Homeಅಂಕಣಗಳುಅಂಬೇಡ್ಕರ್‌ರವರ ಆರ್ಥಿಕ ಚಿಂತನೆಗಳು ದಾರಿಯಾಗಲಿ - ಎಚ್. ಎಸ್ ದೊರೆಸ್ವಾಮಿ

ಅಂಬೇಡ್ಕರ್‌ರವರ ಆರ್ಥಿಕ ಚಿಂತನೆಗಳು ದಾರಿಯಾಗಲಿ – ಎಚ್. ಎಸ್ ದೊರೆಸ್ವಾಮಿ

ಅಸ್ಪೃಶ್ಯತೆ ಸಮಾಜದಿಂದ ತೊಲಗದ ಹೊರತು ರೈತ ಮತ್ತು ಕಾರ್ಮಿಕ ಹೋರಾಟಕ್ಕೆ ಸಂಘಟಿತ ಸ್ವರೂಪ ಬರುವುದಿಲ್ಲ. ಭಾರತದಲ್ಲಿ ಶ್ರಮಜೀವಿಗಳಿಗೆ ಮುಕ್ತಿ ದೊರೆಯಬೇಕಾಗಿದ್ದರೆ, ಅವರು ಸಾಮಾಜಿಕ ಆರ್ಥಿಕ, ಧಾರ್ಮಿಕ ದಾಸ್ಯದಿಂದ ಮುಕ್ತರಾಗುವುದೊಂದೇ ಅವರಿಗಿರುವ ರಾಜಮಾರ್ಗ.

- Advertisement -
- Advertisement -

ಆರ್ಥಿಕ ಶೋಷಣೆಯನ್ನ ಸಂಪೂರ್ಣವಾಗಿ ನಿರ್ಮೂಲನ ಮಾಡುವುದು ಸರ್ಕಾರಗಳ ಮತ್ತು ಸಂಸತ್ತಿನ ಗುರಿಯಾಗಬೇಕು. ಸ್ವಾತಂತ್ರ್ಯವೆಂದರೆ ದುರ್ಬಲವರ್ಗಗಳನ್ನು ನಿರಂತರವಾಗಿ ವಂಚಿಸುತ್ತಾ ಹೋಗುವುದಲ್ಲ. ಶೋಷಣೆಯನ್ನು ತಡೆಗಟ್ಟುವುದಕ್ಕೆ ಇರುವ ಏಕೈಕ ಮಾರ್ಗವೆಂದರೆ, ಸಂಪನ್ಮೂಲಗಳ ಸ್ವಾಮ್ಯ ಒಡೆತನ ಸರ್ಕಾರದ ಕೈಯಲ್ಲಿ ಉಳಿಸಿಕೊಳ್ಳುವುದು. ಪ್ರಮುಖ ಉದ್ಯೋಗಗಳು ರಾಜ್ಯಾಡಳಿತದ ವ್ಯಾಪ್ತಿಯಲ್ಲಿರಬೇಕು. ಕೃಷಿಭೂಮಿ ಸರ್ಕಾರದ ಸ್ವಾಮ್ಯದಲ್ಲಿರಬೇಕು. ಹಾಗೆಂದರೆ ಸರ್ಕಾರ ಜಮೀನನ್ನು ಯಾರಿಗೆ ಅಂದರೆ ಅವರಿಗೆ, ಪಟ್ಟಭದ್ರ ಹಿತಾಸಕ್ತಿಗಳಿಗೆ, ಸಿಕ್ಕಿದಂತೆ ಹಂಚುವ ಅಧಿಕಾರ ಅದಕ್ಕಿರಬೇಕೆಂಬ ಅರ್ಥವಲ್ಲ. ಪ್ರಮುಖ ಉದ್ಯಮಗಳು ಸರ್ಕಾರದ ವ್ಯಾಪ್ತಿಯಲ್ಲಿ ನಿರ್ವಹಣೆಯಾಗಬೇಕು. ವಿಮಾ ಸಂಸ್ಥೆಗಳ, ಲೇವಾದೇವಿ ಸಂಸ್ಥೆಗಳ ರಾಷ್ಟ್ರೀಕರಣ ಆಗಬೇಕು. ಜಮೀನ್ದಾರ, ಜೀತಗಾರ, ಕೃಷಿಕಾರ್ಮೀಕ ಮುಂತಾದ ಬರ್ಬರ ವ್ಯವಸ್ಥೆಗಳು ಕೊನೆಗೊಳ್ಳಬೇಕು. ದುರ್ಬಲವರ್ಗದವರಿಗೆ ಒದಗಿಸುವ ವಿಶೇಷ ರಕ್ಷಣಾ ನಿಬಂಧನೆಗಳನ್ನು ಸಂವಿಧಾನದ ಮೂಲಭೂತಹಕ್ಕುಗಳ ಪಟ್ಟಿಗೆ ಸೇರಿಸಬೇಕು. ಇದನ್ನು ಈಗ ಸಂವಿಧಾನದ ನಿರ್ದೇಶಕ ತತ್ವಗಳನ್ನಾಗಿ ಸೇರಿಸಲಾಗಿದೆ.

ಅಂಬೇಡ್ಕರ್ ಅವರ ಆರ್ಥಿಕ ಚಿಂತನೆ ವ್ಯಾಪಕ ತಳಹದಿಯ ಮೇಲೆ ರಚಿತವಾಗಿದೆ. ಸಮಗ್ರ ದೇಶದ ಹಿತದೃಷ್ಟಿಯಿಂದ ರಚಿತವಾಗಿದೆ.

ವ್ಯಕ್ತಿ ಸ್ವಾತಂತ್ರ್ಯವೆಂಬುದು ಬಂಡವಾಳಶಾಹಿಗಳಿಗೆ ಮಾತ್ರ ಅನ್ವಯವಾಗುವ ಮಹಾಮಂತ್ರ ಎಂದು ಪಟ್ಟಭದ್ರರು ಭಾವಿಸುತ್ತಾರೆ. ಅದರಿಂದಾಗಿ ಇದು ಶ್ರಮಜೀವಿಗಳ ದಾಸ್ಯಕ್ಕೆ ದಾರಿಮಾಡುತ್ತದೆ. ಹಿಂದೆ ದಲಿತರಿಗೆ ಯಾವುದೇ ಸ್ವಾತಂತ್ರ್ಯವಿರಲಿಲ್ಲ. ತಮ್ಮ ಶ್ರಮಶಕ್ತಿಗೆ ಸರಿಯಾದ ಪರಿಹಾರ ಪಡೆಯುವ ಅಧಿಕಾರ ಇರಲಿಲ್ಲ. ಶ್ರೀಮಂತ ರೈತರಿಗೆ ಅವರು ಖಾಯಂ ಜೀತದಾಳುಗಳಾಗಿದ್ದರು. ಅವರಿಗೆ ವ್ಯಕ್ತಿ ಸ್ವಾತಂತ್ರ್ಯ ಇರಲಿಲ್ಲ. ಅದು ಏನಿದ್ದರೂ ಶ್ರೀಮಂತರ ಸ್ವತ್ತಾಗಿತ್ತು.

ಅಸ್ಪೃಶ್ಯತೆ ಸಮಾಜದಿಂದ ತೊಲಗದ ಹೊರತು ರೈತ ಮತ್ತು ಕಾರ್ಮಿಕ ಹೋರಾಟಕ್ಕೆ ಸಂಘಟಿತ ಸ್ವರೂಪ ಬರುವುದಿಲ್ಲ. ಭಾರತದಲ್ಲಿ ಶ್ರಮಜೀವಿಗಳಿಗೆ ಮುಕ್ತಿ ದೊರೆಯಬೇಕಾಗಿದ್ದರೆ, ಅವರು ಸಾಮಾಜಿಕ ಆರ್ಥಿಕ, ಧಾರ್ಮಿಕ ದಾಸ್ಯದಿಂದ ಮುಕ್ತರಾಗುವುದೊಂದೇ ಅವರಿಗಿರುವ ರಾಜಮಾರ್ಗ. ಆ ಸಂಕೋಲೆಗಳನ್ನು ಕಳಚಿಕೊಳ್ಳುವುದೊಂದೇ ಇರುವ ಪರಿಹಾರ ಮಾರ್ಗ.

ಒಕ್ಕಲಿಗ ಸಣ್ಣ ರೈತರು ಮತ್ತು ಕಾರ್ಮಿಕರು, ಒಕ್ಕಲಿಗ White Collar ಗಿಂತ ತಾವು ಕೀಳು ಎಂದು ಭಾವಿಸುವರಾದರೂ ತಾವು ಅಸ್ಪೃಶ್ಯ ವರ್ಗದವರಿಗಿಂತ ಮೇಲ್ವರ್ಗದವರು ಎಂದು ಗರ್ವಪಡುತ್ತಾರೆ. ತಮ್ಮಂತೆಯೇ ಆರ್ಥಿಕವಾಗಿ ಹಿಂದುಳಿದ ಅಸ್ಪೃಶ್ಯರನ್ನು ಕೀಳಾಗಿ ನಡೆಸಿಕೊಳ್ಳುತ್ತಾರೆ. ವೈರಿಗಳಂತೆ ನೋಡುತ್ತಾರೆ.

ಅಸ್ಪೃಶ್ಯರಿಗೆ ಸಮಾಜದಲ್ಲಿ ಗೌರವ ದೊರೆಯಬೇಕಾದರೆ ಅವರು ಮೊದಲು ಮಾಡಬೇಕಾದ ಕೆಲಸ ಆರ್ಥಿಕವಾಗಿ ಸ್ವಾವಲಂಬಿಗಳಾಗುವುದು. ಹಣದಿಂದಲೇ ಸಮಾಜ ಜನರನ್ನು ಅಳೆಯುವ ಈ ಕಾಲದಲ್ಲಿ ಅಸ್ಪೃಶ್ಯರು ಆರ್ಥಿಕವಾಗಿ ಚೇತರಿಸಿಕೊಳ್ಳದಿದ್ದರೆ ಸಮಾಜ ಅವರನ್ನು ತಿರಸ್ಕಾರ ಬುದ್ಧಿಯಿಂದ ನೋಡುತ್ತದೆ, ಕೀಳಾಗಿ ಕಾಣುತ್ತದೆ. ವೈರಿಗಳಂತೆ ಕಾಣುತ್ತದೆ. ಸ್ವಾಭಿಮಾನಕ್ಕೆ ಧಕ್ಕೆ ಬರದಂತೆ ಅಸ್ಪೃಶ್ಯರು ನಡೆದುಕೊಳ್ಳಬೇಕು.

ಆದರೆ ಒಂದು ಎಚ್ಚರಿಕೆ. ಭೌತಿಕ ಸುಖವೊಂದೇ ಸಾರಸರ್ವಸ್ವ ಎಂದು ಅಸ್ಪೃಶ್ಯರು ಭಾವಿಸಬಾರದು. ಅಸ್ಪೃಶ್ಯಯರಿಗೂ ಉಳಿದ ಎಲ್ಲರಂತೆ ಮನಸ್ಸು, ಹೃದಯಗಳಿವೆ. ಆ ಮನಸ್ಸಿಗೆ, ಹೃದಯಕ್ಕೆ ವಿಚಾರದ ಆಹಾರ ಅತ್ಯಗತ್ಯ. ವೈಚಾರಿಕತೆ ಮಾನವನ ಮನಸ್ಸಿನಲ್ಲಿ ಆಸೆಗಳನ್ನು ಹುಟ್ಟು ಹಾಕುತ್ತದೆ. ಕೆಲಸ ಮಾಡಲು ಪ್ರೇರಣೆ ನೀಡುತ್ತದೆ. ಅಸ್ಪೃಶ್ಯ ಸಂಘಟನೆಗಳು ವಿಚಾರಕ್ರಾಂತಿಯ ಬೀಜವನ್ನು ಅಸ್ಪೃಶ್ಯರ ಮನಸ್ಸಿನಲ್ಲಿ ಬಿತ್ತಬೇಕು.

ಆರ್ಥಿಕ ಬೆಳವಣಿಗೆ ಅಸ್ಪೃಶ್ಯರ ಸರ್ವತೋಮುಖ ಬೆಳವಣಿಗೆಗೆ ಒಂದು ಸಾಧನ. ಆರ್ಥಿಕ ಅಭಿವೃದ್ಧಿ ಆಯಿತು ಎಂದರೆ ಅಸ್ಪೃಶ್ಯನಿಗೆ ಸಮಾಜ ತನ್ನತಾನಾಗೇ ಗೌರವ ನೀಡಲು ಆರಂಭ ಮಾಡುತ್ತದೆ.

ಪರಂಪರಾಗತ ಉದ್ಯೋಗಗಳನ್ನು ದಲಿತರು ಬಿಡಬೇಕು. ಸತ್ತ ಪ್ರಾಣಿಗಳನ್ನು ಹೊತ್ತು ಹೂಳುವುದು ಮತ್ತು ತಿನ್ನುವುದು, ತೋಟಿ ತಳವಾರ ಹುದ್ದೆಗಳನ್ನು ವಂಶಪಾರಂಪರ್ಯದ ಕಸುಬು ಎಂದು ಊರು ಕೇರಿಯಲ್ಲಿ ಭಾವಿಸುವುದು, ಮೇಲ್ಜಾತಿಯವರ ಆಣತಿಯಂತೆ ತಮಟೆ ಹೊಡೆದು ಸಾರುವುದು ಎಲ್ಲ ನಿಲ್ಲಬೇಕು. ವಿದ್ಯಾಭ್ಯಾಸ ಪಡೆಯಲು ಎರಡು ವಿಧದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅವೆಂದರೆ ಬ್ರಾಹ್ಮಣವಾದ ಮತ್ತು ಬಂಡವಾಳವಾದ. ಬ್ರಾಹ್ಮಣವಾದ ಎಂಬುದನ್ನು ತಪ್ಪಾಗಿ ಅರ್ಥೈಸಬಾರದು. ಬ್ರಾಹ್ಮಣವಾದವೆಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವವನ್ನು ವಿರೋಧಿಸುವ ಪ್ರವೃತ್ತಿ. ಈ ಪ್ರವೃತ್ತಿ ಬ್ರಾಹ್ಮಣರ ಗುತ್ತಿಯಾಗಿ ಏನೂ ಉಳಿದಿಲ್ಲ. ಎಲ್ಲ ಜಾತಿಗಳಲ್ಲೂ ಇಂತಹ ಜನ ಇದ್ದಾರೆ. ಈಗ ಇದು ಎಲ್ಲ ವರ್ಗದವರ ಸಿದ್ಧಾಂತವಾಗಿದೆ. ಈ ಪ್ರವೃತ್ತಿಯನ್ನು ದಲಿತರು ಹೋರಾಟದ ಮೂಲಕ ಬದಲಿಸಬೇಕು.

ಇನ್ನೊಂದು ಬಂಡವಾಳಶಾಹಿ ನೀತಿ. ಅದು ಲಾಭಕೋರರ ಸಂತೆ. ಬಂಡವಾಳಶಾಹಿಗಳ ಆರ್ಥಿಕನೀತಿ, ಧರ್ಮವೋ ಅಧರ್ಮವೋ ಯಾವುದೇ ಮಾರ್ಗವಾಗಲಿ ಲಾಭಗಳಿಸುವುದು. ಆಳುವ ಸರ್ಕಾರವನ್ನು ತನ್ನ ವಶ ಮಾಡಿಕೊಂಡು ಕೂಡಿಕೊಳ್ಳುವುದು. ಸಮಾಜದಲ್ಲಿ ಆರ್ಥಿಕ ಅಸಮಾನತೆ ಹೆಚ್ಚಿಸುವುದು. ಅವರಿಗೆ ಸರ್ಕಾರ ಸಕಲ ಸವಲತ್ತುಗಳನ್ನು ನೀಡಲು ತುದಿಗಾಲ ಮೇಲೆ ನಿಲ್ಲುತ್ತದೆ. ಅದಕ್ಕೆ ಕಾರಣ ಅವರು ಪಕ್ಷಕ್ಕೆ ನೀಡುವ ಎಂಜಲು ಹಣ. ಸರ್ಕಾರ ಸಮಾಜವಾದದಿಂದ ಬಂಡವಾಳಶಾಹಿ ನೀತಿಗೆ ತಿರುಗುವಂತೆ ಮಾಡುವುದು ಬಂಡವಾಳಶಾಹಿಯ ಪ್ರಥಮ ಆದ್ಯತೆ. ಮಾಲಿಕರು, ಕಾರ್ಮಿಕರು ಸರ್ಕಾರ ಮೂವರೂ ಸೇರಿ ಕಾರ್ಮಿಕ ನೀತಿ ರೂಪಿಸಬೇಕು, ಶ್ರಮಿಕರ ಕೈಗೆ ಸರ್ಕಾರ ಹೋಗಬೇಕು, ಶ್ರಮಿಕರಲ್ಲಿ ಬೇರುಬಿಟ್ಟಿರುವ ಜಾತಿ,ಭಾವನೆ, ಉಚ್ಚ ನೀಚಭಾವನೆ, ಮೇಲುಕೀಳು ಭಾವನೆ ಹೋಗದೆ ಇದ್ದರೆ ಶ್ರಮಿಕರು ಒಂದಾಗುವುದು ಹೇಗೆ ಸಾಧ್ಯವಾದೀತು? ಸಮಾಜದಲ್ಲಿ ಕ್ರಾಂತಿತರಲು ಹೇಗೆ ಸಾಧ್ಯವಾದೀತು?

ಅಂಬೇಡ್ಕರರ ಆರ್ಥಿಕನೀತಿ ಯಾವುದೇ ಜಾತಿ, ಪಕ್ಷ, ಕಾಲ, ದೇಶಗಳಿಗೆ ಸೀಮಿತವಾಗಿರದೆ ಇಡೀ ಮಾನವಕುಲದಲ್ಲಿ ಸಮಾನತೆಯನ್ನು ಸಾಧಿಸಲು ಮತ್ತು ನೆಮ್ಮದಿ ಬದುಕನ್ನು ಬದುಕಲು ನೆರವಾಗುವುದಾಗಿದೆ. ಇಡೀ ಮಾನವಸಮೂಹದಲ್ಲಿ ಸಮಾನತೆಯನ್ನು ತರುವುದೇ ಅಂಬೇಡ್ಕರರ ಆರ್ಥಿಕ ಗುರಿ.


ಇದನ್ನೂ ಓದಿ: ಪೌರಕಾರ್ಮಿಕರ ದಿನ: ಸಂಭ್ರಮಾಚರಣೆ ಬೇಡ, ಕನಿಷ್ಠ ಸೌಲಭ್ಯ ನೀಡಿ…
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...