Homeಮುಖಪುಟಲೆಸ್ಬಿಯನ್‌ ಜೋಡಿಯ ‘ಕರ್ವಾ ಚೌತ್’ ಜಾಹೀರಾತು! - ಮಿಶ್ರ ಪ್ರತಿಕ್ರಿಯೆ

ಲೆಸ್ಬಿಯನ್‌ ಜೋಡಿಯ ‘ಕರ್ವಾ ಚೌತ್’ ಜಾಹೀರಾತು! – ಮಿಶ್ರ ಪ್ರತಿಕ್ರಿಯೆ

- Advertisement -
- Advertisement -

ನವ ವಿವಾಹಿತ ಲೆಸ್ಬಿಯನ್‌‌ ಜೋಡಿ ತಮ್ಮ ಮೊದಲ ‘ಕರ್ವಾ ಚೌತ್’ ಹಬ್ಬವನ್ನು ಆಚರಿಸುವ ಜಾಹಿರಾತನ್ನು ಡಾಬರ್‌ ಒಡೆತನದ ಖ್ಯಾತ ಸೌಂದರ್ಯ ವರ್ಧಕ ‘ಫೆಮ್ ಸ್ಕಿನ್‌ಕೇರ್‌’ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು, ಈ ವಿಡಿಯೊಗೆ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆ ಬಂದಿವೆ.

‘ಕರ್ವಾ ಚೌತ್’ ಉತ್ತರ ಭಾರತ ಮೂಲದ ಹಿಂದೂಗಳು ಆಚರಿಸುವ ಹಬ್ಬವಾಗಿದೆ. ವಿವಾಹಿತ ಮಹಿಳೆಯರು ತಮ್ಮ ಪತಿಯ ದೀರ್ಘ ಆಯಸ್ಸು ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತಾ ಇಡೀ ದಿನ ಉಪವಾಸ ಹಿಡಿದು ಈ ಹಬ್ಬವನ್ನು ಆಚರಿಸುತ್ತಾರೆ. ಉಪವಾಸ ತೊರೆಯುವಾಗ ಚಂದ್ರನನ್ನು ಜರಡಿಯಲ್ಲಿ ನೋಡಿ, ತಕ್ಷಣವೆ ತನ್ನ ಗಂಡನನ್ನು ನೋಡುತ್ತಾರೆ. ಈ ವೇಳೆ ಗಂಡನು ತನ್ನ ಪತ್ನಿಗೆ ನೀರು ಮತ್ತು ಸಿಹಿ ತಿನಿಸಿ ವೃತವನ್ನು ತೊರೆಯುವಂತೆ ಮಾಡುತ್ತಾನೆ.

ಇದನ್ನೂ ಓದಿ: ‘ಸಲಿಂಗ ವಿವಾಹ ಮೂಲಭೂತ ಹಕ್ಕಲ್ಲ’ – ಒಕ್ಕೂಟ ಸರ್ಕಾರ ಹೇಳಿಕೆ

ಈ ಹಬ್ಬವನ್ನೇ ಮುಖ್ಯ ವಿಷಯವನ್ನಾಗಿ ನಿರ್ಮಿಸಿರುವ ‘ಫೆಮ್ ಸ್ಕಿನ್‌ಕ್ರೀಮ್’ನ ಜಾಹಿರಾತಿನಲ್ಲಿ, ಇಬ್ಬರು ಮಹಿಳೆಯರು ತಮ್ಮ ಮೊದಲ ಕರ್ವಾ ಚೌತ್ ಆಚರಣೆಗೆ ತಯಾರಿ ನಡೆಸುತ್ತಾ, ಒಬ್ಬರು ಇನ್ನೊಬ್ಬರ ಮುಖಕ್ಕೆ ಬ್ಲೀಚ್ ಹಾಕುತ್ತಾರೆ. ಅದರ ಸಂಭಾಷಣೆಯಲ್ಲಿ ಅವರು ಹಬ್ಬದ ಮಹತ್ವವನ್ನು ಚರ್ಚಿಸುತ್ತಾರೆ ಮತ್ತು ತಾವು ಯಾಕೆ ಉಪವಾಸ ಆಚರಿಸುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಾರೆ.

ಜಾಹಿರಾತಿನ ಕೊನೆಯಲ್ಲಿ ಇಬ್ಬರು ಮಹಿಳೆಯರು ಚಂದ್ರನನ್ನು ಜರಡಿಯಲ್ಲಿ ನೋಡಿಕೊಂಡು, ಅದೇ ಜರಡಿಯಲ್ಲಿ ಒಬ್ಬರಿಗೊಬ್ಬರು ಮುಖವನ್ನು ನೋಡುತ್ತಾರೆ. ನಂತರ ತಮ್ಮ ಉಪವಾಸವನ್ನು ತೊರೆಯಲು ಪರಸ್ಪರ ನೀರನ್ನು ಕುಡಿಸುತ್ತಾರೆ. ಈ ಮೂಲಕ ಕರ್ವಾ ಚೌತ್ ಉಪವಾಸ ಮುರಿದು ಹಬ್ಬವನ್ನು ಆಚರಿಸಿಕೊಳ್ಳುತ್ತಾರೆ.

‘ಗ್ಲೋ ವಿಥ್ ಪ್ರೈಡ್’ ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಕಾಮನಬಿಲ್ಲು ಬಣ್ಣಗಳಲ್ಲಿ ಚಿತ್ರಿಸಲಾದ ಫೆಮ್‌ನ ಲಾಂಛನದೊಂದಿಗೆ ವಿಡಿಯೊ ಮುಕ್ತಾಯಗೊಳ್ಳುತ್ತದೆ. ಕಾಮನಬಿಲ್ಲು ಧ್ವಜವು LGBTQIA+ ಸಾಮಾಜಿಕ ಚಳುವಳಿಯ ಸಂಕೇತವಾಗಿದೆ.

ಇದನ್ನೂ ಓದಿ: ಸಲಿಂಗ ದಂಪತಿಗೆ ರಕ್ಷಣೆ ನೀಡಿ: ಪೊಲೀಸರಿಗೆ ಅಲಹಾಬಾದ್ ಹೈಕೋರ್ಟ್ ಆದೇಶ

ಈ ಜಾಹಿರಾತನ್ನು ಕಂಪೆನಿಯು ಆನ್‌ಲೈನ್‌ನಲ್ಲಿ ಹಂಚಿಕೊಂಡಾಗಿನಿಂದ, ಅದರ ಸಂದೇಶದ ಮೇಲೆ ಮಿಶ್ರ ಪ್ರತಿಕ್ರಿಯೆ ಉಂಟಾಗಿದೆ. ಕೆಲವರು ಬ್ರಾಂಡ್‌ನ ಪ್ರಯತ್ನವನ್ನು ಬೆಂಬಲಿಸಿದರೆ, ಇನ್ನೂ ಕೆಲವರು ಅದನ್ನು ಟೀಕಿಸಿದ್ದಾರೆ.

“ಜಾಹಿರಾತಿನ ಬಗ್ಗೆ ಬಗ್ಗೆ ಮಿಶ್ರ ಭಾವನೆಯಿದೆ. ಸಾಂಪ್ರದಾಯಿಕವಲ್ಲದ ಸಂಬಂಧಗಳನ್ನು ಒಪ್ಪಿಕೊಳ್ಳುವುದು ಒಳ್ಳೆಯದೇ ಆಗಿದೆ. ಆದರೆ ಸ್ತ್ರೀದ್ವೇಷಿ ಸಂಪ್ರದಾಯವನ್ನು ಪ್ರಚಾರ ಮಾಡುವುದು ಮತ್ತು ‘ಬಿಳಿ ಚರ್ಮವೆ ಸುಂದರ ನ್ಯಾಯವೇ’ ಎಂಬ ಸಂದೇಶ ಕೂಡಾ ಇದು ಹರಡುತ್ತದೆ” ಎಂದು ಕೆಲವು ಬಳಕೆದಾರರು ಅಭಿಪ್ರಾಯಪಟ್ಟಿದ್ದಾರೆ.

ಕೆಲವರು, ಸೌಂದರ್ಯ ವರ್ಧಕ ಉತ್ಪನ್ನಗಳು ‘ಅಂತರ್ಗತವಾಗಿ ಜಾತಿವಾದಿ ಮತ್ತು ಜನಾಂಗೀಯ’ ನೀತಿಯನ್ನು ಬೆಳೆಸುತ್ತದೆ. ಇದಕ್ಕೆ LGBTQI+ ದೃಷ್ಟಿಕೋನ ಸೇರಿಸುವುದರಿಂದ ಬದಲಾಗುವುದಿಲ್ಲ ಎಂದು ದೂರಿದ್ದಾರೆ.

ಇದನ್ನೂ ಓದಿ: ಸಲಿಂಗ ವಿವಾಹ: ಕೊಡಗು ಮೂಲದ ಯುವಕನನ್ನು ಬಹಿಷ್ಕರಿಸಿದ ಕೊಡವ ಸಮಾಜ!

ಇದನ್ನೂ ಓದಿ: ಸಲಿಂಗ ವಿವಾಹವನ್ನು ನಮ್ಮ ಕಾನೂನು ಮತ್ತು ಸಮಾಜ ಒಪ್ಪುವುದಿಲ್ಲ: ಕೇಂದ್ರ ಸರ್ಕಾರ

ಇದನ್ನೂ ಓದಿ: ಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...