Homeಆರೋಗ್ಯಭಾರತದಲ್ಲಿ 2 ವರ್ಷಕ್ಕಿಂತ ಕೆಳವಯಸ್ಸಿನ 7% ಮಕ್ಕಳಿಗೆ ಮಾತ್ರ ಸಮರ್ಪಕ ಆಹಾರ ಸಿಗುತ್ತಿದೆ

ಭಾರತದಲ್ಲಿ 2 ವರ್ಷಕ್ಕಿಂತ ಕೆಳವಯಸ್ಸಿನ 7% ಮಕ್ಕಳಿಗೆ ಮಾತ್ರ ಸಮರ್ಪಕ ಆಹಾರ ಸಿಗುತ್ತಿದೆ

- Advertisement -
- Advertisement -

ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಭಾರತೀಯ ಮಕ್ಕಳಲ್ಲಿ ಕೇವಲ 6.4% ರಷ್ಟು ಮಕ್ಕಳು ಮಾತ್ರ “ಕನಿಷ್ಠ ಸ್ವೀಕಾರಾರ್ಹ ಆಹಾರ” ಪಡೆಯುತ್ತಿದ್ದಾರೆ ಎಂಬ ಆಘಾತಕಾರಿ ಸಂಗತಿಯನ್ನು ಮೊದಲ ಸಮಗ್ರ ರಾಷ್ಟ್ರೀಯ ಪೌಷ್ಟಿಕಾಂಶ ಸಮೀಕ್ಷೆ (ಸಿಎನ್‌ಎನ್‌ಎಸ್)ಯ ವರದಿ ಹೊರಹಾಕಿದೆ.

ಈ ಪ್ರಮಾಣವು ಪಟ್ಟಿಯ ಅತ್ಯಂತ ತುದಿಯಲ್ಲಿ, ಆಂಧ್ರಪ್ರದೇಶದಲ್ಲಿ ಕೇವಲ 1.3% ಇದ್ದರೆ ಸಿಕ್ಕಿಂನಲ್ಲಿ 35.9% ಇದೆ. ಉಳಿದಂತೆ ಮಹಾರಾಷ್ಟ್ರ (2.2%), ಗುಜರಾತ್, ತೆಲಂಗಾಣ ಮತ್ತು ಕರ್ನಾಟಕ (ಮೂರರಲ್ಲಿಯೂ 3.6%) ಮತ್ತು ತಮಿಳುನಾಡುನಲ್ಲಿ (4.2%) ನಷ್ಟಿದೆ.

ಕೇರಳ ಎರಡನೇ ಸ್ಥಾನದಲ್ಲಿರುವುದು (32.6%), ಆಶ್ಚರ್ಯವಲ್ಲದಿದ್ದರೂ, ಒಡಿಶಾ, ಛತ್ತೀಶ್‌ಘಡ್ ಜಾರ್ಖಂಡ್ ಮತ್ತು ಅಸ್ಸಾಂನಂತಹ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ‘ಹಿಂದುಳಿದವರು’ ಇದ್ದಾರೆ ಎಂದು ಪರಿಗಣಿಸಲ್ಪಟ್ಟಿದ್ದರೂ ಸಹ ಅಲ್ಲಿನ ಅಂಕಿಅಂಶಗಳು ರಾಷ್ಟ್ರೀಯ ಸರಾಸರಿಗಿಂತ ಮೇಲಿವೆ.

ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಸಮೀಕ್ಷೆಯಲ್ಲಿ, 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ 35% ರಷ್ಟು ಕುಂಠಿತ ಬೆಳವಣಿಗೆ ಹೊಂದಿದ್ದಾರೆ. (ವಯಸ್ಸಿಗೆ ಇರಬೇಕಾದುದಕ್ಕಿಂತ ಕಡಿಮೆ ಎತ್ತರ). ಈ ವಯಸ್ಸಿನವರಲ್ಲಿ, 17% (ಎತ್ತರಕ್ಕೆ ಇರಬೇಕಾದುದಕ್ಕಿಂತ ಕಡಿಮೆ ತೂಕ) ಮತ್ತು 33% ಕಡಿಮೆ ತೂಕ (ವಯಸ್ಸಿಗೆ ಇರಬೇಕಾದುದಕ್ಕಿಂತ ಕಡಿಮೆ ತೂಕ) ಇದ್ದಾರೆ ಎಂದು ತಿಳಿಸಿದೆ. ಇದಕ್ಕೆ ವಿರುದ್ಧವಾಗಿ, ಸುಮಾರು 2% ರಷ್ಟು ಅಧಿಕ ತೂಕ ಅಥವಾ ಬೊಜ್ಜು ಹೊಂದಿದ್ದಾರೆ. ಇದನ್ನು  ಬಿಟ್ಟರೆ 6 ತಿಂಗಳು ಮತ್ತು 59 ತಿಂಗಳ ನಡುವಿನ ವಯಸ್ಸಿನವರಲ್ಲಿ, 11% ನಷ್ಟು ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದಿದೆ.

ಸಂಶೋಧನೆಗಳು ಭಾರತದ ಮಕ್ಕಳ ಪೋಷಣೆಯ ವಿಷಯದಲ್ಲಿ ಆತಂಕಕಾರಿಯಾದ ಅಂಕಿ ಅಂಶಗಳನ್ನು ನೀಡಿದೆ. ಪರಿಸ್ಥಿತಿ ಕ್ರಮೇಣ ಸುಧಾರಿಸುತ್ತಿದ್ದರೂ, ಇದಕ್ಕೆ ಬಡತನವು ಪ್ರಮುಖ ಕಾರಣವಾಗಿದ್ದರೆ ಆಹಾರದ ನಿರ್ಬಂಧಗಳು ಸಹ ಕೆಲವು ಸಂದರ್ಭಗಳಲ್ಲಿ ಕಾರಣವಾಗಿದೆ ಎಂದಿದ್ದಾರೆ.

ಬಡ ಕುಟುಂಬಗಳಿಂದ ಕೇವಲ 1% ಹದಿಹರೆಯದವರು ಅಧಿಕ ತೂಕ ಹೊಂದಿದ್ದರೆ, ಶ್ರೀಮಂತ ಮನೆಗಳಲ್ಲಿ ಈ ಪ್ರಮಾಣವು 12% ಇದೆ. ಅಂದರೆ ಅತಿ ತೂಕ ಹೊಂದಿರುವ ಸರಿಸುಮಾರು ಎಂಟು ಮಕ್ಕಳಲ್ಲಿ ಒಬ್ಬರು ಶ್ರೀಮಂತ ಆರ್ಥಿಕ ವರ್ಗದಿಂದ ಬಂದಿರುತ್ತಾರೆ ಎಂದು ವರದಿ ಹೇಳಿದೆ.

ದೇಶದಲ್ಲಿ 10% ಶಾಲಾ-ವಯಸ್ಸಿನ ಮಕ್ಕಳು ಮತ್ತು ಹದಿಹರೆಯದವರು ಮಧುಮೇಹ ಆವರಿಸುವ ಮುಂಚಿನ ಸ್ಥಿತಿಯಲ್ಲಿದ್ದಾರೆ ಎಂದು ಸಮೀಕ್ಷೆಯು ಕಂಡುಹಿಡಿದಿದೆ.

ಸಿಎನ್‌ಎನ್‌ಎಸ್ ಭಾರತದಲ್ಲಿ ಇದುವರೆಗೆ ನಡೆಸಿದ ಅತಿದೊಡ್ಡ ಸೂಕ್ಷ್ಮ ಪೋಷಕಾಂಶಗಳ ಸಮೀಕ್ಷೆಯಾಗಿದೆ. ಇದು 1.1 ಲಕ್ಷ ಮಕ್ಕಳು ಮತ್ತು ಹದಿಹರೆಯದವರನ್ನು ಸಂದರ್ಶಿಸಿದೆ ಮತ್ತು ಅವರಿಂದ ಆಂಥ್ರೊಪೊಮೆಟ್ರಿಕ್ ಅಳತೆಗಳನ್ನು ಸಂಗ್ರಹಿಸಿದೆ. ಸಮೀಕ್ಷೆಗಾಗಿ 51,000 ಕ್ಕೂ ಹೆಚ್ಚು ಮಕ್ಕಳು ಮತ್ತು ಹದಿಹರೆಯದವರಿಂದ ರಕ್ತ, ಮೂತ್ರ ಮತ್ತು ಮಲ ಮಾದರಿಗಳನ್ನು ಸಹ ತೆಗೆದುಕೊಳ್ಳಲಾಗಿದೆ. ಇದು ಅವರ ತಾಯಂದಿರ ಆಹಾರ ಮತ್ತು ಶಿಕ್ಷಣ, ಸಮುದಾಯ, ಜಾತಿ ಮತ್ತು  ಅವರಿಗಿದ್ದ ಆದಾಯವನ್ನು ಒಳಗೊಂಡಂತೆ ಸಮೀಕ್ಷೆ ನಡೆಸಿದವರ ಹಿನ್ನೆಲೆ ಗುಣಲಕ್ಷಣಗಳನ್ನು ಸಹ ಅಧ್ಯಯನ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...