Homeಅಂಕಣಗಳುನೂರರ ನೋಟ: ಸಾಗುವಳಿ ಭೂಮಿಯ ಅಕ್ರಮ ಸಕ್ರಮ ಅರ್ಜಿಗಳು ಶೀಘ್ರ ಇತ್ಯರ್ಥವಾಗಲಿ..

ನೂರರ ನೋಟ: ಸಾಗುವಳಿ ಭೂಮಿಯ ಅಕ್ರಮ ಸಕ್ರಮ ಅರ್ಜಿಗಳು ಶೀಘ್ರ ಇತ್ಯರ್ಥವಾಗಲಿ..

- Advertisement -
- Advertisement -

ಅಕ್ರಮವಾಗಿ ಸರ್ಕಾರಿ ಭೂಮಿ ಸಾಗುವಳಿಯನ್ನು ಮಾಡುತ್ತಿದ್ದ ಒಬ್ಬ ರೈತ ಅಕ್ರಮ ಸಕ್ರಮ ಅರ್ಜಿ ಸಲ್ಲಿಸಿ, ತಹಶೀಲ್ದಾರರ ಕಚೇರಿಗೆ ತಿರುಗಿ ತಿರುಗಿ ಬೇಸತ್ತು ಹತಾಶನಾಗಿ ತಹಶೀಲ್ದಾರರನ್ನೇ ಗುಂಡಿಕ್ಕಿ ಕೊಂದ ಸುದ್ದಿ ಪತ್ರಿಕೆಯಲ್ಲಿ ಪ್ರಕಟವಾಗಿದೆ. ಇದರಲ್ಲಿ ತಹಶೀಲ್ದಾರನ ತಪ್ಪೇನೂ ಇಲ್ಲ. ಅಕ್ರಮ ಸಕ್ರಮ ಜಮೀನನ್ನು ರೈತನ ಹೆಸರಿಗೆ ಪಟ್ಟ ಮಾಡಿಕೊಡಿ ಎಂದು ಜಿಲ್ಲಾಧಿಕಾರಿಗಳಿಗೆ ಸರ್ಕಾರ ಪತ್ರ ಬರೆಯದ ಹೊರತು ಜಿಲ್ಲಾಧಿಕಾರಿಯಾಗಲಿ, ತಹಶೀಲ್ದಾರರಾಗಲಿ ಆ ಕೆಲಸ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ. ಸರ್ಕಾರ ಅಕ್ರಮ ಸಕ್ರಮದ ಅರ್ಜಿಗಳನ್ನು ಕರೆಯಲು ತೀರ್ಮಾನ ತೆಗೆದುಕೊಂಡು 3-4 ವರ್ಷ ಆಗಿದೆ. ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದೊಡನೆ ಅರ್ಜಿ ಸ್ವೀಕರಿಸಲು ಕೊನೆಯ ದಿನವನ್ನು 1-2 ವರ್ಷ ಕಾಲ ವಿಸ್ತರಿಸುತ್ತಾ ಹೋಗುತ್ತದೆ.

ಅಕ್ರಮ ಸಕ್ರಮ ಅರ್ಜಿಗಳನ್ನು ಪರಿಶೀಲಿಸಿ ಅಕ್ರಮವಾಗಿರುವುದನ್ನು ತಿರಸ್ಕರಿಸಲು, ಸಕ್ರಮವಾಗಿರುವುದನ್ನು ಅಂಗೀಕರಿಸಲು ಸರ್ಕಾರ ಜಿಲ್ಲಾಧಿಕಾರಿಗಳಿಗೆ ಅನುಮತಿ ನೀಡಿದೆ. ಇದಕ್ಕಾಗಿ ಪ್ರತಿ ತಾಲ್ಲೂಕಿನಲ್ಲೂ ಒಂದು ಸಮಿತಿಯನ್ನು ಸರ್ಕಾರ ರಚಿಸಿದೆ. ಈ ಸಮಿತಿಯ ಸಂಚಾಲಕರ ಸದಸ್ಯರು ಆಯಾ ತಾಲ್ಲೂಕಿನ ತಹಶೀಲ್ದಾರರು. ಮೂರು ಸದಸ್ಯರ ಈ ಸಮಿತಿಗೆ ಅಲ್ಲಿಯ ಶಾಸಕರು ಮತ್ತು ಒಬ್ಬ ಖಾಸಗಿ ವ್ಯಕ್ತಿ ಸದಸ್ಯರು. ಈ ಸಮಿತಿ ಪ್ರತಿ ಶನಿವಾರ ಸಭೆ ನಡೆಸಿ ಅರ್ಜಿಗಳನ್ನು ಪರಿಶೀಲಿಸಿ ತೀರ್ಮಾನಕ್ಕೆ ಬರುವ ಅಧಿಕಾರ ಹೊಂದಿದೆ. ಆದರೆ ಅನೇಕ ತಾಲ್ಲೂಕುಗಳಲ್ಲಿ ಅಲ್ಲಿಯ ಶಾಸಕರ ಆಲಕ್ಷ್ಯದಿಂದ ಸಮಿತಿಯ ಸಭೆಗಳೇ ನಡೆದಿಲ್ಲ. ಇದನ್ನು ಗಮನಿಸಿದ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಮಂತ್ರಿಗಳಾಗಿದ್ದ ಕಾಗೋಡು ತಿಮ್ಮಪ್ಪನವರು ರೋಸಿ ಹೋಗಿ ಶನಿವಾರದ ಸಭೆಗಳಿಗೆ ಇಬ್ಬರು ಸದಸ್ಯರು ಹಾಜರಾದರೂ ಸಾಕು, ಸಭೆ ನಡೆಸಿ ಎಂದು ತಹಶೀಲ್ದಾರರಿಗೆ ಪತ್ರಗಳನ್ನು ಬರೆದರು. ಅದೂ ಕಾರ್ಯಗತವಾಗಲಿಲ್ಲ. ಈ ಜಮೀನನ್ನೇ ನಂಬಿಕೊಂಡು ಜೀವನ ನಡೆಸುತ್ತಿರುವ ಬಡ ರೈತರ ಕೆಲಸವನ್ನು ಆದ್ಯತೆಯಿಂದ ಮಾಡಿಕೊಡಬೇಕು ಎಂದು ಈ ಶಾಸಕರಿಗೆ ಅನ್ನಿಸಲೇ ಇಲ್ಲ, ಇಂದಿಗೂ ಈ ಪರಿಸ್ಥಿತಿ ಮುಂದುವರೆಯುತ್ತಿದೆ. ಬಡ ರೈತರು ತಾವು ಹಿಡಿದಿರುವ ಸರ್ಕಾರಿ ಜಮೀನನ್ನು ತಮ್ಮ ಹೆಸರಿಗೆ ಪಟ್ಟ ಮಾಡಿಕೊಡುತ್ತಾರೆಂದು ತಾಲ್ಲೂಕು ಆಫೀಸಿಗೆ ಅಲೆದಾಡಿ ಹತಾಶರಾಗಿದ್ದಾರೆ. ಹೊಟ್ಟೆ ತುಂಬಿದ ಶಾಸಕರಿಗೆ ಈ ಬಡ ಜನರ ಬವಣೆ ಗೊತ್ತಿದ್ದರೂ ಅವರನ್ನು ಆಲಕ್ಷ್ಯ ಮಾಡಿದ್ದಾರೆ. ಇದು ಬಡವರ ಆಕ್ರೋಶಕ್ಕೆ ಕಾರಣವಾಗಿದೆ.

ಕೆಲವು ತಾಲ್ಲೂಕುಗಳಲ್ಲಿ ಶಾಸಕರು ಮುತುವರ್ಜಿವಹಿಸಿ ಸಭೆಗಳನ್ನು ನಡೆಸಿ ಅಕ್ರಮ ಸಕ್ರಮ ಅರ್ಜಿಗಳನ್ನು ಪರಿಶೀಲಿಸಿ ಅನರ್ಹವಾದದ್ದು ಯಾವುದು, ಅರ್ಹವಾದದ್ದು ಯಾವುದು ಎಂದು ಪರಿಶೀಲಿಸಿ ಪಟ್ಟ ಮಾಡಿದ್ದಾರೆ. ನನಗೆ ತಿಳಿದಂತೆ ಗೌರಿಬಿದನೂರಿನ ಶಾಸಕರು ಅರ್ಹರಾದವರಿಗೆ ಪಟ್ಟ ಕೊಡಿಸಿದ್ದಾರೆ ಅಲೆಮಾರಿ ಹಕ್ಕಿಪಿಕ್ಕರಿಗೆ ಪಟ್ಟ ಹಂಚುವ ಸಮಾರಂಭಕ್ಕೆ ಶಾಸಕರು ನನ್ನನ್ನು ಆಹ್ವಾನಿಸಿದ್ದರು. ನಾನು ಹೋಗಿದ್ದೆ.

PC : Patrika

ಈಗ ನನಗೆ ತಿಳಿದುಬಂದಿರುವಂತೆ ಕೆಲವು ತಾಲ್ಲೂಕುಗಳಲ್ಲಿ ಒಟ್ಟು 4 ಲಕ್ಷ ಅರ್ಜಿಗಳು ಬಂದಿದ್ದರೂ ಅವುಗಳ ಪೈಕಿ ಸಮಿತಿ ಎರಡೂವರೆ ಲಕ್ಷ ಅರ್ಜಿಗಳನ್ನು ತಿರಸ್ಕರಿಸಿ ಒಂದೂವರೆ ಲಕ್ಷ ಅರ್ಜಿದಾರರಿಗೆ ಪಟ್ಟ ಮಾಡಿ ಕೊಡಬಹುದೆಂದು ಶಿಫಾರಸು ಮಾಡಿದೆ.

ಜಾತಕ ಪಕ್ಷಿಗಳಂತೆ ಪಟ್ಟಕ್ಕಾಗಿ ಕಾಯುತ್ತಿರುವ ಈ ಬಡ ರೈತರಿಗೆ, ತೀರ್ಮಾನಗೊಂಡ ಈ ಒಂದೂವರೆ ಲಕ್ಷ ಅರ್ಹ ಅರ್ಜಿದಾರರಿಗೆ ಪಟ್ಟವನ್ನು ಕೂಡಲೇ ಹಂಚಲು ಸರ್ಕಾರ ಸುತ್ತೋಲೆ ಹೊರಡಿಸಬೇಕು. ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಈ ಅರ್ಹ ಅರ್ಜಿದಾರರಿಗೆ ಪಟ್ಟ ಮಾಡಿಕೊಡಲು ಅನುಮತಿ ನೀಡಬೇಕು. ಈ ಪ್ರಕ್ರಿಯೆ ಕೂಡಲೇ ಕಾರ್ಯಗತಗೊಳ್ಳಲು ಸೂಚಿಸಿ, 6 ತಿಂಗಳೊಳಗೆ ಈ ಒಂದೂವರೆ ಲಕ್ಷ ಅರ್ಹ ಅರ್ಜಿದಾರರಿಗೆ ಪಟ್ಟ ದೊರೆಯುವಂತೆ ಸುಗ್ರೀವಾಜ್ಞೆ ಹೊರಡಿಸಬೇಕು.

ಸರ್ಕಾರ ಬಡ ರೈತರ ಕಾತರವನ್ನು ಅರ್ಥಮಾಡಿಕೊಳ್ಳಬೇಕು. ಈ ರೈತರು ತಹಶೀಲ್ದಾರರ ಕಚೇರಿಗೆ ನೂರಾರು ಸಲ ಹೋಗಿ ಹತಾಶರಾಗಿ ಹಿಂದಿರುಗಿರುವುದನ್ನು ಗಮನಿಸಬೇಕು. ಬಡ ರೈತರ ತಾಳ್ಮೆಯನ್ನು ಪರೀಕ್ಷಿಸುವುದಕ್ಕಲ್ಲ ಸರ್ಕಾರ ಇರುವುದು. ಅವರ ಕಣ್ಣೀರನ್ನು ಒರೆಸುವುದಕ್ಕೆ. ಸಾಂತ್ವನ ಹೇಳುವುದಕ್ಕೆ. ಹತಾಶನಾದ ರೈತ ತಾಲ್ಲೂಕು ಕಚೇರಿಗೆ ತಿರುಗಿ ತಿರುಗಿ ಬೇಸತ್ತು ಅಸಹಾಯಕರಾದ ತಹಶೀಲ್ದಾರರನ್ನೂ ಗುಂಡಿಟ್ಟು ಕೊಂದಿರುವುದನ್ನು ಸರ್ಕಾರ ಒಂದು ಎಚ್ಚರಿಕೆಯ ಗಂಟೆ ಎಂದು ಪರಿಭಾವಿಸಬೇಕು. ತ್ವರಿತಗತಿಯಿಂದ ಅವರ ಬವಣೆಯನ್ನು ನೀಗುವುದು ಸರ್ಕಾರದ ಆದ್ಯತೆಯಾಗಬೇಕು.

ಹಿಂದೆ ಎರಡನೇ ಮಹಾಯುದ್ಧದ ಸಮಯದಲ್ಲಿ ಮತ್ತು ಸ್ವಾತಂತ್ರ ಪ್ರಾಪ್ತವಾದ ಹೊಸದರಲ್ಲಿ ಆಹಾರ ಧಾನ್ಯಗಳ ಕೊರೆತೆಯಿಂದ ಬಡಜನರು ತೊಳಲಾಡುವುದನ್ನು ಗಮನಿಸಿದ ಅಂದಿನ ಸರ್ಕಾರ ಭೂಹೀನ ಬಡರೈತರಿಗೆ ಸರ್ಕಾರಿ ಜಮೀನಿನಲ್ಲಿ ಬೆಳೆ ಬೆಳೆದುಕೊಳ್ಳಲು ಅನುಮತಿ ನೀಡಿತು. ಇದಕ್ಕಾಗಿ ಸರ್ಕಾರ Grow more food campaign ಆರಂಭ ಮಾಡಿತು. ಸಹಸ್ರಾರು ಬಡರೈತರು ಒಂದು ಎಕರೆ, ಎರಡು ಎಕರೆ ಸರ್ಕಾರಿ ಜಮೀನಿನಲ್ಲಿ ವ್ಯವಸಾಯ ಮಾಡಲು ಆರಂಭಿಸಿದರು. ಈ ಮೂಲಕ ಈ ಬಡರೈತರು ತಮ್ಮ ಮನೆಗೆ ಬೇಕಾದಷ್ಟನ್ನು ಬೆಳೆದುಕೊಂಡು ಸ್ವಾವಲಂಬಿಗಳಾದರು. ಆಹಾರ ಧಾನ್ಯವನ್ನು ಜನರಿಗೆ ಒದಗಿಸುವ ಹೊಣೆಗಾರಿಕೆಯಿಂದ ಸ್ವಲ್ಪಮಟ್ಟಿಗೆ ಪಾರಾಗಲು ಈ Grow more food campaign ಯೋಜನೆ ಸಹಕಾರಿಯಾಯಿತು.

ಈ ರೈತರು ಕೂಡ ತಮ್ಮ ಜಮೀನಿಗೆ ಸರ್ಕಾರ ಪಟ್ಟ ಕೊಡುವುದೆಂದು ಅಂದಿನಿಂದ ಕಾಯುತ್ತಿದ್ದಾರೆ. ಸರ್ಕಾರವೇ ಸರ್ಕಾರಿ ಜಮೀನನ್ನು ಆಹಾರಧಾನ್ಯ ಬೆಳೆದುಕೊಳ್ಳುವುದಕ್ಕಾಗಿ ರೈತರಿಗೆ ಕೊಟ್ಟಿರುವುದರಿಂದ ಈ ಜಮೀನು ಅಕ್ರಮ ಸಕ್ರಮದಡಿಯಲ್ಲಿ ಪರಿಶೀಲಿಸಲು ಬರುವುದಿಲ್ಲ.

ಆದ್ದರಿಂದ ಈ ರೈತರು ಬೇರೆ ಜಮೀನನ್ನು ಹೊಂದಿರದಿದ್ದರೆ ಅಂಥವರಿಗೆ ನೇರವಾಗಿ ಪಟ್ಟ ನೀಡಲು ತಹಶೀಲ್ದಾರುಗಳಿಗೆ ಅಧಿಕಾರ ನೀಡಬೇಕು. ಇಂತಹವರು ಸಕ್ರಮ ಅಕ್ರಮದಡಿ ಅರ್ಜಿ ಸಲ್ಲಿಸಿದ್ದರೆ ಅದನ್ನು ಬೇರ್ಪಡಿಸಿ ಈ ರೈತರಿಗೆ ಕೂಡಲೇ ಪಟ್ಟ ಮಾಡಿಕೊಡಬೇಕು.


ಇದನ್ನೂ ಓದಿ: ನೂರರ ನೋಟ: ಪ್ರಜಾಪ್ರಭುತ್ವದ ಕಗ್ಗೊಲೆಯ ಮೂರು ಪ್ರಕರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...