Homeಅಂಕಣಗಳುನೂರರ ನೋಟ: ಸಾಗುವಳಿ ಭೂಮಿಯ ಅಕ್ರಮ ಸಕ್ರಮ ಅರ್ಜಿಗಳು ಶೀಘ್ರ ಇತ್ಯರ್ಥವಾಗಲಿ..

ನೂರರ ನೋಟ: ಸಾಗುವಳಿ ಭೂಮಿಯ ಅಕ್ರಮ ಸಕ್ರಮ ಅರ್ಜಿಗಳು ಶೀಘ್ರ ಇತ್ಯರ್ಥವಾಗಲಿ..

- Advertisement -
- Advertisement -

ಅಕ್ರಮವಾಗಿ ಸರ್ಕಾರಿ ಭೂಮಿ ಸಾಗುವಳಿಯನ್ನು ಮಾಡುತ್ತಿದ್ದ ಒಬ್ಬ ರೈತ ಅಕ್ರಮ ಸಕ್ರಮ ಅರ್ಜಿ ಸಲ್ಲಿಸಿ, ತಹಶೀಲ್ದಾರರ ಕಚೇರಿಗೆ ತಿರುಗಿ ತಿರುಗಿ ಬೇಸತ್ತು ಹತಾಶನಾಗಿ ತಹಶೀಲ್ದಾರರನ್ನೇ ಗುಂಡಿಕ್ಕಿ ಕೊಂದ ಸುದ್ದಿ ಪತ್ರಿಕೆಯಲ್ಲಿ ಪ್ರಕಟವಾಗಿದೆ. ಇದರಲ್ಲಿ ತಹಶೀಲ್ದಾರನ ತಪ್ಪೇನೂ ಇಲ್ಲ. ಅಕ್ರಮ ಸಕ್ರಮ ಜಮೀನನ್ನು ರೈತನ ಹೆಸರಿಗೆ ಪಟ್ಟ ಮಾಡಿಕೊಡಿ ಎಂದು ಜಿಲ್ಲಾಧಿಕಾರಿಗಳಿಗೆ ಸರ್ಕಾರ ಪತ್ರ ಬರೆಯದ ಹೊರತು ಜಿಲ್ಲಾಧಿಕಾರಿಯಾಗಲಿ, ತಹಶೀಲ್ದಾರರಾಗಲಿ ಆ ಕೆಲಸ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ. ಸರ್ಕಾರ ಅಕ್ರಮ ಸಕ್ರಮದ ಅರ್ಜಿಗಳನ್ನು ಕರೆಯಲು ತೀರ್ಮಾನ ತೆಗೆದುಕೊಂಡು 3-4 ವರ್ಷ ಆಗಿದೆ. ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದೊಡನೆ ಅರ್ಜಿ ಸ್ವೀಕರಿಸಲು ಕೊನೆಯ ದಿನವನ್ನು 1-2 ವರ್ಷ ಕಾಲ ವಿಸ್ತರಿಸುತ್ತಾ ಹೋಗುತ್ತದೆ.

ಅಕ್ರಮ ಸಕ್ರಮ ಅರ್ಜಿಗಳನ್ನು ಪರಿಶೀಲಿಸಿ ಅಕ್ರಮವಾಗಿರುವುದನ್ನು ತಿರಸ್ಕರಿಸಲು, ಸಕ್ರಮವಾಗಿರುವುದನ್ನು ಅಂಗೀಕರಿಸಲು ಸರ್ಕಾರ ಜಿಲ್ಲಾಧಿಕಾರಿಗಳಿಗೆ ಅನುಮತಿ ನೀಡಿದೆ. ಇದಕ್ಕಾಗಿ ಪ್ರತಿ ತಾಲ್ಲೂಕಿನಲ್ಲೂ ಒಂದು ಸಮಿತಿಯನ್ನು ಸರ್ಕಾರ ರಚಿಸಿದೆ. ಈ ಸಮಿತಿಯ ಸಂಚಾಲಕರ ಸದಸ್ಯರು ಆಯಾ ತಾಲ್ಲೂಕಿನ ತಹಶೀಲ್ದಾರರು. ಮೂರು ಸದಸ್ಯರ ಈ ಸಮಿತಿಗೆ ಅಲ್ಲಿಯ ಶಾಸಕರು ಮತ್ತು ಒಬ್ಬ ಖಾಸಗಿ ವ್ಯಕ್ತಿ ಸದಸ್ಯರು. ಈ ಸಮಿತಿ ಪ್ರತಿ ಶನಿವಾರ ಸಭೆ ನಡೆಸಿ ಅರ್ಜಿಗಳನ್ನು ಪರಿಶೀಲಿಸಿ ತೀರ್ಮಾನಕ್ಕೆ ಬರುವ ಅಧಿಕಾರ ಹೊಂದಿದೆ. ಆದರೆ ಅನೇಕ ತಾಲ್ಲೂಕುಗಳಲ್ಲಿ ಅಲ್ಲಿಯ ಶಾಸಕರ ಆಲಕ್ಷ್ಯದಿಂದ ಸಮಿತಿಯ ಸಭೆಗಳೇ ನಡೆದಿಲ್ಲ. ಇದನ್ನು ಗಮನಿಸಿದ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಮಂತ್ರಿಗಳಾಗಿದ್ದ ಕಾಗೋಡು ತಿಮ್ಮಪ್ಪನವರು ರೋಸಿ ಹೋಗಿ ಶನಿವಾರದ ಸಭೆಗಳಿಗೆ ಇಬ್ಬರು ಸದಸ್ಯರು ಹಾಜರಾದರೂ ಸಾಕು, ಸಭೆ ನಡೆಸಿ ಎಂದು ತಹಶೀಲ್ದಾರರಿಗೆ ಪತ್ರಗಳನ್ನು ಬರೆದರು. ಅದೂ ಕಾರ್ಯಗತವಾಗಲಿಲ್ಲ. ಈ ಜಮೀನನ್ನೇ ನಂಬಿಕೊಂಡು ಜೀವನ ನಡೆಸುತ್ತಿರುವ ಬಡ ರೈತರ ಕೆಲಸವನ್ನು ಆದ್ಯತೆಯಿಂದ ಮಾಡಿಕೊಡಬೇಕು ಎಂದು ಈ ಶಾಸಕರಿಗೆ ಅನ್ನಿಸಲೇ ಇಲ್ಲ, ಇಂದಿಗೂ ಈ ಪರಿಸ್ಥಿತಿ ಮುಂದುವರೆಯುತ್ತಿದೆ. ಬಡ ರೈತರು ತಾವು ಹಿಡಿದಿರುವ ಸರ್ಕಾರಿ ಜಮೀನನ್ನು ತಮ್ಮ ಹೆಸರಿಗೆ ಪಟ್ಟ ಮಾಡಿಕೊಡುತ್ತಾರೆಂದು ತಾಲ್ಲೂಕು ಆಫೀಸಿಗೆ ಅಲೆದಾಡಿ ಹತಾಶರಾಗಿದ್ದಾರೆ. ಹೊಟ್ಟೆ ತುಂಬಿದ ಶಾಸಕರಿಗೆ ಈ ಬಡ ಜನರ ಬವಣೆ ಗೊತ್ತಿದ್ದರೂ ಅವರನ್ನು ಆಲಕ್ಷ್ಯ ಮಾಡಿದ್ದಾರೆ. ಇದು ಬಡವರ ಆಕ್ರೋಶಕ್ಕೆ ಕಾರಣವಾಗಿದೆ.

ಕೆಲವು ತಾಲ್ಲೂಕುಗಳಲ್ಲಿ ಶಾಸಕರು ಮುತುವರ್ಜಿವಹಿಸಿ ಸಭೆಗಳನ್ನು ನಡೆಸಿ ಅಕ್ರಮ ಸಕ್ರಮ ಅರ್ಜಿಗಳನ್ನು ಪರಿಶೀಲಿಸಿ ಅನರ್ಹವಾದದ್ದು ಯಾವುದು, ಅರ್ಹವಾದದ್ದು ಯಾವುದು ಎಂದು ಪರಿಶೀಲಿಸಿ ಪಟ್ಟ ಮಾಡಿದ್ದಾರೆ. ನನಗೆ ತಿಳಿದಂತೆ ಗೌರಿಬಿದನೂರಿನ ಶಾಸಕರು ಅರ್ಹರಾದವರಿಗೆ ಪಟ್ಟ ಕೊಡಿಸಿದ್ದಾರೆ ಅಲೆಮಾರಿ ಹಕ್ಕಿಪಿಕ್ಕರಿಗೆ ಪಟ್ಟ ಹಂಚುವ ಸಮಾರಂಭಕ್ಕೆ ಶಾಸಕರು ನನ್ನನ್ನು ಆಹ್ವಾನಿಸಿದ್ದರು. ನಾನು ಹೋಗಿದ್ದೆ.

PC : Patrika

ಈಗ ನನಗೆ ತಿಳಿದುಬಂದಿರುವಂತೆ ಕೆಲವು ತಾಲ್ಲೂಕುಗಳಲ್ಲಿ ಒಟ್ಟು 4 ಲಕ್ಷ ಅರ್ಜಿಗಳು ಬಂದಿದ್ದರೂ ಅವುಗಳ ಪೈಕಿ ಸಮಿತಿ ಎರಡೂವರೆ ಲಕ್ಷ ಅರ್ಜಿಗಳನ್ನು ತಿರಸ್ಕರಿಸಿ ಒಂದೂವರೆ ಲಕ್ಷ ಅರ್ಜಿದಾರರಿಗೆ ಪಟ್ಟ ಮಾಡಿ ಕೊಡಬಹುದೆಂದು ಶಿಫಾರಸು ಮಾಡಿದೆ.

ಜಾತಕ ಪಕ್ಷಿಗಳಂತೆ ಪಟ್ಟಕ್ಕಾಗಿ ಕಾಯುತ್ತಿರುವ ಈ ಬಡ ರೈತರಿಗೆ, ತೀರ್ಮಾನಗೊಂಡ ಈ ಒಂದೂವರೆ ಲಕ್ಷ ಅರ್ಹ ಅರ್ಜಿದಾರರಿಗೆ ಪಟ್ಟವನ್ನು ಕೂಡಲೇ ಹಂಚಲು ಸರ್ಕಾರ ಸುತ್ತೋಲೆ ಹೊರಡಿಸಬೇಕು. ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಈ ಅರ್ಹ ಅರ್ಜಿದಾರರಿಗೆ ಪಟ್ಟ ಮಾಡಿಕೊಡಲು ಅನುಮತಿ ನೀಡಬೇಕು. ಈ ಪ್ರಕ್ರಿಯೆ ಕೂಡಲೇ ಕಾರ್ಯಗತಗೊಳ್ಳಲು ಸೂಚಿಸಿ, 6 ತಿಂಗಳೊಳಗೆ ಈ ಒಂದೂವರೆ ಲಕ್ಷ ಅರ್ಹ ಅರ್ಜಿದಾರರಿಗೆ ಪಟ್ಟ ದೊರೆಯುವಂತೆ ಸುಗ್ರೀವಾಜ್ಞೆ ಹೊರಡಿಸಬೇಕು.

ಸರ್ಕಾರ ಬಡ ರೈತರ ಕಾತರವನ್ನು ಅರ್ಥಮಾಡಿಕೊಳ್ಳಬೇಕು. ಈ ರೈತರು ತಹಶೀಲ್ದಾರರ ಕಚೇರಿಗೆ ನೂರಾರು ಸಲ ಹೋಗಿ ಹತಾಶರಾಗಿ ಹಿಂದಿರುಗಿರುವುದನ್ನು ಗಮನಿಸಬೇಕು. ಬಡ ರೈತರ ತಾಳ್ಮೆಯನ್ನು ಪರೀಕ್ಷಿಸುವುದಕ್ಕಲ್ಲ ಸರ್ಕಾರ ಇರುವುದು. ಅವರ ಕಣ್ಣೀರನ್ನು ಒರೆಸುವುದಕ್ಕೆ. ಸಾಂತ್ವನ ಹೇಳುವುದಕ್ಕೆ. ಹತಾಶನಾದ ರೈತ ತಾಲ್ಲೂಕು ಕಚೇರಿಗೆ ತಿರುಗಿ ತಿರುಗಿ ಬೇಸತ್ತು ಅಸಹಾಯಕರಾದ ತಹಶೀಲ್ದಾರರನ್ನೂ ಗುಂಡಿಟ್ಟು ಕೊಂದಿರುವುದನ್ನು ಸರ್ಕಾರ ಒಂದು ಎಚ್ಚರಿಕೆಯ ಗಂಟೆ ಎಂದು ಪರಿಭಾವಿಸಬೇಕು. ತ್ವರಿತಗತಿಯಿಂದ ಅವರ ಬವಣೆಯನ್ನು ನೀಗುವುದು ಸರ್ಕಾರದ ಆದ್ಯತೆಯಾಗಬೇಕು.

ಹಿಂದೆ ಎರಡನೇ ಮಹಾಯುದ್ಧದ ಸಮಯದಲ್ಲಿ ಮತ್ತು ಸ್ವಾತಂತ್ರ ಪ್ರಾಪ್ತವಾದ ಹೊಸದರಲ್ಲಿ ಆಹಾರ ಧಾನ್ಯಗಳ ಕೊರೆತೆಯಿಂದ ಬಡಜನರು ತೊಳಲಾಡುವುದನ್ನು ಗಮನಿಸಿದ ಅಂದಿನ ಸರ್ಕಾರ ಭೂಹೀನ ಬಡರೈತರಿಗೆ ಸರ್ಕಾರಿ ಜಮೀನಿನಲ್ಲಿ ಬೆಳೆ ಬೆಳೆದುಕೊಳ್ಳಲು ಅನುಮತಿ ನೀಡಿತು. ಇದಕ್ಕಾಗಿ ಸರ್ಕಾರ Grow more food campaign ಆರಂಭ ಮಾಡಿತು. ಸಹಸ್ರಾರು ಬಡರೈತರು ಒಂದು ಎಕರೆ, ಎರಡು ಎಕರೆ ಸರ್ಕಾರಿ ಜಮೀನಿನಲ್ಲಿ ವ್ಯವಸಾಯ ಮಾಡಲು ಆರಂಭಿಸಿದರು. ಈ ಮೂಲಕ ಈ ಬಡರೈತರು ತಮ್ಮ ಮನೆಗೆ ಬೇಕಾದಷ್ಟನ್ನು ಬೆಳೆದುಕೊಂಡು ಸ್ವಾವಲಂಬಿಗಳಾದರು. ಆಹಾರ ಧಾನ್ಯವನ್ನು ಜನರಿಗೆ ಒದಗಿಸುವ ಹೊಣೆಗಾರಿಕೆಯಿಂದ ಸ್ವಲ್ಪಮಟ್ಟಿಗೆ ಪಾರಾಗಲು ಈ Grow more food campaign ಯೋಜನೆ ಸಹಕಾರಿಯಾಯಿತು.

ಈ ರೈತರು ಕೂಡ ತಮ್ಮ ಜಮೀನಿಗೆ ಸರ್ಕಾರ ಪಟ್ಟ ಕೊಡುವುದೆಂದು ಅಂದಿನಿಂದ ಕಾಯುತ್ತಿದ್ದಾರೆ. ಸರ್ಕಾರವೇ ಸರ್ಕಾರಿ ಜಮೀನನ್ನು ಆಹಾರಧಾನ್ಯ ಬೆಳೆದುಕೊಳ್ಳುವುದಕ್ಕಾಗಿ ರೈತರಿಗೆ ಕೊಟ್ಟಿರುವುದರಿಂದ ಈ ಜಮೀನು ಅಕ್ರಮ ಸಕ್ರಮದಡಿಯಲ್ಲಿ ಪರಿಶೀಲಿಸಲು ಬರುವುದಿಲ್ಲ.

ಆದ್ದರಿಂದ ಈ ರೈತರು ಬೇರೆ ಜಮೀನನ್ನು ಹೊಂದಿರದಿದ್ದರೆ ಅಂಥವರಿಗೆ ನೇರವಾಗಿ ಪಟ್ಟ ನೀಡಲು ತಹಶೀಲ್ದಾರುಗಳಿಗೆ ಅಧಿಕಾರ ನೀಡಬೇಕು. ಇಂತಹವರು ಸಕ್ರಮ ಅಕ್ರಮದಡಿ ಅರ್ಜಿ ಸಲ್ಲಿಸಿದ್ದರೆ ಅದನ್ನು ಬೇರ್ಪಡಿಸಿ ಈ ರೈತರಿಗೆ ಕೂಡಲೇ ಪಟ್ಟ ಮಾಡಿಕೊಡಬೇಕು.


ಇದನ್ನೂ ಓದಿ: ನೂರರ ನೋಟ: ಪ್ರಜಾಪ್ರಭುತ್ವದ ಕಗ್ಗೊಲೆಯ ಮೂರು ಪ್ರಕರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....