Homeಕರ್ನಾಟಕತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ವ್ಯಾಪಕ ಬಲಿ: ಕ್ರಮಕ್ಕೆ ಮುಂದಾಗದ ಸರ್ಕಾರ...

ತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ವ್ಯಾಪಕ ಬಲಿ: ಕ್ರಮಕ್ಕೆ ಮುಂದಾಗದ ಸರ್ಕಾರ…

ಅರಣ್ಯ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತದೆ. ಆದರೆ ಕಾಡನ್ನು ವೈಜ್ಞಾನಿಕವಾಗಿ ಬೆಳೆಸುತ್ತಿಲ್ಲ. ನೀಲಗಿರಿ, ಅಕೇಶಿಯಾ ಗಿಡಗಳನ್ನು ಬೆಳೆಸಿದರೆ ಪ್ರಾಣಿಗಳಿಗೆ ಆಗುವ ಪ್ರಯೋಜವೇನು?

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದೆ. ಯಾವ ಭಾಗದಲ್ಲಿ ನೋಡಿದರೂ ಚಿರತೆ ದಾಳಿಯ ಮಾತುಗಳೇ ಕೇಳಿಬರುತ್ತಿವೆ. ಕಳೆದ ನಾಲ್ಕೈದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಚಿರತೆಗಳ ಸಂತಾನ ಹೆಚ್ಚಾಗಿದೆ. ಅವುಗಳಿಗೆ ಆಹಾರದ ಸಮಸ್ಯೆಯು ಉಂಟಾಗಿದೆ. ಆದರೆ ಅರಣ್ಯ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆ ಸೇರಿದಂತೆ ಕಾಮಗಾರಿಗಳು ಹೆಚ್ಚಿದಂತೆ ಚಿರತೆಗಳು ನಾಡಿನತ್ತ ಆಹಾರ ಹುಡುಕುತ್ತಾ ಬಂದು ದಾಳಿ ಮಾಡುತ್ತಿವೆ.

ತುಮಕೂರು ಜಿಲ್ಲೆಯ ಹತ್ತು ತಾಲೂಕು ಕೇಂದ್ರಗಳಲ್ಲೂ ಚಿರತೆಗಳು ದಾಳಿ ಇಡುತ್ತಲೇ ಇವೆ. ಕುರಿ, ಮೇಕೆ, ದನ ಮೇಯಿಸುವವರನ್ನು ಕಾಡುತ್ತಲೇ ಇವೆ. ಬಹಳಷ್ಟು ಸಲ ಅವರ ಕಣ್ಣಿಗೂ ಬಿದ್ದಿವೆ. ಕುರಿ, ಮೇಕೆಗಳನ್ನು ಹೊತ್ತೊಯ್ದಿವೆ. ನಾಯಿಗಳನ್ನು ತಿಂದು ಹಾಕಿವೆ. ಮನುಷ್ಯರ ಮೇಲೆ ದಾಳಿಯನ್ನೂ ನಡೆಸಿ ಹಲವರನ್ನು ಗಾಯಗೊಳಿಸಿವೆ. ಆದರೂ ಅರಣ್ಯ ಇಲಾಖೆ ಕೈಕಟ್ಟಿ ಕುಳಿತಿದೆ.

ನವೆಂಬರ್ 29ರಂದು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ದೊಡ್ಡ ಮಳಲವಾಡಿಯಲ್ಲಿ ಅರಣ್ಯ ಅಂಚಿನಲ್ಲಿ ಹೊಲದಲ್ಲಿ ಕುರಿ ಮೇಯಿಸುತ್ತಿದ್ದ  ಆನಂದಯ್ಯ ಎಂಬುವರ ಮೇಲೆ ಚಿರತೆ ಎರಗಿದೆ. ಕುತ್ತಿಗೆಗೆ ಬಾಯಿ ಹಾಕಿ ರಕ್ತವನ್ನು ಕುಡಿದಿದೆ. ಆನಂದಯ್ಯ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ. ಆನಂದಯ್ಯ ಅವರ ಕುತ್ತಿಗೆಯ ಭಾಗದಲ್ಲಿ ಚಿರತೆಯ ಹಲ್ಲುಗಳ ಆಳವಾಗಿ ಒಳಹೊಕ್ಕಿರುವುದು ಕಂಡು ಬಂದಿದೆ. ಅರಣ್ಯ ಅಧಿಕಾರಿಗಳು ಆ ಚಿರತೆಗಾಗಿ ಶೋಧ ಮುಂದುವರಿಸಿದ್ದಾರೆ.

ಚಿರತೆ ದಾಳಿಗೆ ಮೃತಪಟ್ಟ ಆನಂದಯ್ಯ

ಮನುಷ್ಯರ ರಕ್ತದ ರುಚಿಯನ್ನು ಕಂಡಿರುವ ಚಿರತೆ, ಇದುವರೆಗೆ ಇಬ್ಬರನ್ನು ಬಲಿತೆಗೆದುಕೊಂಡಿದೆ. ಚಿರತೆ ದಾಳಿ ನಡೆಯುತ್ತಿರುವ ಬಗ್ಗೆ ಗ್ರಾಮಸ್ಥರು ನಿರಂತರವಾಗಿ ಅರಣ್ಯ ಇಲಾಖೆಗೆ ಮನವಿಗಳ ಮೇಲೆ ಮನವಿ ಸಲ್ಲಿಸುತ್ತಿದ್ದರೂ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ. ಗ್ರಾಮಸ್ಥರ ಪ್ರತಿಭಟನೆ ಮತ್ತು ಒತ್ತಡ ಹೆಚ್ಚಾದಾಗ ಬೋನಿಟ್ಟು ಹಿಡಿದು ಅರಣ್ಯಕ್ಕೆ ಬಿಡುವ ಒಂದೆರಡು ಪ್ರಕರಣಗಳನ್ನು ಬಿಟ್ಟರೆ ಉಳಿದಂತೆ ಏನೂ ಆಗಿಲ್ಲ.

ಬೆಟ್ಟಗುಡ್ಡಗಳಲ್ಲಿ ಮತ್ತು ಅರಣ್ಯದಲ್ಲಿ ಅಕ್ರಮ-ಸಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿದ್ದು, ವ್ಯನ್ಯಜೀವಿಗಳ ಆವಾಸ ಸ್ಥಾನದಲ್ಲಿ ಪ್ರಾಣಿಗಳು ವಾಸಿಸಲು ಅಡ್ಡಿಯಾಗುತ್ತಿದೆ. ಅರಣ್ಯದಲ್ಲಿ ಆಹಾರದ ಕೊರತೆಯಾಗಿರುವುದು ಕೂಡ ಚಿರತೆಗಳು ಕುರಿ, ಮೇಕೆ ಮತ್ತು ನಾಯಿಗಳ ಮೇಲೆ ದಾಳಿ ನಡೆಸಲು ಕಾರಣವಾಗಿದೆ. ಚಿರತೆಗಳು ಆಗೊಮ್ಮೆ ಈಗೊಮ್ಮೆ ಮನುಷ್ಯನ ಮೇಲೆಯೂ ಎರಗಿ ಗಾಯಗೊಳಿಸಿರುವುದೂ ಉಂಟು.

ಚಿರತೆ ದಾಳಿಯಂತಹ ಘಟನೆಗಳು ಪದೇ ಪದೇ ನಡೆಯುತ್ತಿದ್ದರೂ, ಕುರಿಗಾಹಿಗಳು, ಮೇಕೆ ಕಾಯುವವರು ಮತ್ತು ಇತರರು ದಾಳಿಗೆ ಒಳಗಾಗಿ ಗಾಯಗೊಂಡು ಆಸ್ಪತ್ರೆ ಸೇರುತ್ತಲೇ ಇದ್ದಾರೆ. ಹೀಗೆ ಚಿರತೆ ದಾಳಿಯಿಂದ ಸಾಕು ಪ್ರಾಣಿಗಳನ್ನು ಕಳೆದುಕೊಂಡವರಿಗೆ ಇದುವರೆಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಗಾಯಗೊಂಡವರಿಗೂ ಪರಿಹಾರ ಲಭಿಸಿಲ್ಲ. ಇದರಿಂದ ಜನರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕರಡಿ, ಚಿರತೆ, ದಾಳಿಯಿಂದ ಬೇಸತ್ತಿರುವ ಜನರು ಗ್ರಾಮದ ಹೊರಗೆ ಒಬ್ಬೊಬ್ಬರೇ ಹೋಗಲು ಭಯಪಡುತ್ತಿದ್ದಾರೆ. ರಾತ್ರಿ ವೇಳೆ ಹೊಲಗಳಿಗೆ ಹೋಗಿ ಬೋರ್ ಮೂಲಕ ನೀರು ಹಾಯಿಸಲು ಹೋಗುವವರು ತಮ್ಮ ಜೀವಗಳನ್ನು ಕೈಯಲ್ಲಿ ಹಿಡಿದುಕೊಂಡು ಭಯದಲ್ಲೇ ಹೋಗುವಂತಹ ಪರಿಸ್ಥಿತಿ ಬಂದಿದೆ. ಕುರಿ, ಮೇಕೆ ಮೇಯಿಸುವವರು ಅರಣ್ಯದ ಅಂಚಿಗೆ ಹೋಗಲು ಹೆದರಿಕೊಳ್ಳುತ್ತಿದ್ದಾರೆ. ಅದು ಒಬ್ಬಂಟಿಯಾಗಿ ಹೋಗುವುದು ಹೇಗೆ ಎಂದು ಚಿಂತಾಕ್ರಾಂತರಾಗಿದ್ದಾರೆ. ವನ್ಯಜೀವಿಗಳಿಂದ ಗಾಯಗೊಂಡವರಿಗೆ ಮತ್ತು ಸಾಕುಪ್ರಾಣಿಗಳನ್ನು ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕೆಂಬ ಒತ್ತಾಯ ವ್ಯಾಪಕವಾಗಿ ಕೇಳಿಬಂದಿದೆ.

ಅದಕ್ಕೂ ಮೊದಲು ಚಿರತೆ ದಾಳಿ ತಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಅರಣ್ಯದಲ್ಲಿ ಅವುಗಳಿಗೆ ಸಾಕಷ್ಟು ಆಹಾರ ಸಿಗುವಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲಿ ನಡೆಯುವ ಅಕ್ರಮ ಗಣಿಗಾರಿಕೆಗೆ ಅಂಕುಶ ಬೀಳಬೇಕು. ಆಗ ಮಾತ್ರ ಅವು ಮನುಷ್ಯರ ಮೇಲೆ ಎರಗುವುದನ್ನು ನಿಲ್ಲಿಸುತ್ತವೆ. ಇದರ ಜೊತೆಗೆ ಮಾನವ ಮತ್ತು ವನ್ಯಜೀವಿಗಳ ಸಂಘರ್ಷ ತಡೆಯಲು ಸಾಧ್ಯವಾಗುತ್ತದೆ.

ಅರಣ್ಯ ಇಲಾಖೆ ಕೈಕಟ್ಟಿ ಕುಳಿತರೆ ಯಾವುದೇ ಪರಿಹಾರ ಸಿಗುವುದಿಲ್ಲ. ಸರ್ಕಾರಕ್ಕೆ ಅಗತ್ಯ ಮಾಹಿತಿ ನೀಡಿ ಅರಣ್ಯದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಹೋರಾಟಗಾರರು ಮತ್ತು ಸಂತ್ರಸ್ತರನ್ನು ಮಾತನಾಡಿಸಲಾಯಿತು. ಅವರು ಹೇಳಿಕೆಗಳು ಕೆಳಗಿನಂತಿವೆ.

ಮೂಲ ಸಮಸ್ಯೆಯನ್ನು ಪರಿಹರಿಸುವುದು ಯಾರಿಗೂ ಬೇಕಾಗಿಲ್ಲ. ಚಿರತೆ ದಾಳಿಯ ಮೂಲ ಸಮಸ್ಯೆ ಯಾರಿಗೂ ಗೊತ್ತಿಲ್ಲ. ಅರಣ್ಯ ಅಧಿಕಾರಿಗಳು, ಶಾಸಕರು, ಸಂಸದರು ಮತ್ತು ಮಂತ್ರಿಗಳು ಇದರ ಬಗ್ಗೆ ಯೋಚಿಸುತ್ತಿಲ್ಲ. ಅರಣ್ಯ ಕಡಿಯುವುದರಿಂದ ಸಮಸ್ಯೆ ಉಂಟಾಗಿದೆ ಎಂದು ಬಿಂಬಿಸಲಾಗುತ್ತಿದೆ. ಇದು ಪ್ರಶ್ನೆಯೇ ಅಲ್ಲ. ಕಾಡಿನಲ್ಲಿ ಸಸ್ಯಹಾರಿ ಪ್ರಾಣಿಗಳಿಗೆ ಬೇಕಾಗುವ ನೇರಳೆ, ಹಲಸು ಮರಗಳನ್ನು ಮತ್ತು ಗಿಡಮೂಲಿಕೆ ಗಿಡಗಳನ್ನು ಬೆಳೆಸುವ ಗೋಜಿಗೆ ಅರಣ್ಯ ಇಲಾಖೆ ಹೊಗುತ್ತಿಲ್ಲ. ಹೀಗಾಗಿ ಅಲ್ಲಿ ಸಸ್ಯಹಾರಿ ಪ್ರಾಣಿಗಳು ವಾಸಿಸುತ್ತಿಲ್ಲ.

ಸಸ್ಯಹಾರಿ ಪ್ರಾಣಿಗಳನ್ನು ತಿಂದು ಜೀವಿಸುವ ಚಿರತೆಗಳಿಗೆ ಆಹಾರದ ಸಮಸ್ಯೆ ಎದುರಾಗಿದೆ. ಅರಣ್ಯ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತದೆ. ಆದರೆ ಕಾಡನ್ನು ವೈಜ್ಞಾನಿಕವಾಗಿ ಬೆಳೆಸುತ್ತಿಲ್ಲ. ನೀಲಗಿರಿ, ಅಕೇಶಿಯಾ ಗಿಡಗಳನ್ನು ಬೆಳೆಸಿದರೆ ಪ್ರಾಣಿಗಳಿಗೆ ಆಗುವ ಪ್ರಯೋಜವೇನು? ಇದರಿಂದ ಸಸ್ಯಹಾರಿ ಮತ್ತು ಮಾಂಸಹಾರಿ ಪ್ರಾಣಿಗಳಿಗೆ ಆಹಾರದ ಸಮಸ್ಯೆ ಅನಿವಾರ್ಯವಾಗಿ ಎದುರಾಗುತ್ತದೆ. ಹೆಚ್ಚು ಹೆಚ್ಚಾಗಿ ಮೊಲ, ಜಿಂಕೆ, ಕೋತಿ ಮೊದಲಾದ ಪ್ರಾಣಿಗಳು ಕಾಡಿನಲ್ಲಿ ಇದ್ದರೆ ಚಿರತೆಗಳು ನಾಡಿಗೆ ಬರುವುದಿಲ್ಲ. ಮೇಕೆ, ಕುರಿ ಮತ್ತು ಮನುಷ್ಯನ ಮೇಲೆ ದಾಳಿ ಮಾಡುವುದಿಲ್ಲ.

ಆನಂದ್‌ ಪಟೇಲ್‌

ಕೇವಲ ದಾಳಿಯಾದಾಗ ಮಾತ್ರ ಒಂದು ಚಿರತೆಯನ್ನೋ, ಕರಡಿಯನ್ನೋ ಹಿಡಿದರೆ ಸಮಸ್ಯೆ ಬಗೆಹರಿಯುತ್ತದೆಯೇ? ಮತ್ತೆ ಇನ್ನೊಂದು ಚಿರತೆ ದಾಳಿ ಮಾಡುತ್ತದೆ. ಆನೆಗಳು ದಾಳಿ ಮಾಡುತ್ತವೆ. ಹೀಗಾಗಿ ಅರಣ್ಯೀಕರಣವೆಂದರೆ ಅದು ವೈಜ್ಞಾನಿಕವಾಗಿ ಇರಬೇಕು. ಕಾಡಿನಲ್ಲಿ ಹಣ್ಣಿನ ಮರಗಳನ್ನು ಯಥೇಚ್ಚವಾಗಿ ಬೆಳೆಸಬೇಕು. ಸಸ್ಯಹಾರ ಪ್ರಾಣಿಗಳು ಹೆಚ್ಚಳವಾಗುವಂತೆ ನೋಡಿಕೊಳ್ಳಬೇಕು. ಆಗ ಮಾಂಸಾಹಾರಿಗಳಿಗೂ ಕಾಡಿನಲ್ಲಿಯೇ ಆಹಾರ ದೊರೆಯುತ್ತದೆ. ಇದು ಸಾಮಾನ್ಯ ತಿಳುವಳಿಕೆ. ಇಷ್ಟು ಮಾಡಲಿ ಅರಣ್ಯ ಇಲಾಖೆ.
ಆನಂದ್ ಪಟೇಲ್, ಕರ್ನಾಟಕ ರಾಜ್ಯ ರೈತ ಸಂಘದ ಕುಣಿಗಲ್ ತಾಲೂಕು ಅಧ್ಯಕ್ಷರು.

ಇದುವರೆಗೆ ಚಿರತೆ ಮೂವರನ್ನು ಬಲಿತೆಗೆದುಕೊಂಡಿದೆ. ಕೇವಲ ಪರಿಹಾರ ನೀಡುವುದರಿಂದ ಹೋದ ಪ್ರಾಣ ಬರುತ್ತದೆಯೇ? ಕೊತ್ತಗೆರೆ ಹೋಬಳಿಯ ದೊಡ್ಡಮಳಲವಾಡಿ, ಗಿಡದಪಾಳ್ಯದಲ್ಲಿ ಮೂವರನ್ನು ಕೊಂದು ಹಾಕಿದೆ. ಕಳೆದ 15 ದಿನಗಳ ಹಿಂದೆ ಮಹಿಳೆಯೊಬ್ಬರನ್ನು ಚಿರತೆ ಕೊಂದಿತ್ತು. ಹೀಗೆ ಜೀವ ಹೋಗುತ್ತಲೇ ಇವೆ. ಅರಣ್ಯ ಇಲಾಖೆ ಪುಡಿಗಾಸು ಪರಿಹಾರ ನೀಡುತ್ತಿದೆ. ಇದರಿಂದೇನು ಪ್ರಯೋಜನವಾಗುವುದಿಲ್ಲ. ಚಿರತೆಗಳು ವಾಸಿಸುವಂತಹ ಯೋಗ್ಯ ಆವಾಸ ಸ್ಥಾನಗಳು ಕುಣಿಗಲ್ ತಾಲೂಕಿನಲ್ಲಿ ಇಲ್ಲ.

ಜಿ.ಕೆ.ನಾಗಣ್ಣ

ಜಿ.ಕೆ.ನಾಗಣ್ಣ, ಸಂತೇಮಾವತ್ತೂರು ಗೊಲ್ಲರಹಟ್ಟಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...