Homeಅಂಕಣಗಳುನೂರರ ನೋಟ: ಸಾಗುವಳಿ ಭೂಮಿಯ ಅಕ್ರಮ ಸಕ್ರಮ ಅರ್ಜಿಗಳು ಶೀಘ್ರ ಇತ್ಯರ್ಥವಾಗಲಿ..

ನೂರರ ನೋಟ: ಸಾಗುವಳಿ ಭೂಮಿಯ ಅಕ್ರಮ ಸಕ್ರಮ ಅರ್ಜಿಗಳು ಶೀಘ್ರ ಇತ್ಯರ್ಥವಾಗಲಿ..

- Advertisement -
- Advertisement -

ಅಕ್ರಮವಾಗಿ ಸರ್ಕಾರಿ ಭೂಮಿ ಸಾಗುವಳಿಯನ್ನು ಮಾಡುತ್ತಿದ್ದ ಒಬ್ಬ ರೈತ ಅಕ್ರಮ ಸಕ್ರಮ ಅರ್ಜಿ ಸಲ್ಲಿಸಿ, ತಹಶೀಲ್ದಾರರ ಕಚೇರಿಗೆ ತಿರುಗಿ ತಿರುಗಿ ಬೇಸತ್ತು ಹತಾಶನಾಗಿ ತಹಶೀಲ್ದಾರರನ್ನೇ ಗುಂಡಿಕ್ಕಿ ಕೊಂದ ಸುದ್ದಿ ಪತ್ರಿಕೆಯಲ್ಲಿ ಪ್ರಕಟವಾಗಿದೆ. ಇದರಲ್ಲಿ ತಹಶೀಲ್ದಾರನ ತಪ್ಪೇನೂ ಇಲ್ಲ. ಅಕ್ರಮ ಸಕ್ರಮ ಜಮೀನನ್ನು ರೈತನ ಹೆಸರಿಗೆ ಪಟ್ಟ ಮಾಡಿಕೊಡಿ ಎಂದು ಜಿಲ್ಲಾಧಿಕಾರಿಗಳಿಗೆ ಸರ್ಕಾರ ಪತ್ರ ಬರೆಯದ ಹೊರತು ಜಿಲ್ಲಾಧಿಕಾರಿಯಾಗಲಿ, ತಹಶೀಲ್ದಾರರಾಗಲಿ ಆ ಕೆಲಸ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ. ಸರ್ಕಾರ ಅಕ್ರಮ ಸಕ್ರಮದ ಅರ್ಜಿಗಳನ್ನು ಕರೆಯಲು ತೀರ್ಮಾನ ತೆಗೆದುಕೊಂಡು 3-4 ವರ್ಷ ಆಗಿದೆ. ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದೊಡನೆ ಅರ್ಜಿ ಸ್ವೀಕರಿಸಲು ಕೊನೆಯ ದಿನವನ್ನು 1-2 ವರ್ಷ ಕಾಲ ವಿಸ್ತರಿಸುತ್ತಾ ಹೋಗುತ್ತದೆ.

ಅಕ್ರಮ ಸಕ್ರಮ ಅರ್ಜಿಗಳನ್ನು ಪರಿಶೀಲಿಸಿ ಅಕ್ರಮವಾಗಿರುವುದನ್ನು ತಿರಸ್ಕರಿಸಲು, ಸಕ್ರಮವಾಗಿರುವುದನ್ನು ಅಂಗೀಕರಿಸಲು ಸರ್ಕಾರ ಜಿಲ್ಲಾಧಿಕಾರಿಗಳಿಗೆ ಅನುಮತಿ ನೀಡಿದೆ. ಇದಕ್ಕಾಗಿ ಪ್ರತಿ ತಾಲ್ಲೂಕಿನಲ್ಲೂ ಒಂದು ಸಮಿತಿಯನ್ನು ಸರ್ಕಾರ ರಚಿಸಿದೆ. ಈ ಸಮಿತಿಯ ಸಂಚಾಲಕರ ಸದಸ್ಯರು ಆಯಾ ತಾಲ್ಲೂಕಿನ ತಹಶೀಲ್ದಾರರು. ಮೂರು ಸದಸ್ಯರ ಈ ಸಮಿತಿಗೆ ಅಲ್ಲಿಯ ಶಾಸಕರು ಮತ್ತು ಒಬ್ಬ ಖಾಸಗಿ ವ್ಯಕ್ತಿ ಸದಸ್ಯರು. ಈ ಸಮಿತಿ ಪ್ರತಿ ಶನಿವಾರ ಸಭೆ ನಡೆಸಿ ಅರ್ಜಿಗಳನ್ನು ಪರಿಶೀಲಿಸಿ ತೀರ್ಮಾನಕ್ಕೆ ಬರುವ ಅಧಿಕಾರ ಹೊಂದಿದೆ. ಆದರೆ ಅನೇಕ ತಾಲ್ಲೂಕುಗಳಲ್ಲಿ ಅಲ್ಲಿಯ ಶಾಸಕರ ಆಲಕ್ಷ್ಯದಿಂದ ಸಮಿತಿಯ ಸಭೆಗಳೇ ನಡೆದಿಲ್ಲ. ಇದನ್ನು ಗಮನಿಸಿದ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಮಂತ್ರಿಗಳಾಗಿದ್ದ ಕಾಗೋಡು ತಿಮ್ಮಪ್ಪನವರು ರೋಸಿ ಹೋಗಿ ಶನಿವಾರದ ಸಭೆಗಳಿಗೆ ಇಬ್ಬರು ಸದಸ್ಯರು ಹಾಜರಾದರೂ ಸಾಕು, ಸಭೆ ನಡೆಸಿ ಎಂದು ತಹಶೀಲ್ದಾರರಿಗೆ ಪತ್ರಗಳನ್ನು ಬರೆದರು. ಅದೂ ಕಾರ್ಯಗತವಾಗಲಿಲ್ಲ. ಈ ಜಮೀನನ್ನೇ ನಂಬಿಕೊಂಡು ಜೀವನ ನಡೆಸುತ್ತಿರುವ ಬಡ ರೈತರ ಕೆಲಸವನ್ನು ಆದ್ಯತೆಯಿಂದ ಮಾಡಿಕೊಡಬೇಕು ಎಂದು ಈ ಶಾಸಕರಿಗೆ ಅನ್ನಿಸಲೇ ಇಲ್ಲ, ಇಂದಿಗೂ ಈ ಪರಿಸ್ಥಿತಿ ಮುಂದುವರೆಯುತ್ತಿದೆ. ಬಡ ರೈತರು ತಾವು ಹಿಡಿದಿರುವ ಸರ್ಕಾರಿ ಜಮೀನನ್ನು ತಮ್ಮ ಹೆಸರಿಗೆ ಪಟ್ಟ ಮಾಡಿಕೊಡುತ್ತಾರೆಂದು ತಾಲ್ಲೂಕು ಆಫೀಸಿಗೆ ಅಲೆದಾಡಿ ಹತಾಶರಾಗಿದ್ದಾರೆ. ಹೊಟ್ಟೆ ತುಂಬಿದ ಶಾಸಕರಿಗೆ ಈ ಬಡ ಜನರ ಬವಣೆ ಗೊತ್ತಿದ್ದರೂ ಅವರನ್ನು ಆಲಕ್ಷ್ಯ ಮಾಡಿದ್ದಾರೆ. ಇದು ಬಡವರ ಆಕ್ರೋಶಕ್ಕೆ ಕಾರಣವಾಗಿದೆ.

ಕೆಲವು ತಾಲ್ಲೂಕುಗಳಲ್ಲಿ ಶಾಸಕರು ಮುತುವರ್ಜಿವಹಿಸಿ ಸಭೆಗಳನ್ನು ನಡೆಸಿ ಅಕ್ರಮ ಸಕ್ರಮ ಅರ್ಜಿಗಳನ್ನು ಪರಿಶೀಲಿಸಿ ಅನರ್ಹವಾದದ್ದು ಯಾವುದು, ಅರ್ಹವಾದದ್ದು ಯಾವುದು ಎಂದು ಪರಿಶೀಲಿಸಿ ಪಟ್ಟ ಮಾಡಿದ್ದಾರೆ. ನನಗೆ ತಿಳಿದಂತೆ ಗೌರಿಬಿದನೂರಿನ ಶಾಸಕರು ಅರ್ಹರಾದವರಿಗೆ ಪಟ್ಟ ಕೊಡಿಸಿದ್ದಾರೆ ಅಲೆಮಾರಿ ಹಕ್ಕಿಪಿಕ್ಕರಿಗೆ ಪಟ್ಟ ಹಂಚುವ ಸಮಾರಂಭಕ್ಕೆ ಶಾಸಕರು ನನ್ನನ್ನು ಆಹ್ವಾನಿಸಿದ್ದರು. ನಾನು ಹೋಗಿದ್ದೆ.

PC : Patrika

ಈಗ ನನಗೆ ತಿಳಿದುಬಂದಿರುವಂತೆ ಕೆಲವು ತಾಲ್ಲೂಕುಗಳಲ್ಲಿ ಒಟ್ಟು 4 ಲಕ್ಷ ಅರ್ಜಿಗಳು ಬಂದಿದ್ದರೂ ಅವುಗಳ ಪೈಕಿ ಸಮಿತಿ ಎರಡೂವರೆ ಲಕ್ಷ ಅರ್ಜಿಗಳನ್ನು ತಿರಸ್ಕರಿಸಿ ಒಂದೂವರೆ ಲಕ್ಷ ಅರ್ಜಿದಾರರಿಗೆ ಪಟ್ಟ ಮಾಡಿ ಕೊಡಬಹುದೆಂದು ಶಿಫಾರಸು ಮಾಡಿದೆ.

ಜಾತಕ ಪಕ್ಷಿಗಳಂತೆ ಪಟ್ಟಕ್ಕಾಗಿ ಕಾಯುತ್ತಿರುವ ಈ ಬಡ ರೈತರಿಗೆ, ತೀರ್ಮಾನಗೊಂಡ ಈ ಒಂದೂವರೆ ಲಕ್ಷ ಅರ್ಹ ಅರ್ಜಿದಾರರಿಗೆ ಪಟ್ಟವನ್ನು ಕೂಡಲೇ ಹಂಚಲು ಸರ್ಕಾರ ಸುತ್ತೋಲೆ ಹೊರಡಿಸಬೇಕು. ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಈ ಅರ್ಹ ಅರ್ಜಿದಾರರಿಗೆ ಪಟ್ಟ ಮಾಡಿಕೊಡಲು ಅನುಮತಿ ನೀಡಬೇಕು. ಈ ಪ್ರಕ್ರಿಯೆ ಕೂಡಲೇ ಕಾರ್ಯಗತಗೊಳ್ಳಲು ಸೂಚಿಸಿ, 6 ತಿಂಗಳೊಳಗೆ ಈ ಒಂದೂವರೆ ಲಕ್ಷ ಅರ್ಹ ಅರ್ಜಿದಾರರಿಗೆ ಪಟ್ಟ ದೊರೆಯುವಂತೆ ಸುಗ್ರೀವಾಜ್ಞೆ ಹೊರಡಿಸಬೇಕು.

ಸರ್ಕಾರ ಬಡ ರೈತರ ಕಾತರವನ್ನು ಅರ್ಥಮಾಡಿಕೊಳ್ಳಬೇಕು. ಈ ರೈತರು ತಹಶೀಲ್ದಾರರ ಕಚೇರಿಗೆ ನೂರಾರು ಸಲ ಹೋಗಿ ಹತಾಶರಾಗಿ ಹಿಂದಿರುಗಿರುವುದನ್ನು ಗಮನಿಸಬೇಕು. ಬಡ ರೈತರ ತಾಳ್ಮೆಯನ್ನು ಪರೀಕ್ಷಿಸುವುದಕ್ಕಲ್ಲ ಸರ್ಕಾರ ಇರುವುದು. ಅವರ ಕಣ್ಣೀರನ್ನು ಒರೆಸುವುದಕ್ಕೆ. ಸಾಂತ್ವನ ಹೇಳುವುದಕ್ಕೆ. ಹತಾಶನಾದ ರೈತ ತಾಲ್ಲೂಕು ಕಚೇರಿಗೆ ತಿರುಗಿ ತಿರುಗಿ ಬೇಸತ್ತು ಅಸಹಾಯಕರಾದ ತಹಶೀಲ್ದಾರರನ್ನೂ ಗುಂಡಿಟ್ಟು ಕೊಂದಿರುವುದನ್ನು ಸರ್ಕಾರ ಒಂದು ಎಚ್ಚರಿಕೆಯ ಗಂಟೆ ಎಂದು ಪರಿಭಾವಿಸಬೇಕು. ತ್ವರಿತಗತಿಯಿಂದ ಅವರ ಬವಣೆಯನ್ನು ನೀಗುವುದು ಸರ್ಕಾರದ ಆದ್ಯತೆಯಾಗಬೇಕು.

ಹಿಂದೆ ಎರಡನೇ ಮಹಾಯುದ್ಧದ ಸಮಯದಲ್ಲಿ ಮತ್ತು ಸ್ವಾತಂತ್ರ ಪ್ರಾಪ್ತವಾದ ಹೊಸದರಲ್ಲಿ ಆಹಾರ ಧಾನ್ಯಗಳ ಕೊರೆತೆಯಿಂದ ಬಡಜನರು ತೊಳಲಾಡುವುದನ್ನು ಗಮನಿಸಿದ ಅಂದಿನ ಸರ್ಕಾರ ಭೂಹೀನ ಬಡರೈತರಿಗೆ ಸರ್ಕಾರಿ ಜಮೀನಿನಲ್ಲಿ ಬೆಳೆ ಬೆಳೆದುಕೊಳ್ಳಲು ಅನುಮತಿ ನೀಡಿತು. ಇದಕ್ಕಾಗಿ ಸರ್ಕಾರ Grow more food campaign ಆರಂಭ ಮಾಡಿತು. ಸಹಸ್ರಾರು ಬಡರೈತರು ಒಂದು ಎಕರೆ, ಎರಡು ಎಕರೆ ಸರ್ಕಾರಿ ಜಮೀನಿನಲ್ಲಿ ವ್ಯವಸಾಯ ಮಾಡಲು ಆರಂಭಿಸಿದರು. ಈ ಮೂಲಕ ಈ ಬಡರೈತರು ತಮ್ಮ ಮನೆಗೆ ಬೇಕಾದಷ್ಟನ್ನು ಬೆಳೆದುಕೊಂಡು ಸ್ವಾವಲಂಬಿಗಳಾದರು. ಆಹಾರ ಧಾನ್ಯವನ್ನು ಜನರಿಗೆ ಒದಗಿಸುವ ಹೊಣೆಗಾರಿಕೆಯಿಂದ ಸ್ವಲ್ಪಮಟ್ಟಿಗೆ ಪಾರಾಗಲು ಈ Grow more food campaign ಯೋಜನೆ ಸಹಕಾರಿಯಾಯಿತು.

ಈ ರೈತರು ಕೂಡ ತಮ್ಮ ಜಮೀನಿಗೆ ಸರ್ಕಾರ ಪಟ್ಟ ಕೊಡುವುದೆಂದು ಅಂದಿನಿಂದ ಕಾಯುತ್ತಿದ್ದಾರೆ. ಸರ್ಕಾರವೇ ಸರ್ಕಾರಿ ಜಮೀನನ್ನು ಆಹಾರಧಾನ್ಯ ಬೆಳೆದುಕೊಳ್ಳುವುದಕ್ಕಾಗಿ ರೈತರಿಗೆ ಕೊಟ್ಟಿರುವುದರಿಂದ ಈ ಜಮೀನು ಅಕ್ರಮ ಸಕ್ರಮದಡಿಯಲ್ಲಿ ಪರಿಶೀಲಿಸಲು ಬರುವುದಿಲ್ಲ.

ಆದ್ದರಿಂದ ಈ ರೈತರು ಬೇರೆ ಜಮೀನನ್ನು ಹೊಂದಿರದಿದ್ದರೆ ಅಂಥವರಿಗೆ ನೇರವಾಗಿ ಪಟ್ಟ ನೀಡಲು ತಹಶೀಲ್ದಾರುಗಳಿಗೆ ಅಧಿಕಾರ ನೀಡಬೇಕು. ಇಂತಹವರು ಸಕ್ರಮ ಅಕ್ರಮದಡಿ ಅರ್ಜಿ ಸಲ್ಲಿಸಿದ್ದರೆ ಅದನ್ನು ಬೇರ್ಪಡಿಸಿ ಈ ರೈತರಿಗೆ ಕೂಡಲೇ ಪಟ್ಟ ಮಾಡಿಕೊಡಬೇಕು.


ಇದನ್ನೂ ಓದಿ: ನೂರರ ನೋಟ: ಪ್ರಜಾಪ್ರಭುತ್ವದ ಕಗ್ಗೊಲೆಯ ಮೂರು ಪ್ರಕರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...