Homeಕರ್ನಾಟಕಚಿರತೆ ಕಂಡರೆ ಹೀಗೆ ಮಾಡಬೇಕಂತೆ ! ಕುಣಿಗಲ್ ತಾಲ್ಲೂಕು ಆಡಳಿತದ ವಿಚಿತ್ರ ಸಲಹೆಗಳು!!

ಚಿರತೆ ಕಂಡರೆ ಹೀಗೆ ಮಾಡಬೇಕಂತೆ ! ಕುಣಿಗಲ್ ತಾಲ್ಲೂಕು ಆಡಳಿತದ ವಿಚಿತ್ರ ಸಲಹೆಗಳು!!

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿರುವುದು, ಇದೀಗ ಆಯಾ ತಾಲೂಕು ಆಡಳಿತಕ್ಕೂ ತಲೆ ನೋವಿನ ಸಂಗತಿಯಾಗಿದೆ. ಒಂದು ತಿಂಗಳಲ್ಲೇ ಕುಣಿಗಲ್ ತಾಲೂಕಿನಲ್ಲಿ ಮೂವರ ಮೇಲೆ ಚಿರತೆ ಹಲ್ಲೆ ನಡೆಸಿ ಕೊಂದು ಹಾಕಿರುವುದು ಜನರನ್ನು ಕೆರಳುವಂತೆ ಮಾಡಿರುವುದರಿಂದ ಚಿರತೆಗಳ ತಡೆಗೆ ಏನು ಮಾಡಬೇಕೆಂದು ಯೋಚಿಸಿ ಇದೀಗ ಕೆಲವು ಸೂಚನೆಗಳನ್ನು ಜನರಿಗೆ ನೀಡಲಾಗಿದೆ.

ನರಭಕ್ಷಕ ಚಿರತೆ ಮನುಷ್ಯನ ರಕ್ತದ ರುಚಿ ನೋಡಿದೆ. ಹೀಗಾಗಿಯೇ ಕುಣಿಗಲ್ ತಾಲೂಕಿನಲ್ಲಿ ಪದೇ ಪದೇ ಒಂಟಿ ಮನುಷ್ಯರ ಮೇಲೆ ದಾಳಿ ಮಾಡುತ್ತಲೇ ಇದೆ. ಅರಣ್ಯದಂಚಿನಲ್ಲಿ ಇದ್ದವರ ಮೇಲೆಯ ದಾಳಿ ನಡೆದಿರುವುದು ಗ್ರಾಮಸ್ಥರಲ್ಲಿ ಭಯವನ್ನು ಹುಟ್ಟು ಹಾಕಿದೆ. ಭಯ ದೂರಾಗುವಂತಹ ಕೆಲಸವನ್ನು ಅರಣ್ಯ ಇಲಾಖೆಯಾಗಲೀ, ತಾಲೂಕು ಆಡಳಿತವಾಗಲೀ ತೆಗೆದುಕೊಂಡಂತೆ ಕಾಣುತ್ತಿಲ್ಲ.

ಆದರೆ ಜನರಿಗೆ ಕುಣಿಗಲ್ ತಾಲೂಕು ಆಡಳಿತ ಕೆಲವು ಸೂಚನೆಗಳನ್ನು ನೀಡಿರುವುದು ಹಾಸ್ಯಾಸ್ಪದವಾಗಿದೆ. ಮಕ್ಕಳು, ವೃದ್ದರು ಮತ್ತು ಮಹಿಳೆಯರು ಸಂಜೆ ಆರು ಗಂಟೆಯ ಒಳಗೆ ಮನೆಯನ್ನು ಸೇರಿಕೊಳ್ಳಬೇಕು. ಬಯಲು ಬಹಿರ್ದೆಸೆಗೆ ಹೋಗಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಬಹಿರ್ದೆಸೆಗೆ ಹೋಗುವುದನ್ನು ಹೇಗೆ ತಡೆಯಲು ಸಾಧ್ಯ ಎಂಬ ಕನಿಷ್ಠ ಜ್ಞಾನವೂ ಇಲ್ಲದಿರುವುದು ಶೋಚನೀಯವಾಗಿದೆ.

ಚಿರತೆ ಕಂಡರೆ ಜನರು ಗದ್ದಲ ಮಾಡಬಾರದು. ಗುಂಪುಗೂಡಿ ಓಡಿಸಲು ಯತ್ನಿಸಬಾರದು. ಮೇಕೆ, ಕುರಿ, ದನ ಮೇಯಿಸುವವರು ಪೊದೆಯ ಪಕ್ಕದಲ್ಲಿ ಕುಳಿತುಕೊಳ್ಳಬಾರದು. ಒಬ್ಬರೇ ಮೇಯಿಸುವಾಗ ಬಯಲಲ್ಲಿ ಇರಬೇಕು ಎನ್ನುವುದು ವಿಚಿತ್ರ ಎನಿಸುತ್ತದೆ. ಕುರಿ, ಮೇಕೆ ಮೇಯಿಸುವವರು ಬೇಕೆಂದೇನು ಪೊದೆಯ ಪಕ್ಕದಲ್ಲಿ ಕೂರುವುದಿಲ್ಲ. ಬಿಸಿಲ ತಡೆಯಲಾರದೆ ನೆರಳು ಬೇಕೆಂಬ ಉದ್ದೇಶಕ್ಕಾಗಿ ಅಲ್ಲಿ ಕುಳಿತುಕೊಳ್ಳುತ್ತಾರೆ.

ಸಾಕು ಪ್ರಾಣಿಗಳನ್ನು ಸಂಜೆಯಾದ ಮೇಲೆ ರೊಪ್ಪದಲ್ಲಿ ಬಿಡಬೇಕು ಎಂದು ಹೇಳಿದೆ. ದನಗಳನ್ನು ಹೊರತುಪಡಿಸಿ ಉಳಿದ ಸಾಕು ಪ್ರಾಣಿಗಳು ರೊಪ್ಪ, ಕೊಟ್ಟಿಗೆಯಲ್ಲೇ ಕಟ್ಟಲಾಗುತ್ತದೆ. ಇದರ ಹೊರತಾಗಿಯೂ ಚಿರತೆಗಳು ಕೊಟ್ಟಿಗೆಗೆ ದಾಳಿ ಮಾಡಿ ಕುರಿಗಳನ್ನು ಸಾಯಿಸಿರುವ ಉದಾಹರಣೆಗಳು ಇವೆ.  ಹೊಲಗಳಿಗೆ ಯಾರೂ ಬೇಕೆಂದೇ ಹೋಗುವುದಿಲ್ಲ. ರಾತ್ರಿ ವಿದ್ಯುತ್ ನೀಡುವುದರಿಂದ ಅನಿವಾರ್ಯವಾಗಿ ನೀರು ಹಾಯಿಸಲು ಒಬ್ಬೊಬ್ಬರೇ ಹೋಗಬೇಕಾದ ಅನಿವಾರ್ಯತೆ ಬರುತ್ತದೆ. ಆಗ ಕರಡಿ, ಚಿರತೆ ದಾಳಿ ನಡೆಯುತ್ತದೆ. ಇದಕ್ಕ ಪರಿಹಾರಗಳನ್ನು ಜಿಲ್ಲಾಡಳಿತ ಕಂಡುಕೊಳ್ಳಬೇಕಾಗಿದೆ. ಅದನ್ನು ಬಿಟ್ಟು ಈ ರೀತಿಯ ಬಿಟ್ಟಿ ಸಲಹೆಗಳನ್ನಲ್ಲ ಎಂದು ಜನ ಮಾತಾಡಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...