡುವ ಒಂದೆರಡು ಪ್ರಕರಣಗಳನ್ನು ಬಿಟ್ಟರೆ ಉಳಿದಂತೆ ಏನೂ ಆಗಿಲ್ಲ.

ಬೆಟ್ಟಗುಡ್ಡಗಳಲ್ಲಿ ಮತ್ತು ಅರಣ್ಯದಲ್ಲಿ ಅಕ್ರಮ-ಸಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿದ್ದು, ವ್ಯನ್ಯಜೀವಿಗಳ ಆವಾಸ ಸ್ಥಾನದಲ್ಲಿ ಪ್ರಾಣಿಗಳು ವಾಸಿಸಲು ಅಡ್ಡಿಯಾಗುತ್ತಿದೆ. ಅರಣ್ಯದಲ್ಲಿ ಆಹಾರದ ಕೊರತೆಯಾಗಿರುವುದು ಕೂಡ ಚಿರತೆಗಳು ಕುರಿ, ಮೇಕೆ ಮತ್ತು ನಾಯಿಗಳ ಮೇಲೆ ದಾಳಿ ನಡೆಸಲು ಕಾರಣವಾಗಿದೆ. ಚಿರತೆಗಳು ಆಗೊಮ್ಮೆ ಈಗೊಮ್ಮೆ ಮನುಷ್ಯನ ಮೇಲೆಯೂ ಎರಗಿ ಗಾಯಗೊಳಿಸಿರುವುದೂ ಉಂಟು.

ಚಿರತೆ ದಾಳಿಯಂತಹ ಘಟನೆಗಳು ಪದೇ ಪದೇ ನಡೆಯುತ್ತಿದ್ದರೂ, ಕುರಿಗಾಹಿಗಳು, ಮೇಕೆ ಕಾಯುವವರು ಮತ್ತು ಇತರರು ದಾಳಿಗೆ ಒಳಗಾಗಿ ಗಾಯಗೊಂಡು ಆಸ್ಪತ್ರೆ ಸೇರುತ್ತಲೇ ಇದ್ದಾರೆ. ಹೀಗೆ ಚಿರತೆ ದಾಳಿಯಿಂದ ಸಾಕು ಪ್ರಾಣಿಗಳನ್ನು ಕಳೆದುಕೊಂಡವರಿಗೆ ಇದುವರೆಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಗಾಯಗೊಂಡವರಿಗೂ ಪರಿಹಾರ ಲಭಿಸಿಲ್ಲ. ಇದರಿಂದ ಜನರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕರಡಿ, ಚಿರತೆ, ದಾಳಿಯಿಂದ ಬೇಸತ್ತಿರುವ ಜನರು ಗ್ರಾಮದ ಹೊರಗೆ ಒಬ್ಬೊಬ್ಬರೇ ಹೋಗಲು ಭಯಪಡುತ್ತಿದ್ದಾರೆ. ರಾತ್ರಿ ವೇಳೆ ಹೊಲಗಳಿಗೆ ಹೋಗಿ ಬೋರ್ ಮೂಲಕ ನೀರು ಹಾಯಿಸಲು ಹೋಗುವವರು ತಮ್ಮ ಜೀವಗಳನ್ನು ಕೈಯಲ್ಲಿ ಹಿಡಿದುಕೊಂಡು ಭಯದಲ್ಲೇ ಹೋಗುವಂತಹ ಪರಿಸ್ಥಿತಿ ಬಂದಿದೆ. ಕುರಿ, ಮೇಕೆ ಮೇಯಿಸುವವರು ಅರಣ್ಯದ ಅಂಚಿಗೆ ಹೋಗಲು ಹೆದರಿಕೊಳ್ಳುತ್ತಿದ್ದಾರೆ. ಅದು ಒಬ್ಬಂಟಿಯಾಗಿ ಹೋಗುವುದು ಹೇಗೆ ಎಂದು ಚಿಂತಾಕ್ರಾಂತರಾಗಿದ್ದಾರೆ. ವನ್ಯಜೀವಿಗಳಿಂದ ಗಾಯಗೊಂಡವರಿಗೆ ಮತ್ತು ಸಾಕುಪ್ರಾಣಿಗಳನ್ನು ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕೆಂಬ ಒತ್ತಾಯ ವ್ಯಾಪಕವಾಗಿ ಕೇಳಿಬಂದಿದೆ.

ಅದಕ್ಕೂ ಮೊದಲು ಚಿರತೆ ದಾಳಿ ತಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಅರಣ್ಯದಲ್ಲಿ ಅವುಗಳಿಗೆ ಸಾಕಷ್ಟು ಆಹಾರ ಸಿಗುವಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲಿ ನಡೆಯುವ ಅಕ್ರಮ ಗಣಿಗಾರಿಕೆಗೆ ಅಂಕುಶ ಬೀಳಬೇಕು. ಆಗ ಮಾತ್ರ ಅವು ಮನುಷ್ಯರ ಮೇಲೆ ಎರಗುವುದನ್ನು ನಿಲ್ಲಿಸುತ್ತವೆ. ಇದರ ಜೊತೆಗೆ ಮಾನವ ಮತ್ತು ವನ್ಯಜೀವಿಗಳ ಸಂಘರ್ಷ ತಡೆಯಲು ಸಾಧ್ಯವಾಗುತ್ತದೆ.

ಅರಣ್ಯ ಇಲಾಖೆ ಕೈಕಟ್ಟಿ ಕುಳಿತರೆ ಯಾವುದೇ ಪರಿಹಾರ ಸಿಗುವುದಿಲ್ಲ. ಸರ್ಕಾರಕ್ಕೆ ಅಗತ್ಯ ಮಾಹಿತಿ ನೀಡಿ ಅರಣ್ಯದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಹೋರಾಟಗಾರರು ಮತ್ತು ಸಂತ್ರಸ್ತರನ್ನು ಮಾತನಾಡಿಸಲಾಯಿತು. ಅವರು ಹೇಳಿಕೆಗಳು ಕೆಳಗಿನಂತಿವೆ.

ಮೂಲ ಸಮಸ್ಯೆಯನ್ನು ಪರಿಹರಿಸುವುದು ಯಾರಿಗೂ ಬೇಕಾಗಿಲ್ಲ. ಚಿರತೆ ದಾಳಿಯ ಮೂಲ ಸಮಸ್ಯೆ ಯಾರಿಗೂ ಗೊತ್ತಿಲ್ಲ. ಅರಣ್ಯ ಅಧಿಕಾರಿಗಳು, ಶಾಸಕರು, ಸಂಸದರು ಮತ್ತು ಮಂತ್ರಿಗಳು ಇದರ ಬಗ್ಗೆ ಯೋಚಿಸುತ್ತಿಲ್ಲ. ಅರಣ್ಯ ಕಡಿಯುವುದರಿಂದ ಸಮಸ್ಯೆ ಉಂಟಾಗಿದೆ ಎಂದು ಬಿಂಬಿಸಲಾಗುತ್ತಿದೆ. ಇದು ಪ್ರಶ್ನೆಯೇ ಅಲ್ಲ. ಕಾಡಿನಲ್ಲಿ ಸಸ್ಯಹಾರಿ ಪ್ರಾಣಿಗಳಿಗೆ ಬೇಕಾಗುವ ನೇರಳೆ, ಹಲಸು ಮರಗಳನ್ನು ಮತ್ತು ಗಿಡಮೂಲಿಕೆ ಗಿಡಗಳನ್ನು ಬೆಳೆಸುವ ಗೋಜಿಗೆ ಅರಣ್ಯ ಇಲಾಖೆ ಹೊಗುತ್ತಿಲ್ಲ. ಹೀಗಾಗಿ ಅಲ್ಲಿ ಸಸ್ಯಹಾರಿ ಪ್ರಾಣಿಗಳು ವಾಸಿಸುತ್ತಿಲ್ಲ.

ಸಸ್ಯಹಾರಿ ಪ್ರಾಣಿಗಳನ್ನು ತಿಂದು ಜೀವಿಸುವ ಚಿರತೆಗಳಿಗೆ ಆಹಾರದ ಸಮಸ್ಯೆ ಎದುರಾಗಿದೆ. ಅರಣ್ಯ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತದೆ. ಆದರೆ ಕಾಡನ್ನು ವೈಜ್ಞಾನಿಕವಾಗಿ ಬೆಳೆಸುತ್ತಿಲ್ಲ. ನೀಲಗಿರಿ, ಅಕೇಶಿಯಾ ಗಿಡಗಳನ್ನು ಬೆಳೆಸಿದರೆ ಪ್ರಾಣಿಗಳಿಗೆ ಆಗುವ ಪ್ರಯೋಜವೇನು? ಇದರಿಂದ ಸಸ್ಯಹಾರಿ ಮತ್ತು ಮಾಂಸಹಾರಿ ಪ್ರಾಣಿಗಳಿಗೆ ಆಹಾರದ ಸಮಸ್ಯೆ ಅನಿವಾರ್ಯವಾಗಿ ಎದುರಾಗುತ್ತದೆ. ಹೆಚ್ಚು ಹೆಚ್ಚಾಗಿ ಮೊಲ, ಜಿಂಕೆ, ಕೋತಿ ಮೊದಲಾದ ಪ್ರಾಣಿಗಳು ಕಾಡಿನಲ್ಲಿ ಇದ್ದರೆ ಚಿರತೆಗಳು ನಾಡಿಗೆ ಬರುವುದಿಲ್ಲ. ಮೇಕೆ, ಕುರಿ ಮತ್ತು ಮನುಷ್ಯನ ಮೇಲೆ ದಾಳಿ ಮಾಡುವುದಿಲ್ಲ.

ಆನಂದ್‌ ಪಟೇಲ್‌

ಕೇವಲ ದಾಳಿಯಾದಾಗ ಮಾತ್ರ ಒಂದು ಚಿರತೆಯನ್ನೋ, ಕರಡಿಯನ್ನೋ ಹಿಡಿದರೆ ಸಮಸ್ಯೆ ಬಗೆಹರಿಯುತ್ತದೆಯೇ? ಮತ್ತೆ ಇನ್ನೊಂದು ಚಿರತೆ ದಾಳಿ ಮಾಡುತ್ತದೆ. ಆನೆಗಳು ದಾಳಿ ಮಾಡುತ್ತವೆ. ಹೀಗಾಗಿ ಅರಣ್ಯೀಕರಣವೆಂದರೆ ಅದು ವೈಜ್ಞಾನಿಕವಾಗಿ ಇರಬೇಕು. ಕಾಡಿನಲ್ಲಿ ಹಣ್ಣಿನ ಮರಗಳನ್ನು ಯಥೇಚ್ಚವಾಗಿ ಬೆಳೆಸಬೇಕು. ಸಸ್ಯಹಾರ ಪ್ರಾಣಿಗಳು ಹೆಚ್ಚಳವಾಗುವಂತೆ ನೋಡಿಕೊಳ್ಳಬೇಕು. ಆಗ ಮಾಂಸಾಹಾರಿಗಳಿಗೂ ಕಾಡಿನಲ್ಲಿಯೇ ಆಹಾರ ದೊರೆಯುತ್ತದೆ. ಇದು ಸಾಮಾನ್ಯ ತಿಳುವಳಿಕೆ. ಇಷ್ಟು ಮಾಡಲಿ ಅರಣ್ಯ ಇಲಾಖೆ.
ಆನಂದ್ ಪಟೇಲ್, ಕರ್ನಾಟಕ ರಾಜ್ಯ ರೈತ ಸಂಘದ ಕುಣಿಗಲ್ ತಾಲೂಕು ಅಧ್ಯಕ್ಷರು.

ಇದುವರೆಗೆ ಚಿರತೆ ಮೂವರನ್ನು ಬಲಿತೆಗೆದುಕೊಂಡಿದೆ. ಕೇವಲ ಪರಿಹಾರ ನೀಡುವುದರಿಂದ ಹೋದ ಪ್ರಾಣ ಬರುತ್ತದೆಯೇ? ಕೊತ್ತಗೆರೆ ಹೋಬಳಿಯ ದೊಡ್ಡಮಳಲವಾಡಿ, ಗಿಡದಪಾಳ್ಯದಲ್ಲಿ ಮೂವರನ್ನು ಕೊಂದು ಹಾಕಿದೆ. ಕಳೆದ 15 ದಿನಗಳ ಹಿಂದೆ ಮಹಿಳೆಯೊಬ್ಬರನ್ನು ಚಿರತೆ ಕೊಂದಿತ್ತು. ಹೀಗೆ ಜೀವ ಹೋಗುತ್ತಲೇ ಇವೆ. ಅರಣ್ಯ ಇಲಾಖೆ ಪುಡಿಗಾಸು ಪರಿಹಾರ ನೀಡುತ್ತಿದೆ. ಇದರಿಂದೇನು ಪ್ರಯೋಜನವಾಗುವುದಿಲ್ಲ. ಚಿರತೆಗಳು ವಾಸಿಸುವಂತಹ ಯೋಗ್ಯ ಆವಾಸ ಸ್ಥಾನಗಳು ಕುಣಿಗಲ್ ತಾಲೂಕಿನಲ್ಲಿ ಇಲ್ಲ.

ಜಿ.ಕೆ.ನಾಗಣ್ಣ

ಜಿ.ಕೆ.ನಾಗಣ್ಣ, ಸಂತೇಮಾವತ್ತೂರು ಗೊಲ್ಲರಹಟ್ಟಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...