Homeಕರ್ನಾಟಕತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ವ್ಯಾಪಕ ಬಲಿ: ಕ್ರಮಕ್ಕೆ ಮುಂದಾಗದ ಸರ್ಕಾರ...

ತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ವ್ಯಾಪಕ ಬಲಿ: ಕ್ರಮಕ್ಕೆ ಮುಂದಾಗದ ಸರ್ಕಾರ…

ಅರಣ್ಯ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತದೆ. ಆದರೆ ಕಾಡನ್ನು ವೈಜ್ಞಾನಿಕವಾಗಿ ಬೆಳೆಸುತ್ತಿಲ್ಲ. ನೀಲಗಿರಿ, ಅಕೇಶಿಯಾ ಗಿಡಗಳನ್ನು ಬೆಳೆಸಿದರೆ ಪ್ರಾಣಿಗಳಿಗೆ ಆಗುವ ಪ್ರಯೋಜವೇನು?

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದೆ. ಯಾವ ಭಾಗದಲ್ಲಿ ನೋಡಿದರೂ ಚಿರತೆ ದಾಳಿಯ ಮಾತುಗಳೇ ಕೇಳಿಬರುತ್ತಿವೆ. ಕಳೆದ ನಾಲ್ಕೈದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಚಿರತೆಗಳ ಸಂತಾನ ಹೆಚ್ಚಾಗಿದೆ. ಅವುಗಳಿಗೆ ಆಹಾರದ ಸಮಸ್ಯೆಯು ಉಂಟಾಗಿದೆ. ಆದರೆ ಅರಣ್ಯ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆ ಸೇರಿದಂತೆ ಕಾಮಗಾರಿಗಳು ಹೆಚ್ಚಿದಂತೆ ಚಿರತೆಗಳು ನಾಡಿನತ್ತ ಆಹಾರ ಹುಡುಕುತ್ತಾ ಬಂದು ದಾಳಿ ಮಾಡುತ್ತಿವೆ.

ತುಮಕೂರು ಜಿಲ್ಲೆಯ ಹತ್ತು ತಾಲೂಕು ಕೇಂದ್ರಗಳಲ್ಲೂ ಚಿರತೆಗಳು ದಾಳಿ ಇಡುತ್ತಲೇ ಇವೆ. ಕುರಿ, ಮೇಕೆ, ದನ ಮೇಯಿಸುವವರನ್ನು ಕಾಡುತ್ತಲೇ ಇವೆ. ಬಹಳಷ್ಟು ಸಲ ಅವರ ಕಣ್ಣಿಗೂ ಬಿದ್ದಿವೆ. ಕುರಿ, ಮೇಕೆಗಳನ್ನು ಹೊತ್ತೊಯ್ದಿವೆ. ನಾಯಿಗಳನ್ನು ತಿಂದು ಹಾಕಿವೆ. ಮನುಷ್ಯರ ಮೇಲೆ ದಾಳಿಯನ್ನೂ ನಡೆಸಿ ಹಲವರನ್ನು ಗಾಯಗೊಳಿಸಿವೆ. ಆದರೂ ಅರಣ್ಯ ಇಲಾಖೆ ಕೈಕಟ್ಟಿ ಕುಳಿತಿದೆ.

ನವೆಂಬರ್ 29ರಂದು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ದೊಡ್ಡ ಮಳಲವಾಡಿಯಲ್ಲಿ ಅರಣ್ಯ ಅಂಚಿನಲ್ಲಿ ಹೊಲದಲ್ಲಿ ಕುರಿ ಮೇಯಿಸುತ್ತಿದ್ದ  ಆನಂದಯ್ಯ ಎಂಬುವರ ಮೇಲೆ ಚಿರತೆ ಎರಗಿದೆ. ಕುತ್ತಿಗೆಗೆ ಬಾಯಿ ಹಾಕಿ ರಕ್ತವನ್ನು ಕುಡಿದಿದೆ. ಆನಂದಯ್ಯ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ. ಆನಂದಯ್ಯ ಅವರ ಕುತ್ತಿಗೆಯ ಭಾಗದಲ್ಲಿ ಚಿರತೆಯ ಹಲ್ಲುಗಳ ಆಳವಾಗಿ ಒಳಹೊಕ್ಕಿರುವುದು ಕಂಡು ಬಂದಿದೆ. ಅರಣ್ಯ ಅಧಿಕಾರಿಗಳು ಆ ಚಿರತೆಗಾಗಿ ಶೋಧ ಮುಂದುವರಿಸಿದ್ದಾರೆ.

ಚಿರತೆ ದಾಳಿಗೆ ಮೃತಪಟ್ಟ ಆನಂದಯ್ಯ

ಮನುಷ್ಯರ ರಕ್ತದ ರುಚಿಯನ್ನು ಕಂಡಿರುವ ಚಿರತೆ, ಇದುವರೆಗೆ ಇಬ್ಬರನ್ನು ಬಲಿತೆಗೆದುಕೊಂಡಿದೆ. ಚಿರತೆ ದಾಳಿ ನಡೆಯುತ್ತಿರುವ ಬಗ್ಗೆ ಗ್ರಾಮಸ್ಥರು ನಿರಂತರವಾಗಿ ಅರಣ್ಯ ಇಲಾಖೆಗೆ ಮನವಿಗಳ ಮೇಲೆ ಮನವಿ ಸಲ್ಲಿಸುತ್ತಿದ್ದರೂ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ. ಗ್ರಾಮಸ್ಥರ ಪ್ರತಿಭಟನೆ ಮತ್ತು ಒತ್ತಡ ಹೆಚ್ಚಾದಾಗ ಬೋನಿಟ್ಟು ಹಿಡಿದು ಅರಣ್ಯಕ್ಕೆ ಬಿಡುವ ಒಂದೆರಡು ಪ್ರಕರಣಗಳನ್ನು ಬಿಟ್ಟರೆ ಉಳಿದಂತೆ ಏನೂ ಆಗಿಲ್ಲ.

ಬೆಟ್ಟಗುಡ್ಡಗಳಲ್ಲಿ ಮತ್ತು ಅರಣ್ಯದಲ್ಲಿ ಅಕ್ರಮ-ಸಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿದ್ದು, ವ್ಯನ್ಯಜೀವಿಗಳ ಆವಾಸ ಸ್ಥಾನದಲ್ಲಿ ಪ್ರಾಣಿಗಳು ವಾಸಿಸಲು ಅಡ್ಡಿಯಾಗುತ್ತಿದೆ. ಅರಣ್ಯದಲ್ಲಿ ಆಹಾರದ ಕೊರತೆಯಾಗಿರುವುದು ಕೂಡ ಚಿರತೆಗಳು ಕುರಿ, ಮೇಕೆ ಮತ್ತು ನಾಯಿಗಳ ಮೇಲೆ ದಾಳಿ ನಡೆಸಲು ಕಾರಣವಾಗಿದೆ. ಚಿರತೆಗಳು ಆಗೊಮ್ಮೆ ಈಗೊಮ್ಮೆ ಮನುಷ್ಯನ ಮೇಲೆಯೂ ಎರಗಿ ಗಾಯಗೊಳಿಸಿರುವುದೂ ಉಂಟು.

ಚಿರತೆ ದಾಳಿಯಂತಹ ಘಟನೆಗಳು ಪದೇ ಪದೇ ನಡೆಯುತ್ತಿದ್ದರೂ, ಕುರಿಗಾಹಿಗಳು, ಮೇಕೆ ಕಾಯುವವರು ಮತ್ತು ಇತರರು ದಾಳಿಗೆ ಒಳಗಾಗಿ ಗಾಯಗೊಂಡು ಆಸ್ಪತ್ರೆ ಸೇರುತ್ತಲೇ ಇದ್ದಾರೆ. ಹೀಗೆ ಚಿರತೆ ದಾಳಿಯಿಂದ ಸಾಕು ಪ್ರಾಣಿಗಳನ್ನು ಕಳೆದುಕೊಂಡವರಿಗೆ ಇದುವರೆಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಗಾಯಗೊಂಡವರಿಗೂ ಪರಿಹಾರ ಲಭಿಸಿಲ್ಲ. ಇದರಿಂದ ಜನರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕರಡಿ, ಚಿರತೆ, ದಾಳಿಯಿಂದ ಬೇಸತ್ತಿರುವ ಜನರು ಗ್ರಾಮದ ಹೊರಗೆ ಒಬ್ಬೊಬ್ಬರೇ ಹೋಗಲು ಭಯಪಡುತ್ತಿದ್ದಾರೆ. ರಾತ್ರಿ ವೇಳೆ ಹೊಲಗಳಿಗೆ ಹೋಗಿ ಬೋರ್ ಮೂಲಕ ನೀರು ಹಾಯಿಸಲು ಹೋಗುವವರು ತಮ್ಮ ಜೀವಗಳನ್ನು ಕೈಯಲ್ಲಿ ಹಿಡಿದುಕೊಂಡು ಭಯದಲ್ಲೇ ಹೋಗುವಂತಹ ಪರಿಸ್ಥಿತಿ ಬಂದಿದೆ. ಕುರಿ, ಮೇಕೆ ಮೇಯಿಸುವವರು ಅರಣ್ಯದ ಅಂಚಿಗೆ ಹೋಗಲು ಹೆದರಿಕೊಳ್ಳುತ್ತಿದ್ದಾರೆ. ಅದು ಒಬ್ಬಂಟಿಯಾಗಿ ಹೋಗುವುದು ಹೇಗೆ ಎಂದು ಚಿಂತಾಕ್ರಾಂತರಾಗಿದ್ದಾರೆ. ವನ್ಯಜೀವಿಗಳಿಂದ ಗಾಯಗೊಂಡವರಿಗೆ ಮತ್ತು ಸಾಕುಪ್ರಾಣಿಗಳನ್ನು ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕೆಂಬ ಒತ್ತಾಯ ವ್ಯಾಪಕವಾಗಿ ಕೇಳಿಬಂದಿದೆ.

ಅದಕ್ಕೂ ಮೊದಲು ಚಿರತೆ ದಾಳಿ ತಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಅರಣ್ಯದಲ್ಲಿ ಅವುಗಳಿಗೆ ಸಾಕಷ್ಟು ಆಹಾರ ಸಿಗುವಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲಿ ನಡೆಯುವ ಅಕ್ರಮ ಗಣಿಗಾರಿಕೆಗೆ ಅಂಕುಶ ಬೀಳಬೇಕು. ಆಗ ಮಾತ್ರ ಅವು ಮನುಷ್ಯರ ಮೇಲೆ ಎರಗುವುದನ್ನು ನಿಲ್ಲಿಸುತ್ತವೆ. ಇದರ ಜೊತೆಗೆ ಮಾನವ ಮತ್ತು ವನ್ಯಜೀವಿಗಳ ಸಂಘರ್ಷ ತಡೆಯಲು ಸಾಧ್ಯವಾಗುತ್ತದೆ.

ಅರಣ್ಯ ಇಲಾಖೆ ಕೈಕಟ್ಟಿ ಕುಳಿತರೆ ಯಾವುದೇ ಪರಿಹಾರ ಸಿಗುವುದಿಲ್ಲ. ಸರ್ಕಾರಕ್ಕೆ ಅಗತ್ಯ ಮಾಹಿತಿ ನೀಡಿ ಅರಣ್ಯದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಹೋರಾಟಗಾರರು ಮತ್ತು ಸಂತ್ರಸ್ತರನ್ನು ಮಾತನಾಡಿಸಲಾಯಿತು. ಅವರು ಹೇಳಿಕೆಗಳು ಕೆಳಗಿನಂತಿವೆ.

ಮೂಲ ಸಮಸ್ಯೆಯನ್ನು ಪರಿಹರಿಸುವುದು ಯಾರಿಗೂ ಬೇಕಾಗಿಲ್ಲ. ಚಿರತೆ ದಾಳಿಯ ಮೂಲ ಸಮಸ್ಯೆ ಯಾರಿಗೂ ಗೊತ್ತಿಲ್ಲ. ಅರಣ್ಯ ಅಧಿಕಾರಿಗಳು, ಶಾಸಕರು, ಸಂಸದರು ಮತ್ತು ಮಂತ್ರಿಗಳು ಇದರ ಬಗ್ಗೆ ಯೋಚಿಸುತ್ತಿಲ್ಲ. ಅರಣ್ಯ ಕಡಿಯುವುದರಿಂದ ಸಮಸ್ಯೆ ಉಂಟಾಗಿದೆ ಎಂದು ಬಿಂಬಿಸಲಾಗುತ್ತಿದೆ. ಇದು ಪ್ರಶ್ನೆಯೇ ಅಲ್ಲ. ಕಾಡಿನಲ್ಲಿ ಸಸ್ಯಹಾರಿ ಪ್ರಾಣಿಗಳಿಗೆ ಬೇಕಾಗುವ ನೇರಳೆ, ಹಲಸು ಮರಗಳನ್ನು ಮತ್ತು ಗಿಡಮೂಲಿಕೆ ಗಿಡಗಳನ್ನು ಬೆಳೆಸುವ ಗೋಜಿಗೆ ಅರಣ್ಯ ಇಲಾಖೆ ಹೊಗುತ್ತಿಲ್ಲ. ಹೀಗಾಗಿ ಅಲ್ಲಿ ಸಸ್ಯಹಾರಿ ಪ್ರಾಣಿಗಳು ವಾಸಿಸುತ್ತಿಲ್ಲ.

ಸಸ್ಯಹಾರಿ ಪ್ರಾಣಿಗಳನ್ನು ತಿಂದು ಜೀವಿಸುವ ಚಿರತೆಗಳಿಗೆ ಆಹಾರದ ಸಮಸ್ಯೆ ಎದುರಾಗಿದೆ. ಅರಣ್ಯ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತದೆ. ಆದರೆ ಕಾಡನ್ನು ವೈಜ್ಞಾನಿಕವಾಗಿ ಬೆಳೆಸುತ್ತಿಲ್ಲ. ನೀಲಗಿರಿ, ಅಕೇಶಿಯಾ ಗಿಡಗಳನ್ನು ಬೆಳೆಸಿದರೆ ಪ್ರಾಣಿಗಳಿಗೆ ಆಗುವ ಪ್ರಯೋಜವೇನು? ಇದರಿಂದ ಸಸ್ಯಹಾರಿ ಮತ್ತು ಮಾಂಸಹಾರಿ ಪ್ರಾಣಿಗಳಿಗೆ ಆಹಾರದ ಸಮಸ್ಯೆ ಅನಿವಾರ್ಯವಾಗಿ ಎದುರಾಗುತ್ತದೆ. ಹೆಚ್ಚು ಹೆಚ್ಚಾಗಿ ಮೊಲ, ಜಿಂಕೆ, ಕೋತಿ ಮೊದಲಾದ ಪ್ರಾಣಿಗಳು ಕಾಡಿನಲ್ಲಿ ಇದ್ದರೆ ಚಿರತೆಗಳು ನಾಡಿಗೆ ಬರುವುದಿಲ್ಲ. ಮೇಕೆ, ಕುರಿ ಮತ್ತು ಮನುಷ್ಯನ ಮೇಲೆ ದಾಳಿ ಮಾಡುವುದಿಲ್ಲ.

ಆನಂದ್‌ ಪಟೇಲ್‌

ಕೇವಲ ದಾಳಿಯಾದಾಗ ಮಾತ್ರ ಒಂದು ಚಿರತೆಯನ್ನೋ, ಕರಡಿಯನ್ನೋ ಹಿಡಿದರೆ ಸಮಸ್ಯೆ ಬಗೆಹರಿಯುತ್ತದೆಯೇ? ಮತ್ತೆ ಇನ್ನೊಂದು ಚಿರತೆ ದಾಳಿ ಮಾಡುತ್ತದೆ. ಆನೆಗಳು ದಾಳಿ ಮಾಡುತ್ತವೆ. ಹೀಗಾಗಿ ಅರಣ್ಯೀಕರಣವೆಂದರೆ ಅದು ವೈಜ್ಞಾನಿಕವಾಗಿ ಇರಬೇಕು. ಕಾಡಿನಲ್ಲಿ ಹಣ್ಣಿನ ಮರಗಳನ್ನು ಯಥೇಚ್ಚವಾಗಿ ಬೆಳೆಸಬೇಕು. ಸಸ್ಯಹಾರ ಪ್ರಾಣಿಗಳು ಹೆಚ್ಚಳವಾಗುವಂತೆ ನೋಡಿಕೊಳ್ಳಬೇಕು. ಆಗ ಮಾಂಸಾಹಾರಿಗಳಿಗೂ ಕಾಡಿನಲ್ಲಿಯೇ ಆಹಾರ ದೊರೆಯುತ್ತದೆ. ಇದು ಸಾಮಾನ್ಯ ತಿಳುವಳಿಕೆ. ಇಷ್ಟು ಮಾಡಲಿ ಅರಣ್ಯ ಇಲಾಖೆ.
ಆನಂದ್ ಪಟೇಲ್, ಕರ್ನಾಟಕ ರಾಜ್ಯ ರೈತ ಸಂಘದ ಕುಣಿಗಲ್ ತಾಲೂಕು ಅಧ್ಯಕ್ಷರು.

ಇದುವರೆಗೆ ಚಿರತೆ ಮೂವರನ್ನು ಬಲಿತೆಗೆದುಕೊಂಡಿದೆ. ಕೇವಲ ಪರಿಹಾರ ನೀಡುವುದರಿಂದ ಹೋದ ಪ್ರಾಣ ಬರುತ್ತದೆಯೇ? ಕೊತ್ತಗೆರೆ ಹೋಬಳಿಯ ದೊಡ್ಡಮಳಲವಾಡಿ, ಗಿಡದಪಾಳ್ಯದಲ್ಲಿ ಮೂವರನ್ನು ಕೊಂದು ಹಾಕಿದೆ. ಕಳೆದ 15 ದಿನಗಳ ಹಿಂದೆ ಮಹಿಳೆಯೊಬ್ಬರನ್ನು ಚಿರತೆ ಕೊಂದಿತ್ತು. ಹೀಗೆ ಜೀವ ಹೋಗುತ್ತಲೇ ಇವೆ. ಅರಣ್ಯ ಇಲಾಖೆ ಪುಡಿಗಾಸು ಪರಿಹಾರ ನೀಡುತ್ತಿದೆ. ಇದರಿಂದೇನು ಪ್ರಯೋಜನವಾಗುವುದಿಲ್ಲ. ಚಿರತೆಗಳು ವಾಸಿಸುವಂತಹ ಯೋಗ್ಯ ಆವಾಸ ಸ್ಥಾನಗಳು ಕುಣಿಗಲ್ ತಾಲೂಕಿನಲ್ಲಿ ಇಲ್ಲ.

ಜಿ.ಕೆ.ನಾಗಣ್ಣ

ಜಿ.ಕೆ.ನಾಗಣ್ಣ, ಸಂತೇಮಾವತ್ತೂರು ಗೊಲ್ಲರಹಟ್ಟಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....