Homeಕರ್ನಾಟಕಚಿರತೆ ಕಂಡರೆ ಹೀಗೆ ಮಾಡಬೇಕಂತೆ ! ಕುಣಿಗಲ್ ತಾಲ್ಲೂಕು ಆಡಳಿತದ ವಿಚಿತ್ರ ಸಲಹೆಗಳು!!

ಚಿರತೆ ಕಂಡರೆ ಹೀಗೆ ಮಾಡಬೇಕಂತೆ ! ಕುಣಿಗಲ್ ತಾಲ್ಲೂಕು ಆಡಳಿತದ ವಿಚಿತ್ರ ಸಲಹೆಗಳು!!

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿರುವುದು, ಇದೀಗ ಆಯಾ ತಾಲೂಕು ಆಡಳಿತಕ್ಕೂ ತಲೆ ನೋವಿನ ಸಂಗತಿಯಾಗಿದೆ. ಒಂದು ತಿಂಗಳಲ್ಲೇ ಕುಣಿಗಲ್ ತಾಲೂಕಿನಲ್ಲಿ ಮೂವರ ಮೇಲೆ ಚಿರತೆ ಹಲ್ಲೆ ನಡೆಸಿ ಕೊಂದು ಹಾಕಿರುವುದು ಜನರನ್ನು ಕೆರಳುವಂತೆ ಮಾಡಿರುವುದರಿಂದ ಚಿರತೆಗಳ ತಡೆಗೆ ಏನು ಮಾಡಬೇಕೆಂದು ಯೋಚಿಸಿ ಇದೀಗ ಕೆಲವು ಸೂಚನೆಗಳನ್ನು ಜನರಿಗೆ ನೀಡಲಾಗಿದೆ.

ನರಭಕ್ಷಕ ಚಿರತೆ ಮನುಷ್ಯನ ರಕ್ತದ ರುಚಿ ನೋಡಿದೆ. ಹೀಗಾಗಿಯೇ ಕುಣಿಗಲ್ ತಾಲೂಕಿನಲ್ಲಿ ಪದೇ ಪದೇ ಒಂಟಿ ಮನುಷ್ಯರ ಮೇಲೆ ದಾಳಿ ಮಾಡುತ್ತಲೇ ಇದೆ. ಅರಣ್ಯದಂಚಿನಲ್ಲಿ ಇದ್ದವರ ಮೇಲೆಯ ದಾಳಿ ನಡೆದಿರುವುದು ಗ್ರಾಮಸ್ಥರಲ್ಲಿ ಭಯವನ್ನು ಹುಟ್ಟು ಹಾಕಿದೆ. ಭಯ ದೂರಾಗುವಂತಹ ಕೆಲಸವನ್ನು ಅರಣ್ಯ ಇಲಾಖೆಯಾಗಲೀ, ತಾಲೂಕು ಆಡಳಿತವಾಗಲೀ ತೆಗೆದುಕೊಂಡಂತೆ ಕಾಣುತ್ತಿಲ್ಲ.

ಆದರೆ ಜನರಿಗೆ ಕುಣಿಗಲ್ ತಾಲೂಕು ಆಡಳಿತ ಕೆಲವು ಸೂಚನೆಗಳನ್ನು ನೀಡಿರುವುದು ಹಾಸ್ಯಾಸ್ಪದವಾಗಿದೆ. ಮಕ್ಕಳು, ವೃದ್ದರು ಮತ್ತು ಮಹಿಳೆಯರು ಸಂಜೆ ಆರು ಗಂಟೆಯ ಒಳಗೆ ಮನೆಯನ್ನು ಸೇರಿಕೊಳ್ಳಬೇಕು. ಬಯಲು ಬಹಿರ್ದೆಸೆಗೆ ಹೋಗಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಬಹಿರ್ದೆಸೆಗೆ ಹೋಗುವುದನ್ನು ಹೇಗೆ ತಡೆಯಲು ಸಾಧ್ಯ ಎಂಬ ಕನಿಷ್ಠ ಜ್ಞಾನವೂ ಇಲ್ಲದಿರುವುದು ಶೋಚನೀಯವಾಗಿದೆ.

ಚಿರತೆ ಕಂಡರೆ ಜನರು ಗದ್ದಲ ಮಾಡಬಾರದು. ಗುಂಪುಗೂಡಿ ಓಡಿಸಲು ಯತ್ನಿಸಬಾರದು. ಮೇಕೆ, ಕುರಿ, ದನ ಮೇಯಿಸುವವರು ಪೊದೆಯ ಪಕ್ಕದಲ್ಲಿ ಕುಳಿತುಕೊಳ್ಳಬಾರದು. ಒಬ್ಬರೇ ಮೇಯಿಸುವಾಗ ಬಯಲಲ್ಲಿ ಇರಬೇಕು ಎನ್ನುವುದು ವಿಚಿತ್ರ ಎನಿಸುತ್ತದೆ. ಕುರಿ, ಮೇಕೆ ಮೇಯಿಸುವವರು ಬೇಕೆಂದೇನು ಪೊದೆಯ ಪಕ್ಕದಲ್ಲಿ ಕೂರುವುದಿಲ್ಲ. ಬಿಸಿಲ ತಡೆಯಲಾರದೆ ನೆರಳು ಬೇಕೆಂಬ ಉದ್ದೇಶಕ್ಕಾಗಿ ಅಲ್ಲಿ ಕುಳಿತುಕೊಳ್ಳುತ್ತಾರೆ.

ಸಾಕು ಪ್ರಾಣಿಗಳನ್ನು ಸಂಜೆಯಾದ ಮೇಲೆ ರೊಪ್ಪದಲ್ಲಿ ಬಿಡಬೇಕು ಎಂದು ಹೇಳಿದೆ. ದನಗಳನ್ನು ಹೊರತುಪಡಿಸಿ ಉಳಿದ ಸಾಕು ಪ್ರಾಣಿಗಳು ರೊಪ್ಪ, ಕೊಟ್ಟಿಗೆಯಲ್ಲೇ ಕಟ್ಟಲಾಗುತ್ತದೆ. ಇದರ ಹೊರತಾಗಿಯೂ ಚಿರತೆಗಳು ಕೊಟ್ಟಿಗೆಗೆ ದಾಳಿ ಮಾಡಿ ಕುರಿಗಳನ್ನು ಸಾಯಿಸಿರುವ ಉದಾಹರಣೆಗಳು ಇವೆ.  ಹೊಲಗಳಿಗೆ ಯಾರೂ ಬೇಕೆಂದೇ ಹೋಗುವುದಿಲ್ಲ. ರಾತ್ರಿ ವಿದ್ಯುತ್ ನೀಡುವುದರಿಂದ ಅನಿವಾರ್ಯವಾಗಿ ನೀರು ಹಾಯಿಸಲು ಒಬ್ಬೊಬ್ಬರೇ ಹೋಗಬೇಕಾದ ಅನಿವಾರ್ಯತೆ ಬರುತ್ತದೆ. ಆಗ ಕರಡಿ, ಚಿರತೆ ದಾಳಿ ನಡೆಯುತ್ತದೆ. ಇದಕ್ಕ ಪರಿಹಾರಗಳನ್ನು ಜಿಲ್ಲಾಡಳಿತ ಕಂಡುಕೊಳ್ಳಬೇಕಾಗಿದೆ. ಅದನ್ನು ಬಿಟ್ಟು ಈ ರೀತಿಯ ಬಿಟ್ಟಿ ಸಲಹೆಗಳನ್ನಲ್ಲ ಎಂದು ಜನ ಮಾತಾಡಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...