Homeಕರ್ನಾಟಕತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ವ್ಯಾಪಕ ಬಲಿ: ಕ್ರಮಕ್ಕೆ ಮುಂದಾಗದ ಸರ್ಕಾರ...

ತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ವ್ಯಾಪಕ ಬಲಿ: ಕ್ರಮಕ್ಕೆ ಮುಂದಾಗದ ಸರ್ಕಾರ…

ಅರಣ್ಯ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತದೆ. ಆದರೆ ಕಾಡನ್ನು ವೈಜ್ಞಾನಿಕವಾಗಿ ಬೆಳೆಸುತ್ತಿಲ್ಲ. ನೀಲಗಿರಿ, ಅಕೇಶಿಯಾ ಗಿಡಗಳನ್ನು ಬೆಳೆಸಿದರೆ ಪ್ರಾಣಿಗಳಿಗೆ ಆಗುವ ಪ್ರಯೋಜವೇನು?

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದೆ. ಯಾವ ಭಾಗದಲ್ಲಿ ನೋಡಿದರೂ ಚಿರತೆ ದಾಳಿಯ ಮಾತುಗಳೇ ಕೇಳಿಬರುತ್ತಿವೆ. ಕಳೆದ ನಾಲ್ಕೈದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಚಿರತೆಗಳ ಸಂತಾನ ಹೆಚ್ಚಾಗಿದೆ. ಅವುಗಳಿಗೆ ಆಹಾರದ ಸಮಸ್ಯೆಯು ಉಂಟಾಗಿದೆ. ಆದರೆ ಅರಣ್ಯ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆ ಸೇರಿದಂತೆ ಕಾಮಗಾರಿಗಳು ಹೆಚ್ಚಿದಂತೆ ಚಿರತೆಗಳು ನಾಡಿನತ್ತ ಆಹಾರ ಹುಡುಕುತ್ತಾ ಬಂದು ದಾಳಿ ಮಾಡುತ್ತಿವೆ.

ತುಮಕೂರು ಜಿಲ್ಲೆಯ ಹತ್ತು ತಾಲೂಕು ಕೇಂದ್ರಗಳಲ್ಲೂ ಚಿರತೆಗಳು ದಾಳಿ ಇಡುತ್ತಲೇ ಇವೆ. ಕುರಿ, ಮೇಕೆ, ದನ ಮೇಯಿಸುವವರನ್ನು ಕಾಡುತ್ತಲೇ ಇವೆ. ಬಹಳಷ್ಟು ಸಲ ಅವರ ಕಣ್ಣಿಗೂ ಬಿದ್ದಿವೆ. ಕುರಿ, ಮೇಕೆಗಳನ್ನು ಹೊತ್ತೊಯ್ದಿವೆ. ನಾಯಿಗಳನ್ನು ತಿಂದು ಹಾಕಿವೆ. ಮನುಷ್ಯರ ಮೇಲೆ ದಾಳಿಯನ್ನೂ ನಡೆಸಿ ಹಲವರನ್ನು ಗಾಯಗೊಳಿಸಿವೆ. ಆದರೂ ಅರಣ್ಯ ಇಲಾಖೆ ಕೈಕಟ್ಟಿ ಕುಳಿತಿದೆ.

ನವೆಂಬರ್ 29ರಂದು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ದೊಡ್ಡ ಮಳಲವಾಡಿಯಲ್ಲಿ ಅರಣ್ಯ ಅಂಚಿನಲ್ಲಿ ಹೊಲದಲ್ಲಿ ಕುರಿ ಮೇಯಿಸುತ್ತಿದ್ದ  ಆನಂದಯ್ಯ ಎಂಬುವರ ಮೇಲೆ ಚಿರತೆ ಎರಗಿದೆ. ಕುತ್ತಿಗೆಗೆ ಬಾಯಿ ಹಾಕಿ ರಕ್ತವನ್ನು ಕುಡಿದಿದೆ. ಆನಂದಯ್ಯ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ. ಆನಂದಯ್ಯ ಅವರ ಕುತ್ತಿಗೆಯ ಭಾಗದಲ್ಲಿ ಚಿರತೆಯ ಹಲ್ಲುಗಳ ಆಳವಾಗಿ ಒಳಹೊಕ್ಕಿರುವುದು ಕಂಡು ಬಂದಿದೆ. ಅರಣ್ಯ ಅಧಿಕಾರಿಗಳು ಆ ಚಿರತೆಗಾಗಿ ಶೋಧ ಮುಂದುವರಿಸಿದ್ದಾರೆ.

ಚಿರತೆ ದಾಳಿಗೆ ಮೃತಪಟ್ಟ ಆನಂದಯ್ಯ

ಮನುಷ್ಯರ ರಕ್ತದ ರುಚಿಯನ್ನು ಕಂಡಿರುವ ಚಿರತೆ, ಇದುವರೆಗೆ ಇಬ್ಬರನ್ನು ಬಲಿತೆಗೆದುಕೊಂಡಿದೆ. ಚಿರತೆ ದಾಳಿ ನಡೆಯುತ್ತಿರುವ ಬಗ್ಗೆ ಗ್ರಾಮಸ್ಥರು ನಿರಂತರವಾಗಿ ಅರಣ್ಯ ಇಲಾಖೆಗೆ ಮನವಿಗಳ ಮೇಲೆ ಮನವಿ ಸಲ್ಲಿಸುತ್ತಿದ್ದರೂ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ. ಗ್ರಾಮಸ್ಥರ ಪ್ರತಿಭಟನೆ ಮತ್ತು ಒತ್ತಡ ಹೆಚ್ಚಾದಾಗ ಬೋನಿಟ್ಟು ಹಿಡಿದು ಅರಣ್ಯಕ್ಕೆ ಬಿಡುವ ಒಂದೆರಡು ಪ್ರಕರಣಗಳನ್ನು ಬಿಟ್ಟರೆ ಉಳಿದಂತೆ ಏನೂ ಆಗಿಲ್ಲ.

ಬೆಟ್ಟಗುಡ್ಡಗಳಲ್ಲಿ ಮತ್ತು ಅರಣ್ಯದಲ್ಲಿ ಅಕ್ರಮ-ಸಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿದ್ದು, ವ್ಯನ್ಯಜೀವಿಗಳ ಆವಾಸ ಸ್ಥಾನದಲ್ಲಿ ಪ್ರಾಣಿಗಳು ವಾಸಿಸಲು ಅಡ್ಡಿಯಾಗುತ್ತಿದೆ. ಅರಣ್ಯದಲ್ಲಿ ಆಹಾರದ ಕೊರತೆಯಾಗಿರುವುದು ಕೂಡ ಚಿರತೆಗಳು ಕುರಿ, ಮೇಕೆ ಮತ್ತು ನಾಯಿಗಳ ಮೇಲೆ ದಾಳಿ ನಡೆಸಲು ಕಾರಣವಾಗಿದೆ. ಚಿರತೆಗಳು ಆಗೊಮ್ಮೆ ಈಗೊಮ್ಮೆ ಮನುಷ್ಯನ ಮೇಲೆಯೂ ಎರಗಿ ಗಾಯಗೊಳಿಸಿರುವುದೂ ಉಂಟು.

ಚಿರತೆ ದಾಳಿಯಂತಹ ಘಟನೆಗಳು ಪದೇ ಪದೇ ನಡೆಯುತ್ತಿದ್ದರೂ, ಕುರಿಗಾಹಿಗಳು, ಮೇಕೆ ಕಾಯುವವರು ಮತ್ತು ಇತರರು ದಾಳಿಗೆ ಒಳಗಾಗಿ ಗಾಯಗೊಂಡು ಆಸ್ಪತ್ರೆ ಸೇರುತ್ತಲೇ ಇದ್ದಾರೆ. ಹೀಗೆ ಚಿರತೆ ದಾಳಿಯಿಂದ ಸಾಕು ಪ್ರಾಣಿಗಳನ್ನು ಕಳೆದುಕೊಂಡವರಿಗೆ ಇದುವರೆಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಗಾಯಗೊಂಡವರಿಗೂ ಪರಿಹಾರ ಲಭಿಸಿಲ್ಲ. ಇದರಿಂದ ಜನರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕರಡಿ, ಚಿರತೆ, ದಾಳಿಯಿಂದ ಬೇಸತ್ತಿರುವ ಜನರು ಗ್ರಾಮದ ಹೊರಗೆ ಒಬ್ಬೊಬ್ಬರೇ ಹೋಗಲು ಭಯಪಡುತ್ತಿದ್ದಾರೆ. ರಾತ್ರಿ ವೇಳೆ ಹೊಲಗಳಿಗೆ ಹೋಗಿ ಬೋರ್ ಮೂಲಕ ನೀರು ಹಾಯಿಸಲು ಹೋಗುವವರು ತಮ್ಮ ಜೀವಗಳನ್ನು ಕೈಯಲ್ಲಿ ಹಿಡಿದುಕೊಂಡು ಭಯದಲ್ಲೇ ಹೋಗುವಂತಹ ಪರಿಸ್ಥಿತಿ ಬಂದಿದೆ. ಕುರಿ, ಮೇಕೆ ಮೇಯಿಸುವವರು ಅರಣ್ಯದ ಅಂಚಿಗೆ ಹೋಗಲು ಹೆದರಿಕೊಳ್ಳುತ್ತಿದ್ದಾರೆ. ಅದು ಒಬ್ಬಂಟಿಯಾಗಿ ಹೋಗುವುದು ಹೇಗೆ ಎಂದು ಚಿಂತಾಕ್ರಾಂತರಾಗಿದ್ದಾರೆ. ವನ್ಯಜೀವಿಗಳಿಂದ ಗಾಯಗೊಂಡವರಿಗೆ ಮತ್ತು ಸಾಕುಪ್ರಾಣಿಗಳನ್ನು ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕೆಂಬ ಒತ್ತಾಯ ವ್ಯಾಪಕವಾಗಿ ಕೇಳಿಬಂದಿದೆ.

ಅದಕ್ಕೂ ಮೊದಲು ಚಿರತೆ ದಾಳಿ ತಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಅರಣ್ಯದಲ್ಲಿ ಅವುಗಳಿಗೆ ಸಾಕಷ್ಟು ಆಹಾರ ಸಿಗುವಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲಿ ನಡೆಯುವ ಅಕ್ರಮ ಗಣಿಗಾರಿಕೆಗೆ ಅಂಕುಶ ಬೀಳಬೇಕು. ಆಗ ಮಾತ್ರ ಅವು ಮನುಷ್ಯರ ಮೇಲೆ ಎರಗುವುದನ್ನು ನಿಲ್ಲಿಸುತ್ತವೆ. ಇದರ ಜೊತೆಗೆ ಮಾನವ ಮತ್ತು ವನ್ಯಜೀವಿಗಳ ಸಂಘರ್ಷ ತಡೆಯಲು ಸಾಧ್ಯವಾಗುತ್ತದೆ.

ಅರಣ್ಯ ಇಲಾಖೆ ಕೈಕಟ್ಟಿ ಕುಳಿತರೆ ಯಾವುದೇ ಪರಿಹಾರ ಸಿಗುವುದಿಲ್ಲ. ಸರ್ಕಾರಕ್ಕೆ ಅಗತ್ಯ ಮಾಹಿತಿ ನೀಡಿ ಅರಣ್ಯದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಹೋರಾಟಗಾರರು ಮತ್ತು ಸಂತ್ರಸ್ತರನ್ನು ಮಾತನಾಡಿಸಲಾಯಿತು. ಅವರು ಹೇಳಿಕೆಗಳು ಕೆಳಗಿನಂತಿವೆ.

ಮೂಲ ಸಮಸ್ಯೆಯನ್ನು ಪರಿಹರಿಸುವುದು ಯಾರಿಗೂ ಬೇಕಾಗಿಲ್ಲ. ಚಿರತೆ ದಾಳಿಯ ಮೂಲ ಸಮಸ್ಯೆ ಯಾರಿಗೂ ಗೊತ್ತಿಲ್ಲ. ಅರಣ್ಯ ಅಧಿಕಾರಿಗಳು, ಶಾಸಕರು, ಸಂಸದರು ಮತ್ತು ಮಂತ್ರಿಗಳು ಇದರ ಬಗ್ಗೆ ಯೋಚಿಸುತ್ತಿಲ್ಲ. ಅರಣ್ಯ ಕಡಿಯುವುದರಿಂದ ಸಮಸ್ಯೆ ಉಂಟಾಗಿದೆ ಎಂದು ಬಿಂಬಿಸಲಾಗುತ್ತಿದೆ. ಇದು ಪ್ರಶ್ನೆಯೇ ಅಲ್ಲ. ಕಾಡಿನಲ್ಲಿ ಸಸ್ಯಹಾರಿ ಪ್ರಾಣಿಗಳಿಗೆ ಬೇಕಾಗುವ ನೇರಳೆ, ಹಲಸು ಮರಗಳನ್ನು ಮತ್ತು ಗಿಡಮೂಲಿಕೆ ಗಿಡಗಳನ್ನು ಬೆಳೆಸುವ ಗೋಜಿಗೆ ಅರಣ್ಯ ಇಲಾಖೆ ಹೊಗುತ್ತಿಲ್ಲ. ಹೀಗಾಗಿ ಅಲ್ಲಿ ಸಸ್ಯಹಾರಿ ಪ್ರಾಣಿಗಳು ವಾಸಿಸುತ್ತಿಲ್ಲ.

ಸಸ್ಯಹಾರಿ ಪ್ರಾಣಿಗಳನ್ನು ತಿಂದು ಜೀವಿಸುವ ಚಿರತೆಗಳಿಗೆ ಆಹಾರದ ಸಮಸ್ಯೆ ಎದುರಾಗಿದೆ. ಅರಣ್ಯ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತದೆ. ಆದರೆ ಕಾಡನ್ನು ವೈಜ್ಞಾನಿಕವಾಗಿ ಬೆಳೆಸುತ್ತಿಲ್ಲ. ನೀಲಗಿರಿ, ಅಕೇಶಿಯಾ ಗಿಡಗಳನ್ನು ಬೆಳೆಸಿದರೆ ಪ್ರಾಣಿಗಳಿಗೆ ಆಗುವ ಪ್ರಯೋಜವೇನು? ಇದರಿಂದ ಸಸ್ಯಹಾರಿ ಮತ್ತು ಮಾಂಸಹಾರಿ ಪ್ರಾಣಿಗಳಿಗೆ ಆಹಾರದ ಸಮಸ್ಯೆ ಅನಿವಾರ್ಯವಾಗಿ ಎದುರಾಗುತ್ತದೆ. ಹೆಚ್ಚು ಹೆಚ್ಚಾಗಿ ಮೊಲ, ಜಿಂಕೆ, ಕೋತಿ ಮೊದಲಾದ ಪ್ರಾಣಿಗಳು ಕಾಡಿನಲ್ಲಿ ಇದ್ದರೆ ಚಿರತೆಗಳು ನಾಡಿಗೆ ಬರುವುದಿಲ್ಲ. ಮೇಕೆ, ಕುರಿ ಮತ್ತು ಮನುಷ್ಯನ ಮೇಲೆ ದಾಳಿ ಮಾಡುವುದಿಲ್ಲ.

ಆನಂದ್‌ ಪಟೇಲ್‌

ಕೇವಲ ದಾಳಿಯಾದಾಗ ಮಾತ್ರ ಒಂದು ಚಿರತೆಯನ್ನೋ, ಕರಡಿಯನ್ನೋ ಹಿಡಿದರೆ ಸಮಸ್ಯೆ ಬಗೆಹರಿಯುತ್ತದೆಯೇ? ಮತ್ತೆ ಇನ್ನೊಂದು ಚಿರತೆ ದಾಳಿ ಮಾಡುತ್ತದೆ. ಆನೆಗಳು ದಾಳಿ ಮಾಡುತ್ತವೆ. ಹೀಗಾಗಿ ಅರಣ್ಯೀಕರಣವೆಂದರೆ ಅದು ವೈಜ್ಞಾನಿಕವಾಗಿ ಇರಬೇಕು. ಕಾಡಿನಲ್ಲಿ ಹಣ್ಣಿನ ಮರಗಳನ್ನು ಯಥೇಚ್ಚವಾಗಿ ಬೆಳೆಸಬೇಕು. ಸಸ್ಯಹಾರ ಪ್ರಾಣಿಗಳು ಹೆಚ್ಚಳವಾಗುವಂತೆ ನೋಡಿಕೊಳ್ಳಬೇಕು. ಆಗ ಮಾಂಸಾಹಾರಿಗಳಿಗೂ ಕಾಡಿನಲ್ಲಿಯೇ ಆಹಾರ ದೊರೆಯುತ್ತದೆ. ಇದು ಸಾಮಾನ್ಯ ತಿಳುವಳಿಕೆ. ಇಷ್ಟು ಮಾಡಲಿ ಅರಣ್ಯ ಇಲಾಖೆ.
ಆನಂದ್ ಪಟೇಲ್, ಕರ್ನಾಟಕ ರಾಜ್ಯ ರೈತ ಸಂಘದ ಕುಣಿಗಲ್ ತಾಲೂಕು ಅಧ್ಯಕ್ಷರು.

ಇದುವರೆಗೆ ಚಿರತೆ ಮೂವರನ್ನು ಬಲಿತೆಗೆದುಕೊಂಡಿದೆ. ಕೇವಲ ಪರಿಹಾರ ನೀಡುವುದರಿಂದ ಹೋದ ಪ್ರಾಣ ಬರುತ್ತದೆಯೇ? ಕೊತ್ತಗೆರೆ ಹೋಬಳಿಯ ದೊಡ್ಡಮಳಲವಾಡಿ, ಗಿಡದಪಾಳ್ಯದಲ್ಲಿ ಮೂವರನ್ನು ಕೊಂದು ಹಾಕಿದೆ. ಕಳೆದ 15 ದಿನಗಳ ಹಿಂದೆ ಮಹಿಳೆಯೊಬ್ಬರನ್ನು ಚಿರತೆ ಕೊಂದಿತ್ತು. ಹೀಗೆ ಜೀವ ಹೋಗುತ್ತಲೇ ಇವೆ. ಅರಣ್ಯ ಇಲಾಖೆ ಪುಡಿಗಾಸು ಪರಿಹಾರ ನೀಡುತ್ತಿದೆ. ಇದರಿಂದೇನು ಪ್ರಯೋಜನವಾಗುವುದಿಲ್ಲ. ಚಿರತೆಗಳು ವಾಸಿಸುವಂತಹ ಯೋಗ್ಯ ಆವಾಸ ಸ್ಥಾನಗಳು ಕುಣಿಗಲ್ ತಾಲೂಕಿನಲ್ಲಿ ಇಲ್ಲ.

ಜಿ.ಕೆ.ನಾಗಣ್ಣ

ಜಿ.ಕೆ.ನಾಗಣ್ಣ, ಸಂತೇಮಾವತ್ತೂರು ಗೊಲ್ಲರಹಟ್ಟಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...