Homeಆರೋಗ್ಯಭಾರತದಲ್ಲಿ 2 ವರ್ಷಕ್ಕಿಂತ ಕೆಳವಯಸ್ಸಿನ 7% ಮಕ್ಕಳಿಗೆ ಮಾತ್ರ ಸಮರ್ಪಕ ಆಹಾರ ಸಿಗುತ್ತಿದೆ

ಭಾರತದಲ್ಲಿ 2 ವರ್ಷಕ್ಕಿಂತ ಕೆಳವಯಸ್ಸಿನ 7% ಮಕ್ಕಳಿಗೆ ಮಾತ್ರ ಸಮರ್ಪಕ ಆಹಾರ ಸಿಗುತ್ತಿದೆ

- Advertisement -
- Advertisement -

ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಭಾರತೀಯ ಮಕ್ಕಳಲ್ಲಿ ಕೇವಲ 6.4% ರಷ್ಟು ಮಕ್ಕಳು ಮಾತ್ರ “ಕನಿಷ್ಠ ಸ್ವೀಕಾರಾರ್ಹ ಆಹಾರ” ಪಡೆಯುತ್ತಿದ್ದಾರೆ ಎಂಬ ಆಘಾತಕಾರಿ ಸಂಗತಿಯನ್ನು ಮೊದಲ ಸಮಗ್ರ ರಾಷ್ಟ್ರೀಯ ಪೌಷ್ಟಿಕಾಂಶ ಸಮೀಕ್ಷೆ (ಸಿಎನ್‌ಎನ್‌ಎಸ್)ಯ ವರದಿ ಹೊರಹಾಕಿದೆ.

ಈ ಪ್ರಮಾಣವು ಪಟ್ಟಿಯ ಅತ್ಯಂತ ತುದಿಯಲ್ಲಿ, ಆಂಧ್ರಪ್ರದೇಶದಲ್ಲಿ ಕೇವಲ 1.3% ಇದ್ದರೆ ಸಿಕ್ಕಿಂನಲ್ಲಿ 35.9% ಇದೆ. ಉಳಿದಂತೆ ಮಹಾರಾಷ್ಟ್ರ (2.2%), ಗುಜರಾತ್, ತೆಲಂಗಾಣ ಮತ್ತು ಕರ್ನಾಟಕ (ಮೂರರಲ್ಲಿಯೂ 3.6%) ಮತ್ತು ತಮಿಳುನಾಡುನಲ್ಲಿ (4.2%) ನಷ್ಟಿದೆ.

ಕೇರಳ ಎರಡನೇ ಸ್ಥಾನದಲ್ಲಿರುವುದು (32.6%), ಆಶ್ಚರ್ಯವಲ್ಲದಿದ್ದರೂ, ಒಡಿಶಾ, ಛತ್ತೀಶ್‌ಘಡ್ ಜಾರ್ಖಂಡ್ ಮತ್ತು ಅಸ್ಸಾಂನಂತಹ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ‘ಹಿಂದುಳಿದವರು’ ಇದ್ದಾರೆ ಎಂದು ಪರಿಗಣಿಸಲ್ಪಟ್ಟಿದ್ದರೂ ಸಹ ಅಲ್ಲಿನ ಅಂಕಿಅಂಶಗಳು ರಾಷ್ಟ್ರೀಯ ಸರಾಸರಿಗಿಂತ ಮೇಲಿವೆ.

ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಸಮೀಕ್ಷೆಯಲ್ಲಿ, 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ 35% ರಷ್ಟು ಕುಂಠಿತ ಬೆಳವಣಿಗೆ ಹೊಂದಿದ್ದಾರೆ. (ವಯಸ್ಸಿಗೆ ಇರಬೇಕಾದುದಕ್ಕಿಂತ ಕಡಿಮೆ ಎತ್ತರ). ಈ ವಯಸ್ಸಿನವರಲ್ಲಿ, 17% (ಎತ್ತರಕ್ಕೆ ಇರಬೇಕಾದುದಕ್ಕಿಂತ ಕಡಿಮೆ ತೂಕ) ಮತ್ತು 33% ಕಡಿಮೆ ತೂಕ (ವಯಸ್ಸಿಗೆ ಇರಬೇಕಾದುದಕ್ಕಿಂತ ಕಡಿಮೆ ತೂಕ) ಇದ್ದಾರೆ ಎಂದು ತಿಳಿಸಿದೆ. ಇದಕ್ಕೆ ವಿರುದ್ಧವಾಗಿ, ಸುಮಾರು 2% ರಷ್ಟು ಅಧಿಕ ತೂಕ ಅಥವಾ ಬೊಜ್ಜು ಹೊಂದಿದ್ದಾರೆ. ಇದನ್ನು  ಬಿಟ್ಟರೆ 6 ತಿಂಗಳು ಮತ್ತು 59 ತಿಂಗಳ ನಡುವಿನ ವಯಸ್ಸಿನವರಲ್ಲಿ, 11% ನಷ್ಟು ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದಿದೆ.

ಸಂಶೋಧನೆಗಳು ಭಾರತದ ಮಕ್ಕಳ ಪೋಷಣೆಯ ವಿಷಯದಲ್ಲಿ ಆತಂಕಕಾರಿಯಾದ ಅಂಕಿ ಅಂಶಗಳನ್ನು ನೀಡಿದೆ. ಪರಿಸ್ಥಿತಿ ಕ್ರಮೇಣ ಸುಧಾರಿಸುತ್ತಿದ್ದರೂ, ಇದಕ್ಕೆ ಬಡತನವು ಪ್ರಮುಖ ಕಾರಣವಾಗಿದ್ದರೆ ಆಹಾರದ ನಿರ್ಬಂಧಗಳು ಸಹ ಕೆಲವು ಸಂದರ್ಭಗಳಲ್ಲಿ ಕಾರಣವಾಗಿದೆ ಎಂದಿದ್ದಾರೆ.

ಬಡ ಕುಟುಂಬಗಳಿಂದ ಕೇವಲ 1% ಹದಿಹರೆಯದವರು ಅಧಿಕ ತೂಕ ಹೊಂದಿದ್ದರೆ, ಶ್ರೀಮಂತ ಮನೆಗಳಲ್ಲಿ ಈ ಪ್ರಮಾಣವು 12% ಇದೆ. ಅಂದರೆ ಅತಿ ತೂಕ ಹೊಂದಿರುವ ಸರಿಸುಮಾರು ಎಂಟು ಮಕ್ಕಳಲ್ಲಿ ಒಬ್ಬರು ಶ್ರೀಮಂತ ಆರ್ಥಿಕ ವರ್ಗದಿಂದ ಬಂದಿರುತ್ತಾರೆ ಎಂದು ವರದಿ ಹೇಳಿದೆ.

ದೇಶದಲ್ಲಿ 10% ಶಾಲಾ-ವಯಸ್ಸಿನ ಮಕ್ಕಳು ಮತ್ತು ಹದಿಹರೆಯದವರು ಮಧುಮೇಹ ಆವರಿಸುವ ಮುಂಚಿನ ಸ್ಥಿತಿಯಲ್ಲಿದ್ದಾರೆ ಎಂದು ಸಮೀಕ್ಷೆಯು ಕಂಡುಹಿಡಿದಿದೆ.

ಸಿಎನ್‌ಎನ್‌ಎಸ್ ಭಾರತದಲ್ಲಿ ಇದುವರೆಗೆ ನಡೆಸಿದ ಅತಿದೊಡ್ಡ ಸೂಕ್ಷ್ಮ ಪೋಷಕಾಂಶಗಳ ಸಮೀಕ್ಷೆಯಾಗಿದೆ. ಇದು 1.1 ಲಕ್ಷ ಮಕ್ಕಳು ಮತ್ತು ಹದಿಹರೆಯದವರನ್ನು ಸಂದರ್ಶಿಸಿದೆ ಮತ್ತು ಅವರಿಂದ ಆಂಥ್ರೊಪೊಮೆಟ್ರಿಕ್ ಅಳತೆಗಳನ್ನು ಸಂಗ್ರಹಿಸಿದೆ. ಸಮೀಕ್ಷೆಗಾಗಿ 51,000 ಕ್ಕೂ ಹೆಚ್ಚು ಮಕ್ಕಳು ಮತ್ತು ಹದಿಹರೆಯದವರಿಂದ ರಕ್ತ, ಮೂತ್ರ ಮತ್ತು ಮಲ ಮಾದರಿಗಳನ್ನು ಸಹ ತೆಗೆದುಕೊಳ್ಳಲಾಗಿದೆ. ಇದು ಅವರ ತಾಯಂದಿರ ಆಹಾರ ಮತ್ತು ಶಿಕ್ಷಣ, ಸಮುದಾಯ, ಜಾತಿ ಮತ್ತು  ಅವರಿಗಿದ್ದ ಆದಾಯವನ್ನು ಒಳಗೊಂಡಂತೆ ಸಮೀಕ್ಷೆ ನಡೆಸಿದವರ ಹಿನ್ನೆಲೆ ಗುಣಲಕ್ಷಣಗಳನ್ನು ಸಹ ಅಧ್ಯಯನ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...