Homeಮುಖಪುಟಲೆಸ್ಬಿಯನ್‌ ಜೋಡಿಯ ‘ಕರ್ವಾ ಚೌತ್’ ಜಾಹೀರಾತು! - ಮಿಶ್ರ ಪ್ರತಿಕ್ರಿಯೆ

ಲೆಸ್ಬಿಯನ್‌ ಜೋಡಿಯ ‘ಕರ್ವಾ ಚೌತ್’ ಜಾಹೀರಾತು! – ಮಿಶ್ರ ಪ್ರತಿಕ್ರಿಯೆ

- Advertisement -
- Advertisement -

ನವ ವಿವಾಹಿತ ಲೆಸ್ಬಿಯನ್‌‌ ಜೋಡಿ ತಮ್ಮ ಮೊದಲ ‘ಕರ್ವಾ ಚೌತ್’ ಹಬ್ಬವನ್ನು ಆಚರಿಸುವ ಜಾಹಿರಾತನ್ನು ಡಾಬರ್‌ ಒಡೆತನದ ಖ್ಯಾತ ಸೌಂದರ್ಯ ವರ್ಧಕ ‘ಫೆಮ್ ಸ್ಕಿನ್‌ಕೇರ್‌’ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು, ಈ ವಿಡಿಯೊಗೆ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆ ಬಂದಿವೆ.

‘ಕರ್ವಾ ಚೌತ್’ ಉತ್ತರ ಭಾರತ ಮೂಲದ ಹಿಂದೂಗಳು ಆಚರಿಸುವ ಹಬ್ಬವಾಗಿದೆ. ವಿವಾಹಿತ ಮಹಿಳೆಯರು ತಮ್ಮ ಪತಿಯ ದೀರ್ಘ ಆಯಸ್ಸು ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತಾ ಇಡೀ ದಿನ ಉಪವಾಸ ಹಿಡಿದು ಈ ಹಬ್ಬವನ್ನು ಆಚರಿಸುತ್ತಾರೆ. ಉಪವಾಸ ತೊರೆಯುವಾಗ ಚಂದ್ರನನ್ನು ಜರಡಿಯಲ್ಲಿ ನೋಡಿ, ತಕ್ಷಣವೆ ತನ್ನ ಗಂಡನನ್ನು ನೋಡುತ್ತಾರೆ. ಈ ವೇಳೆ ಗಂಡನು ತನ್ನ ಪತ್ನಿಗೆ ನೀರು ಮತ್ತು ಸಿಹಿ ತಿನಿಸಿ ವೃತವನ್ನು ತೊರೆಯುವಂತೆ ಮಾಡುತ್ತಾನೆ.

ಇದನ್ನೂ ಓದಿ: ‘ಸಲಿಂಗ ವಿವಾಹ ಮೂಲಭೂತ ಹಕ್ಕಲ್ಲ’ – ಒಕ್ಕೂಟ ಸರ್ಕಾರ ಹೇಳಿಕೆ

ಈ ಹಬ್ಬವನ್ನೇ ಮುಖ್ಯ ವಿಷಯವನ್ನಾಗಿ ನಿರ್ಮಿಸಿರುವ ‘ಫೆಮ್ ಸ್ಕಿನ್‌ಕ್ರೀಮ್’ನ ಜಾಹಿರಾತಿನಲ್ಲಿ, ಇಬ್ಬರು ಮಹಿಳೆಯರು ತಮ್ಮ ಮೊದಲ ಕರ್ವಾ ಚೌತ್ ಆಚರಣೆಗೆ ತಯಾರಿ ನಡೆಸುತ್ತಾ, ಒಬ್ಬರು ಇನ್ನೊಬ್ಬರ ಮುಖಕ್ಕೆ ಬ್ಲೀಚ್ ಹಾಕುತ್ತಾರೆ. ಅದರ ಸಂಭಾಷಣೆಯಲ್ಲಿ ಅವರು ಹಬ್ಬದ ಮಹತ್ವವನ್ನು ಚರ್ಚಿಸುತ್ತಾರೆ ಮತ್ತು ತಾವು ಯಾಕೆ ಉಪವಾಸ ಆಚರಿಸುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಾರೆ.

ಜಾಹಿರಾತಿನ ಕೊನೆಯಲ್ಲಿ ಇಬ್ಬರು ಮಹಿಳೆಯರು ಚಂದ್ರನನ್ನು ಜರಡಿಯಲ್ಲಿ ನೋಡಿಕೊಂಡು, ಅದೇ ಜರಡಿಯಲ್ಲಿ ಒಬ್ಬರಿಗೊಬ್ಬರು ಮುಖವನ್ನು ನೋಡುತ್ತಾರೆ. ನಂತರ ತಮ್ಮ ಉಪವಾಸವನ್ನು ತೊರೆಯಲು ಪರಸ್ಪರ ನೀರನ್ನು ಕುಡಿಸುತ್ತಾರೆ. ಈ ಮೂಲಕ ಕರ್ವಾ ಚೌತ್ ಉಪವಾಸ ಮುರಿದು ಹಬ್ಬವನ್ನು ಆಚರಿಸಿಕೊಳ್ಳುತ್ತಾರೆ.

‘ಗ್ಲೋ ವಿಥ್ ಪ್ರೈಡ್’ ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಕಾಮನಬಿಲ್ಲು ಬಣ್ಣಗಳಲ್ಲಿ ಚಿತ್ರಿಸಲಾದ ಫೆಮ್‌ನ ಲಾಂಛನದೊಂದಿಗೆ ವಿಡಿಯೊ ಮುಕ್ತಾಯಗೊಳ್ಳುತ್ತದೆ. ಕಾಮನಬಿಲ್ಲು ಧ್ವಜವು LGBTQIA+ ಸಾಮಾಜಿಕ ಚಳುವಳಿಯ ಸಂಕೇತವಾಗಿದೆ.

ಇದನ್ನೂ ಓದಿ: ಸಲಿಂಗ ದಂಪತಿಗೆ ರಕ್ಷಣೆ ನೀಡಿ: ಪೊಲೀಸರಿಗೆ ಅಲಹಾಬಾದ್ ಹೈಕೋರ್ಟ್ ಆದೇಶ

ಈ ಜಾಹಿರಾತನ್ನು ಕಂಪೆನಿಯು ಆನ್‌ಲೈನ್‌ನಲ್ಲಿ ಹಂಚಿಕೊಂಡಾಗಿನಿಂದ, ಅದರ ಸಂದೇಶದ ಮೇಲೆ ಮಿಶ್ರ ಪ್ರತಿಕ್ರಿಯೆ ಉಂಟಾಗಿದೆ. ಕೆಲವರು ಬ್ರಾಂಡ್‌ನ ಪ್ರಯತ್ನವನ್ನು ಬೆಂಬಲಿಸಿದರೆ, ಇನ್ನೂ ಕೆಲವರು ಅದನ್ನು ಟೀಕಿಸಿದ್ದಾರೆ.

“ಜಾಹಿರಾತಿನ ಬಗ್ಗೆ ಬಗ್ಗೆ ಮಿಶ್ರ ಭಾವನೆಯಿದೆ. ಸಾಂಪ್ರದಾಯಿಕವಲ್ಲದ ಸಂಬಂಧಗಳನ್ನು ಒಪ್ಪಿಕೊಳ್ಳುವುದು ಒಳ್ಳೆಯದೇ ಆಗಿದೆ. ಆದರೆ ಸ್ತ್ರೀದ್ವೇಷಿ ಸಂಪ್ರದಾಯವನ್ನು ಪ್ರಚಾರ ಮಾಡುವುದು ಮತ್ತು ‘ಬಿಳಿ ಚರ್ಮವೆ ಸುಂದರ ನ್ಯಾಯವೇ’ ಎಂಬ ಸಂದೇಶ ಕೂಡಾ ಇದು ಹರಡುತ್ತದೆ” ಎಂದು ಕೆಲವು ಬಳಕೆದಾರರು ಅಭಿಪ್ರಾಯಪಟ್ಟಿದ್ದಾರೆ.

ಕೆಲವರು, ಸೌಂದರ್ಯ ವರ್ಧಕ ಉತ್ಪನ್ನಗಳು ‘ಅಂತರ್ಗತವಾಗಿ ಜಾತಿವಾದಿ ಮತ್ತು ಜನಾಂಗೀಯ’ ನೀತಿಯನ್ನು ಬೆಳೆಸುತ್ತದೆ. ಇದಕ್ಕೆ LGBTQI+ ದೃಷ್ಟಿಕೋನ ಸೇರಿಸುವುದರಿಂದ ಬದಲಾಗುವುದಿಲ್ಲ ಎಂದು ದೂರಿದ್ದಾರೆ.

ಇದನ್ನೂ ಓದಿ: ಸಲಿಂಗ ವಿವಾಹ: ಕೊಡಗು ಮೂಲದ ಯುವಕನನ್ನು ಬಹಿಷ್ಕರಿಸಿದ ಕೊಡವ ಸಮಾಜ!

ಇದನ್ನೂ ಓದಿ: ಸಲಿಂಗ ವಿವಾಹವನ್ನು ನಮ್ಮ ಕಾನೂನು ಮತ್ತು ಸಮಾಜ ಒಪ್ಪುವುದಿಲ್ಲ: ಕೇಂದ್ರ ಸರ್ಕಾರ

ಇದನ್ನೂ ಓದಿ: ಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...