Homeಮುಖಪುಟಲೆಸ್ಬಿಯನ್‌ ಜೋಡಿಯ ‘ಕರ್ವಾ ಚೌತ್’ ಜಾಹೀರಾತು! - ಮಿಶ್ರ ಪ್ರತಿಕ್ರಿಯೆ

ಲೆಸ್ಬಿಯನ್‌ ಜೋಡಿಯ ‘ಕರ್ವಾ ಚೌತ್’ ಜಾಹೀರಾತು! – ಮಿಶ್ರ ಪ್ರತಿಕ್ರಿಯೆ

- Advertisement -
- Advertisement -

ನವ ವಿವಾಹಿತ ಲೆಸ್ಬಿಯನ್‌‌ ಜೋಡಿ ತಮ್ಮ ಮೊದಲ ‘ಕರ್ವಾ ಚೌತ್’ ಹಬ್ಬವನ್ನು ಆಚರಿಸುವ ಜಾಹಿರಾತನ್ನು ಡಾಬರ್‌ ಒಡೆತನದ ಖ್ಯಾತ ಸೌಂದರ್ಯ ವರ್ಧಕ ‘ಫೆಮ್ ಸ್ಕಿನ್‌ಕೇರ್‌’ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು, ಈ ವಿಡಿಯೊಗೆ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆ ಬಂದಿವೆ.

‘ಕರ್ವಾ ಚೌತ್’ ಉತ್ತರ ಭಾರತ ಮೂಲದ ಹಿಂದೂಗಳು ಆಚರಿಸುವ ಹಬ್ಬವಾಗಿದೆ. ವಿವಾಹಿತ ಮಹಿಳೆಯರು ತಮ್ಮ ಪತಿಯ ದೀರ್ಘ ಆಯಸ್ಸು ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತಾ ಇಡೀ ದಿನ ಉಪವಾಸ ಹಿಡಿದು ಈ ಹಬ್ಬವನ್ನು ಆಚರಿಸುತ್ತಾರೆ. ಉಪವಾಸ ತೊರೆಯುವಾಗ ಚಂದ್ರನನ್ನು ಜರಡಿಯಲ್ಲಿ ನೋಡಿ, ತಕ್ಷಣವೆ ತನ್ನ ಗಂಡನನ್ನು ನೋಡುತ್ತಾರೆ. ಈ ವೇಳೆ ಗಂಡನು ತನ್ನ ಪತ್ನಿಗೆ ನೀರು ಮತ್ತು ಸಿಹಿ ತಿನಿಸಿ ವೃತವನ್ನು ತೊರೆಯುವಂತೆ ಮಾಡುತ್ತಾನೆ.

ಇದನ್ನೂ ಓದಿ: ‘ಸಲಿಂಗ ವಿವಾಹ ಮೂಲಭೂತ ಹಕ್ಕಲ್ಲ’ – ಒಕ್ಕೂಟ ಸರ್ಕಾರ ಹೇಳಿಕೆ

ಈ ಹಬ್ಬವನ್ನೇ ಮುಖ್ಯ ವಿಷಯವನ್ನಾಗಿ ನಿರ್ಮಿಸಿರುವ ‘ಫೆಮ್ ಸ್ಕಿನ್‌ಕ್ರೀಮ್’ನ ಜಾಹಿರಾತಿನಲ್ಲಿ, ಇಬ್ಬರು ಮಹಿಳೆಯರು ತಮ್ಮ ಮೊದಲ ಕರ್ವಾ ಚೌತ್ ಆಚರಣೆಗೆ ತಯಾರಿ ನಡೆಸುತ್ತಾ, ಒಬ್ಬರು ಇನ್ನೊಬ್ಬರ ಮುಖಕ್ಕೆ ಬ್ಲೀಚ್ ಹಾಕುತ್ತಾರೆ. ಅದರ ಸಂಭಾಷಣೆಯಲ್ಲಿ ಅವರು ಹಬ್ಬದ ಮಹತ್ವವನ್ನು ಚರ್ಚಿಸುತ್ತಾರೆ ಮತ್ತು ತಾವು ಯಾಕೆ ಉಪವಾಸ ಆಚರಿಸುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಾರೆ.

ಜಾಹಿರಾತಿನ ಕೊನೆಯಲ್ಲಿ ಇಬ್ಬರು ಮಹಿಳೆಯರು ಚಂದ್ರನನ್ನು ಜರಡಿಯಲ್ಲಿ ನೋಡಿಕೊಂಡು, ಅದೇ ಜರಡಿಯಲ್ಲಿ ಒಬ್ಬರಿಗೊಬ್ಬರು ಮುಖವನ್ನು ನೋಡುತ್ತಾರೆ. ನಂತರ ತಮ್ಮ ಉಪವಾಸವನ್ನು ತೊರೆಯಲು ಪರಸ್ಪರ ನೀರನ್ನು ಕುಡಿಸುತ್ತಾರೆ. ಈ ಮೂಲಕ ಕರ್ವಾ ಚೌತ್ ಉಪವಾಸ ಮುರಿದು ಹಬ್ಬವನ್ನು ಆಚರಿಸಿಕೊಳ್ಳುತ್ತಾರೆ.

‘ಗ್ಲೋ ವಿಥ್ ಪ್ರೈಡ್’ ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಕಾಮನಬಿಲ್ಲು ಬಣ್ಣಗಳಲ್ಲಿ ಚಿತ್ರಿಸಲಾದ ಫೆಮ್‌ನ ಲಾಂಛನದೊಂದಿಗೆ ವಿಡಿಯೊ ಮುಕ್ತಾಯಗೊಳ್ಳುತ್ತದೆ. ಕಾಮನಬಿಲ್ಲು ಧ್ವಜವು LGBTQIA+ ಸಾಮಾಜಿಕ ಚಳುವಳಿಯ ಸಂಕೇತವಾಗಿದೆ.

ಇದನ್ನೂ ಓದಿ: ಸಲಿಂಗ ದಂಪತಿಗೆ ರಕ್ಷಣೆ ನೀಡಿ: ಪೊಲೀಸರಿಗೆ ಅಲಹಾಬಾದ್ ಹೈಕೋರ್ಟ್ ಆದೇಶ

ಈ ಜಾಹಿರಾತನ್ನು ಕಂಪೆನಿಯು ಆನ್‌ಲೈನ್‌ನಲ್ಲಿ ಹಂಚಿಕೊಂಡಾಗಿನಿಂದ, ಅದರ ಸಂದೇಶದ ಮೇಲೆ ಮಿಶ್ರ ಪ್ರತಿಕ್ರಿಯೆ ಉಂಟಾಗಿದೆ. ಕೆಲವರು ಬ್ರಾಂಡ್‌ನ ಪ್ರಯತ್ನವನ್ನು ಬೆಂಬಲಿಸಿದರೆ, ಇನ್ನೂ ಕೆಲವರು ಅದನ್ನು ಟೀಕಿಸಿದ್ದಾರೆ.

“ಜಾಹಿರಾತಿನ ಬಗ್ಗೆ ಬಗ್ಗೆ ಮಿಶ್ರ ಭಾವನೆಯಿದೆ. ಸಾಂಪ್ರದಾಯಿಕವಲ್ಲದ ಸಂಬಂಧಗಳನ್ನು ಒಪ್ಪಿಕೊಳ್ಳುವುದು ಒಳ್ಳೆಯದೇ ಆಗಿದೆ. ಆದರೆ ಸ್ತ್ರೀದ್ವೇಷಿ ಸಂಪ್ರದಾಯವನ್ನು ಪ್ರಚಾರ ಮಾಡುವುದು ಮತ್ತು ‘ಬಿಳಿ ಚರ್ಮವೆ ಸುಂದರ ನ್ಯಾಯವೇ’ ಎಂಬ ಸಂದೇಶ ಕೂಡಾ ಇದು ಹರಡುತ್ತದೆ” ಎಂದು ಕೆಲವು ಬಳಕೆದಾರರು ಅಭಿಪ್ರಾಯಪಟ್ಟಿದ್ದಾರೆ.

ಕೆಲವರು, ಸೌಂದರ್ಯ ವರ್ಧಕ ಉತ್ಪನ್ನಗಳು ‘ಅಂತರ್ಗತವಾಗಿ ಜಾತಿವಾದಿ ಮತ್ತು ಜನಾಂಗೀಯ’ ನೀತಿಯನ್ನು ಬೆಳೆಸುತ್ತದೆ. ಇದಕ್ಕೆ LGBTQI+ ದೃಷ್ಟಿಕೋನ ಸೇರಿಸುವುದರಿಂದ ಬದಲಾಗುವುದಿಲ್ಲ ಎಂದು ದೂರಿದ್ದಾರೆ.

ಇದನ್ನೂ ಓದಿ: ಸಲಿಂಗ ವಿವಾಹ: ಕೊಡಗು ಮೂಲದ ಯುವಕನನ್ನು ಬಹಿಷ್ಕರಿಸಿದ ಕೊಡವ ಸಮಾಜ!

ಇದನ್ನೂ ಓದಿ: ಸಲಿಂಗ ವಿವಾಹವನ್ನು ನಮ್ಮ ಕಾನೂನು ಮತ್ತು ಸಮಾಜ ಒಪ್ಪುವುದಿಲ್ಲ: ಕೇಂದ್ರ ಸರ್ಕಾರ

ಇದನ್ನೂ ಓದಿ: ಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...