Homeಮುಖಪುಟಲೆಸ್ಬಿಯನ್‌ ಜೋಡಿಯ ‘ಕರ್ವಾ ಚೌತ್’ ಜಾಹೀರಾತು! - ಮಿಶ್ರ ಪ್ರತಿಕ್ರಿಯೆ

ಲೆಸ್ಬಿಯನ್‌ ಜೋಡಿಯ ‘ಕರ್ವಾ ಚೌತ್’ ಜಾಹೀರಾತು! – ಮಿಶ್ರ ಪ್ರತಿಕ್ರಿಯೆ

- Advertisement -
- Advertisement -

ನವ ವಿವಾಹಿತ ಲೆಸ್ಬಿಯನ್‌‌ ಜೋಡಿ ತಮ್ಮ ಮೊದಲ ‘ಕರ್ವಾ ಚೌತ್’ ಹಬ್ಬವನ್ನು ಆಚರಿಸುವ ಜಾಹಿರಾತನ್ನು ಡಾಬರ್‌ ಒಡೆತನದ ಖ್ಯಾತ ಸೌಂದರ್ಯ ವರ್ಧಕ ‘ಫೆಮ್ ಸ್ಕಿನ್‌ಕೇರ್‌’ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು, ಈ ವಿಡಿಯೊಗೆ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆ ಬಂದಿವೆ.

‘ಕರ್ವಾ ಚೌತ್’ ಉತ್ತರ ಭಾರತ ಮೂಲದ ಹಿಂದೂಗಳು ಆಚರಿಸುವ ಹಬ್ಬವಾಗಿದೆ. ವಿವಾಹಿತ ಮಹಿಳೆಯರು ತಮ್ಮ ಪತಿಯ ದೀರ್ಘ ಆಯಸ್ಸು ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತಾ ಇಡೀ ದಿನ ಉಪವಾಸ ಹಿಡಿದು ಈ ಹಬ್ಬವನ್ನು ಆಚರಿಸುತ್ತಾರೆ. ಉಪವಾಸ ತೊರೆಯುವಾಗ ಚಂದ್ರನನ್ನು ಜರಡಿಯಲ್ಲಿ ನೋಡಿ, ತಕ್ಷಣವೆ ತನ್ನ ಗಂಡನನ್ನು ನೋಡುತ್ತಾರೆ. ಈ ವೇಳೆ ಗಂಡನು ತನ್ನ ಪತ್ನಿಗೆ ನೀರು ಮತ್ತು ಸಿಹಿ ತಿನಿಸಿ ವೃತವನ್ನು ತೊರೆಯುವಂತೆ ಮಾಡುತ್ತಾನೆ.

ಇದನ್ನೂ ಓದಿ: ‘ಸಲಿಂಗ ವಿವಾಹ ಮೂಲಭೂತ ಹಕ್ಕಲ್ಲ’ – ಒಕ್ಕೂಟ ಸರ್ಕಾರ ಹೇಳಿಕೆ

ಈ ಹಬ್ಬವನ್ನೇ ಮುಖ್ಯ ವಿಷಯವನ್ನಾಗಿ ನಿರ್ಮಿಸಿರುವ ‘ಫೆಮ್ ಸ್ಕಿನ್‌ಕ್ರೀಮ್’ನ ಜಾಹಿರಾತಿನಲ್ಲಿ, ಇಬ್ಬರು ಮಹಿಳೆಯರು ತಮ್ಮ ಮೊದಲ ಕರ್ವಾ ಚೌತ್ ಆಚರಣೆಗೆ ತಯಾರಿ ನಡೆಸುತ್ತಾ, ಒಬ್ಬರು ಇನ್ನೊಬ್ಬರ ಮುಖಕ್ಕೆ ಬ್ಲೀಚ್ ಹಾಕುತ್ತಾರೆ. ಅದರ ಸಂಭಾಷಣೆಯಲ್ಲಿ ಅವರು ಹಬ್ಬದ ಮಹತ್ವವನ್ನು ಚರ್ಚಿಸುತ್ತಾರೆ ಮತ್ತು ತಾವು ಯಾಕೆ ಉಪವಾಸ ಆಚರಿಸುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಾರೆ.

ಜಾಹಿರಾತಿನ ಕೊನೆಯಲ್ಲಿ ಇಬ್ಬರು ಮಹಿಳೆಯರು ಚಂದ್ರನನ್ನು ಜರಡಿಯಲ್ಲಿ ನೋಡಿಕೊಂಡು, ಅದೇ ಜರಡಿಯಲ್ಲಿ ಒಬ್ಬರಿಗೊಬ್ಬರು ಮುಖವನ್ನು ನೋಡುತ್ತಾರೆ. ನಂತರ ತಮ್ಮ ಉಪವಾಸವನ್ನು ತೊರೆಯಲು ಪರಸ್ಪರ ನೀರನ್ನು ಕುಡಿಸುತ್ತಾರೆ. ಈ ಮೂಲಕ ಕರ್ವಾ ಚೌತ್ ಉಪವಾಸ ಮುರಿದು ಹಬ್ಬವನ್ನು ಆಚರಿಸಿಕೊಳ್ಳುತ್ತಾರೆ.

‘ಗ್ಲೋ ವಿಥ್ ಪ್ರೈಡ್’ ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಕಾಮನಬಿಲ್ಲು ಬಣ್ಣಗಳಲ್ಲಿ ಚಿತ್ರಿಸಲಾದ ಫೆಮ್‌ನ ಲಾಂಛನದೊಂದಿಗೆ ವಿಡಿಯೊ ಮುಕ್ತಾಯಗೊಳ್ಳುತ್ತದೆ. ಕಾಮನಬಿಲ್ಲು ಧ್ವಜವು LGBTQIA+ ಸಾಮಾಜಿಕ ಚಳುವಳಿಯ ಸಂಕೇತವಾಗಿದೆ.

ಇದನ್ನೂ ಓದಿ: ಸಲಿಂಗ ದಂಪತಿಗೆ ರಕ್ಷಣೆ ನೀಡಿ: ಪೊಲೀಸರಿಗೆ ಅಲಹಾಬಾದ್ ಹೈಕೋರ್ಟ್ ಆದೇಶ

ಈ ಜಾಹಿರಾತನ್ನು ಕಂಪೆನಿಯು ಆನ್‌ಲೈನ್‌ನಲ್ಲಿ ಹಂಚಿಕೊಂಡಾಗಿನಿಂದ, ಅದರ ಸಂದೇಶದ ಮೇಲೆ ಮಿಶ್ರ ಪ್ರತಿಕ್ರಿಯೆ ಉಂಟಾಗಿದೆ. ಕೆಲವರು ಬ್ರಾಂಡ್‌ನ ಪ್ರಯತ್ನವನ್ನು ಬೆಂಬಲಿಸಿದರೆ, ಇನ್ನೂ ಕೆಲವರು ಅದನ್ನು ಟೀಕಿಸಿದ್ದಾರೆ.

“ಜಾಹಿರಾತಿನ ಬಗ್ಗೆ ಬಗ್ಗೆ ಮಿಶ್ರ ಭಾವನೆಯಿದೆ. ಸಾಂಪ್ರದಾಯಿಕವಲ್ಲದ ಸಂಬಂಧಗಳನ್ನು ಒಪ್ಪಿಕೊಳ್ಳುವುದು ಒಳ್ಳೆಯದೇ ಆಗಿದೆ. ಆದರೆ ಸ್ತ್ರೀದ್ವೇಷಿ ಸಂಪ್ರದಾಯವನ್ನು ಪ್ರಚಾರ ಮಾಡುವುದು ಮತ್ತು ‘ಬಿಳಿ ಚರ್ಮವೆ ಸುಂದರ ನ್ಯಾಯವೇ’ ಎಂಬ ಸಂದೇಶ ಕೂಡಾ ಇದು ಹರಡುತ್ತದೆ” ಎಂದು ಕೆಲವು ಬಳಕೆದಾರರು ಅಭಿಪ್ರಾಯಪಟ್ಟಿದ್ದಾರೆ.

ಕೆಲವರು, ಸೌಂದರ್ಯ ವರ್ಧಕ ಉತ್ಪನ್ನಗಳು ‘ಅಂತರ್ಗತವಾಗಿ ಜಾತಿವಾದಿ ಮತ್ತು ಜನಾಂಗೀಯ’ ನೀತಿಯನ್ನು ಬೆಳೆಸುತ್ತದೆ. ಇದಕ್ಕೆ LGBTQI+ ದೃಷ್ಟಿಕೋನ ಸೇರಿಸುವುದರಿಂದ ಬದಲಾಗುವುದಿಲ್ಲ ಎಂದು ದೂರಿದ್ದಾರೆ.

ಇದನ್ನೂ ಓದಿ: ಸಲಿಂಗ ವಿವಾಹ: ಕೊಡಗು ಮೂಲದ ಯುವಕನನ್ನು ಬಹಿಷ್ಕರಿಸಿದ ಕೊಡವ ಸಮಾಜ!

ಇದನ್ನೂ ಓದಿ: ಸಲಿಂಗ ವಿವಾಹವನ್ನು ನಮ್ಮ ಕಾನೂನು ಮತ್ತು ಸಮಾಜ ಒಪ್ಪುವುದಿಲ್ಲ: ಕೇಂದ್ರ ಸರ್ಕಾರ

ಇದನ್ನೂ ಓದಿ: ಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...