Homeಕರ್ನಾಟಕಚಿರತೆ ಕಂಡರೆ ಹೀಗೆ ಮಾಡಬೇಕಂತೆ ! ಕುಣಿಗಲ್ ತಾಲ್ಲೂಕು ಆಡಳಿತದ ವಿಚಿತ್ರ ಸಲಹೆಗಳು!!

ಚಿರತೆ ಕಂಡರೆ ಹೀಗೆ ಮಾಡಬೇಕಂತೆ ! ಕುಣಿಗಲ್ ತಾಲ್ಲೂಕು ಆಡಳಿತದ ವಿಚಿತ್ರ ಸಲಹೆಗಳು!!

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿರುವುದು, ಇದೀಗ ಆಯಾ ತಾಲೂಕು ಆಡಳಿತಕ್ಕೂ ತಲೆ ನೋವಿನ ಸಂಗತಿಯಾಗಿದೆ. ಒಂದು ತಿಂಗಳಲ್ಲೇ ಕುಣಿಗಲ್ ತಾಲೂಕಿನಲ್ಲಿ ಮೂವರ ಮೇಲೆ ಚಿರತೆ ಹಲ್ಲೆ ನಡೆಸಿ ಕೊಂದು ಹಾಕಿರುವುದು ಜನರನ್ನು ಕೆರಳುವಂತೆ ಮಾಡಿರುವುದರಿಂದ ಚಿರತೆಗಳ ತಡೆಗೆ ಏನು ಮಾಡಬೇಕೆಂದು ಯೋಚಿಸಿ ಇದೀಗ ಕೆಲವು ಸೂಚನೆಗಳನ್ನು ಜನರಿಗೆ ನೀಡಲಾಗಿದೆ.

ನರಭಕ್ಷಕ ಚಿರತೆ ಮನುಷ್ಯನ ರಕ್ತದ ರುಚಿ ನೋಡಿದೆ. ಹೀಗಾಗಿಯೇ ಕುಣಿಗಲ್ ತಾಲೂಕಿನಲ್ಲಿ ಪದೇ ಪದೇ ಒಂಟಿ ಮನುಷ್ಯರ ಮೇಲೆ ದಾಳಿ ಮಾಡುತ್ತಲೇ ಇದೆ. ಅರಣ್ಯದಂಚಿನಲ್ಲಿ ಇದ್ದವರ ಮೇಲೆಯ ದಾಳಿ ನಡೆದಿರುವುದು ಗ್ರಾಮಸ್ಥರಲ್ಲಿ ಭಯವನ್ನು ಹುಟ್ಟು ಹಾಕಿದೆ. ಭಯ ದೂರಾಗುವಂತಹ ಕೆಲಸವನ್ನು ಅರಣ್ಯ ಇಲಾಖೆಯಾಗಲೀ, ತಾಲೂಕು ಆಡಳಿತವಾಗಲೀ ತೆಗೆದುಕೊಂಡಂತೆ ಕಾಣುತ್ತಿಲ್ಲ.

ಆದರೆ ಜನರಿಗೆ ಕುಣಿಗಲ್ ತಾಲೂಕು ಆಡಳಿತ ಕೆಲವು ಸೂಚನೆಗಳನ್ನು ನೀಡಿರುವುದು ಹಾಸ್ಯಾಸ್ಪದವಾಗಿದೆ. ಮಕ್ಕಳು, ವೃದ್ದರು ಮತ್ತು ಮಹಿಳೆಯರು ಸಂಜೆ ಆರು ಗಂಟೆಯ ಒಳಗೆ ಮನೆಯನ್ನು ಸೇರಿಕೊಳ್ಳಬೇಕು. ಬಯಲು ಬಹಿರ್ದೆಸೆಗೆ ಹೋಗಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಬಹಿರ್ದೆಸೆಗೆ ಹೋಗುವುದನ್ನು ಹೇಗೆ ತಡೆಯಲು ಸಾಧ್ಯ ಎಂಬ ಕನಿಷ್ಠ ಜ್ಞಾನವೂ ಇಲ್ಲದಿರುವುದು ಶೋಚನೀಯವಾಗಿದೆ.

ಚಿರತೆ ಕಂಡರೆ ಜನರು ಗದ್ದಲ ಮಾಡಬಾರದು. ಗುಂಪುಗೂಡಿ ಓಡಿಸಲು ಯತ್ನಿಸಬಾರದು. ಮೇಕೆ, ಕುರಿ, ದನ ಮೇಯಿಸುವವರು ಪೊದೆಯ ಪಕ್ಕದಲ್ಲಿ ಕುಳಿತುಕೊಳ್ಳಬಾರದು. ಒಬ್ಬರೇ ಮೇಯಿಸುವಾಗ ಬಯಲಲ್ಲಿ ಇರಬೇಕು ಎನ್ನುವುದು ವಿಚಿತ್ರ ಎನಿಸುತ್ತದೆ. ಕುರಿ, ಮೇಕೆ ಮೇಯಿಸುವವರು ಬೇಕೆಂದೇನು ಪೊದೆಯ ಪಕ್ಕದಲ್ಲಿ ಕೂರುವುದಿಲ್ಲ. ಬಿಸಿಲ ತಡೆಯಲಾರದೆ ನೆರಳು ಬೇಕೆಂಬ ಉದ್ದೇಶಕ್ಕಾಗಿ ಅಲ್ಲಿ ಕುಳಿತುಕೊಳ್ಳುತ್ತಾರೆ.

ಸಾಕು ಪ್ರಾಣಿಗಳನ್ನು ಸಂಜೆಯಾದ ಮೇಲೆ ರೊಪ್ಪದಲ್ಲಿ ಬಿಡಬೇಕು ಎಂದು ಹೇಳಿದೆ. ದನಗಳನ್ನು ಹೊರತುಪಡಿಸಿ ಉಳಿದ ಸಾಕು ಪ್ರಾಣಿಗಳು ರೊಪ್ಪ, ಕೊಟ್ಟಿಗೆಯಲ್ಲೇ ಕಟ್ಟಲಾಗುತ್ತದೆ. ಇದರ ಹೊರತಾಗಿಯೂ ಚಿರತೆಗಳು ಕೊಟ್ಟಿಗೆಗೆ ದಾಳಿ ಮಾಡಿ ಕುರಿಗಳನ್ನು ಸಾಯಿಸಿರುವ ಉದಾಹರಣೆಗಳು ಇವೆ.  ಹೊಲಗಳಿಗೆ ಯಾರೂ ಬೇಕೆಂದೇ ಹೋಗುವುದಿಲ್ಲ. ರಾತ್ರಿ ವಿದ್ಯುತ್ ನೀಡುವುದರಿಂದ ಅನಿವಾರ್ಯವಾಗಿ ನೀರು ಹಾಯಿಸಲು ಒಬ್ಬೊಬ್ಬರೇ ಹೋಗಬೇಕಾದ ಅನಿವಾರ್ಯತೆ ಬರುತ್ತದೆ. ಆಗ ಕರಡಿ, ಚಿರತೆ ದಾಳಿ ನಡೆಯುತ್ತದೆ. ಇದಕ್ಕ ಪರಿಹಾರಗಳನ್ನು ಜಿಲ್ಲಾಡಳಿತ ಕಂಡುಕೊಳ್ಳಬೇಕಾಗಿದೆ. ಅದನ್ನು ಬಿಟ್ಟು ಈ ರೀತಿಯ ಬಿಟ್ಟಿ ಸಲಹೆಗಳನ್ನಲ್ಲ ಎಂದು ಜನ ಮಾತಾಡಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...