Homeಕರ್ನಾಟಕಚಿರತೆ ಕಂಡರೆ ಹೀಗೆ ಮಾಡಬೇಕಂತೆ ! ಕುಣಿಗಲ್ ತಾಲ್ಲೂಕು ಆಡಳಿತದ ವಿಚಿತ್ರ ಸಲಹೆಗಳು!!

ಚಿರತೆ ಕಂಡರೆ ಹೀಗೆ ಮಾಡಬೇಕಂತೆ ! ಕುಣಿಗಲ್ ತಾಲ್ಲೂಕು ಆಡಳಿತದ ವಿಚಿತ್ರ ಸಲಹೆಗಳು!!

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿರುವುದು, ಇದೀಗ ಆಯಾ ತಾಲೂಕು ಆಡಳಿತಕ್ಕೂ ತಲೆ ನೋವಿನ ಸಂಗತಿಯಾಗಿದೆ. ಒಂದು ತಿಂಗಳಲ್ಲೇ ಕುಣಿಗಲ್ ತಾಲೂಕಿನಲ್ಲಿ ಮೂವರ ಮೇಲೆ ಚಿರತೆ ಹಲ್ಲೆ ನಡೆಸಿ ಕೊಂದು ಹಾಕಿರುವುದು ಜನರನ್ನು ಕೆರಳುವಂತೆ ಮಾಡಿರುವುದರಿಂದ ಚಿರತೆಗಳ ತಡೆಗೆ ಏನು ಮಾಡಬೇಕೆಂದು ಯೋಚಿಸಿ ಇದೀಗ ಕೆಲವು ಸೂಚನೆಗಳನ್ನು ಜನರಿಗೆ ನೀಡಲಾಗಿದೆ.

ನರಭಕ್ಷಕ ಚಿರತೆ ಮನುಷ್ಯನ ರಕ್ತದ ರುಚಿ ನೋಡಿದೆ. ಹೀಗಾಗಿಯೇ ಕುಣಿಗಲ್ ತಾಲೂಕಿನಲ್ಲಿ ಪದೇ ಪದೇ ಒಂಟಿ ಮನುಷ್ಯರ ಮೇಲೆ ದಾಳಿ ಮಾಡುತ್ತಲೇ ಇದೆ. ಅರಣ್ಯದಂಚಿನಲ್ಲಿ ಇದ್ದವರ ಮೇಲೆಯ ದಾಳಿ ನಡೆದಿರುವುದು ಗ್ರಾಮಸ್ಥರಲ್ಲಿ ಭಯವನ್ನು ಹುಟ್ಟು ಹಾಕಿದೆ. ಭಯ ದೂರಾಗುವಂತಹ ಕೆಲಸವನ್ನು ಅರಣ್ಯ ಇಲಾಖೆಯಾಗಲೀ, ತಾಲೂಕು ಆಡಳಿತವಾಗಲೀ ತೆಗೆದುಕೊಂಡಂತೆ ಕಾಣುತ್ತಿಲ್ಲ.

ಆದರೆ ಜನರಿಗೆ ಕುಣಿಗಲ್ ತಾಲೂಕು ಆಡಳಿತ ಕೆಲವು ಸೂಚನೆಗಳನ್ನು ನೀಡಿರುವುದು ಹಾಸ್ಯಾಸ್ಪದವಾಗಿದೆ. ಮಕ್ಕಳು, ವೃದ್ದರು ಮತ್ತು ಮಹಿಳೆಯರು ಸಂಜೆ ಆರು ಗಂಟೆಯ ಒಳಗೆ ಮನೆಯನ್ನು ಸೇರಿಕೊಳ್ಳಬೇಕು. ಬಯಲು ಬಹಿರ್ದೆಸೆಗೆ ಹೋಗಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಬಹಿರ್ದೆಸೆಗೆ ಹೋಗುವುದನ್ನು ಹೇಗೆ ತಡೆಯಲು ಸಾಧ್ಯ ಎಂಬ ಕನಿಷ್ಠ ಜ್ಞಾನವೂ ಇಲ್ಲದಿರುವುದು ಶೋಚನೀಯವಾಗಿದೆ.

ಚಿರತೆ ಕಂಡರೆ ಜನರು ಗದ್ದಲ ಮಾಡಬಾರದು. ಗುಂಪುಗೂಡಿ ಓಡಿಸಲು ಯತ್ನಿಸಬಾರದು. ಮೇಕೆ, ಕುರಿ, ದನ ಮೇಯಿಸುವವರು ಪೊದೆಯ ಪಕ್ಕದಲ್ಲಿ ಕುಳಿತುಕೊಳ್ಳಬಾರದು. ಒಬ್ಬರೇ ಮೇಯಿಸುವಾಗ ಬಯಲಲ್ಲಿ ಇರಬೇಕು ಎನ್ನುವುದು ವಿಚಿತ್ರ ಎನಿಸುತ್ತದೆ. ಕುರಿ, ಮೇಕೆ ಮೇಯಿಸುವವರು ಬೇಕೆಂದೇನು ಪೊದೆಯ ಪಕ್ಕದಲ್ಲಿ ಕೂರುವುದಿಲ್ಲ. ಬಿಸಿಲ ತಡೆಯಲಾರದೆ ನೆರಳು ಬೇಕೆಂಬ ಉದ್ದೇಶಕ್ಕಾಗಿ ಅಲ್ಲಿ ಕುಳಿತುಕೊಳ್ಳುತ್ತಾರೆ.

ಸಾಕು ಪ್ರಾಣಿಗಳನ್ನು ಸಂಜೆಯಾದ ಮೇಲೆ ರೊಪ್ಪದಲ್ಲಿ ಬಿಡಬೇಕು ಎಂದು ಹೇಳಿದೆ. ದನಗಳನ್ನು ಹೊರತುಪಡಿಸಿ ಉಳಿದ ಸಾಕು ಪ್ರಾಣಿಗಳು ರೊಪ್ಪ, ಕೊಟ್ಟಿಗೆಯಲ್ಲೇ ಕಟ್ಟಲಾಗುತ್ತದೆ. ಇದರ ಹೊರತಾಗಿಯೂ ಚಿರತೆಗಳು ಕೊಟ್ಟಿಗೆಗೆ ದಾಳಿ ಮಾಡಿ ಕುರಿಗಳನ್ನು ಸಾಯಿಸಿರುವ ಉದಾಹರಣೆಗಳು ಇವೆ.  ಹೊಲಗಳಿಗೆ ಯಾರೂ ಬೇಕೆಂದೇ ಹೋಗುವುದಿಲ್ಲ. ರಾತ್ರಿ ವಿದ್ಯುತ್ ನೀಡುವುದರಿಂದ ಅನಿವಾರ್ಯವಾಗಿ ನೀರು ಹಾಯಿಸಲು ಒಬ್ಬೊಬ್ಬರೇ ಹೋಗಬೇಕಾದ ಅನಿವಾರ್ಯತೆ ಬರುತ್ತದೆ. ಆಗ ಕರಡಿ, ಚಿರತೆ ದಾಳಿ ನಡೆಯುತ್ತದೆ. ಇದಕ್ಕ ಪರಿಹಾರಗಳನ್ನು ಜಿಲ್ಲಾಡಳಿತ ಕಂಡುಕೊಳ್ಳಬೇಕಾಗಿದೆ. ಅದನ್ನು ಬಿಟ್ಟು ಈ ರೀತಿಯ ಬಿಟ್ಟಿ ಸಲಹೆಗಳನ್ನಲ್ಲ ಎಂದು ಜನ ಮಾತಾಡಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...