Homeಮುಖಪುಟಲೆಸ್ಬಿಯನ್‌ ಜೋಡಿಯ ‘ಕರ್ವಾ ಚೌತ್’ ಜಾಹೀರಾತು! - ಮಿಶ್ರ ಪ್ರತಿಕ್ರಿಯೆ

ಲೆಸ್ಬಿಯನ್‌ ಜೋಡಿಯ ‘ಕರ್ವಾ ಚೌತ್’ ಜಾಹೀರಾತು! – ಮಿಶ್ರ ಪ್ರತಿಕ್ರಿಯೆ

- Advertisement -
- Advertisement -

ನವ ವಿವಾಹಿತ ಲೆಸ್ಬಿಯನ್‌‌ ಜೋಡಿ ತಮ್ಮ ಮೊದಲ ‘ಕರ್ವಾ ಚೌತ್’ ಹಬ್ಬವನ್ನು ಆಚರಿಸುವ ಜಾಹಿರಾತನ್ನು ಡಾಬರ್‌ ಒಡೆತನದ ಖ್ಯಾತ ಸೌಂದರ್ಯ ವರ್ಧಕ ‘ಫೆಮ್ ಸ್ಕಿನ್‌ಕೇರ್‌’ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು, ಈ ವಿಡಿಯೊಗೆ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆ ಬಂದಿವೆ.

‘ಕರ್ವಾ ಚೌತ್’ ಉತ್ತರ ಭಾರತ ಮೂಲದ ಹಿಂದೂಗಳು ಆಚರಿಸುವ ಹಬ್ಬವಾಗಿದೆ. ವಿವಾಹಿತ ಮಹಿಳೆಯರು ತಮ್ಮ ಪತಿಯ ದೀರ್ಘ ಆಯಸ್ಸು ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತಾ ಇಡೀ ದಿನ ಉಪವಾಸ ಹಿಡಿದು ಈ ಹಬ್ಬವನ್ನು ಆಚರಿಸುತ್ತಾರೆ. ಉಪವಾಸ ತೊರೆಯುವಾಗ ಚಂದ್ರನನ್ನು ಜರಡಿಯಲ್ಲಿ ನೋಡಿ, ತಕ್ಷಣವೆ ತನ್ನ ಗಂಡನನ್ನು ನೋಡುತ್ತಾರೆ. ಈ ವೇಳೆ ಗಂಡನು ತನ್ನ ಪತ್ನಿಗೆ ನೀರು ಮತ್ತು ಸಿಹಿ ತಿನಿಸಿ ವೃತವನ್ನು ತೊರೆಯುವಂತೆ ಮಾಡುತ್ತಾನೆ.

ಇದನ್ನೂ ಓದಿ: ‘ಸಲಿಂಗ ವಿವಾಹ ಮೂಲಭೂತ ಹಕ್ಕಲ್ಲ’ – ಒಕ್ಕೂಟ ಸರ್ಕಾರ ಹೇಳಿಕೆ

ಈ ಹಬ್ಬವನ್ನೇ ಮುಖ್ಯ ವಿಷಯವನ್ನಾಗಿ ನಿರ್ಮಿಸಿರುವ ‘ಫೆಮ್ ಸ್ಕಿನ್‌ಕ್ರೀಮ್’ನ ಜಾಹಿರಾತಿನಲ್ಲಿ, ಇಬ್ಬರು ಮಹಿಳೆಯರು ತಮ್ಮ ಮೊದಲ ಕರ್ವಾ ಚೌತ್ ಆಚರಣೆಗೆ ತಯಾರಿ ನಡೆಸುತ್ತಾ, ಒಬ್ಬರು ಇನ್ನೊಬ್ಬರ ಮುಖಕ್ಕೆ ಬ್ಲೀಚ್ ಹಾಕುತ್ತಾರೆ. ಅದರ ಸಂಭಾಷಣೆಯಲ್ಲಿ ಅವರು ಹಬ್ಬದ ಮಹತ್ವವನ್ನು ಚರ್ಚಿಸುತ್ತಾರೆ ಮತ್ತು ತಾವು ಯಾಕೆ ಉಪವಾಸ ಆಚರಿಸುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಾರೆ.

ಜಾಹಿರಾತಿನ ಕೊನೆಯಲ್ಲಿ ಇಬ್ಬರು ಮಹಿಳೆಯರು ಚಂದ್ರನನ್ನು ಜರಡಿಯಲ್ಲಿ ನೋಡಿಕೊಂಡು, ಅದೇ ಜರಡಿಯಲ್ಲಿ ಒಬ್ಬರಿಗೊಬ್ಬರು ಮುಖವನ್ನು ನೋಡುತ್ತಾರೆ. ನಂತರ ತಮ್ಮ ಉಪವಾಸವನ್ನು ತೊರೆಯಲು ಪರಸ್ಪರ ನೀರನ್ನು ಕುಡಿಸುತ್ತಾರೆ. ಈ ಮೂಲಕ ಕರ್ವಾ ಚೌತ್ ಉಪವಾಸ ಮುರಿದು ಹಬ್ಬವನ್ನು ಆಚರಿಸಿಕೊಳ್ಳುತ್ತಾರೆ.

‘ಗ್ಲೋ ವಿಥ್ ಪ್ರೈಡ್’ ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಕಾಮನಬಿಲ್ಲು ಬಣ್ಣಗಳಲ್ಲಿ ಚಿತ್ರಿಸಲಾದ ಫೆಮ್‌ನ ಲಾಂಛನದೊಂದಿಗೆ ವಿಡಿಯೊ ಮುಕ್ತಾಯಗೊಳ್ಳುತ್ತದೆ. ಕಾಮನಬಿಲ್ಲು ಧ್ವಜವು LGBTQIA+ ಸಾಮಾಜಿಕ ಚಳುವಳಿಯ ಸಂಕೇತವಾಗಿದೆ.

ಇದನ್ನೂ ಓದಿ: ಸಲಿಂಗ ದಂಪತಿಗೆ ರಕ್ಷಣೆ ನೀಡಿ: ಪೊಲೀಸರಿಗೆ ಅಲಹಾಬಾದ್ ಹೈಕೋರ್ಟ್ ಆದೇಶ

ಈ ಜಾಹಿರಾತನ್ನು ಕಂಪೆನಿಯು ಆನ್‌ಲೈನ್‌ನಲ್ಲಿ ಹಂಚಿಕೊಂಡಾಗಿನಿಂದ, ಅದರ ಸಂದೇಶದ ಮೇಲೆ ಮಿಶ್ರ ಪ್ರತಿಕ್ರಿಯೆ ಉಂಟಾಗಿದೆ. ಕೆಲವರು ಬ್ರಾಂಡ್‌ನ ಪ್ರಯತ್ನವನ್ನು ಬೆಂಬಲಿಸಿದರೆ, ಇನ್ನೂ ಕೆಲವರು ಅದನ್ನು ಟೀಕಿಸಿದ್ದಾರೆ.

“ಜಾಹಿರಾತಿನ ಬಗ್ಗೆ ಬಗ್ಗೆ ಮಿಶ್ರ ಭಾವನೆಯಿದೆ. ಸಾಂಪ್ರದಾಯಿಕವಲ್ಲದ ಸಂಬಂಧಗಳನ್ನು ಒಪ್ಪಿಕೊಳ್ಳುವುದು ಒಳ್ಳೆಯದೇ ಆಗಿದೆ. ಆದರೆ ಸ್ತ್ರೀದ್ವೇಷಿ ಸಂಪ್ರದಾಯವನ್ನು ಪ್ರಚಾರ ಮಾಡುವುದು ಮತ್ತು ‘ಬಿಳಿ ಚರ್ಮವೆ ಸುಂದರ ನ್ಯಾಯವೇ’ ಎಂಬ ಸಂದೇಶ ಕೂಡಾ ಇದು ಹರಡುತ್ತದೆ” ಎಂದು ಕೆಲವು ಬಳಕೆದಾರರು ಅಭಿಪ್ರಾಯಪಟ್ಟಿದ್ದಾರೆ.

ಕೆಲವರು, ಸೌಂದರ್ಯ ವರ್ಧಕ ಉತ್ಪನ್ನಗಳು ‘ಅಂತರ್ಗತವಾಗಿ ಜಾತಿವಾದಿ ಮತ್ತು ಜನಾಂಗೀಯ’ ನೀತಿಯನ್ನು ಬೆಳೆಸುತ್ತದೆ. ಇದಕ್ಕೆ LGBTQI+ ದೃಷ್ಟಿಕೋನ ಸೇರಿಸುವುದರಿಂದ ಬದಲಾಗುವುದಿಲ್ಲ ಎಂದು ದೂರಿದ್ದಾರೆ.

ಇದನ್ನೂ ಓದಿ: ಸಲಿಂಗ ವಿವಾಹ: ಕೊಡಗು ಮೂಲದ ಯುವಕನನ್ನು ಬಹಿಷ್ಕರಿಸಿದ ಕೊಡವ ಸಮಾಜ!

ಇದನ್ನೂ ಓದಿ: ಸಲಿಂಗ ವಿವಾಹವನ್ನು ನಮ್ಮ ಕಾನೂನು ಮತ್ತು ಸಮಾಜ ಒಪ್ಪುವುದಿಲ್ಲ: ಕೇಂದ್ರ ಸರ್ಕಾರ

ಇದನ್ನೂ ಓದಿ: ಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...