Homeಕರ್ನಾಟಕತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ವ್ಯಾಪಕ ಬಲಿ: ಕ್ರಮಕ್ಕೆ ಮುಂದಾಗದ ಸರ್ಕಾರ...

ತುಮಕೂರಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ವ್ಯಾಪಕ ಬಲಿ: ಕ್ರಮಕ್ಕೆ ಮುಂದಾಗದ ಸರ್ಕಾರ…

ಅರಣ್ಯ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತದೆ. ಆದರೆ ಕಾಡನ್ನು ವೈಜ್ಞಾನಿಕವಾಗಿ ಬೆಳೆಸುತ್ತಿಲ್ಲ. ನೀಲಗಿರಿ, ಅಕೇಶಿಯಾ ಗಿಡಗಳನ್ನು ಬೆಳೆಸಿದರೆ ಪ್ರಾಣಿಗಳಿಗೆ ಆಗುವ ಪ್ರಯೋಜವೇನು?

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದೆ. ಯಾವ ಭಾಗದಲ್ಲಿ ನೋಡಿದರೂ ಚಿರತೆ ದಾಳಿಯ ಮಾತುಗಳೇ ಕೇಳಿಬರುತ್ತಿವೆ. ಕಳೆದ ನಾಲ್ಕೈದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಚಿರತೆಗಳ ಸಂತಾನ ಹೆಚ್ಚಾಗಿದೆ. ಅವುಗಳಿಗೆ ಆಹಾರದ ಸಮಸ್ಯೆಯು ಉಂಟಾಗಿದೆ. ಆದರೆ ಅರಣ್ಯ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆ ಸೇರಿದಂತೆ ಕಾಮಗಾರಿಗಳು ಹೆಚ್ಚಿದಂತೆ ಚಿರತೆಗಳು ನಾಡಿನತ್ತ ಆಹಾರ ಹುಡುಕುತ್ತಾ ಬಂದು ದಾಳಿ ಮಾಡುತ್ತಿವೆ.

ತುಮಕೂರು ಜಿಲ್ಲೆಯ ಹತ್ತು ತಾಲೂಕು ಕೇಂದ್ರಗಳಲ್ಲೂ ಚಿರತೆಗಳು ದಾಳಿ ಇಡುತ್ತಲೇ ಇವೆ. ಕುರಿ, ಮೇಕೆ, ದನ ಮೇಯಿಸುವವರನ್ನು ಕಾಡುತ್ತಲೇ ಇವೆ. ಬಹಳಷ್ಟು ಸಲ ಅವರ ಕಣ್ಣಿಗೂ ಬಿದ್ದಿವೆ. ಕುರಿ, ಮೇಕೆಗಳನ್ನು ಹೊತ್ತೊಯ್ದಿವೆ. ನಾಯಿಗಳನ್ನು ತಿಂದು ಹಾಕಿವೆ. ಮನುಷ್ಯರ ಮೇಲೆ ದಾಳಿಯನ್ನೂ ನಡೆಸಿ ಹಲವರನ್ನು ಗಾಯಗೊಳಿಸಿವೆ. ಆದರೂ ಅರಣ್ಯ ಇಲಾಖೆ ಕೈಕಟ್ಟಿ ಕುಳಿತಿದೆ.

ನವೆಂಬರ್ 29ರಂದು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ದೊಡ್ಡ ಮಳಲವಾಡಿಯಲ್ಲಿ ಅರಣ್ಯ ಅಂಚಿನಲ್ಲಿ ಹೊಲದಲ್ಲಿ ಕುರಿ ಮೇಯಿಸುತ್ತಿದ್ದ  ಆನಂದಯ್ಯ ಎಂಬುವರ ಮೇಲೆ ಚಿರತೆ ಎರಗಿದೆ. ಕುತ್ತಿಗೆಗೆ ಬಾಯಿ ಹಾಕಿ ರಕ್ತವನ್ನು ಕುಡಿದಿದೆ. ಆನಂದಯ್ಯ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ. ಆನಂದಯ್ಯ ಅವರ ಕುತ್ತಿಗೆಯ ಭಾಗದಲ್ಲಿ ಚಿರತೆಯ ಹಲ್ಲುಗಳ ಆಳವಾಗಿ ಒಳಹೊಕ್ಕಿರುವುದು ಕಂಡು ಬಂದಿದೆ. ಅರಣ್ಯ ಅಧಿಕಾರಿಗಳು ಆ ಚಿರತೆಗಾಗಿ ಶೋಧ ಮುಂದುವರಿಸಿದ್ದಾರೆ.

ಚಿರತೆ ದಾಳಿಗೆ ಮೃತಪಟ್ಟ ಆನಂದಯ್ಯ

ಮನುಷ್ಯರ ರಕ್ತದ ರುಚಿಯನ್ನು ಕಂಡಿರುವ ಚಿರತೆ, ಇದುವರೆಗೆ ಇಬ್ಬರನ್ನು ಬಲಿತೆಗೆದುಕೊಂಡಿದೆ. ಚಿರತೆ ದಾಳಿ ನಡೆಯುತ್ತಿರುವ ಬಗ್ಗೆ ಗ್ರಾಮಸ್ಥರು ನಿರಂತರವಾಗಿ ಅರಣ್ಯ ಇಲಾಖೆಗೆ ಮನವಿಗಳ ಮೇಲೆ ಮನವಿ ಸಲ್ಲಿಸುತ್ತಿದ್ದರೂ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ. ಗ್ರಾಮಸ್ಥರ ಪ್ರತಿಭಟನೆ ಮತ್ತು ಒತ್ತಡ ಹೆಚ್ಚಾದಾಗ ಬೋನಿಟ್ಟು ಹಿಡಿದು ಅರಣ್ಯಕ್ಕೆ ಬಿಡುವ ಒಂದೆರಡು ಪ್ರಕರಣಗಳನ್ನು ಬಿಟ್ಟರೆ ಉಳಿದಂತೆ ಏನೂ ಆಗಿಲ್ಲ.

ಬೆಟ್ಟಗುಡ್ಡಗಳಲ್ಲಿ ಮತ್ತು ಅರಣ್ಯದಲ್ಲಿ ಅಕ್ರಮ-ಸಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿದ್ದು, ವ್ಯನ್ಯಜೀವಿಗಳ ಆವಾಸ ಸ್ಥಾನದಲ್ಲಿ ಪ್ರಾಣಿಗಳು ವಾಸಿಸಲು ಅಡ್ಡಿಯಾಗುತ್ತಿದೆ. ಅರಣ್ಯದಲ್ಲಿ ಆಹಾರದ ಕೊರತೆಯಾಗಿರುವುದು ಕೂಡ ಚಿರತೆಗಳು ಕುರಿ, ಮೇಕೆ ಮತ್ತು ನಾಯಿಗಳ ಮೇಲೆ ದಾಳಿ ನಡೆಸಲು ಕಾರಣವಾಗಿದೆ. ಚಿರತೆಗಳು ಆಗೊಮ್ಮೆ ಈಗೊಮ್ಮೆ ಮನುಷ್ಯನ ಮೇಲೆಯೂ ಎರಗಿ ಗಾಯಗೊಳಿಸಿರುವುದೂ ಉಂಟು.

ಚಿರತೆ ದಾಳಿಯಂತಹ ಘಟನೆಗಳು ಪದೇ ಪದೇ ನಡೆಯುತ್ತಿದ್ದರೂ, ಕುರಿಗಾಹಿಗಳು, ಮೇಕೆ ಕಾಯುವವರು ಮತ್ತು ಇತರರು ದಾಳಿಗೆ ಒಳಗಾಗಿ ಗಾಯಗೊಂಡು ಆಸ್ಪತ್ರೆ ಸೇರುತ್ತಲೇ ಇದ್ದಾರೆ. ಹೀಗೆ ಚಿರತೆ ದಾಳಿಯಿಂದ ಸಾಕು ಪ್ರಾಣಿಗಳನ್ನು ಕಳೆದುಕೊಂಡವರಿಗೆ ಇದುವರೆಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಗಾಯಗೊಂಡವರಿಗೂ ಪರಿಹಾರ ಲಭಿಸಿಲ್ಲ. ಇದರಿಂದ ಜನರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕರಡಿ, ಚಿರತೆ, ದಾಳಿಯಿಂದ ಬೇಸತ್ತಿರುವ ಜನರು ಗ್ರಾಮದ ಹೊರಗೆ ಒಬ್ಬೊಬ್ಬರೇ ಹೋಗಲು ಭಯಪಡುತ್ತಿದ್ದಾರೆ. ರಾತ್ರಿ ವೇಳೆ ಹೊಲಗಳಿಗೆ ಹೋಗಿ ಬೋರ್ ಮೂಲಕ ನೀರು ಹಾಯಿಸಲು ಹೋಗುವವರು ತಮ್ಮ ಜೀವಗಳನ್ನು ಕೈಯಲ್ಲಿ ಹಿಡಿದುಕೊಂಡು ಭಯದಲ್ಲೇ ಹೋಗುವಂತಹ ಪರಿಸ್ಥಿತಿ ಬಂದಿದೆ. ಕುರಿ, ಮೇಕೆ ಮೇಯಿಸುವವರು ಅರಣ್ಯದ ಅಂಚಿಗೆ ಹೋಗಲು ಹೆದರಿಕೊಳ್ಳುತ್ತಿದ್ದಾರೆ. ಅದು ಒಬ್ಬಂಟಿಯಾಗಿ ಹೋಗುವುದು ಹೇಗೆ ಎಂದು ಚಿಂತಾಕ್ರಾಂತರಾಗಿದ್ದಾರೆ. ವನ್ಯಜೀವಿಗಳಿಂದ ಗಾಯಗೊಂಡವರಿಗೆ ಮತ್ತು ಸಾಕುಪ್ರಾಣಿಗಳನ್ನು ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕೆಂಬ ಒತ್ತಾಯ ವ್ಯಾಪಕವಾಗಿ ಕೇಳಿಬಂದಿದೆ.

ಅದಕ್ಕೂ ಮೊದಲು ಚಿರತೆ ದಾಳಿ ತಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಅರಣ್ಯದಲ್ಲಿ ಅವುಗಳಿಗೆ ಸಾಕಷ್ಟು ಆಹಾರ ಸಿಗುವಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲಿ ನಡೆಯುವ ಅಕ್ರಮ ಗಣಿಗಾರಿಕೆಗೆ ಅಂಕುಶ ಬೀಳಬೇಕು. ಆಗ ಮಾತ್ರ ಅವು ಮನುಷ್ಯರ ಮೇಲೆ ಎರಗುವುದನ್ನು ನಿಲ್ಲಿಸುತ್ತವೆ. ಇದರ ಜೊತೆಗೆ ಮಾನವ ಮತ್ತು ವನ್ಯಜೀವಿಗಳ ಸಂಘರ್ಷ ತಡೆಯಲು ಸಾಧ್ಯವಾಗುತ್ತದೆ.

ಅರಣ್ಯ ಇಲಾಖೆ ಕೈಕಟ್ಟಿ ಕುಳಿತರೆ ಯಾವುದೇ ಪರಿಹಾರ ಸಿಗುವುದಿಲ್ಲ. ಸರ್ಕಾರಕ್ಕೆ ಅಗತ್ಯ ಮಾಹಿತಿ ನೀಡಿ ಅರಣ್ಯದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಹೋರಾಟಗಾರರು ಮತ್ತು ಸಂತ್ರಸ್ತರನ್ನು ಮಾತನಾಡಿಸಲಾಯಿತು. ಅವರು ಹೇಳಿಕೆಗಳು ಕೆಳಗಿನಂತಿವೆ.

ಮೂಲ ಸಮಸ್ಯೆಯನ್ನು ಪರಿಹರಿಸುವುದು ಯಾರಿಗೂ ಬೇಕಾಗಿಲ್ಲ. ಚಿರತೆ ದಾಳಿಯ ಮೂಲ ಸಮಸ್ಯೆ ಯಾರಿಗೂ ಗೊತ್ತಿಲ್ಲ. ಅರಣ್ಯ ಅಧಿಕಾರಿಗಳು, ಶಾಸಕರು, ಸಂಸದರು ಮತ್ತು ಮಂತ್ರಿಗಳು ಇದರ ಬಗ್ಗೆ ಯೋಚಿಸುತ್ತಿಲ್ಲ. ಅರಣ್ಯ ಕಡಿಯುವುದರಿಂದ ಸಮಸ್ಯೆ ಉಂಟಾಗಿದೆ ಎಂದು ಬಿಂಬಿಸಲಾಗುತ್ತಿದೆ. ಇದು ಪ್ರಶ್ನೆಯೇ ಅಲ್ಲ. ಕಾಡಿನಲ್ಲಿ ಸಸ್ಯಹಾರಿ ಪ್ರಾಣಿಗಳಿಗೆ ಬೇಕಾಗುವ ನೇರಳೆ, ಹಲಸು ಮರಗಳನ್ನು ಮತ್ತು ಗಿಡಮೂಲಿಕೆ ಗಿಡಗಳನ್ನು ಬೆಳೆಸುವ ಗೋಜಿಗೆ ಅರಣ್ಯ ಇಲಾಖೆ ಹೊಗುತ್ತಿಲ್ಲ. ಹೀಗಾಗಿ ಅಲ್ಲಿ ಸಸ್ಯಹಾರಿ ಪ್ರಾಣಿಗಳು ವಾಸಿಸುತ್ತಿಲ್ಲ.

ಸಸ್ಯಹಾರಿ ಪ್ರಾಣಿಗಳನ್ನು ತಿಂದು ಜೀವಿಸುವ ಚಿರತೆಗಳಿಗೆ ಆಹಾರದ ಸಮಸ್ಯೆ ಎದುರಾಗಿದೆ. ಅರಣ್ಯ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತದೆ. ಆದರೆ ಕಾಡನ್ನು ವೈಜ್ಞಾನಿಕವಾಗಿ ಬೆಳೆಸುತ್ತಿಲ್ಲ. ನೀಲಗಿರಿ, ಅಕೇಶಿಯಾ ಗಿಡಗಳನ್ನು ಬೆಳೆಸಿದರೆ ಪ್ರಾಣಿಗಳಿಗೆ ಆಗುವ ಪ್ರಯೋಜವೇನು? ಇದರಿಂದ ಸಸ್ಯಹಾರಿ ಮತ್ತು ಮಾಂಸಹಾರಿ ಪ್ರಾಣಿಗಳಿಗೆ ಆಹಾರದ ಸಮಸ್ಯೆ ಅನಿವಾರ್ಯವಾಗಿ ಎದುರಾಗುತ್ತದೆ. ಹೆಚ್ಚು ಹೆಚ್ಚಾಗಿ ಮೊಲ, ಜಿಂಕೆ, ಕೋತಿ ಮೊದಲಾದ ಪ್ರಾಣಿಗಳು ಕಾಡಿನಲ್ಲಿ ಇದ್ದರೆ ಚಿರತೆಗಳು ನಾಡಿಗೆ ಬರುವುದಿಲ್ಲ. ಮೇಕೆ, ಕುರಿ ಮತ್ತು ಮನುಷ್ಯನ ಮೇಲೆ ದಾಳಿ ಮಾಡುವುದಿಲ್ಲ.

ಆನಂದ್‌ ಪಟೇಲ್‌

ಕೇವಲ ದಾಳಿಯಾದಾಗ ಮಾತ್ರ ಒಂದು ಚಿರತೆಯನ್ನೋ, ಕರಡಿಯನ್ನೋ ಹಿಡಿದರೆ ಸಮಸ್ಯೆ ಬಗೆಹರಿಯುತ್ತದೆಯೇ? ಮತ್ತೆ ಇನ್ನೊಂದು ಚಿರತೆ ದಾಳಿ ಮಾಡುತ್ತದೆ. ಆನೆಗಳು ದಾಳಿ ಮಾಡುತ್ತವೆ. ಹೀಗಾಗಿ ಅರಣ್ಯೀಕರಣವೆಂದರೆ ಅದು ವೈಜ್ಞಾನಿಕವಾಗಿ ಇರಬೇಕು. ಕಾಡಿನಲ್ಲಿ ಹಣ್ಣಿನ ಮರಗಳನ್ನು ಯಥೇಚ್ಚವಾಗಿ ಬೆಳೆಸಬೇಕು. ಸಸ್ಯಹಾರ ಪ್ರಾಣಿಗಳು ಹೆಚ್ಚಳವಾಗುವಂತೆ ನೋಡಿಕೊಳ್ಳಬೇಕು. ಆಗ ಮಾಂಸಾಹಾರಿಗಳಿಗೂ ಕಾಡಿನಲ್ಲಿಯೇ ಆಹಾರ ದೊರೆಯುತ್ತದೆ. ಇದು ಸಾಮಾನ್ಯ ತಿಳುವಳಿಕೆ. ಇಷ್ಟು ಮಾಡಲಿ ಅರಣ್ಯ ಇಲಾಖೆ.
ಆನಂದ್ ಪಟೇಲ್, ಕರ್ನಾಟಕ ರಾಜ್ಯ ರೈತ ಸಂಘದ ಕುಣಿಗಲ್ ತಾಲೂಕು ಅಧ್ಯಕ್ಷರು.

ಇದುವರೆಗೆ ಚಿರತೆ ಮೂವರನ್ನು ಬಲಿತೆಗೆದುಕೊಂಡಿದೆ. ಕೇವಲ ಪರಿಹಾರ ನೀಡುವುದರಿಂದ ಹೋದ ಪ್ರಾಣ ಬರುತ್ತದೆಯೇ? ಕೊತ್ತಗೆರೆ ಹೋಬಳಿಯ ದೊಡ್ಡಮಳಲವಾಡಿ, ಗಿಡದಪಾಳ್ಯದಲ್ಲಿ ಮೂವರನ್ನು ಕೊಂದು ಹಾಕಿದೆ. ಕಳೆದ 15 ದಿನಗಳ ಹಿಂದೆ ಮಹಿಳೆಯೊಬ್ಬರನ್ನು ಚಿರತೆ ಕೊಂದಿತ್ತು. ಹೀಗೆ ಜೀವ ಹೋಗುತ್ತಲೇ ಇವೆ. ಅರಣ್ಯ ಇಲಾಖೆ ಪುಡಿಗಾಸು ಪರಿಹಾರ ನೀಡುತ್ತಿದೆ. ಇದರಿಂದೇನು ಪ್ರಯೋಜನವಾಗುವುದಿಲ್ಲ. ಚಿರತೆಗಳು ವಾಸಿಸುವಂತಹ ಯೋಗ್ಯ ಆವಾಸ ಸ್ಥಾನಗಳು ಕುಣಿಗಲ್ ತಾಲೂಕಿನಲ್ಲಿ ಇಲ್ಲ.

ಜಿ.ಕೆ.ನಾಗಣ್ಣ

ಜಿ.ಕೆ.ನಾಗಣ್ಣ, ಸಂತೇಮಾವತ್ತೂರು ಗೊಲ್ಲರಹಟ್ಟಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...