Homeಕರ್ನಾಟಕಚಿರತೆ ಕಂಡರೆ ಹೀಗೆ ಮಾಡಬೇಕಂತೆ ! ಕುಣಿಗಲ್ ತಾಲ್ಲೂಕು ಆಡಳಿತದ ವಿಚಿತ್ರ ಸಲಹೆಗಳು!!

ಚಿರತೆ ಕಂಡರೆ ಹೀಗೆ ಮಾಡಬೇಕಂತೆ ! ಕುಣಿಗಲ್ ತಾಲ್ಲೂಕು ಆಡಳಿತದ ವಿಚಿತ್ರ ಸಲಹೆಗಳು!!

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿರುವುದು, ಇದೀಗ ಆಯಾ ತಾಲೂಕು ಆಡಳಿತಕ್ಕೂ ತಲೆ ನೋವಿನ ಸಂಗತಿಯಾಗಿದೆ. ಒಂದು ತಿಂಗಳಲ್ಲೇ ಕುಣಿಗಲ್ ತಾಲೂಕಿನಲ್ಲಿ ಮೂವರ ಮೇಲೆ ಚಿರತೆ ಹಲ್ಲೆ ನಡೆಸಿ ಕೊಂದು ಹಾಕಿರುವುದು ಜನರನ್ನು ಕೆರಳುವಂತೆ ಮಾಡಿರುವುದರಿಂದ ಚಿರತೆಗಳ ತಡೆಗೆ ಏನು ಮಾಡಬೇಕೆಂದು ಯೋಚಿಸಿ ಇದೀಗ ಕೆಲವು ಸೂಚನೆಗಳನ್ನು ಜನರಿಗೆ ನೀಡಲಾಗಿದೆ.

ನರಭಕ್ಷಕ ಚಿರತೆ ಮನುಷ್ಯನ ರಕ್ತದ ರುಚಿ ನೋಡಿದೆ. ಹೀಗಾಗಿಯೇ ಕುಣಿಗಲ್ ತಾಲೂಕಿನಲ್ಲಿ ಪದೇ ಪದೇ ಒಂಟಿ ಮನುಷ್ಯರ ಮೇಲೆ ದಾಳಿ ಮಾಡುತ್ತಲೇ ಇದೆ. ಅರಣ್ಯದಂಚಿನಲ್ಲಿ ಇದ್ದವರ ಮೇಲೆಯ ದಾಳಿ ನಡೆದಿರುವುದು ಗ್ರಾಮಸ್ಥರಲ್ಲಿ ಭಯವನ್ನು ಹುಟ್ಟು ಹಾಕಿದೆ. ಭಯ ದೂರಾಗುವಂತಹ ಕೆಲಸವನ್ನು ಅರಣ್ಯ ಇಲಾಖೆಯಾಗಲೀ, ತಾಲೂಕು ಆಡಳಿತವಾಗಲೀ ತೆಗೆದುಕೊಂಡಂತೆ ಕಾಣುತ್ತಿಲ್ಲ.

ಆದರೆ ಜನರಿಗೆ ಕುಣಿಗಲ್ ತಾಲೂಕು ಆಡಳಿತ ಕೆಲವು ಸೂಚನೆಗಳನ್ನು ನೀಡಿರುವುದು ಹಾಸ್ಯಾಸ್ಪದವಾಗಿದೆ. ಮಕ್ಕಳು, ವೃದ್ದರು ಮತ್ತು ಮಹಿಳೆಯರು ಸಂಜೆ ಆರು ಗಂಟೆಯ ಒಳಗೆ ಮನೆಯನ್ನು ಸೇರಿಕೊಳ್ಳಬೇಕು. ಬಯಲು ಬಹಿರ್ದೆಸೆಗೆ ಹೋಗಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಬಹಿರ್ದೆಸೆಗೆ ಹೋಗುವುದನ್ನು ಹೇಗೆ ತಡೆಯಲು ಸಾಧ್ಯ ಎಂಬ ಕನಿಷ್ಠ ಜ್ಞಾನವೂ ಇಲ್ಲದಿರುವುದು ಶೋಚನೀಯವಾಗಿದೆ.

ಚಿರತೆ ಕಂಡರೆ ಜನರು ಗದ್ದಲ ಮಾಡಬಾರದು. ಗುಂಪುಗೂಡಿ ಓಡಿಸಲು ಯತ್ನಿಸಬಾರದು. ಮೇಕೆ, ಕುರಿ, ದನ ಮೇಯಿಸುವವರು ಪೊದೆಯ ಪಕ್ಕದಲ್ಲಿ ಕುಳಿತುಕೊಳ್ಳಬಾರದು. ಒಬ್ಬರೇ ಮೇಯಿಸುವಾಗ ಬಯಲಲ್ಲಿ ಇರಬೇಕು ಎನ್ನುವುದು ವಿಚಿತ್ರ ಎನಿಸುತ್ತದೆ. ಕುರಿ, ಮೇಕೆ ಮೇಯಿಸುವವರು ಬೇಕೆಂದೇನು ಪೊದೆಯ ಪಕ್ಕದಲ್ಲಿ ಕೂರುವುದಿಲ್ಲ. ಬಿಸಿಲ ತಡೆಯಲಾರದೆ ನೆರಳು ಬೇಕೆಂಬ ಉದ್ದೇಶಕ್ಕಾಗಿ ಅಲ್ಲಿ ಕುಳಿತುಕೊಳ್ಳುತ್ತಾರೆ.

ಸಾಕು ಪ್ರಾಣಿಗಳನ್ನು ಸಂಜೆಯಾದ ಮೇಲೆ ರೊಪ್ಪದಲ್ಲಿ ಬಿಡಬೇಕು ಎಂದು ಹೇಳಿದೆ. ದನಗಳನ್ನು ಹೊರತುಪಡಿಸಿ ಉಳಿದ ಸಾಕು ಪ್ರಾಣಿಗಳು ರೊಪ್ಪ, ಕೊಟ್ಟಿಗೆಯಲ್ಲೇ ಕಟ್ಟಲಾಗುತ್ತದೆ. ಇದರ ಹೊರತಾಗಿಯೂ ಚಿರತೆಗಳು ಕೊಟ್ಟಿಗೆಗೆ ದಾಳಿ ಮಾಡಿ ಕುರಿಗಳನ್ನು ಸಾಯಿಸಿರುವ ಉದಾಹರಣೆಗಳು ಇವೆ.  ಹೊಲಗಳಿಗೆ ಯಾರೂ ಬೇಕೆಂದೇ ಹೋಗುವುದಿಲ್ಲ. ರಾತ್ರಿ ವಿದ್ಯುತ್ ನೀಡುವುದರಿಂದ ಅನಿವಾರ್ಯವಾಗಿ ನೀರು ಹಾಯಿಸಲು ಒಬ್ಬೊಬ್ಬರೇ ಹೋಗಬೇಕಾದ ಅನಿವಾರ್ಯತೆ ಬರುತ್ತದೆ. ಆಗ ಕರಡಿ, ಚಿರತೆ ದಾಳಿ ನಡೆಯುತ್ತದೆ. ಇದಕ್ಕ ಪರಿಹಾರಗಳನ್ನು ಜಿಲ್ಲಾಡಳಿತ ಕಂಡುಕೊಳ್ಳಬೇಕಾಗಿದೆ. ಅದನ್ನು ಬಿಟ್ಟು ಈ ರೀತಿಯ ಬಿಟ್ಟಿ ಸಲಹೆಗಳನ್ನಲ್ಲ ಎಂದು ಜನ ಮಾತಾಡಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...