Homeಕರ್ನಾಟಕಚಿರತೆ ಕಂಡರೆ ಹೀಗೆ ಮಾಡಬೇಕಂತೆ ! ಕುಣಿಗಲ್ ತಾಲ್ಲೂಕು ಆಡಳಿತದ ವಿಚಿತ್ರ ಸಲಹೆಗಳು!!

ಚಿರತೆ ಕಂಡರೆ ಹೀಗೆ ಮಾಡಬೇಕಂತೆ ! ಕುಣಿಗಲ್ ತಾಲ್ಲೂಕು ಆಡಳಿತದ ವಿಚಿತ್ರ ಸಲಹೆಗಳು!!

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿರುವುದು, ಇದೀಗ ಆಯಾ ತಾಲೂಕು ಆಡಳಿತಕ್ಕೂ ತಲೆ ನೋವಿನ ಸಂಗತಿಯಾಗಿದೆ. ಒಂದು ತಿಂಗಳಲ್ಲೇ ಕುಣಿಗಲ್ ತಾಲೂಕಿನಲ್ಲಿ ಮೂವರ ಮೇಲೆ ಚಿರತೆ ಹಲ್ಲೆ ನಡೆಸಿ ಕೊಂದು ಹಾಕಿರುವುದು ಜನರನ್ನು ಕೆರಳುವಂತೆ ಮಾಡಿರುವುದರಿಂದ ಚಿರತೆಗಳ ತಡೆಗೆ ಏನು ಮಾಡಬೇಕೆಂದು ಯೋಚಿಸಿ ಇದೀಗ ಕೆಲವು ಸೂಚನೆಗಳನ್ನು ಜನರಿಗೆ ನೀಡಲಾಗಿದೆ.

ನರಭಕ್ಷಕ ಚಿರತೆ ಮನುಷ್ಯನ ರಕ್ತದ ರುಚಿ ನೋಡಿದೆ. ಹೀಗಾಗಿಯೇ ಕುಣಿಗಲ್ ತಾಲೂಕಿನಲ್ಲಿ ಪದೇ ಪದೇ ಒಂಟಿ ಮನುಷ್ಯರ ಮೇಲೆ ದಾಳಿ ಮಾಡುತ್ತಲೇ ಇದೆ. ಅರಣ್ಯದಂಚಿನಲ್ಲಿ ಇದ್ದವರ ಮೇಲೆಯ ದಾಳಿ ನಡೆದಿರುವುದು ಗ್ರಾಮಸ್ಥರಲ್ಲಿ ಭಯವನ್ನು ಹುಟ್ಟು ಹಾಕಿದೆ. ಭಯ ದೂರಾಗುವಂತಹ ಕೆಲಸವನ್ನು ಅರಣ್ಯ ಇಲಾಖೆಯಾಗಲೀ, ತಾಲೂಕು ಆಡಳಿತವಾಗಲೀ ತೆಗೆದುಕೊಂಡಂತೆ ಕಾಣುತ್ತಿಲ್ಲ.

ಆದರೆ ಜನರಿಗೆ ಕುಣಿಗಲ್ ತಾಲೂಕು ಆಡಳಿತ ಕೆಲವು ಸೂಚನೆಗಳನ್ನು ನೀಡಿರುವುದು ಹಾಸ್ಯಾಸ್ಪದವಾಗಿದೆ. ಮಕ್ಕಳು, ವೃದ್ದರು ಮತ್ತು ಮಹಿಳೆಯರು ಸಂಜೆ ಆರು ಗಂಟೆಯ ಒಳಗೆ ಮನೆಯನ್ನು ಸೇರಿಕೊಳ್ಳಬೇಕು. ಬಯಲು ಬಹಿರ್ದೆಸೆಗೆ ಹೋಗಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಬಹಿರ್ದೆಸೆಗೆ ಹೋಗುವುದನ್ನು ಹೇಗೆ ತಡೆಯಲು ಸಾಧ್ಯ ಎಂಬ ಕನಿಷ್ಠ ಜ್ಞಾನವೂ ಇಲ್ಲದಿರುವುದು ಶೋಚನೀಯವಾಗಿದೆ.

ಚಿರತೆ ಕಂಡರೆ ಜನರು ಗದ್ದಲ ಮಾಡಬಾರದು. ಗುಂಪುಗೂಡಿ ಓಡಿಸಲು ಯತ್ನಿಸಬಾರದು. ಮೇಕೆ, ಕುರಿ, ದನ ಮೇಯಿಸುವವರು ಪೊದೆಯ ಪಕ್ಕದಲ್ಲಿ ಕುಳಿತುಕೊಳ್ಳಬಾರದು. ಒಬ್ಬರೇ ಮೇಯಿಸುವಾಗ ಬಯಲಲ್ಲಿ ಇರಬೇಕು ಎನ್ನುವುದು ವಿಚಿತ್ರ ಎನಿಸುತ್ತದೆ. ಕುರಿ, ಮೇಕೆ ಮೇಯಿಸುವವರು ಬೇಕೆಂದೇನು ಪೊದೆಯ ಪಕ್ಕದಲ್ಲಿ ಕೂರುವುದಿಲ್ಲ. ಬಿಸಿಲ ತಡೆಯಲಾರದೆ ನೆರಳು ಬೇಕೆಂಬ ಉದ್ದೇಶಕ್ಕಾಗಿ ಅಲ್ಲಿ ಕುಳಿತುಕೊಳ್ಳುತ್ತಾರೆ.

ಸಾಕು ಪ್ರಾಣಿಗಳನ್ನು ಸಂಜೆಯಾದ ಮೇಲೆ ರೊಪ್ಪದಲ್ಲಿ ಬಿಡಬೇಕು ಎಂದು ಹೇಳಿದೆ. ದನಗಳನ್ನು ಹೊರತುಪಡಿಸಿ ಉಳಿದ ಸಾಕು ಪ್ರಾಣಿಗಳು ರೊಪ್ಪ, ಕೊಟ್ಟಿಗೆಯಲ್ಲೇ ಕಟ್ಟಲಾಗುತ್ತದೆ. ಇದರ ಹೊರತಾಗಿಯೂ ಚಿರತೆಗಳು ಕೊಟ್ಟಿಗೆಗೆ ದಾಳಿ ಮಾಡಿ ಕುರಿಗಳನ್ನು ಸಾಯಿಸಿರುವ ಉದಾಹರಣೆಗಳು ಇವೆ.  ಹೊಲಗಳಿಗೆ ಯಾರೂ ಬೇಕೆಂದೇ ಹೋಗುವುದಿಲ್ಲ. ರಾತ್ರಿ ವಿದ್ಯುತ್ ನೀಡುವುದರಿಂದ ಅನಿವಾರ್ಯವಾಗಿ ನೀರು ಹಾಯಿಸಲು ಒಬ್ಬೊಬ್ಬರೇ ಹೋಗಬೇಕಾದ ಅನಿವಾರ್ಯತೆ ಬರುತ್ತದೆ. ಆಗ ಕರಡಿ, ಚಿರತೆ ದಾಳಿ ನಡೆಯುತ್ತದೆ. ಇದಕ್ಕ ಪರಿಹಾರಗಳನ್ನು ಜಿಲ್ಲಾಡಳಿತ ಕಂಡುಕೊಳ್ಳಬೇಕಾಗಿದೆ. ಅದನ್ನು ಬಿಟ್ಟು ಈ ರೀತಿಯ ಬಿಟ್ಟಿ ಸಲಹೆಗಳನ್ನಲ್ಲ ಎಂದು ಜನ ಮಾತಾಡಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...