Homeಆರೋಗ್ಯಭಾರತದಲ್ಲಿ 2 ವರ್ಷಕ್ಕಿಂತ ಕೆಳವಯಸ್ಸಿನ 7% ಮಕ್ಕಳಿಗೆ ಮಾತ್ರ ಸಮರ್ಪಕ ಆಹಾರ ಸಿಗುತ್ತಿದೆ

ಭಾರತದಲ್ಲಿ 2 ವರ್ಷಕ್ಕಿಂತ ಕೆಳವಯಸ್ಸಿನ 7% ಮಕ್ಕಳಿಗೆ ಮಾತ್ರ ಸಮರ್ಪಕ ಆಹಾರ ಸಿಗುತ್ತಿದೆ

- Advertisement -
- Advertisement -

ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಭಾರತೀಯ ಮಕ್ಕಳಲ್ಲಿ ಕೇವಲ 6.4% ರಷ್ಟು ಮಕ್ಕಳು ಮಾತ್ರ “ಕನಿಷ್ಠ ಸ್ವೀಕಾರಾರ್ಹ ಆಹಾರ” ಪಡೆಯುತ್ತಿದ್ದಾರೆ ಎಂಬ ಆಘಾತಕಾರಿ ಸಂಗತಿಯನ್ನು ಮೊದಲ ಸಮಗ್ರ ರಾಷ್ಟ್ರೀಯ ಪೌಷ್ಟಿಕಾಂಶ ಸಮೀಕ್ಷೆ (ಸಿಎನ್‌ಎನ್‌ಎಸ್)ಯ ವರದಿ ಹೊರಹಾಕಿದೆ.

ಈ ಪ್ರಮಾಣವು ಪಟ್ಟಿಯ ಅತ್ಯಂತ ತುದಿಯಲ್ಲಿ, ಆಂಧ್ರಪ್ರದೇಶದಲ್ಲಿ ಕೇವಲ 1.3% ಇದ್ದರೆ ಸಿಕ್ಕಿಂನಲ್ಲಿ 35.9% ಇದೆ. ಉಳಿದಂತೆ ಮಹಾರಾಷ್ಟ್ರ (2.2%), ಗುಜರಾತ್, ತೆಲಂಗಾಣ ಮತ್ತು ಕರ್ನಾಟಕ (ಮೂರರಲ್ಲಿಯೂ 3.6%) ಮತ್ತು ತಮಿಳುನಾಡುನಲ್ಲಿ (4.2%) ನಷ್ಟಿದೆ.

ಕೇರಳ ಎರಡನೇ ಸ್ಥಾನದಲ್ಲಿರುವುದು (32.6%), ಆಶ್ಚರ್ಯವಲ್ಲದಿದ್ದರೂ, ಒಡಿಶಾ, ಛತ್ತೀಶ್‌ಘಡ್ ಜಾರ್ಖಂಡ್ ಮತ್ತು ಅಸ್ಸಾಂನಂತಹ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ‘ಹಿಂದುಳಿದವರು’ ಇದ್ದಾರೆ ಎಂದು ಪರಿಗಣಿಸಲ್ಪಟ್ಟಿದ್ದರೂ ಸಹ ಅಲ್ಲಿನ ಅಂಕಿಅಂಶಗಳು ರಾಷ್ಟ್ರೀಯ ಸರಾಸರಿಗಿಂತ ಮೇಲಿವೆ.

ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಸಮೀಕ್ಷೆಯಲ್ಲಿ, 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ 35% ರಷ್ಟು ಕುಂಠಿತ ಬೆಳವಣಿಗೆ ಹೊಂದಿದ್ದಾರೆ. (ವಯಸ್ಸಿಗೆ ಇರಬೇಕಾದುದಕ್ಕಿಂತ ಕಡಿಮೆ ಎತ್ತರ). ಈ ವಯಸ್ಸಿನವರಲ್ಲಿ, 17% (ಎತ್ತರಕ್ಕೆ ಇರಬೇಕಾದುದಕ್ಕಿಂತ ಕಡಿಮೆ ತೂಕ) ಮತ್ತು 33% ಕಡಿಮೆ ತೂಕ (ವಯಸ್ಸಿಗೆ ಇರಬೇಕಾದುದಕ್ಕಿಂತ ಕಡಿಮೆ ತೂಕ) ಇದ್ದಾರೆ ಎಂದು ತಿಳಿಸಿದೆ. ಇದಕ್ಕೆ ವಿರುದ್ಧವಾಗಿ, ಸುಮಾರು 2% ರಷ್ಟು ಅಧಿಕ ತೂಕ ಅಥವಾ ಬೊಜ್ಜು ಹೊಂದಿದ್ದಾರೆ. ಇದನ್ನು  ಬಿಟ್ಟರೆ 6 ತಿಂಗಳು ಮತ್ತು 59 ತಿಂಗಳ ನಡುವಿನ ವಯಸ್ಸಿನವರಲ್ಲಿ, 11% ನಷ್ಟು ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದಿದೆ.

ಸಂಶೋಧನೆಗಳು ಭಾರತದ ಮಕ್ಕಳ ಪೋಷಣೆಯ ವಿಷಯದಲ್ಲಿ ಆತಂಕಕಾರಿಯಾದ ಅಂಕಿ ಅಂಶಗಳನ್ನು ನೀಡಿದೆ. ಪರಿಸ್ಥಿತಿ ಕ್ರಮೇಣ ಸುಧಾರಿಸುತ್ತಿದ್ದರೂ, ಇದಕ್ಕೆ ಬಡತನವು ಪ್ರಮುಖ ಕಾರಣವಾಗಿದ್ದರೆ ಆಹಾರದ ನಿರ್ಬಂಧಗಳು ಸಹ ಕೆಲವು ಸಂದರ್ಭಗಳಲ್ಲಿ ಕಾರಣವಾಗಿದೆ ಎಂದಿದ್ದಾರೆ.

ಬಡ ಕುಟುಂಬಗಳಿಂದ ಕೇವಲ 1% ಹದಿಹರೆಯದವರು ಅಧಿಕ ತೂಕ ಹೊಂದಿದ್ದರೆ, ಶ್ರೀಮಂತ ಮನೆಗಳಲ್ಲಿ ಈ ಪ್ರಮಾಣವು 12% ಇದೆ. ಅಂದರೆ ಅತಿ ತೂಕ ಹೊಂದಿರುವ ಸರಿಸುಮಾರು ಎಂಟು ಮಕ್ಕಳಲ್ಲಿ ಒಬ್ಬರು ಶ್ರೀಮಂತ ಆರ್ಥಿಕ ವರ್ಗದಿಂದ ಬಂದಿರುತ್ತಾರೆ ಎಂದು ವರದಿ ಹೇಳಿದೆ.

ದೇಶದಲ್ಲಿ 10% ಶಾಲಾ-ವಯಸ್ಸಿನ ಮಕ್ಕಳು ಮತ್ತು ಹದಿಹರೆಯದವರು ಮಧುಮೇಹ ಆವರಿಸುವ ಮುಂಚಿನ ಸ್ಥಿತಿಯಲ್ಲಿದ್ದಾರೆ ಎಂದು ಸಮೀಕ್ಷೆಯು ಕಂಡುಹಿಡಿದಿದೆ.

ಸಿಎನ್‌ಎನ್‌ಎಸ್ ಭಾರತದಲ್ಲಿ ಇದುವರೆಗೆ ನಡೆಸಿದ ಅತಿದೊಡ್ಡ ಸೂಕ್ಷ್ಮ ಪೋಷಕಾಂಶಗಳ ಸಮೀಕ್ಷೆಯಾಗಿದೆ. ಇದು 1.1 ಲಕ್ಷ ಮಕ್ಕಳು ಮತ್ತು ಹದಿಹರೆಯದವರನ್ನು ಸಂದರ್ಶಿಸಿದೆ ಮತ್ತು ಅವರಿಂದ ಆಂಥ್ರೊಪೊಮೆಟ್ರಿಕ್ ಅಳತೆಗಳನ್ನು ಸಂಗ್ರಹಿಸಿದೆ. ಸಮೀಕ್ಷೆಗಾಗಿ 51,000 ಕ್ಕೂ ಹೆಚ್ಚು ಮಕ್ಕಳು ಮತ್ತು ಹದಿಹರೆಯದವರಿಂದ ರಕ್ತ, ಮೂತ್ರ ಮತ್ತು ಮಲ ಮಾದರಿಗಳನ್ನು ಸಹ ತೆಗೆದುಕೊಳ್ಳಲಾಗಿದೆ. ಇದು ಅವರ ತಾಯಂದಿರ ಆಹಾರ ಮತ್ತು ಶಿಕ್ಷಣ, ಸಮುದಾಯ, ಜಾತಿ ಮತ್ತು  ಅವರಿಗಿದ್ದ ಆದಾಯವನ್ನು ಒಳಗೊಂಡಂತೆ ಸಮೀಕ್ಷೆ ನಡೆಸಿದವರ ಹಿನ್ನೆಲೆ ಗುಣಲಕ್ಷಣಗಳನ್ನು ಸಹ ಅಧ್ಯಯನ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...