Homeಅಂಕಣಗಳುನೂರರ ನೋಟ: ಸಾಗುವಳಿ ಭೂಮಿಯ ಅಕ್ರಮ ಸಕ್ರಮ ಅರ್ಜಿಗಳು ಶೀಘ್ರ ಇತ್ಯರ್ಥವಾಗಲಿ..

ನೂರರ ನೋಟ: ಸಾಗುವಳಿ ಭೂಮಿಯ ಅಕ್ರಮ ಸಕ್ರಮ ಅರ್ಜಿಗಳು ಶೀಘ್ರ ಇತ್ಯರ್ಥವಾಗಲಿ..

- Advertisement -
- Advertisement -

ಅಕ್ರಮವಾಗಿ ಸರ್ಕಾರಿ ಭೂಮಿ ಸಾಗುವಳಿಯನ್ನು ಮಾಡುತ್ತಿದ್ದ ಒಬ್ಬ ರೈತ ಅಕ್ರಮ ಸಕ್ರಮ ಅರ್ಜಿ ಸಲ್ಲಿಸಿ, ತಹಶೀಲ್ದಾರರ ಕಚೇರಿಗೆ ತಿರುಗಿ ತಿರುಗಿ ಬೇಸತ್ತು ಹತಾಶನಾಗಿ ತಹಶೀಲ್ದಾರರನ್ನೇ ಗುಂಡಿಕ್ಕಿ ಕೊಂದ ಸುದ್ದಿ ಪತ್ರಿಕೆಯಲ್ಲಿ ಪ್ರಕಟವಾಗಿದೆ. ಇದರಲ್ಲಿ ತಹಶೀಲ್ದಾರನ ತಪ್ಪೇನೂ ಇಲ್ಲ. ಅಕ್ರಮ ಸಕ್ರಮ ಜಮೀನನ್ನು ರೈತನ ಹೆಸರಿಗೆ ಪಟ್ಟ ಮಾಡಿಕೊಡಿ ಎಂದು ಜಿಲ್ಲಾಧಿಕಾರಿಗಳಿಗೆ ಸರ್ಕಾರ ಪತ್ರ ಬರೆಯದ ಹೊರತು ಜಿಲ್ಲಾಧಿಕಾರಿಯಾಗಲಿ, ತಹಶೀಲ್ದಾರರಾಗಲಿ ಆ ಕೆಲಸ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ. ಸರ್ಕಾರ ಅಕ್ರಮ ಸಕ್ರಮದ ಅರ್ಜಿಗಳನ್ನು ಕರೆಯಲು ತೀರ್ಮಾನ ತೆಗೆದುಕೊಂಡು 3-4 ವರ್ಷ ಆಗಿದೆ. ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದೊಡನೆ ಅರ್ಜಿ ಸ್ವೀಕರಿಸಲು ಕೊನೆಯ ದಿನವನ್ನು 1-2 ವರ್ಷ ಕಾಲ ವಿಸ್ತರಿಸುತ್ತಾ ಹೋಗುತ್ತದೆ.

ಅಕ್ರಮ ಸಕ್ರಮ ಅರ್ಜಿಗಳನ್ನು ಪರಿಶೀಲಿಸಿ ಅಕ್ರಮವಾಗಿರುವುದನ್ನು ತಿರಸ್ಕರಿಸಲು, ಸಕ್ರಮವಾಗಿರುವುದನ್ನು ಅಂಗೀಕರಿಸಲು ಸರ್ಕಾರ ಜಿಲ್ಲಾಧಿಕಾರಿಗಳಿಗೆ ಅನುಮತಿ ನೀಡಿದೆ. ಇದಕ್ಕಾಗಿ ಪ್ರತಿ ತಾಲ್ಲೂಕಿನಲ್ಲೂ ಒಂದು ಸಮಿತಿಯನ್ನು ಸರ್ಕಾರ ರಚಿಸಿದೆ. ಈ ಸಮಿತಿಯ ಸಂಚಾಲಕರ ಸದಸ್ಯರು ಆಯಾ ತಾಲ್ಲೂಕಿನ ತಹಶೀಲ್ದಾರರು. ಮೂರು ಸದಸ್ಯರ ಈ ಸಮಿತಿಗೆ ಅಲ್ಲಿಯ ಶಾಸಕರು ಮತ್ತು ಒಬ್ಬ ಖಾಸಗಿ ವ್ಯಕ್ತಿ ಸದಸ್ಯರು. ಈ ಸಮಿತಿ ಪ್ರತಿ ಶನಿವಾರ ಸಭೆ ನಡೆಸಿ ಅರ್ಜಿಗಳನ್ನು ಪರಿಶೀಲಿಸಿ ತೀರ್ಮಾನಕ್ಕೆ ಬರುವ ಅಧಿಕಾರ ಹೊಂದಿದೆ. ಆದರೆ ಅನೇಕ ತಾಲ್ಲೂಕುಗಳಲ್ಲಿ ಅಲ್ಲಿಯ ಶಾಸಕರ ಆಲಕ್ಷ್ಯದಿಂದ ಸಮಿತಿಯ ಸಭೆಗಳೇ ನಡೆದಿಲ್ಲ. ಇದನ್ನು ಗಮನಿಸಿದ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಮಂತ್ರಿಗಳಾಗಿದ್ದ ಕಾಗೋಡು ತಿಮ್ಮಪ್ಪನವರು ರೋಸಿ ಹೋಗಿ ಶನಿವಾರದ ಸಭೆಗಳಿಗೆ ಇಬ್ಬರು ಸದಸ್ಯರು ಹಾಜರಾದರೂ ಸಾಕು, ಸಭೆ ನಡೆಸಿ ಎಂದು ತಹಶೀಲ್ದಾರರಿಗೆ ಪತ್ರಗಳನ್ನು ಬರೆದರು. ಅದೂ ಕಾರ್ಯಗತವಾಗಲಿಲ್ಲ. ಈ ಜಮೀನನ್ನೇ ನಂಬಿಕೊಂಡು ಜೀವನ ನಡೆಸುತ್ತಿರುವ ಬಡ ರೈತರ ಕೆಲಸವನ್ನು ಆದ್ಯತೆಯಿಂದ ಮಾಡಿಕೊಡಬೇಕು ಎಂದು ಈ ಶಾಸಕರಿಗೆ ಅನ್ನಿಸಲೇ ಇಲ್ಲ, ಇಂದಿಗೂ ಈ ಪರಿಸ್ಥಿತಿ ಮುಂದುವರೆಯುತ್ತಿದೆ. ಬಡ ರೈತರು ತಾವು ಹಿಡಿದಿರುವ ಸರ್ಕಾರಿ ಜಮೀನನ್ನು ತಮ್ಮ ಹೆಸರಿಗೆ ಪಟ್ಟ ಮಾಡಿಕೊಡುತ್ತಾರೆಂದು ತಾಲ್ಲೂಕು ಆಫೀಸಿಗೆ ಅಲೆದಾಡಿ ಹತಾಶರಾಗಿದ್ದಾರೆ. ಹೊಟ್ಟೆ ತುಂಬಿದ ಶಾಸಕರಿಗೆ ಈ ಬಡ ಜನರ ಬವಣೆ ಗೊತ್ತಿದ್ದರೂ ಅವರನ್ನು ಆಲಕ್ಷ್ಯ ಮಾಡಿದ್ದಾರೆ. ಇದು ಬಡವರ ಆಕ್ರೋಶಕ್ಕೆ ಕಾರಣವಾಗಿದೆ.

ಕೆಲವು ತಾಲ್ಲೂಕುಗಳಲ್ಲಿ ಶಾಸಕರು ಮುತುವರ್ಜಿವಹಿಸಿ ಸಭೆಗಳನ್ನು ನಡೆಸಿ ಅಕ್ರಮ ಸಕ್ರಮ ಅರ್ಜಿಗಳನ್ನು ಪರಿಶೀಲಿಸಿ ಅನರ್ಹವಾದದ್ದು ಯಾವುದು, ಅರ್ಹವಾದದ್ದು ಯಾವುದು ಎಂದು ಪರಿಶೀಲಿಸಿ ಪಟ್ಟ ಮಾಡಿದ್ದಾರೆ. ನನಗೆ ತಿಳಿದಂತೆ ಗೌರಿಬಿದನೂರಿನ ಶಾಸಕರು ಅರ್ಹರಾದವರಿಗೆ ಪಟ್ಟ ಕೊಡಿಸಿದ್ದಾರೆ ಅಲೆಮಾರಿ ಹಕ್ಕಿಪಿಕ್ಕರಿಗೆ ಪಟ್ಟ ಹಂಚುವ ಸಮಾರಂಭಕ್ಕೆ ಶಾಸಕರು ನನ್ನನ್ನು ಆಹ್ವಾನಿಸಿದ್ದರು. ನಾನು ಹೋಗಿದ್ದೆ.

PC : Patrika

ಈಗ ನನಗೆ ತಿಳಿದುಬಂದಿರುವಂತೆ ಕೆಲವು ತಾಲ್ಲೂಕುಗಳಲ್ಲಿ ಒಟ್ಟು 4 ಲಕ್ಷ ಅರ್ಜಿಗಳು ಬಂದಿದ್ದರೂ ಅವುಗಳ ಪೈಕಿ ಸಮಿತಿ ಎರಡೂವರೆ ಲಕ್ಷ ಅರ್ಜಿಗಳನ್ನು ತಿರಸ್ಕರಿಸಿ ಒಂದೂವರೆ ಲಕ್ಷ ಅರ್ಜಿದಾರರಿಗೆ ಪಟ್ಟ ಮಾಡಿ ಕೊಡಬಹುದೆಂದು ಶಿಫಾರಸು ಮಾಡಿದೆ.

ಜಾತಕ ಪಕ್ಷಿಗಳಂತೆ ಪಟ್ಟಕ್ಕಾಗಿ ಕಾಯುತ್ತಿರುವ ಈ ಬಡ ರೈತರಿಗೆ, ತೀರ್ಮಾನಗೊಂಡ ಈ ಒಂದೂವರೆ ಲಕ್ಷ ಅರ್ಹ ಅರ್ಜಿದಾರರಿಗೆ ಪಟ್ಟವನ್ನು ಕೂಡಲೇ ಹಂಚಲು ಸರ್ಕಾರ ಸುತ್ತೋಲೆ ಹೊರಡಿಸಬೇಕು. ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಈ ಅರ್ಹ ಅರ್ಜಿದಾರರಿಗೆ ಪಟ್ಟ ಮಾಡಿಕೊಡಲು ಅನುಮತಿ ನೀಡಬೇಕು. ಈ ಪ್ರಕ್ರಿಯೆ ಕೂಡಲೇ ಕಾರ್ಯಗತಗೊಳ್ಳಲು ಸೂಚಿಸಿ, 6 ತಿಂಗಳೊಳಗೆ ಈ ಒಂದೂವರೆ ಲಕ್ಷ ಅರ್ಹ ಅರ್ಜಿದಾರರಿಗೆ ಪಟ್ಟ ದೊರೆಯುವಂತೆ ಸುಗ್ರೀವಾಜ್ಞೆ ಹೊರಡಿಸಬೇಕು.

ಸರ್ಕಾರ ಬಡ ರೈತರ ಕಾತರವನ್ನು ಅರ್ಥಮಾಡಿಕೊಳ್ಳಬೇಕು. ಈ ರೈತರು ತಹಶೀಲ್ದಾರರ ಕಚೇರಿಗೆ ನೂರಾರು ಸಲ ಹೋಗಿ ಹತಾಶರಾಗಿ ಹಿಂದಿರುಗಿರುವುದನ್ನು ಗಮನಿಸಬೇಕು. ಬಡ ರೈತರ ತಾಳ್ಮೆಯನ್ನು ಪರೀಕ್ಷಿಸುವುದಕ್ಕಲ್ಲ ಸರ್ಕಾರ ಇರುವುದು. ಅವರ ಕಣ್ಣೀರನ್ನು ಒರೆಸುವುದಕ್ಕೆ. ಸಾಂತ್ವನ ಹೇಳುವುದಕ್ಕೆ. ಹತಾಶನಾದ ರೈತ ತಾಲ್ಲೂಕು ಕಚೇರಿಗೆ ತಿರುಗಿ ತಿರುಗಿ ಬೇಸತ್ತು ಅಸಹಾಯಕರಾದ ತಹಶೀಲ್ದಾರರನ್ನೂ ಗುಂಡಿಟ್ಟು ಕೊಂದಿರುವುದನ್ನು ಸರ್ಕಾರ ಒಂದು ಎಚ್ಚರಿಕೆಯ ಗಂಟೆ ಎಂದು ಪರಿಭಾವಿಸಬೇಕು. ತ್ವರಿತಗತಿಯಿಂದ ಅವರ ಬವಣೆಯನ್ನು ನೀಗುವುದು ಸರ್ಕಾರದ ಆದ್ಯತೆಯಾಗಬೇಕು.

ಹಿಂದೆ ಎರಡನೇ ಮಹಾಯುದ್ಧದ ಸಮಯದಲ್ಲಿ ಮತ್ತು ಸ್ವಾತಂತ್ರ ಪ್ರಾಪ್ತವಾದ ಹೊಸದರಲ್ಲಿ ಆಹಾರ ಧಾನ್ಯಗಳ ಕೊರೆತೆಯಿಂದ ಬಡಜನರು ತೊಳಲಾಡುವುದನ್ನು ಗಮನಿಸಿದ ಅಂದಿನ ಸರ್ಕಾರ ಭೂಹೀನ ಬಡರೈತರಿಗೆ ಸರ್ಕಾರಿ ಜಮೀನಿನಲ್ಲಿ ಬೆಳೆ ಬೆಳೆದುಕೊಳ್ಳಲು ಅನುಮತಿ ನೀಡಿತು. ಇದಕ್ಕಾಗಿ ಸರ್ಕಾರ Grow more food campaign ಆರಂಭ ಮಾಡಿತು. ಸಹಸ್ರಾರು ಬಡರೈತರು ಒಂದು ಎಕರೆ, ಎರಡು ಎಕರೆ ಸರ್ಕಾರಿ ಜಮೀನಿನಲ್ಲಿ ವ್ಯವಸಾಯ ಮಾಡಲು ಆರಂಭಿಸಿದರು. ಈ ಮೂಲಕ ಈ ಬಡರೈತರು ತಮ್ಮ ಮನೆಗೆ ಬೇಕಾದಷ್ಟನ್ನು ಬೆಳೆದುಕೊಂಡು ಸ್ವಾವಲಂಬಿಗಳಾದರು. ಆಹಾರ ಧಾನ್ಯವನ್ನು ಜನರಿಗೆ ಒದಗಿಸುವ ಹೊಣೆಗಾರಿಕೆಯಿಂದ ಸ್ವಲ್ಪಮಟ್ಟಿಗೆ ಪಾರಾಗಲು ಈ Grow more food campaign ಯೋಜನೆ ಸಹಕಾರಿಯಾಯಿತು.

ಈ ರೈತರು ಕೂಡ ತಮ್ಮ ಜಮೀನಿಗೆ ಸರ್ಕಾರ ಪಟ್ಟ ಕೊಡುವುದೆಂದು ಅಂದಿನಿಂದ ಕಾಯುತ್ತಿದ್ದಾರೆ. ಸರ್ಕಾರವೇ ಸರ್ಕಾರಿ ಜಮೀನನ್ನು ಆಹಾರಧಾನ್ಯ ಬೆಳೆದುಕೊಳ್ಳುವುದಕ್ಕಾಗಿ ರೈತರಿಗೆ ಕೊಟ್ಟಿರುವುದರಿಂದ ಈ ಜಮೀನು ಅಕ್ರಮ ಸಕ್ರಮದಡಿಯಲ್ಲಿ ಪರಿಶೀಲಿಸಲು ಬರುವುದಿಲ್ಲ.

ಆದ್ದರಿಂದ ಈ ರೈತರು ಬೇರೆ ಜಮೀನನ್ನು ಹೊಂದಿರದಿದ್ದರೆ ಅಂಥವರಿಗೆ ನೇರವಾಗಿ ಪಟ್ಟ ನೀಡಲು ತಹಶೀಲ್ದಾರುಗಳಿಗೆ ಅಧಿಕಾರ ನೀಡಬೇಕು. ಇಂತಹವರು ಸಕ್ರಮ ಅಕ್ರಮದಡಿ ಅರ್ಜಿ ಸಲ್ಲಿಸಿದ್ದರೆ ಅದನ್ನು ಬೇರ್ಪಡಿಸಿ ಈ ರೈತರಿಗೆ ಕೂಡಲೇ ಪಟ್ಟ ಮಾಡಿಕೊಡಬೇಕು.


ಇದನ್ನೂ ಓದಿ: ನೂರರ ನೋಟ: ಪ್ರಜಾಪ್ರಭುತ್ವದ ಕಗ್ಗೊಲೆಯ ಮೂರು ಪ್ರಕರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಇರಾನ್: ಪ್ರತಿಭಟನಾಕಾರರ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವಿನ ಸಂಖ್ಯೆ 2571ಕ್ಕೆ ಏರಿಕೆ 

ಇರಾನ್‌ನಲ್ಲಿ ಪ್ರತಿಭಟನೆಗಳ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕನಿಷ್ಠ 2,571 ಕ್ಕೆ ಏರಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಬುಧವಾರ ತಿಳಿಸಿದ್ದಾರೆ. ಈ ಅಂಕಿ ಅಂಶವು ಅಮೆರಿಕ ಮೂಲದ ಮಾನವ ಹಕ್ಕುಗಳ...

ಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ

ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ 'ಕಲ್ಟ್' ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ...

ಹಿಂದಿ ಶೈಕ್ಷಣಿಕ ಪದ್ಧತಿ ಹೇರಿಕೆಯಿಂದ ಉತ್ತರದ ಜನರಿಂದ ದಕ್ಷಿಣಕ್ಕೆ ವಲಸೆ: ಮಾರನ್

ಇಂಗ್ಲಿಷ್ ಶಿಕ್ಷಣವನ್ನು ನಿರುತ್ಸಾಹಗೊಳಿಸುತ್ತಾ, ವಿದ್ಯಾರ್ಥಿಗಳು ಹಿಂದಿ ಮಾತ್ರ ಕಲಿಯಲು ಪ್ರೋತ್ಸಾಹಿಸುತ್ತಿದ್ದಾರೆ. ಉತ್ತರ ರಾಜ್ಯಗಳ ಈ ನೀತಿಗಳಿಂದ ಉದ್ಯೋಗ ಸಿಗದೆ ದಕ್ಷಿಣದ ರಾಜ್ಯಗಳಿಗೆ ವಲಸೆ ಬರುತ್ತಿದ್ದಾರೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ಉತ್ತರ...

ಚಿಕ್ಕಮಗಳೂರು| ದಲಿತರ ಜಮೀನಿಗೆ ನುಗ್ಗಿ ಬೆಳೆ ನಾಶ; ಪ್ರಬಲ ಜಾತಿ ಜನರಿಂದ ವಿನಾಕಾರಣ ತೊಂದರೆ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿಯ ಸತ್ತಿಹಳ್ಳಿ ಗ್ರಾಮದ ದಲಿತ ಸಮುದಾಯದ ರೈತರಿಗೆ ಅದೇ ಊರಿನ ಪ್ರಬಲ ಜಾತಿಗೆ ಸೇರಿದ ಜನರು ವಿನಾಕಾರಣ ತೊಂದರೆ ನಿಡುತ್ತಿದ್ದು, ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡಿದ್ದಾರೆ ಎಂಬ...

ಎಲ್‌ಡಿಎಫ್‌ನ ‘ಕೇರಳಂ’ ಮರುನಾಮಕರಣ ಕ್ರಮ ಬೆಂಬಲಿಸಿದ ರಾಜ್ಯ ಬಿಜೆಪಿ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಮನವಿ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇರಳ ಘಟಕವು, ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಸರ್ಕಾರದ 'ಕೇರಳಂ' ಮರುನಾಕರಣ ಪ್ರಸ್ತಾವನೆಯನ್ನು ಬೆಂಬಲಿಸಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ...

ರಾಯಚೂರು ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ತಡೆಗೆ ಸಂಚು ಆರೋಪ: ನಿಗದಿತ ದಿನಾಂಕದಂದು ಪರೀಕ್ಷೆ ನಡೆಸಲು ಒತ್ತಾಯ 

ಬೆಂಗಳೂರು: ರಾಯಚೂರು ಕೃಷಿ ವಿವಿಯಲ್ಲಿನ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಿಗದಿತ ದಿನಾಂಕಗಳಾದ ಜನವರಿ.17 ಮತ್ತು ಜನವರಿ.18ರಂದೇ ನಡೆಸಬೇಕು. ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂದೂಡಬಾರದು ಎಂದು ಅಭ್ಯರ್ಥಿಗಳು...

ಸಂಭಾಲ್ ಹಿಂಸಾಚಾರ ಪ್ರಕರಣ : ಹಿರಿಯ ಅಧಿಕಾರಿಗಳು ಸೇರಿ 12 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

2024ರ ನವೆಂಬರ್‌ನಲ್ಲಿ ಶಾಹಿ ಜಾಮಾ ಮಸೀದಿ ಬಳಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪಾತ್ರವಿದೆ ಎಂಬ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಸೇರಿದಂತೆ 12 ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಿಮಿನಲ್...

ಪಿಎಂ ಕೇರ್ಸ್ ನಿಧಿಗೆ ಆರ್‌ಟಿಐ ಕಾಯ್ದೆಯಡಿ ಗೌಪ್ಯತೆಯ ಹಕ್ಕಿದೆ : ದೆಹಲಿ ಹೈಕೋರ್ಟ್

ಪಿಎಂ ಕೇರ್ಸ್ ನಿಧಿಯು ಕಾನೂನು ಅಥವಾ ಸರ್ಕಾರಿ ಘಟಕವಾಗಿದ್ದರೂ, ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಗೌಪ್ಯತೆಯ ಹಕ್ಕನ್ನು ನಿರಾಕರಿಸಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಮಂಗಳವಾರ (ಜ.13) ಮೌಖಿಕವಾಗಿ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು...

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ. ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ...

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...