Homeಅಂಕಣಗಳುನೂರರ ನೋಟ: ಸಾಗುವಳಿ ಭೂಮಿಯ ಅಕ್ರಮ ಸಕ್ರಮ ಅರ್ಜಿಗಳು ಶೀಘ್ರ ಇತ್ಯರ್ಥವಾಗಲಿ..

ನೂರರ ನೋಟ: ಸಾಗುವಳಿ ಭೂಮಿಯ ಅಕ್ರಮ ಸಕ್ರಮ ಅರ್ಜಿಗಳು ಶೀಘ್ರ ಇತ್ಯರ್ಥವಾಗಲಿ..

- Advertisement -
- Advertisement -

ಅಕ್ರಮವಾಗಿ ಸರ್ಕಾರಿ ಭೂಮಿ ಸಾಗುವಳಿಯನ್ನು ಮಾಡುತ್ತಿದ್ದ ಒಬ್ಬ ರೈತ ಅಕ್ರಮ ಸಕ್ರಮ ಅರ್ಜಿ ಸಲ್ಲಿಸಿ, ತಹಶೀಲ್ದಾರರ ಕಚೇರಿಗೆ ತಿರುಗಿ ತಿರುಗಿ ಬೇಸತ್ತು ಹತಾಶನಾಗಿ ತಹಶೀಲ್ದಾರರನ್ನೇ ಗುಂಡಿಕ್ಕಿ ಕೊಂದ ಸುದ್ದಿ ಪತ್ರಿಕೆಯಲ್ಲಿ ಪ್ರಕಟವಾಗಿದೆ. ಇದರಲ್ಲಿ ತಹಶೀಲ್ದಾರನ ತಪ್ಪೇನೂ ಇಲ್ಲ. ಅಕ್ರಮ ಸಕ್ರಮ ಜಮೀನನ್ನು ರೈತನ ಹೆಸರಿಗೆ ಪಟ್ಟ ಮಾಡಿಕೊಡಿ ಎಂದು ಜಿಲ್ಲಾಧಿಕಾರಿಗಳಿಗೆ ಸರ್ಕಾರ ಪತ್ರ ಬರೆಯದ ಹೊರತು ಜಿಲ್ಲಾಧಿಕಾರಿಯಾಗಲಿ, ತಹಶೀಲ್ದಾರರಾಗಲಿ ಆ ಕೆಲಸ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ. ಸರ್ಕಾರ ಅಕ್ರಮ ಸಕ್ರಮದ ಅರ್ಜಿಗಳನ್ನು ಕರೆಯಲು ತೀರ್ಮಾನ ತೆಗೆದುಕೊಂಡು 3-4 ವರ್ಷ ಆಗಿದೆ. ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದೊಡನೆ ಅರ್ಜಿ ಸ್ವೀಕರಿಸಲು ಕೊನೆಯ ದಿನವನ್ನು 1-2 ವರ್ಷ ಕಾಲ ವಿಸ್ತರಿಸುತ್ತಾ ಹೋಗುತ್ತದೆ.

ಅಕ್ರಮ ಸಕ್ರಮ ಅರ್ಜಿಗಳನ್ನು ಪರಿಶೀಲಿಸಿ ಅಕ್ರಮವಾಗಿರುವುದನ್ನು ತಿರಸ್ಕರಿಸಲು, ಸಕ್ರಮವಾಗಿರುವುದನ್ನು ಅಂಗೀಕರಿಸಲು ಸರ್ಕಾರ ಜಿಲ್ಲಾಧಿಕಾರಿಗಳಿಗೆ ಅನುಮತಿ ನೀಡಿದೆ. ಇದಕ್ಕಾಗಿ ಪ್ರತಿ ತಾಲ್ಲೂಕಿನಲ್ಲೂ ಒಂದು ಸಮಿತಿಯನ್ನು ಸರ್ಕಾರ ರಚಿಸಿದೆ. ಈ ಸಮಿತಿಯ ಸಂಚಾಲಕರ ಸದಸ್ಯರು ಆಯಾ ತಾಲ್ಲೂಕಿನ ತಹಶೀಲ್ದಾರರು. ಮೂರು ಸದಸ್ಯರ ಈ ಸಮಿತಿಗೆ ಅಲ್ಲಿಯ ಶಾಸಕರು ಮತ್ತು ಒಬ್ಬ ಖಾಸಗಿ ವ್ಯಕ್ತಿ ಸದಸ್ಯರು. ಈ ಸಮಿತಿ ಪ್ರತಿ ಶನಿವಾರ ಸಭೆ ನಡೆಸಿ ಅರ್ಜಿಗಳನ್ನು ಪರಿಶೀಲಿಸಿ ತೀರ್ಮಾನಕ್ಕೆ ಬರುವ ಅಧಿಕಾರ ಹೊಂದಿದೆ. ಆದರೆ ಅನೇಕ ತಾಲ್ಲೂಕುಗಳಲ್ಲಿ ಅಲ್ಲಿಯ ಶಾಸಕರ ಆಲಕ್ಷ್ಯದಿಂದ ಸಮಿತಿಯ ಸಭೆಗಳೇ ನಡೆದಿಲ್ಲ. ಇದನ್ನು ಗಮನಿಸಿದ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಮಂತ್ರಿಗಳಾಗಿದ್ದ ಕಾಗೋಡು ತಿಮ್ಮಪ್ಪನವರು ರೋಸಿ ಹೋಗಿ ಶನಿವಾರದ ಸಭೆಗಳಿಗೆ ಇಬ್ಬರು ಸದಸ್ಯರು ಹಾಜರಾದರೂ ಸಾಕು, ಸಭೆ ನಡೆಸಿ ಎಂದು ತಹಶೀಲ್ದಾರರಿಗೆ ಪತ್ರಗಳನ್ನು ಬರೆದರು. ಅದೂ ಕಾರ್ಯಗತವಾಗಲಿಲ್ಲ. ಈ ಜಮೀನನ್ನೇ ನಂಬಿಕೊಂಡು ಜೀವನ ನಡೆಸುತ್ತಿರುವ ಬಡ ರೈತರ ಕೆಲಸವನ್ನು ಆದ್ಯತೆಯಿಂದ ಮಾಡಿಕೊಡಬೇಕು ಎಂದು ಈ ಶಾಸಕರಿಗೆ ಅನ್ನಿಸಲೇ ಇಲ್ಲ, ಇಂದಿಗೂ ಈ ಪರಿಸ್ಥಿತಿ ಮುಂದುವರೆಯುತ್ತಿದೆ. ಬಡ ರೈತರು ತಾವು ಹಿಡಿದಿರುವ ಸರ್ಕಾರಿ ಜಮೀನನ್ನು ತಮ್ಮ ಹೆಸರಿಗೆ ಪಟ್ಟ ಮಾಡಿಕೊಡುತ್ತಾರೆಂದು ತಾಲ್ಲೂಕು ಆಫೀಸಿಗೆ ಅಲೆದಾಡಿ ಹತಾಶರಾಗಿದ್ದಾರೆ. ಹೊಟ್ಟೆ ತುಂಬಿದ ಶಾಸಕರಿಗೆ ಈ ಬಡ ಜನರ ಬವಣೆ ಗೊತ್ತಿದ್ದರೂ ಅವರನ್ನು ಆಲಕ್ಷ್ಯ ಮಾಡಿದ್ದಾರೆ. ಇದು ಬಡವರ ಆಕ್ರೋಶಕ್ಕೆ ಕಾರಣವಾಗಿದೆ.

ಕೆಲವು ತಾಲ್ಲೂಕುಗಳಲ್ಲಿ ಶಾಸಕರು ಮುತುವರ್ಜಿವಹಿಸಿ ಸಭೆಗಳನ್ನು ನಡೆಸಿ ಅಕ್ರಮ ಸಕ್ರಮ ಅರ್ಜಿಗಳನ್ನು ಪರಿಶೀಲಿಸಿ ಅನರ್ಹವಾದದ್ದು ಯಾವುದು, ಅರ್ಹವಾದದ್ದು ಯಾವುದು ಎಂದು ಪರಿಶೀಲಿಸಿ ಪಟ್ಟ ಮಾಡಿದ್ದಾರೆ. ನನಗೆ ತಿಳಿದಂತೆ ಗೌರಿಬಿದನೂರಿನ ಶಾಸಕರು ಅರ್ಹರಾದವರಿಗೆ ಪಟ್ಟ ಕೊಡಿಸಿದ್ದಾರೆ ಅಲೆಮಾರಿ ಹಕ್ಕಿಪಿಕ್ಕರಿಗೆ ಪಟ್ಟ ಹಂಚುವ ಸಮಾರಂಭಕ್ಕೆ ಶಾಸಕರು ನನ್ನನ್ನು ಆಹ್ವಾನಿಸಿದ್ದರು. ನಾನು ಹೋಗಿದ್ದೆ.

PC : Patrika

ಈಗ ನನಗೆ ತಿಳಿದುಬಂದಿರುವಂತೆ ಕೆಲವು ತಾಲ್ಲೂಕುಗಳಲ್ಲಿ ಒಟ್ಟು 4 ಲಕ್ಷ ಅರ್ಜಿಗಳು ಬಂದಿದ್ದರೂ ಅವುಗಳ ಪೈಕಿ ಸಮಿತಿ ಎರಡೂವರೆ ಲಕ್ಷ ಅರ್ಜಿಗಳನ್ನು ತಿರಸ್ಕರಿಸಿ ಒಂದೂವರೆ ಲಕ್ಷ ಅರ್ಜಿದಾರರಿಗೆ ಪಟ್ಟ ಮಾಡಿ ಕೊಡಬಹುದೆಂದು ಶಿಫಾರಸು ಮಾಡಿದೆ.

ಜಾತಕ ಪಕ್ಷಿಗಳಂತೆ ಪಟ್ಟಕ್ಕಾಗಿ ಕಾಯುತ್ತಿರುವ ಈ ಬಡ ರೈತರಿಗೆ, ತೀರ್ಮಾನಗೊಂಡ ಈ ಒಂದೂವರೆ ಲಕ್ಷ ಅರ್ಹ ಅರ್ಜಿದಾರರಿಗೆ ಪಟ್ಟವನ್ನು ಕೂಡಲೇ ಹಂಚಲು ಸರ್ಕಾರ ಸುತ್ತೋಲೆ ಹೊರಡಿಸಬೇಕು. ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಈ ಅರ್ಹ ಅರ್ಜಿದಾರರಿಗೆ ಪಟ್ಟ ಮಾಡಿಕೊಡಲು ಅನುಮತಿ ನೀಡಬೇಕು. ಈ ಪ್ರಕ್ರಿಯೆ ಕೂಡಲೇ ಕಾರ್ಯಗತಗೊಳ್ಳಲು ಸೂಚಿಸಿ, 6 ತಿಂಗಳೊಳಗೆ ಈ ಒಂದೂವರೆ ಲಕ್ಷ ಅರ್ಹ ಅರ್ಜಿದಾರರಿಗೆ ಪಟ್ಟ ದೊರೆಯುವಂತೆ ಸುಗ್ರೀವಾಜ್ಞೆ ಹೊರಡಿಸಬೇಕು.

ಸರ್ಕಾರ ಬಡ ರೈತರ ಕಾತರವನ್ನು ಅರ್ಥಮಾಡಿಕೊಳ್ಳಬೇಕು. ಈ ರೈತರು ತಹಶೀಲ್ದಾರರ ಕಚೇರಿಗೆ ನೂರಾರು ಸಲ ಹೋಗಿ ಹತಾಶರಾಗಿ ಹಿಂದಿರುಗಿರುವುದನ್ನು ಗಮನಿಸಬೇಕು. ಬಡ ರೈತರ ತಾಳ್ಮೆಯನ್ನು ಪರೀಕ್ಷಿಸುವುದಕ್ಕಲ್ಲ ಸರ್ಕಾರ ಇರುವುದು. ಅವರ ಕಣ್ಣೀರನ್ನು ಒರೆಸುವುದಕ್ಕೆ. ಸಾಂತ್ವನ ಹೇಳುವುದಕ್ಕೆ. ಹತಾಶನಾದ ರೈತ ತಾಲ್ಲೂಕು ಕಚೇರಿಗೆ ತಿರುಗಿ ತಿರುಗಿ ಬೇಸತ್ತು ಅಸಹಾಯಕರಾದ ತಹಶೀಲ್ದಾರರನ್ನೂ ಗುಂಡಿಟ್ಟು ಕೊಂದಿರುವುದನ್ನು ಸರ್ಕಾರ ಒಂದು ಎಚ್ಚರಿಕೆಯ ಗಂಟೆ ಎಂದು ಪರಿಭಾವಿಸಬೇಕು. ತ್ವರಿತಗತಿಯಿಂದ ಅವರ ಬವಣೆಯನ್ನು ನೀಗುವುದು ಸರ್ಕಾರದ ಆದ್ಯತೆಯಾಗಬೇಕು.

ಹಿಂದೆ ಎರಡನೇ ಮಹಾಯುದ್ಧದ ಸಮಯದಲ್ಲಿ ಮತ್ತು ಸ್ವಾತಂತ್ರ ಪ್ರಾಪ್ತವಾದ ಹೊಸದರಲ್ಲಿ ಆಹಾರ ಧಾನ್ಯಗಳ ಕೊರೆತೆಯಿಂದ ಬಡಜನರು ತೊಳಲಾಡುವುದನ್ನು ಗಮನಿಸಿದ ಅಂದಿನ ಸರ್ಕಾರ ಭೂಹೀನ ಬಡರೈತರಿಗೆ ಸರ್ಕಾರಿ ಜಮೀನಿನಲ್ಲಿ ಬೆಳೆ ಬೆಳೆದುಕೊಳ್ಳಲು ಅನುಮತಿ ನೀಡಿತು. ಇದಕ್ಕಾಗಿ ಸರ್ಕಾರ Grow more food campaign ಆರಂಭ ಮಾಡಿತು. ಸಹಸ್ರಾರು ಬಡರೈತರು ಒಂದು ಎಕರೆ, ಎರಡು ಎಕರೆ ಸರ್ಕಾರಿ ಜಮೀನಿನಲ್ಲಿ ವ್ಯವಸಾಯ ಮಾಡಲು ಆರಂಭಿಸಿದರು. ಈ ಮೂಲಕ ಈ ಬಡರೈತರು ತಮ್ಮ ಮನೆಗೆ ಬೇಕಾದಷ್ಟನ್ನು ಬೆಳೆದುಕೊಂಡು ಸ್ವಾವಲಂಬಿಗಳಾದರು. ಆಹಾರ ಧಾನ್ಯವನ್ನು ಜನರಿಗೆ ಒದಗಿಸುವ ಹೊಣೆಗಾರಿಕೆಯಿಂದ ಸ್ವಲ್ಪಮಟ್ಟಿಗೆ ಪಾರಾಗಲು ಈ Grow more food campaign ಯೋಜನೆ ಸಹಕಾರಿಯಾಯಿತು.

ಈ ರೈತರು ಕೂಡ ತಮ್ಮ ಜಮೀನಿಗೆ ಸರ್ಕಾರ ಪಟ್ಟ ಕೊಡುವುದೆಂದು ಅಂದಿನಿಂದ ಕಾಯುತ್ತಿದ್ದಾರೆ. ಸರ್ಕಾರವೇ ಸರ್ಕಾರಿ ಜಮೀನನ್ನು ಆಹಾರಧಾನ್ಯ ಬೆಳೆದುಕೊಳ್ಳುವುದಕ್ಕಾಗಿ ರೈತರಿಗೆ ಕೊಟ್ಟಿರುವುದರಿಂದ ಈ ಜಮೀನು ಅಕ್ರಮ ಸಕ್ರಮದಡಿಯಲ್ಲಿ ಪರಿಶೀಲಿಸಲು ಬರುವುದಿಲ್ಲ.

ಆದ್ದರಿಂದ ಈ ರೈತರು ಬೇರೆ ಜಮೀನನ್ನು ಹೊಂದಿರದಿದ್ದರೆ ಅಂಥವರಿಗೆ ನೇರವಾಗಿ ಪಟ್ಟ ನೀಡಲು ತಹಶೀಲ್ದಾರುಗಳಿಗೆ ಅಧಿಕಾರ ನೀಡಬೇಕು. ಇಂತಹವರು ಸಕ್ರಮ ಅಕ್ರಮದಡಿ ಅರ್ಜಿ ಸಲ್ಲಿಸಿದ್ದರೆ ಅದನ್ನು ಬೇರ್ಪಡಿಸಿ ಈ ರೈತರಿಗೆ ಕೂಡಲೇ ಪಟ್ಟ ಮಾಡಿಕೊಡಬೇಕು.


ಇದನ್ನೂ ಓದಿ: ನೂರರ ನೋಟ: ಪ್ರಜಾಪ್ರಭುತ್ವದ ಕಗ್ಗೊಲೆಯ ಮೂರು ಪ್ರಕರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...