Homeಅಂಕಣಗಳುಅಂಬೇಡ್ಕರ್‌ರವರ ಆರ್ಥಿಕ ಚಿಂತನೆಗಳು ದಾರಿಯಾಗಲಿ - ಎಚ್. ಎಸ್ ದೊರೆಸ್ವಾಮಿ

ಅಂಬೇಡ್ಕರ್‌ರವರ ಆರ್ಥಿಕ ಚಿಂತನೆಗಳು ದಾರಿಯಾಗಲಿ – ಎಚ್. ಎಸ್ ದೊರೆಸ್ವಾಮಿ

ಅಸ್ಪೃಶ್ಯತೆ ಸಮಾಜದಿಂದ ತೊಲಗದ ಹೊರತು ರೈತ ಮತ್ತು ಕಾರ್ಮಿಕ ಹೋರಾಟಕ್ಕೆ ಸಂಘಟಿತ ಸ್ವರೂಪ ಬರುವುದಿಲ್ಲ. ಭಾರತದಲ್ಲಿ ಶ್ರಮಜೀವಿಗಳಿಗೆ ಮುಕ್ತಿ ದೊರೆಯಬೇಕಾಗಿದ್ದರೆ, ಅವರು ಸಾಮಾಜಿಕ ಆರ್ಥಿಕ, ಧಾರ್ಮಿಕ ದಾಸ್ಯದಿಂದ ಮುಕ್ತರಾಗುವುದೊಂದೇ ಅವರಿಗಿರುವ ರಾಜಮಾರ್ಗ.

- Advertisement -
- Advertisement -

ಆರ್ಥಿಕ ಶೋಷಣೆಯನ್ನ ಸಂಪೂರ್ಣವಾಗಿ ನಿರ್ಮೂಲನ ಮಾಡುವುದು ಸರ್ಕಾರಗಳ ಮತ್ತು ಸಂಸತ್ತಿನ ಗುರಿಯಾಗಬೇಕು. ಸ್ವಾತಂತ್ರ್ಯವೆಂದರೆ ದುರ್ಬಲವರ್ಗಗಳನ್ನು ನಿರಂತರವಾಗಿ ವಂಚಿಸುತ್ತಾ ಹೋಗುವುದಲ್ಲ. ಶೋಷಣೆಯನ್ನು ತಡೆಗಟ್ಟುವುದಕ್ಕೆ ಇರುವ ಏಕೈಕ ಮಾರ್ಗವೆಂದರೆ, ಸಂಪನ್ಮೂಲಗಳ ಸ್ವಾಮ್ಯ ಒಡೆತನ ಸರ್ಕಾರದ ಕೈಯಲ್ಲಿ ಉಳಿಸಿಕೊಳ್ಳುವುದು. ಪ್ರಮುಖ ಉದ್ಯೋಗಗಳು ರಾಜ್ಯಾಡಳಿತದ ವ್ಯಾಪ್ತಿಯಲ್ಲಿರಬೇಕು. ಕೃಷಿಭೂಮಿ ಸರ್ಕಾರದ ಸ್ವಾಮ್ಯದಲ್ಲಿರಬೇಕು. ಹಾಗೆಂದರೆ ಸರ್ಕಾರ ಜಮೀನನ್ನು ಯಾರಿಗೆ ಅಂದರೆ ಅವರಿಗೆ, ಪಟ್ಟಭದ್ರ ಹಿತಾಸಕ್ತಿಗಳಿಗೆ, ಸಿಕ್ಕಿದಂತೆ ಹಂಚುವ ಅಧಿಕಾರ ಅದಕ್ಕಿರಬೇಕೆಂಬ ಅರ್ಥವಲ್ಲ. ಪ್ರಮುಖ ಉದ್ಯಮಗಳು ಸರ್ಕಾರದ ವ್ಯಾಪ್ತಿಯಲ್ಲಿ ನಿರ್ವಹಣೆಯಾಗಬೇಕು. ವಿಮಾ ಸಂಸ್ಥೆಗಳ, ಲೇವಾದೇವಿ ಸಂಸ್ಥೆಗಳ ರಾಷ್ಟ್ರೀಕರಣ ಆಗಬೇಕು. ಜಮೀನ್ದಾರ, ಜೀತಗಾರ, ಕೃಷಿಕಾರ್ಮೀಕ ಮುಂತಾದ ಬರ್ಬರ ವ್ಯವಸ್ಥೆಗಳು ಕೊನೆಗೊಳ್ಳಬೇಕು. ದುರ್ಬಲವರ್ಗದವರಿಗೆ ಒದಗಿಸುವ ವಿಶೇಷ ರಕ್ಷಣಾ ನಿಬಂಧನೆಗಳನ್ನು ಸಂವಿಧಾನದ ಮೂಲಭೂತಹಕ್ಕುಗಳ ಪಟ್ಟಿಗೆ ಸೇರಿಸಬೇಕು. ಇದನ್ನು ಈಗ ಸಂವಿಧಾನದ ನಿರ್ದೇಶಕ ತತ್ವಗಳನ್ನಾಗಿ ಸೇರಿಸಲಾಗಿದೆ.

ಅಂಬೇಡ್ಕರ್ ಅವರ ಆರ್ಥಿಕ ಚಿಂತನೆ ವ್ಯಾಪಕ ತಳಹದಿಯ ಮೇಲೆ ರಚಿತವಾಗಿದೆ. ಸಮಗ್ರ ದೇಶದ ಹಿತದೃಷ್ಟಿಯಿಂದ ರಚಿತವಾಗಿದೆ.

ವ್ಯಕ್ತಿ ಸ್ವಾತಂತ್ರ್ಯವೆಂಬುದು ಬಂಡವಾಳಶಾಹಿಗಳಿಗೆ ಮಾತ್ರ ಅನ್ವಯವಾಗುವ ಮಹಾಮಂತ್ರ ಎಂದು ಪಟ್ಟಭದ್ರರು ಭಾವಿಸುತ್ತಾರೆ. ಅದರಿಂದಾಗಿ ಇದು ಶ್ರಮಜೀವಿಗಳ ದಾಸ್ಯಕ್ಕೆ ದಾರಿಮಾಡುತ್ತದೆ. ಹಿಂದೆ ದಲಿತರಿಗೆ ಯಾವುದೇ ಸ್ವಾತಂತ್ರ್ಯವಿರಲಿಲ್ಲ. ತಮ್ಮ ಶ್ರಮಶಕ್ತಿಗೆ ಸರಿಯಾದ ಪರಿಹಾರ ಪಡೆಯುವ ಅಧಿಕಾರ ಇರಲಿಲ್ಲ. ಶ್ರೀಮಂತ ರೈತರಿಗೆ ಅವರು ಖಾಯಂ ಜೀತದಾಳುಗಳಾಗಿದ್ದರು. ಅವರಿಗೆ ವ್ಯಕ್ತಿ ಸ್ವಾತಂತ್ರ್ಯ ಇರಲಿಲ್ಲ. ಅದು ಏನಿದ್ದರೂ ಶ್ರೀಮಂತರ ಸ್ವತ್ತಾಗಿತ್ತು.

ಅಸ್ಪೃಶ್ಯತೆ ಸಮಾಜದಿಂದ ತೊಲಗದ ಹೊರತು ರೈತ ಮತ್ತು ಕಾರ್ಮಿಕ ಹೋರಾಟಕ್ಕೆ ಸಂಘಟಿತ ಸ್ವರೂಪ ಬರುವುದಿಲ್ಲ. ಭಾರತದಲ್ಲಿ ಶ್ರಮಜೀವಿಗಳಿಗೆ ಮುಕ್ತಿ ದೊರೆಯಬೇಕಾಗಿದ್ದರೆ, ಅವರು ಸಾಮಾಜಿಕ ಆರ್ಥಿಕ, ಧಾರ್ಮಿಕ ದಾಸ್ಯದಿಂದ ಮುಕ್ತರಾಗುವುದೊಂದೇ ಅವರಿಗಿರುವ ರಾಜಮಾರ್ಗ. ಆ ಸಂಕೋಲೆಗಳನ್ನು ಕಳಚಿಕೊಳ್ಳುವುದೊಂದೇ ಇರುವ ಪರಿಹಾರ ಮಾರ್ಗ.

ಒಕ್ಕಲಿಗ ಸಣ್ಣ ರೈತರು ಮತ್ತು ಕಾರ್ಮಿಕರು, ಒಕ್ಕಲಿಗ White Collar ಗಿಂತ ತಾವು ಕೀಳು ಎಂದು ಭಾವಿಸುವರಾದರೂ ತಾವು ಅಸ್ಪೃಶ್ಯ ವರ್ಗದವರಿಗಿಂತ ಮೇಲ್ವರ್ಗದವರು ಎಂದು ಗರ್ವಪಡುತ್ತಾರೆ. ತಮ್ಮಂತೆಯೇ ಆರ್ಥಿಕವಾಗಿ ಹಿಂದುಳಿದ ಅಸ್ಪೃಶ್ಯರನ್ನು ಕೀಳಾಗಿ ನಡೆಸಿಕೊಳ್ಳುತ್ತಾರೆ. ವೈರಿಗಳಂತೆ ನೋಡುತ್ತಾರೆ.

ಅಸ್ಪೃಶ್ಯರಿಗೆ ಸಮಾಜದಲ್ಲಿ ಗೌರವ ದೊರೆಯಬೇಕಾದರೆ ಅವರು ಮೊದಲು ಮಾಡಬೇಕಾದ ಕೆಲಸ ಆರ್ಥಿಕವಾಗಿ ಸ್ವಾವಲಂಬಿಗಳಾಗುವುದು. ಹಣದಿಂದಲೇ ಸಮಾಜ ಜನರನ್ನು ಅಳೆಯುವ ಈ ಕಾಲದಲ್ಲಿ ಅಸ್ಪೃಶ್ಯರು ಆರ್ಥಿಕವಾಗಿ ಚೇತರಿಸಿಕೊಳ್ಳದಿದ್ದರೆ ಸಮಾಜ ಅವರನ್ನು ತಿರಸ್ಕಾರ ಬುದ್ಧಿಯಿಂದ ನೋಡುತ್ತದೆ, ಕೀಳಾಗಿ ಕಾಣುತ್ತದೆ. ವೈರಿಗಳಂತೆ ಕಾಣುತ್ತದೆ. ಸ್ವಾಭಿಮಾನಕ್ಕೆ ಧಕ್ಕೆ ಬರದಂತೆ ಅಸ್ಪೃಶ್ಯರು ನಡೆದುಕೊಳ್ಳಬೇಕು.

ಆದರೆ ಒಂದು ಎಚ್ಚರಿಕೆ. ಭೌತಿಕ ಸುಖವೊಂದೇ ಸಾರಸರ್ವಸ್ವ ಎಂದು ಅಸ್ಪೃಶ್ಯರು ಭಾವಿಸಬಾರದು. ಅಸ್ಪೃಶ್ಯಯರಿಗೂ ಉಳಿದ ಎಲ್ಲರಂತೆ ಮನಸ್ಸು, ಹೃದಯಗಳಿವೆ. ಆ ಮನಸ್ಸಿಗೆ, ಹೃದಯಕ್ಕೆ ವಿಚಾರದ ಆಹಾರ ಅತ್ಯಗತ್ಯ. ವೈಚಾರಿಕತೆ ಮಾನವನ ಮನಸ್ಸಿನಲ್ಲಿ ಆಸೆಗಳನ್ನು ಹುಟ್ಟು ಹಾಕುತ್ತದೆ. ಕೆಲಸ ಮಾಡಲು ಪ್ರೇರಣೆ ನೀಡುತ್ತದೆ. ಅಸ್ಪೃಶ್ಯ ಸಂಘಟನೆಗಳು ವಿಚಾರಕ್ರಾಂತಿಯ ಬೀಜವನ್ನು ಅಸ್ಪೃಶ್ಯರ ಮನಸ್ಸಿನಲ್ಲಿ ಬಿತ್ತಬೇಕು.

ಆರ್ಥಿಕ ಬೆಳವಣಿಗೆ ಅಸ್ಪೃಶ್ಯರ ಸರ್ವತೋಮುಖ ಬೆಳವಣಿಗೆಗೆ ಒಂದು ಸಾಧನ. ಆರ್ಥಿಕ ಅಭಿವೃದ್ಧಿ ಆಯಿತು ಎಂದರೆ ಅಸ್ಪೃಶ್ಯನಿಗೆ ಸಮಾಜ ತನ್ನತಾನಾಗೇ ಗೌರವ ನೀಡಲು ಆರಂಭ ಮಾಡುತ್ತದೆ.

ಪರಂಪರಾಗತ ಉದ್ಯೋಗಗಳನ್ನು ದಲಿತರು ಬಿಡಬೇಕು. ಸತ್ತ ಪ್ರಾಣಿಗಳನ್ನು ಹೊತ್ತು ಹೂಳುವುದು ಮತ್ತು ತಿನ್ನುವುದು, ತೋಟಿ ತಳವಾರ ಹುದ್ದೆಗಳನ್ನು ವಂಶಪಾರಂಪರ್ಯದ ಕಸುಬು ಎಂದು ಊರು ಕೇರಿಯಲ್ಲಿ ಭಾವಿಸುವುದು, ಮೇಲ್ಜಾತಿಯವರ ಆಣತಿಯಂತೆ ತಮಟೆ ಹೊಡೆದು ಸಾರುವುದು ಎಲ್ಲ ನಿಲ್ಲಬೇಕು. ವಿದ್ಯಾಭ್ಯಾಸ ಪಡೆಯಲು ಎರಡು ವಿಧದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅವೆಂದರೆ ಬ್ರಾಹ್ಮಣವಾದ ಮತ್ತು ಬಂಡವಾಳವಾದ. ಬ್ರಾಹ್ಮಣವಾದ ಎಂಬುದನ್ನು ತಪ್ಪಾಗಿ ಅರ್ಥೈಸಬಾರದು. ಬ್ರಾಹ್ಮಣವಾದವೆಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವವನ್ನು ವಿರೋಧಿಸುವ ಪ್ರವೃತ್ತಿ. ಈ ಪ್ರವೃತ್ತಿ ಬ್ರಾಹ್ಮಣರ ಗುತ್ತಿಯಾಗಿ ಏನೂ ಉಳಿದಿಲ್ಲ. ಎಲ್ಲ ಜಾತಿಗಳಲ್ಲೂ ಇಂತಹ ಜನ ಇದ್ದಾರೆ. ಈಗ ಇದು ಎಲ್ಲ ವರ್ಗದವರ ಸಿದ್ಧಾಂತವಾಗಿದೆ. ಈ ಪ್ರವೃತ್ತಿಯನ್ನು ದಲಿತರು ಹೋರಾಟದ ಮೂಲಕ ಬದಲಿಸಬೇಕು.

ಇನ್ನೊಂದು ಬಂಡವಾಳಶಾಹಿ ನೀತಿ. ಅದು ಲಾಭಕೋರರ ಸಂತೆ. ಬಂಡವಾಳಶಾಹಿಗಳ ಆರ್ಥಿಕನೀತಿ, ಧರ್ಮವೋ ಅಧರ್ಮವೋ ಯಾವುದೇ ಮಾರ್ಗವಾಗಲಿ ಲಾಭಗಳಿಸುವುದು. ಆಳುವ ಸರ್ಕಾರವನ್ನು ತನ್ನ ವಶ ಮಾಡಿಕೊಂಡು ಕೂಡಿಕೊಳ್ಳುವುದು. ಸಮಾಜದಲ್ಲಿ ಆರ್ಥಿಕ ಅಸಮಾನತೆ ಹೆಚ್ಚಿಸುವುದು. ಅವರಿಗೆ ಸರ್ಕಾರ ಸಕಲ ಸವಲತ್ತುಗಳನ್ನು ನೀಡಲು ತುದಿಗಾಲ ಮೇಲೆ ನಿಲ್ಲುತ್ತದೆ. ಅದಕ್ಕೆ ಕಾರಣ ಅವರು ಪಕ್ಷಕ್ಕೆ ನೀಡುವ ಎಂಜಲು ಹಣ. ಸರ್ಕಾರ ಸಮಾಜವಾದದಿಂದ ಬಂಡವಾಳಶಾಹಿ ನೀತಿಗೆ ತಿರುಗುವಂತೆ ಮಾಡುವುದು ಬಂಡವಾಳಶಾಹಿಯ ಪ್ರಥಮ ಆದ್ಯತೆ. ಮಾಲಿಕರು, ಕಾರ್ಮಿಕರು ಸರ್ಕಾರ ಮೂವರೂ ಸೇರಿ ಕಾರ್ಮಿಕ ನೀತಿ ರೂಪಿಸಬೇಕು, ಶ್ರಮಿಕರ ಕೈಗೆ ಸರ್ಕಾರ ಹೋಗಬೇಕು, ಶ್ರಮಿಕರಲ್ಲಿ ಬೇರುಬಿಟ್ಟಿರುವ ಜಾತಿ,ಭಾವನೆ, ಉಚ್ಚ ನೀಚಭಾವನೆ, ಮೇಲುಕೀಳು ಭಾವನೆ ಹೋಗದೆ ಇದ್ದರೆ ಶ್ರಮಿಕರು ಒಂದಾಗುವುದು ಹೇಗೆ ಸಾಧ್ಯವಾದೀತು? ಸಮಾಜದಲ್ಲಿ ಕ್ರಾಂತಿತರಲು ಹೇಗೆ ಸಾಧ್ಯವಾದೀತು?

ಅಂಬೇಡ್ಕರರ ಆರ್ಥಿಕನೀತಿ ಯಾವುದೇ ಜಾತಿ, ಪಕ್ಷ, ಕಾಲ, ದೇಶಗಳಿಗೆ ಸೀಮಿತವಾಗಿರದೆ ಇಡೀ ಮಾನವಕುಲದಲ್ಲಿ ಸಮಾನತೆಯನ್ನು ಸಾಧಿಸಲು ಮತ್ತು ನೆಮ್ಮದಿ ಬದುಕನ್ನು ಬದುಕಲು ನೆರವಾಗುವುದಾಗಿದೆ. ಇಡೀ ಮಾನವಸಮೂಹದಲ್ಲಿ ಸಮಾನತೆಯನ್ನು ತರುವುದೇ ಅಂಬೇಡ್ಕರರ ಆರ್ಥಿಕ ಗುರಿ.


ಇದನ್ನೂ ಓದಿ: ಪೌರಕಾರ್ಮಿಕರ ದಿನ: ಸಂಭ್ರಮಾಚರಣೆ ಬೇಡ, ಕನಿಷ್ಠ ಸೌಲಭ್ಯ ನೀಡಿ…
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...