Homeಆರೋಗ್ಯಭಾರತದಲ್ಲಿ 2 ವರ್ಷಕ್ಕಿಂತ ಕೆಳವಯಸ್ಸಿನ 7% ಮಕ್ಕಳಿಗೆ ಮಾತ್ರ ಸಮರ್ಪಕ ಆಹಾರ ಸಿಗುತ್ತಿದೆ

ಭಾರತದಲ್ಲಿ 2 ವರ್ಷಕ್ಕಿಂತ ಕೆಳವಯಸ್ಸಿನ 7% ಮಕ್ಕಳಿಗೆ ಮಾತ್ರ ಸಮರ್ಪಕ ಆಹಾರ ಸಿಗುತ್ತಿದೆ

- Advertisement -
- Advertisement -

ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಭಾರತೀಯ ಮಕ್ಕಳಲ್ಲಿ ಕೇವಲ 6.4% ರಷ್ಟು ಮಕ್ಕಳು ಮಾತ್ರ “ಕನಿಷ್ಠ ಸ್ವೀಕಾರಾರ್ಹ ಆಹಾರ” ಪಡೆಯುತ್ತಿದ್ದಾರೆ ಎಂಬ ಆಘಾತಕಾರಿ ಸಂಗತಿಯನ್ನು ಮೊದಲ ಸಮಗ್ರ ರಾಷ್ಟ್ರೀಯ ಪೌಷ್ಟಿಕಾಂಶ ಸಮೀಕ್ಷೆ (ಸಿಎನ್‌ಎನ್‌ಎಸ್)ಯ ವರದಿ ಹೊರಹಾಕಿದೆ.

ಈ ಪ್ರಮಾಣವು ಪಟ್ಟಿಯ ಅತ್ಯಂತ ತುದಿಯಲ್ಲಿ, ಆಂಧ್ರಪ್ರದೇಶದಲ್ಲಿ ಕೇವಲ 1.3% ಇದ್ದರೆ ಸಿಕ್ಕಿಂನಲ್ಲಿ 35.9% ಇದೆ. ಉಳಿದಂತೆ ಮಹಾರಾಷ್ಟ್ರ (2.2%), ಗುಜರಾತ್, ತೆಲಂಗಾಣ ಮತ್ತು ಕರ್ನಾಟಕ (ಮೂರರಲ್ಲಿಯೂ 3.6%) ಮತ್ತು ತಮಿಳುನಾಡುನಲ್ಲಿ (4.2%) ನಷ್ಟಿದೆ.

ಕೇರಳ ಎರಡನೇ ಸ್ಥಾನದಲ್ಲಿರುವುದು (32.6%), ಆಶ್ಚರ್ಯವಲ್ಲದಿದ್ದರೂ, ಒಡಿಶಾ, ಛತ್ತೀಶ್‌ಘಡ್ ಜಾರ್ಖಂಡ್ ಮತ್ತು ಅಸ್ಸಾಂನಂತಹ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ‘ಹಿಂದುಳಿದವರು’ ಇದ್ದಾರೆ ಎಂದು ಪರಿಗಣಿಸಲ್ಪಟ್ಟಿದ್ದರೂ ಸಹ ಅಲ್ಲಿನ ಅಂಕಿಅಂಶಗಳು ರಾಷ್ಟ್ರೀಯ ಸರಾಸರಿಗಿಂತ ಮೇಲಿವೆ.

ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಸಮೀಕ್ಷೆಯಲ್ಲಿ, 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ 35% ರಷ್ಟು ಕುಂಠಿತ ಬೆಳವಣಿಗೆ ಹೊಂದಿದ್ದಾರೆ. (ವಯಸ್ಸಿಗೆ ಇರಬೇಕಾದುದಕ್ಕಿಂತ ಕಡಿಮೆ ಎತ್ತರ). ಈ ವಯಸ್ಸಿನವರಲ್ಲಿ, 17% (ಎತ್ತರಕ್ಕೆ ಇರಬೇಕಾದುದಕ್ಕಿಂತ ಕಡಿಮೆ ತೂಕ) ಮತ್ತು 33% ಕಡಿಮೆ ತೂಕ (ವಯಸ್ಸಿಗೆ ಇರಬೇಕಾದುದಕ್ಕಿಂತ ಕಡಿಮೆ ತೂಕ) ಇದ್ದಾರೆ ಎಂದು ತಿಳಿಸಿದೆ. ಇದಕ್ಕೆ ವಿರುದ್ಧವಾಗಿ, ಸುಮಾರು 2% ರಷ್ಟು ಅಧಿಕ ತೂಕ ಅಥವಾ ಬೊಜ್ಜು ಹೊಂದಿದ್ದಾರೆ. ಇದನ್ನು  ಬಿಟ್ಟರೆ 6 ತಿಂಗಳು ಮತ್ತು 59 ತಿಂಗಳ ನಡುವಿನ ವಯಸ್ಸಿನವರಲ್ಲಿ, 11% ನಷ್ಟು ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದಿದೆ.

ಸಂಶೋಧನೆಗಳು ಭಾರತದ ಮಕ್ಕಳ ಪೋಷಣೆಯ ವಿಷಯದಲ್ಲಿ ಆತಂಕಕಾರಿಯಾದ ಅಂಕಿ ಅಂಶಗಳನ್ನು ನೀಡಿದೆ. ಪರಿಸ್ಥಿತಿ ಕ್ರಮೇಣ ಸುಧಾರಿಸುತ್ತಿದ್ದರೂ, ಇದಕ್ಕೆ ಬಡತನವು ಪ್ರಮುಖ ಕಾರಣವಾಗಿದ್ದರೆ ಆಹಾರದ ನಿರ್ಬಂಧಗಳು ಸಹ ಕೆಲವು ಸಂದರ್ಭಗಳಲ್ಲಿ ಕಾರಣವಾಗಿದೆ ಎಂದಿದ್ದಾರೆ.

ಬಡ ಕುಟುಂಬಗಳಿಂದ ಕೇವಲ 1% ಹದಿಹರೆಯದವರು ಅಧಿಕ ತೂಕ ಹೊಂದಿದ್ದರೆ, ಶ್ರೀಮಂತ ಮನೆಗಳಲ್ಲಿ ಈ ಪ್ರಮಾಣವು 12% ಇದೆ. ಅಂದರೆ ಅತಿ ತೂಕ ಹೊಂದಿರುವ ಸರಿಸುಮಾರು ಎಂಟು ಮಕ್ಕಳಲ್ಲಿ ಒಬ್ಬರು ಶ್ರೀಮಂತ ಆರ್ಥಿಕ ವರ್ಗದಿಂದ ಬಂದಿರುತ್ತಾರೆ ಎಂದು ವರದಿ ಹೇಳಿದೆ.

ದೇಶದಲ್ಲಿ 10% ಶಾಲಾ-ವಯಸ್ಸಿನ ಮಕ್ಕಳು ಮತ್ತು ಹದಿಹರೆಯದವರು ಮಧುಮೇಹ ಆವರಿಸುವ ಮುಂಚಿನ ಸ್ಥಿತಿಯಲ್ಲಿದ್ದಾರೆ ಎಂದು ಸಮೀಕ್ಷೆಯು ಕಂಡುಹಿಡಿದಿದೆ.

ಸಿಎನ್‌ಎನ್‌ಎಸ್ ಭಾರತದಲ್ಲಿ ಇದುವರೆಗೆ ನಡೆಸಿದ ಅತಿದೊಡ್ಡ ಸೂಕ್ಷ್ಮ ಪೋಷಕಾಂಶಗಳ ಸಮೀಕ್ಷೆಯಾಗಿದೆ. ಇದು 1.1 ಲಕ್ಷ ಮಕ್ಕಳು ಮತ್ತು ಹದಿಹರೆಯದವರನ್ನು ಸಂದರ್ಶಿಸಿದೆ ಮತ್ತು ಅವರಿಂದ ಆಂಥ್ರೊಪೊಮೆಟ್ರಿಕ್ ಅಳತೆಗಳನ್ನು ಸಂಗ್ರಹಿಸಿದೆ. ಸಮೀಕ್ಷೆಗಾಗಿ 51,000 ಕ್ಕೂ ಹೆಚ್ಚು ಮಕ್ಕಳು ಮತ್ತು ಹದಿಹರೆಯದವರಿಂದ ರಕ್ತ, ಮೂತ್ರ ಮತ್ತು ಮಲ ಮಾದರಿಗಳನ್ನು ಸಹ ತೆಗೆದುಕೊಳ್ಳಲಾಗಿದೆ. ಇದು ಅವರ ತಾಯಂದಿರ ಆಹಾರ ಮತ್ತು ಶಿಕ್ಷಣ, ಸಮುದಾಯ, ಜಾತಿ ಮತ್ತು  ಅವರಿಗಿದ್ದ ಆದಾಯವನ್ನು ಒಳಗೊಂಡಂತೆ ಸಮೀಕ್ಷೆ ನಡೆಸಿದವರ ಹಿನ್ನೆಲೆ ಗುಣಲಕ್ಷಣಗಳನ್ನು ಸಹ ಅಧ್ಯಯನ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...