Homeಅಂಕಣಗಳುಅಂಬೇಡ್ಕರ್‌ರವರ ಆರ್ಥಿಕ ಚಿಂತನೆಗಳು ದಾರಿಯಾಗಲಿ - ಎಚ್. ಎಸ್ ದೊರೆಸ್ವಾಮಿ

ಅಂಬೇಡ್ಕರ್‌ರವರ ಆರ್ಥಿಕ ಚಿಂತನೆಗಳು ದಾರಿಯಾಗಲಿ – ಎಚ್. ಎಸ್ ದೊರೆಸ್ವಾಮಿ

ಅಸ್ಪೃಶ್ಯತೆ ಸಮಾಜದಿಂದ ತೊಲಗದ ಹೊರತು ರೈತ ಮತ್ತು ಕಾರ್ಮಿಕ ಹೋರಾಟಕ್ಕೆ ಸಂಘಟಿತ ಸ್ವರೂಪ ಬರುವುದಿಲ್ಲ. ಭಾರತದಲ್ಲಿ ಶ್ರಮಜೀವಿಗಳಿಗೆ ಮುಕ್ತಿ ದೊರೆಯಬೇಕಾಗಿದ್ದರೆ, ಅವರು ಸಾಮಾಜಿಕ ಆರ್ಥಿಕ, ಧಾರ್ಮಿಕ ದಾಸ್ಯದಿಂದ ಮುಕ್ತರಾಗುವುದೊಂದೇ ಅವರಿಗಿರುವ ರಾಜಮಾರ್ಗ.

- Advertisement -
- Advertisement -

ಆರ್ಥಿಕ ಶೋಷಣೆಯನ್ನ ಸಂಪೂರ್ಣವಾಗಿ ನಿರ್ಮೂಲನ ಮಾಡುವುದು ಸರ್ಕಾರಗಳ ಮತ್ತು ಸಂಸತ್ತಿನ ಗುರಿಯಾಗಬೇಕು. ಸ್ವಾತಂತ್ರ್ಯವೆಂದರೆ ದುರ್ಬಲವರ್ಗಗಳನ್ನು ನಿರಂತರವಾಗಿ ವಂಚಿಸುತ್ತಾ ಹೋಗುವುದಲ್ಲ. ಶೋಷಣೆಯನ್ನು ತಡೆಗಟ್ಟುವುದಕ್ಕೆ ಇರುವ ಏಕೈಕ ಮಾರ್ಗವೆಂದರೆ, ಸಂಪನ್ಮೂಲಗಳ ಸ್ವಾಮ್ಯ ಒಡೆತನ ಸರ್ಕಾರದ ಕೈಯಲ್ಲಿ ಉಳಿಸಿಕೊಳ್ಳುವುದು. ಪ್ರಮುಖ ಉದ್ಯೋಗಗಳು ರಾಜ್ಯಾಡಳಿತದ ವ್ಯಾಪ್ತಿಯಲ್ಲಿರಬೇಕು. ಕೃಷಿಭೂಮಿ ಸರ್ಕಾರದ ಸ್ವಾಮ್ಯದಲ್ಲಿರಬೇಕು. ಹಾಗೆಂದರೆ ಸರ್ಕಾರ ಜಮೀನನ್ನು ಯಾರಿಗೆ ಅಂದರೆ ಅವರಿಗೆ, ಪಟ್ಟಭದ್ರ ಹಿತಾಸಕ್ತಿಗಳಿಗೆ, ಸಿಕ್ಕಿದಂತೆ ಹಂಚುವ ಅಧಿಕಾರ ಅದಕ್ಕಿರಬೇಕೆಂಬ ಅರ್ಥವಲ್ಲ. ಪ್ರಮುಖ ಉದ್ಯಮಗಳು ಸರ್ಕಾರದ ವ್ಯಾಪ್ತಿಯಲ್ಲಿ ನಿರ್ವಹಣೆಯಾಗಬೇಕು. ವಿಮಾ ಸಂಸ್ಥೆಗಳ, ಲೇವಾದೇವಿ ಸಂಸ್ಥೆಗಳ ರಾಷ್ಟ್ರೀಕರಣ ಆಗಬೇಕು. ಜಮೀನ್ದಾರ, ಜೀತಗಾರ, ಕೃಷಿಕಾರ್ಮೀಕ ಮುಂತಾದ ಬರ್ಬರ ವ್ಯವಸ್ಥೆಗಳು ಕೊನೆಗೊಳ್ಳಬೇಕು. ದುರ್ಬಲವರ್ಗದವರಿಗೆ ಒದಗಿಸುವ ವಿಶೇಷ ರಕ್ಷಣಾ ನಿಬಂಧನೆಗಳನ್ನು ಸಂವಿಧಾನದ ಮೂಲಭೂತಹಕ್ಕುಗಳ ಪಟ್ಟಿಗೆ ಸೇರಿಸಬೇಕು. ಇದನ್ನು ಈಗ ಸಂವಿಧಾನದ ನಿರ್ದೇಶಕ ತತ್ವಗಳನ್ನಾಗಿ ಸೇರಿಸಲಾಗಿದೆ.

ಅಂಬೇಡ್ಕರ್ ಅವರ ಆರ್ಥಿಕ ಚಿಂತನೆ ವ್ಯಾಪಕ ತಳಹದಿಯ ಮೇಲೆ ರಚಿತವಾಗಿದೆ. ಸಮಗ್ರ ದೇಶದ ಹಿತದೃಷ್ಟಿಯಿಂದ ರಚಿತವಾಗಿದೆ.

ವ್ಯಕ್ತಿ ಸ್ವಾತಂತ್ರ್ಯವೆಂಬುದು ಬಂಡವಾಳಶಾಹಿಗಳಿಗೆ ಮಾತ್ರ ಅನ್ವಯವಾಗುವ ಮಹಾಮಂತ್ರ ಎಂದು ಪಟ್ಟಭದ್ರರು ಭಾವಿಸುತ್ತಾರೆ. ಅದರಿಂದಾಗಿ ಇದು ಶ್ರಮಜೀವಿಗಳ ದಾಸ್ಯಕ್ಕೆ ದಾರಿಮಾಡುತ್ತದೆ. ಹಿಂದೆ ದಲಿತರಿಗೆ ಯಾವುದೇ ಸ್ವಾತಂತ್ರ್ಯವಿರಲಿಲ್ಲ. ತಮ್ಮ ಶ್ರಮಶಕ್ತಿಗೆ ಸರಿಯಾದ ಪರಿಹಾರ ಪಡೆಯುವ ಅಧಿಕಾರ ಇರಲಿಲ್ಲ. ಶ್ರೀಮಂತ ರೈತರಿಗೆ ಅವರು ಖಾಯಂ ಜೀತದಾಳುಗಳಾಗಿದ್ದರು. ಅವರಿಗೆ ವ್ಯಕ್ತಿ ಸ್ವಾತಂತ್ರ್ಯ ಇರಲಿಲ್ಲ. ಅದು ಏನಿದ್ದರೂ ಶ್ರೀಮಂತರ ಸ್ವತ್ತಾಗಿತ್ತು.

ಅಸ್ಪೃಶ್ಯತೆ ಸಮಾಜದಿಂದ ತೊಲಗದ ಹೊರತು ರೈತ ಮತ್ತು ಕಾರ್ಮಿಕ ಹೋರಾಟಕ್ಕೆ ಸಂಘಟಿತ ಸ್ವರೂಪ ಬರುವುದಿಲ್ಲ. ಭಾರತದಲ್ಲಿ ಶ್ರಮಜೀವಿಗಳಿಗೆ ಮುಕ್ತಿ ದೊರೆಯಬೇಕಾಗಿದ್ದರೆ, ಅವರು ಸಾಮಾಜಿಕ ಆರ್ಥಿಕ, ಧಾರ್ಮಿಕ ದಾಸ್ಯದಿಂದ ಮುಕ್ತರಾಗುವುದೊಂದೇ ಅವರಿಗಿರುವ ರಾಜಮಾರ್ಗ. ಆ ಸಂಕೋಲೆಗಳನ್ನು ಕಳಚಿಕೊಳ್ಳುವುದೊಂದೇ ಇರುವ ಪರಿಹಾರ ಮಾರ್ಗ.

ಒಕ್ಕಲಿಗ ಸಣ್ಣ ರೈತರು ಮತ್ತು ಕಾರ್ಮಿಕರು, ಒಕ್ಕಲಿಗ White Collar ಗಿಂತ ತಾವು ಕೀಳು ಎಂದು ಭಾವಿಸುವರಾದರೂ ತಾವು ಅಸ್ಪೃಶ್ಯ ವರ್ಗದವರಿಗಿಂತ ಮೇಲ್ವರ್ಗದವರು ಎಂದು ಗರ್ವಪಡುತ್ತಾರೆ. ತಮ್ಮಂತೆಯೇ ಆರ್ಥಿಕವಾಗಿ ಹಿಂದುಳಿದ ಅಸ್ಪೃಶ್ಯರನ್ನು ಕೀಳಾಗಿ ನಡೆಸಿಕೊಳ್ಳುತ್ತಾರೆ. ವೈರಿಗಳಂತೆ ನೋಡುತ್ತಾರೆ.

ಅಸ್ಪೃಶ್ಯರಿಗೆ ಸಮಾಜದಲ್ಲಿ ಗೌರವ ದೊರೆಯಬೇಕಾದರೆ ಅವರು ಮೊದಲು ಮಾಡಬೇಕಾದ ಕೆಲಸ ಆರ್ಥಿಕವಾಗಿ ಸ್ವಾವಲಂಬಿಗಳಾಗುವುದು. ಹಣದಿಂದಲೇ ಸಮಾಜ ಜನರನ್ನು ಅಳೆಯುವ ಈ ಕಾಲದಲ್ಲಿ ಅಸ್ಪೃಶ್ಯರು ಆರ್ಥಿಕವಾಗಿ ಚೇತರಿಸಿಕೊಳ್ಳದಿದ್ದರೆ ಸಮಾಜ ಅವರನ್ನು ತಿರಸ್ಕಾರ ಬುದ್ಧಿಯಿಂದ ನೋಡುತ್ತದೆ, ಕೀಳಾಗಿ ಕಾಣುತ್ತದೆ. ವೈರಿಗಳಂತೆ ಕಾಣುತ್ತದೆ. ಸ್ವಾಭಿಮಾನಕ್ಕೆ ಧಕ್ಕೆ ಬರದಂತೆ ಅಸ್ಪೃಶ್ಯರು ನಡೆದುಕೊಳ್ಳಬೇಕು.

ಆದರೆ ಒಂದು ಎಚ್ಚರಿಕೆ. ಭೌತಿಕ ಸುಖವೊಂದೇ ಸಾರಸರ್ವಸ್ವ ಎಂದು ಅಸ್ಪೃಶ್ಯರು ಭಾವಿಸಬಾರದು. ಅಸ್ಪೃಶ್ಯಯರಿಗೂ ಉಳಿದ ಎಲ್ಲರಂತೆ ಮನಸ್ಸು, ಹೃದಯಗಳಿವೆ. ಆ ಮನಸ್ಸಿಗೆ, ಹೃದಯಕ್ಕೆ ವಿಚಾರದ ಆಹಾರ ಅತ್ಯಗತ್ಯ. ವೈಚಾರಿಕತೆ ಮಾನವನ ಮನಸ್ಸಿನಲ್ಲಿ ಆಸೆಗಳನ್ನು ಹುಟ್ಟು ಹಾಕುತ್ತದೆ. ಕೆಲಸ ಮಾಡಲು ಪ್ರೇರಣೆ ನೀಡುತ್ತದೆ. ಅಸ್ಪೃಶ್ಯ ಸಂಘಟನೆಗಳು ವಿಚಾರಕ್ರಾಂತಿಯ ಬೀಜವನ್ನು ಅಸ್ಪೃಶ್ಯರ ಮನಸ್ಸಿನಲ್ಲಿ ಬಿತ್ತಬೇಕು.

ಆರ್ಥಿಕ ಬೆಳವಣಿಗೆ ಅಸ್ಪೃಶ್ಯರ ಸರ್ವತೋಮುಖ ಬೆಳವಣಿಗೆಗೆ ಒಂದು ಸಾಧನ. ಆರ್ಥಿಕ ಅಭಿವೃದ್ಧಿ ಆಯಿತು ಎಂದರೆ ಅಸ್ಪೃಶ್ಯನಿಗೆ ಸಮಾಜ ತನ್ನತಾನಾಗೇ ಗೌರವ ನೀಡಲು ಆರಂಭ ಮಾಡುತ್ತದೆ.

ಪರಂಪರಾಗತ ಉದ್ಯೋಗಗಳನ್ನು ದಲಿತರು ಬಿಡಬೇಕು. ಸತ್ತ ಪ್ರಾಣಿಗಳನ್ನು ಹೊತ್ತು ಹೂಳುವುದು ಮತ್ತು ತಿನ್ನುವುದು, ತೋಟಿ ತಳವಾರ ಹುದ್ದೆಗಳನ್ನು ವಂಶಪಾರಂಪರ್ಯದ ಕಸುಬು ಎಂದು ಊರು ಕೇರಿಯಲ್ಲಿ ಭಾವಿಸುವುದು, ಮೇಲ್ಜಾತಿಯವರ ಆಣತಿಯಂತೆ ತಮಟೆ ಹೊಡೆದು ಸಾರುವುದು ಎಲ್ಲ ನಿಲ್ಲಬೇಕು. ವಿದ್ಯಾಭ್ಯಾಸ ಪಡೆಯಲು ಎರಡು ವಿಧದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅವೆಂದರೆ ಬ್ರಾಹ್ಮಣವಾದ ಮತ್ತು ಬಂಡವಾಳವಾದ. ಬ್ರಾಹ್ಮಣವಾದ ಎಂಬುದನ್ನು ತಪ್ಪಾಗಿ ಅರ್ಥೈಸಬಾರದು. ಬ್ರಾಹ್ಮಣವಾದವೆಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವವನ್ನು ವಿರೋಧಿಸುವ ಪ್ರವೃತ್ತಿ. ಈ ಪ್ರವೃತ್ತಿ ಬ್ರಾಹ್ಮಣರ ಗುತ್ತಿಯಾಗಿ ಏನೂ ಉಳಿದಿಲ್ಲ. ಎಲ್ಲ ಜಾತಿಗಳಲ್ಲೂ ಇಂತಹ ಜನ ಇದ್ದಾರೆ. ಈಗ ಇದು ಎಲ್ಲ ವರ್ಗದವರ ಸಿದ್ಧಾಂತವಾಗಿದೆ. ಈ ಪ್ರವೃತ್ತಿಯನ್ನು ದಲಿತರು ಹೋರಾಟದ ಮೂಲಕ ಬದಲಿಸಬೇಕು.

ಇನ್ನೊಂದು ಬಂಡವಾಳಶಾಹಿ ನೀತಿ. ಅದು ಲಾಭಕೋರರ ಸಂತೆ. ಬಂಡವಾಳಶಾಹಿಗಳ ಆರ್ಥಿಕನೀತಿ, ಧರ್ಮವೋ ಅಧರ್ಮವೋ ಯಾವುದೇ ಮಾರ್ಗವಾಗಲಿ ಲಾಭಗಳಿಸುವುದು. ಆಳುವ ಸರ್ಕಾರವನ್ನು ತನ್ನ ವಶ ಮಾಡಿಕೊಂಡು ಕೂಡಿಕೊಳ್ಳುವುದು. ಸಮಾಜದಲ್ಲಿ ಆರ್ಥಿಕ ಅಸಮಾನತೆ ಹೆಚ್ಚಿಸುವುದು. ಅವರಿಗೆ ಸರ್ಕಾರ ಸಕಲ ಸವಲತ್ತುಗಳನ್ನು ನೀಡಲು ತುದಿಗಾಲ ಮೇಲೆ ನಿಲ್ಲುತ್ತದೆ. ಅದಕ್ಕೆ ಕಾರಣ ಅವರು ಪಕ್ಷಕ್ಕೆ ನೀಡುವ ಎಂಜಲು ಹಣ. ಸರ್ಕಾರ ಸಮಾಜವಾದದಿಂದ ಬಂಡವಾಳಶಾಹಿ ನೀತಿಗೆ ತಿರುಗುವಂತೆ ಮಾಡುವುದು ಬಂಡವಾಳಶಾಹಿಯ ಪ್ರಥಮ ಆದ್ಯತೆ. ಮಾಲಿಕರು, ಕಾರ್ಮಿಕರು ಸರ್ಕಾರ ಮೂವರೂ ಸೇರಿ ಕಾರ್ಮಿಕ ನೀತಿ ರೂಪಿಸಬೇಕು, ಶ್ರಮಿಕರ ಕೈಗೆ ಸರ್ಕಾರ ಹೋಗಬೇಕು, ಶ್ರಮಿಕರಲ್ಲಿ ಬೇರುಬಿಟ್ಟಿರುವ ಜಾತಿ,ಭಾವನೆ, ಉಚ್ಚ ನೀಚಭಾವನೆ, ಮೇಲುಕೀಳು ಭಾವನೆ ಹೋಗದೆ ಇದ್ದರೆ ಶ್ರಮಿಕರು ಒಂದಾಗುವುದು ಹೇಗೆ ಸಾಧ್ಯವಾದೀತು? ಸಮಾಜದಲ್ಲಿ ಕ್ರಾಂತಿತರಲು ಹೇಗೆ ಸಾಧ್ಯವಾದೀತು?

ಅಂಬೇಡ್ಕರರ ಆರ್ಥಿಕನೀತಿ ಯಾವುದೇ ಜಾತಿ, ಪಕ್ಷ, ಕಾಲ, ದೇಶಗಳಿಗೆ ಸೀಮಿತವಾಗಿರದೆ ಇಡೀ ಮಾನವಕುಲದಲ್ಲಿ ಸಮಾನತೆಯನ್ನು ಸಾಧಿಸಲು ಮತ್ತು ನೆಮ್ಮದಿ ಬದುಕನ್ನು ಬದುಕಲು ನೆರವಾಗುವುದಾಗಿದೆ. ಇಡೀ ಮಾನವಸಮೂಹದಲ್ಲಿ ಸಮಾನತೆಯನ್ನು ತರುವುದೇ ಅಂಬೇಡ್ಕರರ ಆರ್ಥಿಕ ಗುರಿ.


ಇದನ್ನೂ ಓದಿ: ಪೌರಕಾರ್ಮಿಕರ ದಿನ: ಸಂಭ್ರಮಾಚರಣೆ ಬೇಡ, ಕನಿಷ್ಠ ಸೌಲಭ್ಯ ನೀಡಿ…
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...